ಬೆಂಗಳೂರು: ಬಿಜೆಪಿ ವಿರುದ್ಧ ಅವಹೇಳನಕಾರಿ ಜಾಹೀರಾತು ವಿಚಾರವಾಗಿ ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಕಾಂಗ್ರೆಸ್ ಪಕ್ಷದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಹಾಗೂ ರಾಹುಲ್ಗಾಂಧಿಗೆ ಸಮನ್ಸ್ ಜಾರಿಗೊಳಿಸಿದೆ. ಬಿಜೆಪಿ ವಿರುದ್ಧವಾಗಿ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಡಬ್ಬಲ್ ಎಂಜಿನ್ ಸರ್ಕಾರ ಹಾಗೂ 40% ಸರ್ಕಾರ ಎಂದು ಜಾಹೀರಾತು ನೀಡಲಾಗಿತ್ತು. ಈ ಸಂಬಂಧ ಬಿಜೆಪಿ ಕಾನೂನು ಘಟಕದ ವಕೀಲ ವಿನೋದ್ ಕುಮಾರ್ ಸಲ್ಲಿಸಿದ್ದ ಖಾಸಗಿ ದೂರು ನೀಡಿದ್ದರು. ಇಂದು ಜನಪ್ರತಿನಿಧಿಗಳ …
Read More »ಕಾಂಗ್ರೆಸ್ ಸಂಸದ ‘ಡಿ.ಕೆ.ಸುರೇಶ್’ ವಿರುದ್ಧ ‘ಡಾ.ಮಂಜುನಾಥ್’ ಕಣಕ್ಕಿಳಿಯಲು ‘NDA’ ಚಿಂತನೆ
ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರನ್ನು ಕಣಕ್ಕಿಳಿಸಲು ಎನ್ಡಿಎ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಗುರುವಾರ ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ಸಭೆಯಲ್ಲಿ ಮಂಜುನಾಥ್ ಅವರ ಹೆಸರು ಪ್ರಸ್ತಾಪಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಪದ್ಮಶ್ರೀ ಪುರಸ್ಕೃತ ಡಾ.ಮಂಜುನಾಥ್ ಅವರು ಹೃದ್ರೋಗ ತಜ್ಞರಾಗಿದ್ದು, ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ …
Read More »ಮದುವೆ ಮುರಿದ ಪ್ರಿಯಕರ; ಧರಣಿ ಕುಳಿತ ಯುವತಿ
(ಬೆಳಗಾವಿ ಜಿಲ್ಲೆ): ಪ್ರೀತಿಸುತ್ತಿದ್ದ ಯುವತಿಯನ್ನು ಪತಿ ಮನೆಯಿಂದ ಮರಳಿ ಕರೆದುಕೊಂಡು ಬಂದ ಯುವಕ; ತಾನೂ ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದಾನೆ. ಇದರಿಂದ ಬೇಸತ್ತ ಯುವತಿ ಪ್ರೀತಿಸಿದ ಯುವಕನ ಮನೆ ಮುಂದೆ ಏಕಾಂಗಿ ಆಗಿ ಧರಣಿ ನಡೆಸಿದ ಪ್ರಕರಣ ಪಟ್ಟಣದಲ್ಲಿ ಗುರುವಾರ ನಡೆದಿದೆ. ಇದರಿಂದ ಎರಡೂ ಕುಟುಂಬದವರ ಮಧ್ಯೆ ಮಾತಿನ ಜಟಾಪಟಿ ನಡೆಯಿತು. ಯುವಕನ ಮನೆಯವರು ಬಾಗಿಲನ್ನು ಹಾಕಿಕೊಂಡರೆ, ಯುವಕ ಮಾತ್ರ ಎಲ್ಲೋ ಹೋಗಿದ್ದಾನೆ ಎಂದು ಕುಟುಂಬದವರು ತಿಳಿಸಿದರು. ಇಲ್ಲಿಯ ಸೋಮವಾರ ಪೇಟೆಯ …
Read More »ವಿಪಕ್ಷ ನಾಯಕನ ಸ್ಥಾನಕ್ಕೆ ಆರ್.ಅಶೋಕ್ ಅಯೋಗ್ಯ; ತಮ್ಮ ಬಣ್ಣ ತಾವೇ ಬಯಲು ಮಾಡಿಕೊಂಡಿದ್ದಾರೆ; ಪ್ರಮೋದ್ ಮುತಾಲಿಕ್ ವಾಗ್ದಾಳಿ
ಉಡುಪಿ: ಮಂಗಳೂರು ಪಬ್ ದಾಳಿಕೋರರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದ ಬಗ್ಗೆ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ. ಪಬ್ ನಲ್ಲಿ ದಾಳಿ ನಡೆಸಿದ್ದ ಬಜರಂಗದಳ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿ ಕ್ರಮ ಕೈಗೊಂಡಿದ್ದೆ ಎಂದು ಆರ್.ಅಶೋಕ್ ವಿಧಾನಸಭೆಯಲ್ಲಿ ಹೇಳಿದ್ದರು. ಇದೇ ವಿಚಾರವಾಗಿ ಉಡುಪಿಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ಆರ್.ಅಶೋಕ್ ವಿಪಕ್ಷ ನಾಯಕ ಸ್ಥಾನಕ್ಕೆ ಅಯೋಗ್ಯ ಎಂದು ಆಕ್ರೋಶ …
Read More »ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ
ಬೆಂಗಳೂರು : 2023-24ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಫೆ. 29 ರೊಳಗಾಗಿ SSP ತಂತ್ರಾಂಶದಲ್ಲಿ ಲಾಗಿನ್ ಆಗಿ ಸಲ್ಲಿಸುವುದು ಎಂದು ಪ್ರಕಟಣೆ ತಿಳಿಸಿದೆ. 2023-24ನೇ ಸಾಲಿನಲ್ಲಿ ಇತರೆ ಇಲಾಖೆಗಳ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು ಈ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಪಡೆಯಲು ಅವಕಾಶವಿರುವುದಿಲ್ಲ. ಸಾಮಾನ್ಯ ವರ್ಗದ …
Read More »‘ಅಯ್ಯೋ ತಗಡೇ’ ಎಂದ ‘ನಟ ದರ್ಶನ್’ ವಿರುದ್ಧ ‘ಮತ್ತೆರಡು ದೂರು’ ದಾಖಲು
ಬೆಂಗಳೂರು: ಅಯ್ಯೋ ತಗಡೇ ಎಂಬುದಾಗಿ ಹೇಳಿಕೆ ನೀಡಿ, ಗುಮ್ಮಿಸಿಕೊಳ್ಳೋದಕ್ಕೆ ಎಂಬುದಾಗಿ ಮಹಿಳೆಯರಿಗೆ ಅವಮಾನ ಮಾಡಿದಂತ ನಟ ದರ್ಶನ್ ವಿರುದ್ಧ ಈಗ ಮತ್ತೆರಡು ದೂರು ದಾಖಲಿಸಲಾಗಿದೆ. ಬೆಂಗಳೂರು ರಾಜರಾಜೇಶ್ವರಿ ಠಾಣೆಗೆ ತೆರಳಿದಂತ ಗಣೇಶ್ ಗೌಡ ಹಾಗೂ ಜಗದೀಶ್ ಎಂಬುವವರು ನಟ ದರ್ಶನ್ ಅವರು ನೀಡಿದಂತ ಅಯ್ಯೋ ತಗಡೇ ಗುಮ್ಮಿಸಿಕೊಳ್ಳೋದಕ್ಕೆ ಎಂಬ ಅವಹೇಳನಕಾರಿ ಹೇಳಿಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಈ ಮೂಲಕ ನಟ ದರ್ಶನ್ ವಿರುದ್ಧ ಮತ್ತೆರಡು ದೂರು …
Read More »ಹೊತ್ತಿ ಉರಿದ ಪ್ಲಾಸ್ಟಿಕ್ ಗೋದಾಮು: ವಾಹನಗಳು ಬೆಂಕಿಗಾಹುತಿ
ಬೆಂಗಳೂರು, ಫೆ.23- ಪ್ಲಾಸ್ಟಿಕ್ ಗೋದಾಮಿನಲ್ಲಿ ಇಂದು ಮುಂಜಾನೆ ಹೊತ್ತಿಕೊಂಡ ಬೆಂಕಿ ಪಕ್ಕದಲ್ಲೇ ಇದ್ದ ಪಾರ್ಕಿಂಗ್ ಸ್ಥಳಕ್ಕೆ ವ್ಯಾಪಿಸಿದ್ದರಿಂದ ಅಲ್ಲಿ ನಿಲ್ಲಿಸಲಾಗಿದ್ದ ಸುಮಾರು 30ರಿಂದ 35 ವಾಹನಗಳು ಸುಟ್ಟು ಕರಕಲಾಗಿರುವ ಘಟನೆ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಂಗೊಂಡನಹಳ್ಳಿಯ ಗೋದಾಮುವೊಂದರಲ್ಲಿ ಹಳೇ ಪ್ಲಾಸ್ಟಿಕ್ ಸಾಮಗ್ರಿಗಳನ್ನು ಸಂಗ್ರಹಿಸಿಡಲಾಗಿತ್ತು. ಗೋದಾಮಿಗೆ ಹೊಂದಿಕೊಂಡಂತೆ ಇದರ ಪಕ್ಕದಲ್ಲಿಯೇ ವಾಹನಗಳನ್ನು ರಾತ್ರಿ ವೇಳೆ ಪೇ- ಪಾರ್ಕಿಂಗ್ ಮಾಡಲಾಗುತ್ತಿತ್ತು. ಚಾಲಕರು ತಮ್ಮ ಮನೆಯ ಬಳಿ ವಾಹನಗಳನ್ನು ನಿಲ್ಲಿಸಲು …
Read More »ಹುಬ್ಬಳ್ಳಿ: ನಾಲ್ಕು ವರ್ಷಗಳಿಂದ ‘ಶುಚಿ’ ಸ್ಥಗಿತ
ಹುಬ್ಬಳ್ಳಿ: ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಬಾಲಕಿಯರಿಗೆ ಸ್ಯಾನಿಟರಿ ನ್ಯಾಪ್ಕಿನ್ ನೀಡುವ ‘ಶುಚಿ ಯೋಜನೆ’ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದೆ. ಹಣ ನೀಡಿ ಸ್ಯಾನಿಟರಿ ನ್ಯಾಪಕಿನ್ ಖರೀದಿಸಲು ಆಗದ ಬಾಲಕಿಯರು ಮುಟ್ಟಿನ ದಿನಗಳಲ್ಲಿ ಶುಚಿತ್ವಕ್ಕೆ ಬಟ್ಟೆ ಬಳಸುತ್ತಾರೆ. ಇದರಿಂದ ಚರ್ಮರೋಗ, ಮೂತ್ರರೋಗ ಉಂಟಾಗಬಹುದು ಎಂಬ ಆತಂಕ ಅವರಲ್ಲಿ ಕಾಡುತ್ತಿದೆ. ಮುಟ್ಟಿನ ನೈರ್ಮಲ್ಯದ ಕುರಿತು ಜಾಗೃತಿ ಮೂಡಿಸಲು ಮತ್ತು ಸ್ಯಾನಿಟರಿ ನ್ಯಾಪಕಿನ್ ಬಳಕೆ ಪ್ರೋತ್ಸಾಹಿಸಲು 2013- 14ನೇ ಸಾಲಿನಲ್ಲಿ ಆರಂಭವಾದ ಶುಚಿ ಯೋಜನೆ …
Read More »ಚನ್ನಮ್ಮನ ಕಿತ್ತೂರು: ‘ನಾನೂ ರಾಣಿ ಚನ್ನಮ್ಮ’ ರಾಷ್ಟ್ರೀಯ ಸಮಾವೇಶ
ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ಕಿತ್ತೂರು ರಾಣಿ ಚನ್ನಮ್ಮ ಬ್ರಿಟಿಷರ ವಿರುದ್ಧ ವಿಜಯ ಸಾಧಿಸಿ 200 ವರ್ಷಗಳು ತುಂಬಿವೆ. ಇದರ ಪ್ರಯುಕ್ತ ಬುಧವಾರ (ಫೆಬ್ರುವರಿ 21) ಇಲ್ಲಿಯ ಕೋಟೆ ಆವರಣದಲ್ಲಿ ‘ನಾನೂ ರಾಣಿ ಚನ್ನಮ್ಮ’ ಎಂಬ ಅಭಿಯಾನದಡಿ ಒಂದು ದಿನದ ರಾಷ್ಟ್ರೀಯ ಮಹಿಳಾ ಸಮಾವೇಶ ನಡೆಯಲಿದೆ. ‘ಸಮಾವೇಶಕ್ಕಾಗಿ ಕೋಟೆ ಆವರಣದೊಳಗೆ ಬೃಹತ್ ವೇದಿಕೆ ಸಿದ್ಧಗೊಂಡಿದೆ. ದೇಶದ ವಿವಿಧ ರಾಜ್ಯಗಳಿಂದ 2,000ಕ್ಕೂ ಹೆಚ್ಚು ಮಹಿಳೆಯರು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ’ ಎಂದು ಸಂಘಟಕರು …
Read More »ರಾಜ್ಯದ 7 ಸ್ಮಾರ್ಟ್ಸಿಟಿಗಳಿಗೆ ಇದುವರೆಗೂ ₹4,557 ಕೋಟಿ ಖರ್ಚು: ಸರ್ಕಾರ
ಬೆಂಗಳೂರು: ರಾಜ್ಯದ 7 ಸ್ಮಾರ್ಟ್ಸಿಟಿಗಳಿಗೆ ಇದುವರೆಗೂ ₹4,557 ಕೋಟಿ ಖರ್ಚು ಮಾಡಲಾಗಿದೆ. ₹1,726 ಕೋಟಿ ಮೊತ್ತದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದರು. ಕಾಂಗ್ರೆಸ್ನ ಅಬ್ದುಲ್ ಜಬ್ಬಾರ್ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಶೇ 90ರಷ್ಟು ಕಾಮಗಾರಿ ಪೂರ್ಣಗೊಂಡಿವೆ. ಕೇಂದ್ರ ಸರ್ಕಾರ ಕಾಮಗಾರಿಗಳ ಅನುಷ್ಠಾನಕ್ಕೆ ಜೂನ್-2024ರವರೆಗೆ ಅವಕಾಶ ನೀಡಿದೆ. ಎಲ್ಲ ಕಾಮಗಾರಿಗಳನ್ನೂ ನಾಲ್ಕು ತಿಂಗಳ ಒಳಗೆ ಅನುಷ್ಠಾನಗೊಳಿಸಲಾಗುವುದು ಎಂದರು. ಬರಗಾಲದಿಂದ ರಾಜ್ಯದಲ್ಲಿ 5.11 ಲಕ್ಷ ಎಕರೆ …
Read More »
Laxmi News 24×7