Breaking News

ರಾಜ್ಯ

ಮಹಾರಾಷ್ಟ್ರದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ಅಶೋಕ್ ಚವಾಣ್

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಅಶೋಕ್ ಚವಾಣ್ (Ashok Chavan) ಗುರುವಾರ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಅಶೋಕ್‌ ಚವಾಣ್‌ ಕಾಂಗ್ರೆಸ್ ಜೊತೆಗಿನ ಸಂಬಂಧವನ್ನು ಕಡಿದುಕೊಂಡು ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಈ ಬೆಳವಣಿಗೆಯಾಗಿದೆ. ಬುಧವಾರ ಮಹಾರಾಷ್ಟ್ರದಿಂದ ಪಕ್ಷದ ರಾಜ್ಯಸಭಾ ನಾಮನಿರ್ದೇಶಿತರಾಗಿ ತಮ್ಮ ಹೆಸರನ್ನು ಘೋಷಿಸಿದ ನಂತರ ಚವಾಣ್ ಬಿಜೆಪಿಯ ಹಿರಿಯ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ. ರಾಜ್ಯಸಭಾಗೆ ನಾಮನಿರ್ದೇಶಿತರಾದ ಬಳಿಕ ಮಾತನಾಡಿದ ಚವಾಣ್‌, ನನ್ನ ಭಾವನೆಗಳನ್ನು ಪದಗಳಲ್ಲಿ …

Read More »

ಉಸಿರಾಟ ಸಮಸ್ಯೆ: ದೇವೇಗೌಡ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಪ್ರಧಾನಿ (former PM), ಜೆಡಿಎಸ್ (JDS) ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ ಹೆಚ್.ಡಿ. ದೇವೇಗೌಡ (H.D. Devegowda) ಅವರು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗುರುವಾರ ಮಧ್ಯಾಹ್ನ ಅವರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಬೆಂಗಳೂರಿನ ಹೆಚ್ ಎಲ್ ಎ ರಸ್ತೆಯ ಮಣಿಪಾಲ ಆಸ್ಪತ್ರೆಗೆ (manipal hospital) ಅವರನ್ನು ದಾಖಲಿಸಲಾಗಿದೆ. ಮಾಜಿ ಪ್ರಧಾನಿಯವರ ಸದ್ಯದ ಸ್ಥಿತಿ ಸ್ಥಿರವಾಗಿದ್ದು, ತಜ್ಞರ ತಂಡದಿಂದ ನಿಗಾ ವಹಿಸಲಾಗಿದೆ. ಲೋಕ ಸಭಾ ಚುನಾವಣೆ ಅಭ್ಯರ್ಥಿಗಳ …

Read More »

ಲೋಕಸಭೆ ಚುನಾವಣೆಯಲ್ಲಿ ಕಮಲ ಹಾಸನ ಸ್ಪರ್ಧೆ

ಚೆನ್ನೈ: ತಮಿಳು ಸೂಪರ್‌ಸ್ಟಾರ್ ಕಮಲ್ ಹಾಸನ್ (Kamal Haasan) ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೊಯಮತ್ತೂರು (Coimbatore) ಅಥವಾ ಚೆನ್ನೈನಿಂದ (Chennai) ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಕ್ಕಳ್ ನೀಧಿ ಮೈಯಂ (ಎಂಎನ್‌ಎಂ) ಅಧ್ಯಕ್ಷರೂ ಆಗಿರುವ ಕಮಲ್‌ ಹಾಸನ್‌ ಅವರು, ಈಗಾಗಲೇ ಆಡಳಿತಾರೂಢ ಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಹೀಗಾಗಿ 2024ರ ಲೋಕಸಭೆ ಚುನಾವಣೆಗೆ ಇಂಡಿಯಾ ಬ್ಲಾಕ್‌ನ ಭಾಗವಾಗಿದ್ದಾರೆ. ಕೊಯಮತ್ತೂರು ಕ್ಷೇತ್ರದಿಂದ ಪ್ರಸ್ತುತ ಡಿಎಂಕೆ ಮೈತ್ರಿ ಪಕ್ಷವಾಗಿರುವ ಸಿಪಿಐ-ಎಂ ಪ್ರತಿನಿಧಿಸುತ್ತಿದ್ದರೆ, ಚೆನ್ನೈ …

Read More »

ಮೋದಿ ಪರ ಬ್ಯಾಟಿಂಗ್ ಮಾಡಿದ ಕುಮಾರಸ್ವಾಮಿ

ಬೆಂಗಳೂರು: GST ಪರಿಹಾರ ಮತ್ತು ರಾಜ್ಯಕ್ಕೆ ಬರಬೇಕಾದ ಹಣಕಾಸಿಗಾಗಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರವನ್ನು ಕೇಳುತ್ತಿರುವ ವಿಧಾನದ ಕುರಿತು ಮಾಜಿ‌ ಸಿಎಂ ಹೆಚ್.ಡಿ. ಕುಮಾರಸ್ವಾಮಿ‌ ಆಕ್ಷೇಪ ವ್ಯಕ್ತಪಡಿಸಿದರು. ವಿಧಾನಸಭೆಯ ಅಧಿವೇಶನದಲ್ಲಿ ಮಾತನಾಡಿದ ಅವರು, ಜಿಎಸ್ ಟಿಯ 58% ಮರಳಿ ರಾಜ್ಯಕ್ಕೆ ಬರುತ್ತಿದೆ ಎಂದು‌ ವಿವರಿಸಿದರು.   ದೇಶದ ಇತಿಹಾಸದಲ್ಲಿಯೇ ಕೇಂದ್ರದಿಂದ ಬರಪರಿಹಾರ‌ ನೀಡಿದ‌ ಉದಾಹರಣೆಯೇ ಇಲ್ಲ. ತುರ್ತು ನಿಧಿಯಿಂದ ರಾಜ್ಯಗಳು ಇದನ್ನು ನಿಭಾಯಿಸಿಕೊಂಡು ಬಂದಿವೆ ಎಂದು ಹೇಳುವ ಮೂಲಕ ಕೇಂದ್ರದ‌ …

Read More »

ಅಜಿತ್ ಪವಾರ್ ಬಣದ ಶಾಸಕರನ್ನು ಅನರ್ಹಗೊಳಿಸುವ ಅರ್ಜಿ ತಿರಸ್ಕರಿಸಿದ ಮಹಾರಾಷ್ಟ್ರ ಸ್ಪೀಕರ್

ಮುಂಬೈ ಫೆಬ್ರುವರಿ 15: ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ರಾಹುಲ್ ನಾರ್ವೇಕರ್ (Rahul Narwekar) ಗುರುವಾರಅಜಿತ್ ಪವಾರ್(Ajit Pawar) ಅವರ ಬಣಕ್ಕೆ ಸೇರಿದ ಶಾಸಕರನ್ನು ಅನರ್ಹಗೊಳಿಸುವ ಅರ್ಜಿಯನ್ನು ವಜಾಗೊಳಿಸಿದ್ದು, ಅವರ ಬಣವು ರಾಜ್ಯ ವಿಧಾನಸಭೆಯಲ್ಲಿ ಶರದ್ ಪವಾರ್ (Sharad Pawar) ಬಣವನ್ನು ಗಣನೀಯವಾಗಿ ಮೀರಿಸಿದೆ ಎಂದು ತೀರ್ಪು ನೀಡಿದ್ದಾರೆ. ಎನ್‌ಸಿಪಿಯೊಳಗೆ ಅಜಿತ್ ಪವಾರ್ ಬಣಕ್ಕೆ ಹೆಚ್ಚಿನ ಬಹುಮತವಿದೆ ಎಂದು ನಾನು ಭಾವಿಸುತ್ತೇನೆ ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಎರಡು ಬಣಗಳು ಪರಸ್ಪರ …

Read More »

ಕೂಡಲಸಂಗಮದಲ್ಲಿ ವಚನಗಳ ವಿವಿ ಸ್ಥಾಪನೆ ಆಗಲಿ: ಜಯಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ: ಕೂಡಲಸಂಗಮದಲ್ಲಿ (kudala sangama) ವಚನಗಳ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಘೋಷಣೆ ಮಾಡಬೇಕು ಎಂದು ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ (Jaya Mruthyunjaya Swamiji) ಒತ್ತಾಯಿಸಿದರು. ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕರ್ನಾಟಕ ಬಜೆಟ್ 2024 ಮಂಡಿಸಲಿದ್ದಾರೆ. ಈ ಕುರಿತು ಮಾತನಾಡಿದ ಜಯಮೃತ್ಯುಂಜಯ ಸ್ವಾಮೀಜಿ, ಬಸವಣ್ಣನವರ ಲಿಂಗೈಕ್ಯೆ ಆಗಿದ್ದು ಕೂಡಲಸಂಗಮದಲ್ಲಿ. ಹೀಗಾಗಿ ಕೂಡಲಸಂಗಮದಲ್ಲಿ ವಚನಗಳ ವಿಶ್ವವಿದ್ಯಾಲಯ ಸ್ಥಾಪನೆ ಆಗಬೇಕು. ನಾಳಿನ ಬಜೆಟ್ ಅಧಿವೇಶನದಲ್ಲಿ ಈ ಕುರಿತು ಘೋಷಣೆ ಆಗಬೇಕು …

Read More »

ಬಂಜಾರ ಸಮುದಾಯ ಸ್ವಾಭಿಮಾನಿಗಳಾಗಿ, ಸ್ವತಂತ್ರವಾಗಿ ಒಂದು ಕಡೆ ನೆಲೆಸಿ :C.M.

ಬೆಂಗಳೂರು: ಬಂಜಾರ ಸಮುದಾಯ ಸ್ವಾಭಿಮಾನಿಗಳಾಗಿ, ಸ್ವತಂತ್ರವಾಗಿ ಒಂದು ಕಡೆ ನೆಲೆಸಿ ಅಭಿವೃದ್ಧಿ ಕಾಣುವಂತೆ ಪ್ರೇರೇಪಿಸಿದವರು ಸಂತ ಸೇವಾಲಾಲ್ ಆಗಿದ್ದಾರೆ. ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲು ಮೊದಲು ಆದೇಶಿದ್ದೇ ನಮ್ಮ ಸರ್ಕಾರ. ಬಾಕಿ ಉಳಿದಿರುವ ತಾಂಡಾಗಳನ್ನೂ ಕಂದಾಯ ಗ್ರಾಮಗಳನ್ನಾಗಿ (Revenue Village) ಘೋಷಿಸಿ ಎನ್ನುವ ಸ್ಪಷ್ಟ ಸೂಚನೆಯನ್ನು ಅಧಿಕಾರಿಗಳಿಗೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದರು.   ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಂತ ಶ್ರೀ ಸೇವಾಲಾಲ್ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ …

Read More »

ಸವಿತಾ ಕಾಂಬಳೆ ಬೆಳಗಾವಿ ಮೇಯರ್ ಆಗಿ ಆಯ್ಕೆ

ಬೆಳಗಾವಿ, (ಫೆಬ್ರವರಿ 15): ಬೆಳಗಾವಿ ಮಹಾನಗರ ಪಾಲಿಕೆಯನ್ನು ಬಿಜೆಪಿ ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಂಡಿದ್ದು, ಪೌರ ಕಾರ್ಮಿಕ ಮಹಿಳೆ, ಕನ್ನಡತಿ ಸವಿತಾ ಕಾಂಬಳೆ ಅವರಿಗೆ ಮೇಯರ್ ಪಟ್ಟ ಒಲಿದುಬಂದಿದೆ. ಉಪಮೇಯರ್ ಆಗಿ ಮರಾಠಿಯ ಆನಂದ್ ಚವ್ಹಾಣ್ ಆಯ್ಕೆಯಾಗಿದ್ದಾರೆ. ಈ ಮೂಲಕ ಬಿಜೆಪಿಯಿಂದ ಕನ್ನಡ ಹಾಗೂ ಮರಾಠಾ ಸಮುದಾಯಗಳ ಓಲೈಕೆ ಮಾಡಲಾಗಿದೆ. ಬಿಜೆಪಿಯ‌ ಆನಂದ್ ಚವ್ಹಾಣ್​ 39 ಮತ ಹಾಗೂ ಕಾಂಗ್ರೆಸ್‌ನ ಜ್ಯೋತಿ ಕಡೋಲ್ಕರ್‌ 20 ಮತಗಳು ಪಡೆದುಕೊಂಡಿದ್ದಾರೆ. ಇದರೊಂದಿಗೆ ಆನಂದ್ ಗೆಲುವುಸಾಧಿಸಿದ್ದಾರೆ. …

Read More »

ತವರು ಮನೆಯಿಂದ ಬಂದವಳೆ ಮಗುವನ್ನು ಕೊಂದು ತಾನೂ ನೇಣಿಗೆ ಶರಣಾದ ತಾಯಿ

) ರಾತ್ರಿ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿನ ತನ್ನ ಮನೆಯಲ್ಲಿಯೇ ಮುದ್ದು ಕಂದಮ್ಮನನ್ನ ಕೊಂದು ತಾನೂ ನೇಣಿಗೆ ಕೊರಳೊಡ್ಡಿದ್ದಾಳೆ. ಕಲಬುರಗಿ,  ಜಿಲ್ಲೆಯ ಚಿಂಚೋಳಿ(Chincholi) ತಾಲೂಕಿನ ಮರಪಳ್ಳಿ ಗ್ರಾಮದ ನಿವಾಸದಲ್ಲಿ ನಿನ್ನೆ(ಫೆ.13) ಸಂಜೆ ಎರಡು ವರ್ಷದ ಪುಟ್ಟ ಕಂದಮ್ಮಳನ್ನ ಕೊಂದು ತಾಯಿಯೂ ನೇಣಿಗೆ ಕೊರಳೊಡ್ಡಿರುವ ಧಾರುಣ ಘಟನೆ ನಡೆದಿದೆ. ತಾಯಿ ಶಿವಲೀಲಾ (23) ಹಾಗೂ ವರ್ಷಿತಾ(2) ಮೃತ ರ್ದುದೈವಿಗಳು.ಚಿಂಚೋಳಿತಾಲ್ಲೂಕಿನ ಕೆರೋಳ್ಳಿ ಗ್ರಾಮದ ನಿವಾಸಿಯಾಗಿರುವ ಶಿವಲೀಲಾ, ಮೂರು ವರ್ಷದ ಹಿಂದೆ …

Read More »

ಪಾರ್ಟ್ ಟೈಂ ಜಾಬ್ ಆಫರ್ ನಂಬಿ ಬರೋಬ್ಬರಿ 2.77 ಕೋಟಿ ಕಳೆದುಕೊಂಡ ಸರ್ಕಾರಿ ಶಾಲೆ ಶಿಕ್ಷಕಿ

ರಾಯಚೂರು, ಫೆಬ್ರವರಿ 15: ಪಾರ್ಟ್ ಟೈಂ ಜಾಬ್ ಆಫರ್ (ಅರೆಕಾಲಿಕ ಉದ್ಯೋಗದ ಆಮಿಷ) ನಂಬಿ ಸರ್ಕಾರಿ ಶಾಲೆ (Government School) ಶಿಕ್ಷಕಿಯೊಬ್ಬರು ಬರೋಬ್ಬರಿ 2.77 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿರುವ ಪ್ರಕರಣ (Cyber Crime) ರಾಯಚೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ರಾಯಚೂರಿನ (Raichur) ಮಸ್ಕಿ ಪಟ್ಟಣದ ನಿವಾಸಿಯಾಗಿರುವ ಶಿಕ್ಷಕಿ 2023ರ ಸೆಪ್ಟೆಂಬರ್ 3ರಿಂದ ಈ ವರ್ಷದ ಜನವರಿ 12ರ ನಡುವಣ ಅವಧಿಯಲ್ಲಿ ಸೈಬರ್ ವಂಚನೆಗೆ ಒಳಗಾಗಿ ಹಣ ಕಳೆದುಕೊಂಡಿದ್ದರು. ಮಹಿಳೆ ಪೊಲೀಸರನ್ನು ಸಂಪರ್ಕಿಸಿ ಈ ವರ್ಷದ …

Read More »