Breaking News

ರಾಜ್ಯ

ಯಾವುದೇ ಕಾರಣಕ್ಕೂ ನಾನು ಈ ಮಣ್ಣನ್ನ ಬಿಡೋದಿಲ್ಲ: ಸುಮಲತಾ

ಮಂಡ್ಯ, ಫೆ.18: ಮತ್ತೊಮ್ಮೆ ಮಂಡ್ಯ ಲೋಕ ಸಭಾ ಅಖಾಡಕ್ಕೆ (Mandya Lok Sabha) ಸುಮಲತಾ ಅಂಬರೀಶ್ (Sumalatha Ambarish) ಅವರು ಇಳಿಯುತ್ತಿರುವುದು ಬಹುತೇಕ ಫಿಕ್ಸ್ ಆಗಿದೆ. ಈ ಬಗ್ಗೆ ಅವರೇ ಕೇಳಿ ಕೊಂಡಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan Thoogudeepa) ಚಂದನವನಕ್ಕೆ ಕಾಲಿಟ್ಟು 25 ವರ್ಷಗಳು ತುಂಬಿದ ಹಿನ್ನೆಲೆ ಸಕ್ಕರೆನಾಡು ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅದ್ದೂರಿಯಾಗಿ ಬೆಳ್ಳಿಹಬ್ಬ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ತಮ್ಮ ಸ್ಪರ್ಧೆ ಬಗ್ಗೆ ರೆಬಲ್ ಲೇಡಿ ಸುಮಲತಾ ಅವರು ಮತ್ತೆ …

Read More »

ಕೃಷಿ ಪರಿಕರಗಳನ್ನ ಕಾಳಸಂತೆಯಲ್ಲಿ ಮಾರಾಟ ಪ್ರಕರಣ; ರೈತ ಸಂಪರ್ಕ ಕೇಂದ್ರದ ಅಧಿಕಾರಿ ಅಮಾನತು

ಕಲಬುರಗಿ, ಫೆ.18: ಕೃಷಿ ಪರಿಕರಗಳನ್ನು ಕಾಳಸಂತೆಯಲ್ಲಿ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡ್ರಾಮಿ ತಾಲೂಕು ರೈತ ಸಂಪರ್ಕ ಕೇಂದ್ರದ ಅಧಿಕಾರಿಯನ್ನುಅಮಾನತುಮಾಡಿ ಕಲಬುರಗಿ(Kalaburagi) ಜಂಟಿ ಕೃಷಿ ನಿರ್ದೇಶಕರು ಆದೇಶಿಸಿದ್ದಾರೆ. ಇದೇ ಫೆಬ್ರವರಿ 5 ರಂದು ಟ್ಯ್ಯಾಕ್ಟರ್‌ನಲ್ಲಿ 100 ಎರೆಹುಳು ಗೊಬ್ಬರದ ಚೀಲಗಳು, 30 ಪಿವಿಸಿ ಪೈಪ್‌ಗಳನ್ನ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ ಗ್ರಾಮದ ಜನರೆಲ್ಲ ಸೇರಿ ಟ್ಯ್ಯಾಕ್ಟರ್​ನ್ನು ಅಡ್ಡಗಟ್ಟಿ ಪೊಲೀಸರಿಗೆ ಒಪ್ಪಿಸಿದ್ದರು. ಇದೀಗ ಅಕ್ರಮವೆಸಗಿದ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಮೈಸೂರಿನಲ್ಲಿ ಅನಧಿಕೃತ ಕಟ್ಟಡಗಳ ತೆರವು …

Read More »

ಬರಡಾದ ಕೃಷ್ಣ; ಹನಿ ನೀರಿಗಾಗಿ ರಾಯಚೂರು ಗ್ರಾಮಗಳಲ್ಲಿ ಕಣ್ಣೀರು

ಬರಡಾದ ಕೃಷ್ಣ; ಹನಿ ನೀರಿಗಾಗಿ ರಾಯಚೂರು ಗ್ರಾಮಗಳಲ್ಲಿ ಕಣ್ಣೀರು ರಾಯಚೂರು, : ರಾಯಚೂರು (Raichur) ಜಿಲ್ಲೆಯ ಎಡ ಮತ್ತು ಬಲಭಾಗದಲ್ಲಿ ಕೃಷ್ಣಾ ಹಾಗೂ ತುಂಗಭದ್ರಾ ನದಿಗಳು ಹರಿಯುತ್ತಿದ್ದರೂ, ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ (Drinking Water Crisis). ನೀರಿಲ್ಲದೇ ಆ ಗ್ರಾಮದಲ್ಲಿ ಕಳೆದೊಂದು ವಾರದಿಂದ‌ ಶೇಕಡಾ 60% ರಷ್ಟು ಜನ ಸ್ನಾನವನ್ನೇ ಮಾಡಿಲ್ಲ. ಹೇಗಾದರೂ ಮಾಡಿ ಕುಡಿಯುವುದಕ್ಕಾದರೂ ನೀರಿನ ವ್ಯವಸ್ಥೆ ಮಾಡಿಸಿ ಎಂದು ಗ್ರಾಮಸ್ಥರು ಟಿವಿ9 ಮುಂದೆ ಅಳಲು ತೋಡಿಕೊಂಡಿದ್ದಾರೆ. …

Read More »

ಮುಸ್ಲಿಮರಿಗೆ ಹೆಚ್ಚು ಅನುದಾನ ಕೊಟ್ರೆ ತಪ್ಪೇನು ಎಂದ ಪರಮೇಶ್ವರ: ಯತ್ನಾಳ ಆಕ್ರೋಶ

ವಿಜಯಪುರ: ಮುಸ್ಲಿಮರಿಗೆ ಸ್ವಲ್ಪ ಹೆಚ್ಚು ಅನುದಾನ ಕೊಟ್ಟರೆ ತಪ್ಪೇನು ಎಂದು ಗೃಹ ಸಚಿವ ಡಾ. ಪರಮೇಶ್ವರ ನೀಡಿರುವ ಹೇಳಿಕೆಯನ್ನು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಖಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಯತ್ನಾಳ, ಡಾ.ಪರಮೇಶ್ವರ್ ಅವರೇ, ಸರ್ವ ಧರ್ಮ ಸಹಿಷ್ಣುತೆ, ಸರ್ವ ಜನಾಂಗದ ಶಾಂತಿಯ ತೋಟ ಎಂಬ ಘೋಷಣೆಗಳು ನಿಮ್ಮ ಭಾಷಣಕ್ಕೆ ಸೀಮಿತವಾಯಿತೇ? ತೆರಿಗೆ ದಾರರ ಹಣವನ್ನು equitable ಆಗಿ ಹಂಚಬೇಕಾಗಿದ್ದು ಸರ್ಕಾರದ ಹೊಣೆ. ಮುಸಲ್ಮಾನರಿಗೆ ಹೆಚ್ಚು, …

Read More »

ನೀರಿನ ಸಮಸ್ಯೆ ಉಲ್ಬಣ ಆತಂಕ

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚತೊಡಗಿದೆ. ಮುಂದಿನ ದಿನಗಳಲ್ಲಿ ಇದು ತಾರರಕ್ಕೆ ಹೋಗುವ ಸಾಧ್ಯತೆ ಇದೆ. ಇದರ ನಿವಾರಣೆ ಮತ್ತು ತುರ್ತು ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರವು ಜಿಲ್ಲೆಯ ಬರಪೀಡಿತ ಪ್ರತಿ ತಾಲ್ಲೂಕಿಗೆ ₹25 ಲಕ್ಷದಂತೆ 8 ತಾಲ್ಲೂಕುಗಳಿಗೆ ತಾತ್ಕಾಲಿಕವಾಗಿ ₹2 ಕೋಟಿ ಅನುದಾನ ಬಿಡುಗಡೆ ಮಾಡಿದೆ.   ಧಾರವಾಡ, ಅಳ್ನಾವರ, ಹುಬ್ಬಳ್ಳಿ ಗ್ರಾಮೀಣ, ಹುಬ್ಬಳ್ಳಿ ಶಹರ, ಕುಂದಗೋಳ, ನವಲಗುಂದ, ಅಣ್ಣಿಗೇರಿ ಮತ್ತು ಕಲಘಟಗಿ ತಾಲ್ಲೂಕುಗಳಲ್ಲಿ ಕುಡಿಯುವ …

Read More »

ಕಲಘಟಗಿ: ಉಳವಿ ಪಾದಯಾತ್ರಿಗಳಿಗೆ ದಾಸೋಹ

ಕಲಘಟಗಿ: ಉಳವಿಯ ಚನ್ನಬಸವೇಶ್ವರರ ಜಾತ್ರಾ ಮಹೋತ್ಸವಕ್ಕೆ ಪಾದಯಾತ್ರೆಯಲ್ಲಿ ತೆರಳುವವರಿಗೆ ಪಟ್ಟಣದ ಹೊರವಲಯದ ತಡಸ ಕ್ರಾಸ್ ಹತ್ತಿರ ತಿಪ್ಪಣ್ಣ ಹಾಗೂ ಮಂಜುಳಾ ಕುರಗುಂದ ದಂಪತಿ ಪ್ರತಿ ವರ್ಷದಂತೆ ಈ ವರ್ಚವೂ ವಿಶ್ರಾಂತಿ ಮಂಟಪದಲ್ಲಿ ಅನ್ನ ದಾಸೋಹ ಹಮ್ಮಿಕೊಂಡಿದ್ದಾರೆ. ಭಕ್ತರ ಸಹಕಾರದಿಂದ ಈ ದಂಪತಿ 14 ವರ್ಷಗಳಿಂದ ಉಳವಿಗೆ ಪಾದಯಾತ್ರೆ ತೆರಳುವ ಭಕ್ತರಿಗೆ ಬೆಳಗಿನ ಉಪಾಹಾರ, ಚಹಾ, ಮಧ್ಯಾಹ್ನದ ಊಟ, ರಾತ್ರಿ ವೇಳೆ ವಿಶ್ರಾಂತಿ ಪಡೆಯಲು ಅವಕಾಶ ಮಾಡಿಕೊಡುತ್ತಿದ್ದಾರೆ. ದಾಸೋಹದ ಜೊತೆಗೆ ಶರಣರ …

Read More »

ಜೈಲಿನಿಂದಲೇ ನಗ್ನ ವಿಡಿಯೋ ಕಳುಹಿಸಿ ಮಹಿಳೆಗೆ ಬ್ಲ್ಯಾಕ್ ಮೇಲ್; ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಜೈಲಿನಿಂದಲೇ ರೌಡಿಶೀಟರ್ ನಗ್ನ ವಿಡಿಯೋ ಕಳುಹಿಸಿ ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ಸೇರಿದಂತೆ ಮೂವರು ಆರೋಪಿಗಳನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ಮನೋಜ್ ಅಲಿಯಾಸ್ ಕೆಂಚ, ಸುಭಾಷ್ ಹಾಗೂ ಯೋಗೇಶ್ ಬಂಧಿತ ಆರೋಪಿಗಳು. ರೌಡಿಶೀಟರ್ ಮನೋಜ್ ಜೈಲಿನಲ್ಲಿ ಕುಳಿತು ಮಾರ್ಫ್ ಮಾಡಿದ ಮಹಿಳೆಯ ಬೆತ್ತಲೆ ಫೋಟೋ, ವಿಡಿಯೋಗಳನ್ನು ಕಳುಹಿಸಿ ಮಹಿಳೆಯ ತಾಯಿಗೆ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದ. ನಿನ್ನ ಅಳಿಯನಿಗೆ ಫೋಟೋ, ವಿಡಿಯೋ ಕಳುಹಿಸಿ …

Read More »

ನಾಲತವಾಡ: ಡಿಜಿಟಲ್ ಪೇ ಮೂಲಕ ಬಸ್‌ ಪ್ರಯಾಣ

ನಾಲತವಾಡ: ಬೆಳಗಾವಿಯಿಂದ ನಾಲತವಾಡಕ್ಕೆ ಹಲವು ವಿಶೇಷತೆ ಒಳಗೊಂಡ ಬೆಳಗಾವಿ ಡಿಪೊದ ನೂತನ ಬಸ್ ಓಡಿಸಲಾಗುತ್ತಿದೆ. ಈ ಬಸ್‌ನಲ್ಲಿ ಮಹಿಳೆಯರ ಸುರಕ್ಷತಾ ದೃಷ್ಟಿಯಿಂದ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇದೆ. ಬಸ್‍ನಲ್ಲಿ ಹೋಗೋಕೆ ಜೇಬ್‍ನಲ್ಲಿ ದುಡ್ಡು ಇರಲೇ ಬೇಕು ಎನ್ನುವಂತಿಲ್ಲ. ಬಸ್‍ಗಳಲ್ಲಿ ಟಿಕೆಟ್ ಪಡೆಯಲು ಬೆಳಗಾವಿಯ ಈ ಬಸ್ ಇನ್ನಷ್ಟು ಅನುಕೂಲ ಮಾಡಿಕೊಟ್ಟಿದೆ. ಇನ್ಮುಂದೆ ನಿಮ್ಮ ಮೊಬೈಲ್‌ನಲ್ಲಿ ಯುಪಿಐ ಪೇಮೆಂಟ್ ಅವಕಾಶ ಇದ್ರೆ ಸಾಕು ಬಸ್‌ನಲ್ಲಿ …

Read More »

ಸಂಚಾರ ನಿಯಮ ಉಲ್ಲಂಘನೆ: 50 ಸಾವಿರಕ್ಕಿಂತ ಹೆಚ್ಚು ದಂಡವಿರುವ 85 ಬೈಕ್​​ ಸೀಜ್, ದಂಡ ವಸೂಲಿ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿ 50 ಸಾವಿರ ರೂ.ಗಿಂತ ಹೆಚ್ಚಿನ ಮೊತ್ತದ ದಂಡವಿದ್ದ ವಾಹನಗಳ ವಿರುದ್ದ ದಕ್ಷಿಣ ಸಂಚಾರ ವಿಭಾಗ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, 84 ದ್ವಿಚಕ್ರ ವಾಹನಗಳು ಮತ್ತು 1 ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದಿರುವ ಈ ವಾಹನಗಳ ಮೇಲೆ 10,210 ಉಲ್ಲಂಘನಾ ಪ್ರಕರಣಗಳು ದಾಖಲಾಗಿದ್ದು‌, ಸುಮಾರು 1.07 ಕೋಟಿ ರೂಪಾಯಿ ದಂಡ ಸಂಗ್ರಹಿಸಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.   ಸಂಚಾರ ಪೊಲೀಸರ ಬದಲಾಗಿ ಆತ್ಯಾಧುನಿಕ …

Read More »

ರಾಜಕೀಯಕ್ಕೆ ಡಾಲಿ ಧನಂಜಯ: ಮೈಸೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕೆ?

ಬೆಂಗಳೂರು: ವಿಧಾನಸಭಾ ಚುಣಾವಣೆಯಲ್ಲಿ ಬಹುಮತ ಪಡೆದ ಕಾಂಗ್ರೆಸ್ ಮುಂದಿನ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದೆ. ಕಾಂಗ್ರೆಸ್‌ ಗೆ ಲೋಕಸಭಾ ಚುನಾವಣೆಯಲ್ಲಿ ಠಕ್ಕರ್‌ ಕೊಡುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾಗಿದ್ದು, ಕಾಂಗ್ರೆಸ್‌ ಮುಂದಿನ ಲೋಕಸಭಾ ಚುಣಾವಣೆಯನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ‌ ದೊಡ್ಡದೊಂದು ಸಂಚಲನ ಸೃಷ್ಟಿ ಮಾಡಲು ಕಾಂಗ್ರೆಸ್‌ ಕಾರ್ಯತಂತ್ರ ಸಿದ್ಧವಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯ ಕ್ಷೇತ್ರವಾಗಿರುವ ಮೈಸೂರು ಕ್ಷೇತ್ರವನ್ನು ಗೆಲ್ಲಲು ಒಂದು …

Read More »