ಬೆಂಗಳೂರು: ಮುಂದಿನ ಕೆಲವೇ ದಿನಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿದ್ದು, ಅದಕ್ಕೆ ಮುನ್ನುಡಿ ಎಂಬಂತೆ ಚಿತ್ರ ನಟರು, ಮಾಜಿ ಕ್ರೀಡಾ ತಾರೆಯರು ರಾಷ್ಟ್ರೀಯ ಪಕ್ಷಗಳನ್ನು ಸೇರುವ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದಾರೆ. ಮಹತ್ವದ ಬೆಳವಣಿಗೆ ಒಂದರಲ್ಲಿ ರಾಜಕೀಯದ ಕುರಿತು ಮಾತನಾಡಿರುವ ನಟ ಡಾ. ಶಿವರಾಜ್ಕುಮಾರ್ ನನ್ನ ಪತ್ನಿ ಗೀತಾ ಸಂಸದೆ ಆಗುವ ಮೂಲಕ ಮಹಿಳೆಯರಿಗೆ ಮಾದರಿಯಾಗಲಿ ಎಂದು ಆಶಿಸಿದ್ದಾರೆ. ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ಸಚಿವ …
Read More »ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ; ಪೊಲೀಸರಿಗೆ ಯಾಮಾರಿಸಲು ಬಟ್ಟೆ ಬದಲಿಸಿ ಹೋದ ಶಂಕಿತ
ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ್ದ ಸ್ಫೋಟಕ್ಕೆ ಸಂಬಂಧಿಸಿದಂತೆ ಬಾಂಬ್ ಸ್ಫೋಟ ಪ್ರಕರಣ ಕ್ಷಣಕ್ಷಣಕ್ಕೂ ಹೊಸ ಟ್ವಿಸ್ಟ್ ಪಡೆಯುತ್ತಿದ್ದು, ಕೆಫೆಯಲ್ಲಿ ಬಾಂಬ್ ಇಟ್ಟ ಬಳಿಕ ಆರೋಪಿ ಶರ್ಟ್ ಮತ್ತು ಮತ್ತು ಪ್ಯಾಂಟ್ ಬದಲಿಸಿ ಹೋಗಿರುವ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ. ರಾಂಏಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟ ಬಳಿಕ ಆರೋಪಿ ದಾರಿ ಮಧ್ಯೆ ಬಟ್ಟೆ ಬದಲಿಸಿ ಹೋಗಿರುವ ಬಗ್ಗೆ ತನಿಖಾಧಿಕಾರಿಗಳಿಗೆ ಮಾಹಿತಿ ದೊರೆತಿದ್ದು, ಶರ್ಟ್ ಮೇಲೆ ಶರ್ಟ್, …
Read More »ತಾಯಿ ಕಣ್ಣೇದರು ಒದ್ದಾಡಿ ಜೀವ ಬಿಟ್ಟ ಮಗ
ಉಡುಪಿ: ಯುವಕನೊಬ್ಬ ತಾಯಿಯನ್ನು ಕೂರಿಸಿಕೊಂಡು ಸ್ಕೂಟರ್ನಲ್ಲಿ ಹೋಗುತ್ತಿದ್ದಾಗ ಎದುರಿಗೆ ಇದ್ದ ಟೆಂಪೋಗೆ ಡಿಕ್ಕಿ (Road Accident) ಹೊಡೆದಿದ್ದಾನೆ. ಡಿಕ್ಕಿ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಕುಳಿತ್ತಿದ್ದ ಮಹಿಳೆಗೆ ತೀವ್ರ ಗಾಯವಾಗಿದೆ. ಉದ್ಯಾವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ಸಂಭವಿಸಿದೆ. ಉಚ್ಚಿಲ ಪೊಲ್ಯ ಮೂಲದ ಪಡುಬಿದ್ರೆ ಕನ್ನಂಗಾರು ನಿವಾಸಿ ಮುಫ್ರೀನ್ (18) ಮೃತ ದುರ್ದೈವಿ. ಮುಫ್ರೀನ್ ತಾಯಿ ಹಾಜಿರಾ ಅವರು ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯರು ಅವರನ್ನು …
Read More »ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಪದ್ಧತಿ ಶೀಘ್ರ ಜಾರಿ; ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: 2006ರ ನಂತರ ನೇಮಕವಾಗಿರುವ ರಾಜ್ಯ ಸರಕಾರಿ ನೌಕರರಿಗೆ ಈಗ ಇರುವ ಹೊಸ ಪಿಂಚಣಿ ಯೋಜನೆ (New Pension Scheme) ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ (Old Pension Scheme) ಮರು ಜಾರಿಗೊಳಿಸುವುದು ಖಚಿತ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಸ್ಪಷ್ಟವಾಗಿ ಹೇಳಿದರು. ಬೆಳಗಾವಿಯ (Belagavi News) ಗಾಂಧಿ ಭವನದಲ್ಲಿ ಭಾನುವಾರ, ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಮಹಾ ಸಮ್ಮೇಳನ, ಅಲ್ಪ …
Read More »ಪತಿಗೆ ಬ್ಯಾಂಕ್ನಿಂದ ನೋಟಿಸ್; ಹೆದರಿ ಟಾಯ್ಲೆಟ್ನಲ್ಲಿ ಪತ್ನಿ ಆತ್ಮಹತ್ಯೆ
ಮೈಸೂರು: ಪತಿಗೆ ಬ್ಯಾಂಕ್ ನೋಟಿಸ್ (Bank Notice) ಕೊಟ್ಟಿದ್ದಕ್ಕೆ ಹೆದರಿ ಪತ್ನಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ದಾರುಣ ಘಟನೆ ಮೈಸೂರಿನ (Mysuru News) ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ರಂಗಮ್ಮ (70) ಮೃತ ದುರ್ದೈವಿ. ಪತಿ ಮಾಡಿದ ಸಾಲಕ್ಕೆ ಬ್ಯಾಂಕ್ನವರು ನೋಟಿಸ್ ಕಳುಹಿಸಿದ್ದರು. ಈ ನೋಟಿಸ್ಗೆ ಹೆದರಿದ ಪತ್ನಿ ರಂಗಮ್ಮ, ಮನೆಯ ಹಿಂಭಾಗದ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿ ಯಣ್ಣೇಗೌಡ 6 ವರ್ಷಗಳ …
Read More »ರಾಜ್ಯದಲ್ಲಿ ಶುರುವಾಯ್ತು ಸನ್ ಸ್ಟ್ರೋಕ್ಬೆಳಗಾವಿ: 34 ಡಿ.ಸೆ – 19 ಡಿ.ಸೆ
ಬೆಂಗಳೂರು: ಈ ವರ್ಷ ಬಿಸಿಲು ಹೆಚ್ಚಾಗುವ ಎಲ್ಲ ಲಕ್ಷಣಗಳು ಗೋಚರವಾಗುತ್ತಿದೆ. ಚಳಿಗಾಲದಲ್ಲೇ ಬೇಸಿಗೆಯಂತಹ ವಾತಾವರಣ ಜನರಿಗೆ (Dry weather) ಕಾಡಿತ್ತು. ಇದೀಗ ಬೇಸಿಗೆ ಆರಂಭದಲ್ಲೇ ಬಿಸಿಲ ಧಗೆ ಹೆಚ್ಚಾಗುತ್ತಿದೆ. ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ತಾಪಮಾನ ಏರಿಕೆ ಆಗಲಿದೆ. ಉತ್ತರ ಒಳನಾಡದಲ್ಲಿ ಗರಿಷ್ಠ …
Read More »ದಾಂಡೇಲಿ: ಆಯಿಲ್ ಟ್ಯಾಂಕ್ ಗೆ ಬೆಂಕಿ ತಪ್ಪಿದ ಅನಾಹುತ
ದಾಂಡೇಲಿ: ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಗೆ ಫರ್ನಿಶ್ ಆಯಿಲ್ ನ್ನು ತುಂಬಿಕೊಂಡು ಬರುತ್ತಿದ್ದ ಟ್ಯಾಂಕರಿನಲ್ಲಿ ದಾಂಡೇಲಿ ಆಲೂರು ಹತ್ತಿರ ಅಗ್ನಿ ಕಾಣಿಸಿಕೊಂಡಿದೆ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ವಿಷಯ ತಕ್ಷಣವೇ ಟ್ಯಾಂಕರ್ ನಿಲ್ಲಿಸಿ ಚಾಲಕ ಕೆಳಗಿಳಿದಿದ್ದಾನೆ. ಸ್ಥಳಕ್ಕೆ ಆಗಮಿಸಿದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಂದಿಸಿದ್ದಾರೆ . ಟ್ಯಾಂಕರ್ ವಾಹನದ ಮುಂಭಾಗಕ್ಕೆ ಸಂಪೂರ್ಣ ಹಾನಿಯಾಗಿದ್ದು, ಫರ್ನಿಶ್ ಆಯಿಲ್ ತುಂಬಿಕೊಂಡಿದ್ದ ಕಡೆ ಬೆಂಕಿ ಆವರಿಸುವ ಸಾಧ್ಯತೆ …
Read More »ಮೋದಿ ಸರಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸಿ- ಅರವಿಂದ ಪಾಟೀಲ
ಗೋಕಾಕ- ಅರಭಾವಿ ಮಂಡಲದ ಫಲಾನುಭವಿಗಳ ಸಂಪರ್ಕ ಅಭಿಯಾನ ಕಾರ್ಯಾಗಾರದ ಉದ್ಘಾಟನೆ ಗೋಕಾಕ್- ಕೇಂದ್ರ ಸರಕಾರವು ಜಾರಿಗೆ ತಂದಿರುವ ಹಲವಾರು ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಮತದಾರರ ಮುಂದೆ ಹೇಳಿ, ಅವರಿಂದ ಬಿಜೆಪಿಗೆ ಮತ ಹಾಕಿಸುವ ಕೆಲಸ ಮಾಡುವಂತೆ ಫಲಾನುಭವಿಗಳ ಅಭಿಯಾನದ ಜಿಲ್ಲಾ ಸಂಚಾಲಕ ಅರವಿಂದ ಪಾಟೀಲ ಹೇಳಿದರು. ಇಲ್ಲಿನ ಎನ್ಎಸ್ಎಫ್ ಕಾರ್ಯಾಲಯದಲ್ಲಿ ಅರಭಾವಿ, ಗೋಕಾಕ್ ಮಂಡಲದವರು ಜಂಟಿಯಾಗಿ ಶುಕ್ರವಾರದಂದು ಹಮ್ಮಿಕೊಂಡಿದ್ದ ಫಲಾನುಭವಿಗಳ ಸಂಪರ್ಕ ಅಭಿಯಾನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಂಬರುವ …
Read More »ದೇಶದ ಕೋಟ್ಯಾಂತರ ರೈತರಿಗೆ ಮೋದಿ ಸರ್ಕಾರದ ಭರ್ಜರಿ ಉಡುಗೊರೆ, 24 ಸಾವಿರ ರೂ.ಗಳ ಸಬ್ಸಿಡಿಗೆ ಅನುಮೋದನೆ!
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪೂಡ್ತಾ ಸಭೆಯಲ್ಲಿ ಖಾರಿಫ್ ಹಂಗಾಮಿಗೆ ರಸಗೊಬ್ಬರ ಸಬ್ಸಿಡಿಗೆ ಅನುಮೋದನೆಯನ್ನು ನೀಡಲಾಗಿದೆ. ಖಾರಿಫ್ ಹಂಗಾಮಿಗೆ 24 ಸಾವಿರ ಕೋಟಿ ರೂ.ಗಳ ರಸಗೊಬ್ಬರ ಸಬ್ಸಿಡಿಗೆ ಅನುಮೋದನೆ ಸಿಕ್ಕಿದೆ. ಇದಲ್ಲದೇ ಅಸ್ಸಾಂನಲ್ಲಿ ಟಾಟಾ ಕಂಪನಿಯ ಪ್ಯಾಕೇಜಿಂಗ್ ಪ್ಲಾಂಟ್ಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಮೂಲಗಳ ಪ್ರಕಾರ, ಧೋಲೆರಾದಲ್ಲಿ ಟಾಟಾ ಗ್ರೂಪ್ನ ಸೆಮಿಕಂಡಕ್ಟರ್ ಸ್ಥಾವರಕ್ಕೆ ಅನುಮೋದನೆ ನೀಡಲಾಗಿದೆ. ಸಿಜಿ ಪವರ್ ನ ಒಸ್ಯಾಟ್ ಸ್ಥಾವರಕ್ಕೂ …
Read More »ಬೆಳಗಾವಿಯ ಸುವರ್ಣ ಸೌಧದಲ್ಲಿ ಮೂರನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ
ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದು 2023-24 ಸಾಲಿನ ಮೂರನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಭಿವೃದ್ಧಿ ಕಾರ್ಯಗಳ ಸ್ಥಿತಿಗತಿಗಳ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದರು. ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ರೀತಿಯ ಕೊರತೆಯಾಗದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದರು. ಜಿಲ್ಲೆಯ ಎಲ್ಲ …
Read More »
Laxmi News 24×7