ವಿಜಯಪುರ: ನಾಯಿ ಕದಿಯಲು ಬಂದಿದ್ದಾನೆ ಎಂದು ಭಾವಿಸಿ ಪಾನಮತ್ತ ವ್ಯಕ್ತಿಯನ್ನು ಅದೇ ನಾಯಿಯ ಗೂಡಿನಲ್ಲಿ ಕೂಡಿ ಹಾಕಿದ್ದು ಮಾತ್ರವಲ್ಲದೇ ಆತನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವರದಿಗಳ ಪ್ರಕಾರ ಬಬಲೇಶ್ವರ ರಸ್ತೆಯಲ್ಲಿರುವ ಸಾಯಿ ಪ್ರಭಾತ್ ಬಾರ್ನ ಸಿಬ್ಬಂದಿ ಪಾನಮತ್ತ ವ್ಯಕ್ತಿ ಸೋಮು ಬಾರ್ನ ಸಾಕುನಾಯಿಯನ್ನು ಕದಿಯಲು ಪ್ರಯತ್ನಿಸಿದ್ದಾನೆ ಎಂದು ಆರೋಪಿಸಿ, ಆತನನ್ನು ಅದೇ ನಾಯಿಯ ಗೂಡಿನಲ್ಲಿ ಕೂಡಿ ಹಾಕಿದ್ದಾನೆ. ಮಾತ್ರವಲ್ಲದೇ ಆತನಿಗೆ ಅಮಾನುಷವಾಗಿ ಥಳಿಸಿದ್ದು, ಹಲವು ಗಂಟೆಗಳ ಕಾಲ …
Read More »ಸಚಿವ ಸತೀಶ್ ಜಾರಕಿಹೊಳಿ ಅವರ ಆದೇಶ ಮೇರೆಗೆ ಜನ, ಜಾನುವಾರುಗಳಿಗೆ ಅನುಕೂಲಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ಕುಡಿಯುವ ನೀರು ಬಿಡುಗಡೆ.
ಸಚಿವ ಸತೀಶ್ ಜಾರಕಿಹೊಳಿ ಅವರ ಆದೇಶ ಮೇರೆಗೆ ಜನ, ಜಾನುವಾರುಗಳಿಗೆ ಅನುಕೂಲಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ಕುಡಿಯುವ ನೀರು ಬಿಡುಗಡೆ. ಗೋಕಾಕ : ಪ್ರಸ್ತುತ ಬರ ಹಾಗೂ ತೀವ್ರ ಬಿಸಿಲಿನ ಪ್ರಮಾಣ ಹೆಚ್ಚಾಗಿದ್ದರಿಂದ ಹಳ್ಳಿ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿತ್ತು, ಆದರಿಂದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಅಧಿಕಾರಿಗಳೊಂದಿಗೆ ಕರೆ ಮಾಡಿ ಮಾತನಾಡಿ ಜನ, ಜಾನುವಾರುಗಳಿಗೆ ಅನುಕೂಲಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ಕುಡಿಯುವ ನೀರು …
Read More »ಸಾರ್ವಜನಿಕ ಕ್ಷೇತ್ರದಲ್ಲಿರುವುದರಿಂದ ಕುಟುಂಬಕ್ಕೆ ಸಮಯ ಕೊಟ್ಟಿದ್ದು, ಬಹಳ ಕಡಿಮೆ:C.M.
ಬೆಂಗಳೂರು: ಸಾರ್ವಜನಿಕ ಕ್ಷೇತ್ರದಲ್ಲಿರುವುದರಿಂದ ಕುಟುಂಬಕ್ಕೆ ಸಮಯ ಕೊಟ್ಟಿದ್ದು, ಬಹಳ ಕಡಿಮೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು. ಕರ್ನಾಟಕ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಖಾತೆ ಎಕ್ಸ್ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದೆ. ವಿಡಿಯೋದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಎಂ ಸಿದ್ದರಾಮಯ್ಯ ಅವರಿಗೆ ವೈಯಕ್ತಿಕ ವಿಚಾರ ಹಾಗೂ ಕುಟುಂಬದ ಕುರಿತು ಪ್ರಶ್ನಿಸುತ್ತಾರೆ. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ಸಮಯ ಸಿಗಲ್ಲ. ಇದರಿಂದ ಕುಟುಂಬಕ್ಕೆ ಸಮಯ ಕೊಟ್ಟಿದ್ದು, ಬಹಳ ಕಡಿಮೆ. …
Read More »ಮತ್ತೆ ಶುರುವಾಯ್ತು ರೈತರ ದೆಹಲಿ ಚಲೋ ಯಾತ್ರೆ- ಪಂಜಾಬ್ ಗಡಿಯಲ್ಲಿ 14 ಸಾವಿರ ಮಂದಿ ಜಮಾವಣೆ!
ನವದೆಹಲಿ : ಕೇಂದ್ರ ಬಿಜೆಪಿ (BJP) ಸರ್ಕಾರದ ಕೃಷಿ ನೀತಿಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪಾದಯಾತ್ರೆ (Farmers protest) ಬುಧವಾರದಿಂದ ತೀವ್ರಸ್ವರೂಪ ಪಡೆಯುವ ಸಾಧ್ಯತೆಯಿದೆ. ಪಂಜಾಬ್ – ಹರಿಯಾಣಾ ಗಡಿಯಲ್ಲಿ (Punjab-Haryana border) 14,000 ಕ್ಕೂ ಹೆಚ್ಚು ಮಂದಿ ರೈತರು ಇಂದು ಒಗ್ಗೂಡುತ್ತಿದ್ದಾರೆ. ಜೊತೆಗೆ 1200 ಟ್ರಾಕ್ಟರ್ ಟ್ರಾಲಿಗಳು, 300 ಕಾರ್ ಗಳು ಹಾಗೂ 10 ಮಿನಿ ಬಸ್ ಗಳೂ ಸಹ ಇಂದು ದೆಹಲಿ ಚಲೋ(Delhi Chalo) ಯಾತ್ರೆಗೆ ಸಜ್ಜಾಗಿವೆ. …
Read More »ಶಿವಾಜಿಯವರ 36 ಬಾಡಿಗಾರ್ಡ್ಗಳಲ್ಲಿ 13 ಜನ ಮುಸ್ಲಿಂ ಇದ್ರು: ಸಂತೋಷ್ ಲಾಡ್
ಹುಬ್ಬಳ್ಳಿ, : ಛತ್ರಪತಿ ಶಿವಾಜಿ ಮಹರಾಜರ (Chhatrapati Shivaji Maharaj) 36 ಬಾಡಿಗಾರ್ಡ್ಗಳಲ್ಲಿ 13 ಜನ ಮುಸ್ಲಿಂ ಬಾಡಿಗಾರ್ಡ್ಗಳಿದ್ದರು ಎಂದು ಸಚಿವ ಸಂತೋಷ್ ಲಾಡ್(Santosh Lad) ಹೇಳಿದ್ದಾರೆ. ನಗರದ ಮರಾಠಾ ಗಲ್ಲಿಯಲ್ಲಿ ನಡೆದ ಶಿವಾಜಿ ಮಹರಾಜರ 397 ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿವಾಜಿ ಮಹರಾಜರು ಮುಸ್ಲಿಂ ವಿರೋಧಿ ಅಲ್ಲ. ಇತಿಹಾಸವನ್ನು ಇವತ್ತು ಯಾರ ಹೇಗೆಬೇಕಾದರೂ ಹೇಳಬಹುದು. 60 ಸಾವಿರ ಮುಸ್ಲಿಂರು ಶಿವಾಜಿ ಸೈನ್ಯದಲ್ಲಿ ಇದ್ದರು. ಭಗವಾ ಕಲರ್ ಶಿವಾಜಿ …
Read More »ಯುವಕನ ಮೇಲೆ ಲಾಠಿಗಳಿಂದ ಹಲ್ಲೆ ನಡೆಸಿದ ಅಪಾರ್ಟ್ಮೆಂಟ್ ಸೆಕ್ಯುರಿಟಿ ಗಾರ್ಡ್ಗಳು
ದೇವನಹಳ್ಳಿ, ಫೆ.20: ಸ್ನೇಹಿತನನ್ನ ಡ್ರಾಪ್ ಮಾಡಲು ಅಪಾರ್ಟ್ಮೆಂಟ್ಗೆ ಹೋದ ಯುವಕನ ಮೇಲೆ ಸೆಕ್ಯುರಿಟಿ ಗಾರ್ಡ್ಗಳು ಲಾಠಿಗಳಿಂದಹಲ್ಲೆ (Assault)ನಡೆಸಿದ ಪ್ರಕರಣ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಮಾರಸಂದ್ರ ಬಳಿ ನಡೆದಿದೆ. ಲಾಠಿಗಳಿಂದ ಹಲ್ಲೆ ನಡೆಸುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅರ್ಚನ್ (19) ಹಲ್ಲೆಗೊಳಗಾದ ಯುವಕ. ಮಾರಸಂದ್ರ ಬಳಿಯ ಪ್ರಾವಿಡೆಂಟ್ ವೆಲ್ವರ್ಥ ಸಿಟಿ ಅಪಾರ್ಟ್ಮೆಂಟ್ನಲ್ಲಿ ಅರ್ಚನ್ ಮೇಲೆ ಭದ್ರತಾ ಸಿಬ್ಬಂದಿಗಳು ಹಲ್ಲೆ ನಡೆಸಿದ್ದಾರೆ. ವಿಚಾರ ತಿಳಿದ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯು ಯುವಕನ ಮೇಲಿನ ಹಲ್ಲೆಯನ್ನು ಖಂಡಿಸಿದ್ದು, …
Read More »ನಡುರಸ್ತೆಯಲ್ಲಿ ಪತ್ನಿಯನ್ನು ಅಟ್ಟಾಡಿಸಿ ಮಚ್ಚಿನಿಂದ ಹಲ್ಲೆ ಮಾಡಿದ ಪತಿ
ಬೆಂಗಳೂರು, (ಫೆಬ್ರವರಿ 20): ಬೇರೊಬ್ಬನ ಜೊತೆ ಅನೈತಿಕ ಸಂಬಂಧದ(illicit relationship_ ಅನುಮಾನದ ಮೇಲೆ ನಡುರಸ್ತೆಯಲ್ಲೇ ಪತ್ನಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆಯನ್ನು (Assault) ಮಾಡಿದ್ದಾನೆ. ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಪತ್ನಿಗೆ ಮಚ್ಚಿನಿಂದ ಹೊಡೆದಿದ್ದಾನೆ. ಬೆಂಗಳೂರಿನ(Bengaluru) ಜೀವನ್ ಭೀಮಾ ನಗರದ ವಿಂಡ್ ಟನಲ್ ರಸ್ತೆಯಲ್ಲಿ ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಶೇಕ್ ಮುಜೀಬ್ ಎನ್ನುವಾತ ನೈಗರ್ (28) ಎನ್ನುವಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಆದ್ರೆ, ಹೆಂಡ್ತಿ ಬೇರೊಬ್ಬನ ಜತೆ …
Read More »71st Miss World: ವಿಶ್ವ ಸುಂದರಿ ಸ್ಪರ್ಧೆ; ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ ಕನ್ನಡತಿ ಸಿನಿ ಶೆಟ್ಟಿ
ಈ ಬಾರಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಕನ್ನಡತಿ ಸಿನಿ ಶೆಟ್ಟಿ (21) ಪ್ರತಿನಿಧಿಸುತ್ತಿದ್ದಾರೆ. 30 ದಶಕಗಳ ಬಳಿಕ ವಿಶ್ವ ಸುಂದರಿ ಸ್ಪರ್ಧೆಯನ್ನು ಭಾರತದಲ್ಲಿ ಆಯೋಜಿಸಲಾಗಿದೆ. 28 ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಈ ಸ್ಪರ್ಧೆ ನಡೆದಿತ್ತು. ಈ ವರ್ಷ ಮಿಸ್ ವರ್ಲ್ಡ್ ಗ್ರ್ಯಾಂಡ್ ಫಿನಾಲೆ ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ಮಾರ್ಚ್ 9 ರಂದು ಅದ್ಭುತ ಕಾರ್ಯಕ್ರಮದೊಂದಿಗೆ ಮುಕ್ತಾಯಗೊಳ್ಳಲಿದೆ.71ನೇವಿಶ್ವ ಸುಂದರಿ ಸ್ಪರ್ಧೆಆರಂಭವಾಗಿದೆ. ಈ ಈವೆಂಟ್ ಫೆಬ್ರವರಿ …
Read More »ಸ್ವಾತಂತ್ರ ಬಂದು 75 ವರ್ಷವಾದ್ರೂ ಅಂಧಕಾರದಲ್ಲಿವೆ 80 ಕುಟುಂಬಗಳು, ಬ್ಯಾಟರಿ ಬೆಳಕಲ್ಲೇ ಮಕ್ಕಳ ವ್ಯಾಸಂಗ
ಚಾಮರಾಜನಗರ, ಫೆ.20: ಜಿಲ್ಲೆಯ ಹನೂರು ತಾಲೂಕಿನ ಕಾಡಂಚಿನ ಪ್ರದೇಶವಾದ ಪಾಲಾರ್ (Palar) ಗ್ರಾಮದಲ್ಲಿನ ಜನರ ಸ್ಥಿತಿ ಹೇಳತೀರದ್ದು. ಸ್ವಾತಂತ್ರ ಬಂದು ಬರೋಬ್ಬರಿ 75 ವರ್ಷ ಕಳೆದ್ರು ಈ ಗ್ರಾಮದ 80 ಸೋಲಿಗ ಮನೆಗಳಿಗೆ ವಿದ್ಯುತ್ ಭಾಗ್ಯವೇ ಇಲ್ಲ (No Electricity Connection). ಇನ್ನು ಅಂಧಕಾರದಲ್ಲಿ ಕಾಲ ಕಳೆಯುತ್ತಿದ್ರು ಸರ್ಕಾರ ಈ ಗ್ರಾಮಕ್ಕೆ ವಿದ್ಯುತ್ ಸಂಪರ್ಕವೇ ನೀಡಿಲ್ಲ. ಕತ್ತಲಾದ್ರೆ ಸಾಕು ಚಿಮಣಿ, ಬುಡ್ಡಿ, ಬ್ಯಾಟರಿ ಬೆಳಕಲ್ಲೇ ಕಾಲ ಕಳೆಯುತ್ತಿದ್ದಾರೆ. ಕಾಡುಗಳ್ಳ ವೀರಪ್ಪನ್ಗೆ ಸಹಾಯ …
Read More »ಸತ್ತವರ ಬ್ಯಾಂಕ್ ಖಾತೆಗೂ ಗೃಹಲಕ್ಷ್ಮಿ ಹಣ ಜಮೆ; ಯೋಜನೆಯ ಹಣ ಪಡೆಯಲು ಕುಟುಂಬಸ್ಥರ ಪರದಾಟ
ಗದಗ, ಫೆ.20: ಸತ್ತವರ ಬ್ಯಾಂಕ್ ಖಾತೆಗೂಗೃಹಲಕ್ಷ್ಮಿ ಹಣಜಮೆಯಾಗಿದ್ದು, ಅದನ್ನು ಪಡೆಯಲು ಕುಟುಂಬಸ್ಥರು ಹರಸಾಹಸ ಪಡುತ್ತಿರುವ ಘಟನೆ ಗದಗ ಜಿಲ್ಲೆಯ ನರಗುಂದ(Naragunda) ತಾಲೂಕಿನ ಜಗಾಪುರ ಗ್ರಾಮದಲ್ಲಿ ನಡೆದಿದೆ. ಜಗಾಪುರ ಗ್ರಾಮದ ನಿಂಗವ್ವ ಶಿವಪ್ಪ ಹೂಲಿ ಎಂಬಾಕೆ ಗೃಹ ಲಕ್ಷಿ ಯೋಜನೆ ಜಾರಿಗೆ ಬರುವ ಮುನ್ನವೇ ಅಂದರೆ ಆಗಸ್ಟ್ 26, 2020 ರಂದು ಮೃತಪಟ್ಟಿದ್ದಾರೆ. ಆದರೆ, ಸೊಸೆ ಲಲಿತಾ ಹೂಲಿ ಗೃಹಲಕ್ಷ್ಮಿ ಯೋಜನೆ ಅಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಳು. ಈ ಹಿನ್ನಲೆ ಮೃತಳ …
Read More »
Laxmi News 24×7