Breaking News

ರಾಜ್ಯ

ಅಪ್ಪ-ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ; ರಾಮ ಮಂದಿರ ಕಟ್ಟಿದ್ದು ಹಿಂದೂಗಳು: ಅನಂತ್ ಕುಮಾರ್ ಹೆಗಡೆ

ನಾವು ಮೊದಲು ಹಿಂದೂಗಳು. ಈಗಲೂ ಸಾಕಷ್ಟು ಜನ ತಕ್ಷಣ ಕೇಳಿದರೆ ಅವರ ಜಾತಿ ಹೆಸರು ಹೇಳುತ್ತಾರೆ. ಹಿಂದೂ ಅಂತಾ ನೆನಪು ಮಾಡಿಕೊಂಡು ಹೇಳ್ತಾರೆ. ಸಂಸ್ಕಾರ ಇದ್ರೇ ಹಿಂದೂ ಅಂತಾ ಹೇಳ್ತಾರೆ. ಅಪ್ಪ ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ ಎಂದು ಎಂದು ಮತ್ತೊಮ್ಮೆ ಸಂಸದ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಳಗಾವಿ: ನಾವು ಮೊದಲು ಹಿಂದೂಗಳು. ಈಗಲೂ ಸಾಕಷ್ಟು ಜನ ತಕ್ಷಣ ಕೇಳಿದರೆ ಅವರ ಜಾತಿ ಹೆಸರು …

Read More »

ರಾಜ್ಯದಲ್ಲಿ ಇಂದು 149 ಮಂದಿಗೆ ಕೊರೋನಾ ಪಾಸಿಟಿವ್;

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಗುರುವಾರ 149 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 669ಕ್ಕೆ ಇಳಿಕೆಯಾಗಿದೆ. ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಗುರುವಾರ 149 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 669ಕ್ಕೆ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 89 ಪಾಸಿಟಿವ್ ಪ್ರಕರಣ ಸೇರಿದಂತೆ ರಾಜ್ಯದಲ್ಲಿ 149 ಮಂದಿಗೆ …

Read More »

ಉಚಿತ ವಿದ್ಯುತ್: ವಾರ್ಷಿಕ ಸರಾಸರಿ ಮೇಲೆ ಶೇ.10ರಷ್ಟು ಬದಲು 10 ಯುನಿಟ್‌ ನೀಡಲು ಸಂಪುಟ ತೀರ್ಮಾನ

ಉಚಿತ ವಿದ್ಯುತ್ ಯೋಜನೆ ಗೃಹಜ್ಯೋತಿ ನಿಯಮದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದ್ದು, ವಾರ್ಷಿಕ ಸರಾಸರಿ ಬಳಕೆಯ ಮೇಲೆ ಹೆಚ್ಚುವರಿ ಶೇ.10 ರಷ್ಟು ಉಚಿತ ವಿದ್ಯುತ್ ನೀಡುವ ಮಾನದಂಡವನ್ನು 10 ಯೂನಿಟ್ ಗೆ… ಬೆಂಗಳೂರು: ಉಚಿತ ವಿದ್ಯುತ್ ಯೋಜನೆ ಗೃಹಜ್ಯೋತಿ ನಿಯಮದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದ್ದು, ವಾರ್ಷಿಕ ಸರಾಸರಿ ಬಳಕೆಯ ಮೇಲೆ ಹೆಚ್ಚುವರಿ ಶೇ.10 ರಷ್ಟು ಉಚಿತ ವಿದ್ಯುತ್ ನೀಡುವ ಮಾನದಂಡವನ್ನು 10 ಯೂನಿಟ್ ಗೆ ಬದಲಾಯಿಸಲು …

Read More »

ರಾಜ್ಯಕ್ಕಾಗಿರುವ ಅನ್ಯಾಯಕ್ಕೆ ಉತ್ತರ ನೀಡಬೇಕಾದವರು ಮೋದಿಯವರೇ ಹೊರತು ಬಿಜೆಪಿಯ ಐಟಿ ಸೆಲ್ ಅಲ್ಲ!

ತೆರೆದ ಪುಸ್ತಕದಲ್ಲಿ ಕಾಣುವ ಈ ಅನ್ಯಾಯಗಳನ್ನು ಕಂಡು ಮೌನವಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕ್ರಿಯೆಯನ್ನು ಹೇಗೆ ವ್ಯಾಖ್ಯಾನಿಸಲಿ? ಉದ್ದೇಶಪೂರ್ವಕವಾದ ನಿರ್ಲಕ್ಷ್ಯ ಎನ್ನಲೇ? ಸಹಜವಾದ ನಿದ್ರಾ ಸ್ಥಿತಿ ಎನ್ನಲೇ? ಬೆಂಗಳೂರು: ಕರ್ನಾಟಕ ಮತ್ತು ಕನ್ನಡಿಗರಿಗೆ ಕೇಂದ್ರದ ಬಿಜೆಪಿ ಸರ್ಕಾರದಿಂದ ಆಗುತ್ತಿರುವ ಅನ್ಯಾಯಗಳನ್ನು ಹೇಳುತ್ತಲೇ ಬಂದಿದ್ದೇನೆ. ಇದಕ್ಕೆ ಉತ್ತರ ನೀಡಬೇಕಾಗಿರುವವರು ಪ್ರಧಾನಿ ನರೇಂದ್ರ ಮೋದಿಯವರೇ ಹೊರತು ಬಿಜೆಪಿಯ ಐಟಿ ಸೆಲ್ ಅಲ್ಲ. ಸನ್ಮಾನ್ಯ ಪ್ರಧಾನಿಯವರು ಒಪ್ಪಿ ದಿನ ಮತ್ತು ಸ್ಥಳವನ್ನು ನಿಗದಿಪಡಿಸಿದರೆ ಈ …

Read More »

ಫೆ.16ಕ್ಕೆ ರಾಜ್ಯ ಬಜೆಟ್ ಮಂಡನೆಗೆ ಸಿಎಂ ಸಿದ್ಧತೆ

ಲೋಕಸಭೆ ಎಲೆಕ್ಶನ್ ಗೆ (MP election) ಕೆಲವೇ ತಿಂಗಳು ಬಾಕಿ ಉಳಿದಿದೆ. ಬಿಜೆಪಿ ಸದೆಬಡಿಯಲು ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ (Siddaramiah) ಚಕ್ರವ್ಯೂಹವನ್ನೇ ಸೃಷ್ಟಿ ಮಾಡೋಜೆ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಗ್ಯಾರಂಟಿ ಮೂಲಕ ಜನರ ಮನಗೆಲ್ಲೊ ಪ್ರಯತ್ನ ಮಾಡಿರೋ ಕಾಂಗ್ರೆಸ್ ಸರ್ಕಾರದ ಸಾರಥಿ ಸಿಎಂ ಸಿದ್ದರಾಮಯ್ಯ ಫೆ.16ಕ್ಕೆ ಬಜೆಟ್ (Budget) ಮಂಡನೆ ಮಾಡಲು ರೆಡಿಯಾಗಿದ್ದಾರೆ.   ಫೆಬ್ರವರಿ 12ರಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಸಲು ಗುರುವಾರ ನಡೆದ ರಾಜ್ಯ …

Read More »

ಸಿದ್ದರಾಮಯ್ಯಗೆ ಉತ್ತರ ಕೊಡಲು ಬಿಜೆಪಿ ಐಟಿ ಸೆಲ್‌ ಹುಡುಗ್ರು ಸಾಕು ಎಂದ ಬೊಮ್ಮಾಯಿ!

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಮೋದಿ ಫೋಬಿಯಾ (Modi Phobia) ಇದೆ.‌ ಇಡಿ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷ ಆಡಳಿತ ನೀಡುತ್ತಿದ್ದಾರೆ. ಎಲ್ಲ ರೀತಿಯ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ‌. ಮತ್ತೆ ಮೂರನೆ ಬಾರಿಗೆ ಪ್ರಧಾನಿ ಆಗಲಿದ್ದಾರೆ. ಹೀಗಾಗಿ ಅದನ್ನು ಸಹಿಸಿಕೊಳ್ಳಲಾಗದೇ ಸಿದ್ದರಾಮಯ್ಯ ಅವರ ವಿರುದ್ಧ ಅನಗತ್ಯ ಆರೋಪ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರು ಹೇಳಿದ್ದಾರೆ. ಮಾಧ್ಯಮಗಳ ಜತೆ …

Read More »

ಮಸೀದಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ – ಭಟ್ಕಳದಲ್ಲಿ ಅಧಿಕಾರಿಗಳ ಎಡವಟ್ಟಿನಿಂದ ಸಮಸ್ಯೆ

ಉತ್ತರ ಕನ್ನಡ ಸಂಸದ ಮಸೀದಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟ ಬೆನ್ನಲ್ಲೆ, ಹಿಂದೂ ಮುಸ್ಲಿಂ ಕಾಳಗ ಆರಂಭ ಆಗಿದೆ. ಜಿಲ್ಲೆಯ ಭಟ್ಕಳದಲ್ಲಿ ನಾಮಫಲಕ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗಿದೆ, ಅಧಿಕಾರಿಗಳ ಎಡವಟ್ಟಿನಿಂದ ಸಮಸ್ಯೆ ಉದ್ಭವಿಸುವ ಸಾಧ್ಯತೆ ಇದೆ. ಹೀಗಾಗಿ ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನ ನಿಯೋಜಿಸಲಾಗಿದೆ. ಬೋರ್ಡ್ ಅಳವಡಿಸಲು ಅಡ್ಡಿಪಡಿಸಿದ ಅಧಿಕಾರಿಗಳು ಸಂಘರ್ಷಕ್ಕೆ ಕಾರಣವಾಗಿದ್ದು, ಸ್ಥಳೀಯರ ಅಸಮಧಾನಕ್ಕೆ ಕಾರಣವಾಗಿದೆ.ಉತ್ತರ ಕನ್ನಡ ಸಂಸದ ಮಸೀದಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟ …

Read More »

ಕೆಲಸ ಮಾಡವ ಜಾಗದಲ್ಲಿ ಅನ್ಯಾಯವಾಗ್ತಿದೆ ಎಂದು ಮೊಬೈಟ್​​ ಟವರ್​​ ಏರಿದ ವ್ಯಕ್ತಿ

ಮೈಸೂರು, ಜ.18: ಕೆಲಸ ಮಾಡವ ಜಾಗದಲ್ಲಿ ಅನ್ಯಾಯವಾಗ್ತಿದೆ ಎಂದು ವ್ಯಕ್ತಿಯೋರ್ವ ಟವರ್​​ ಏರಿದ ಘಟನೆ ಮೈಸೂರು ಜಿಲ್ಲೆಯ ವರುಣದಲ್ಲಿ ನಡೆದಿದೆ. ಹಾಸನದ ಚಾಮುಂಡೇಶ್ವರಿ ಶುಗರ್​​​ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದ ಸಿದ್ದೇಗೌಡ(45) ಕೆಲಸ ಮಾಡವ ಜಾಗದಲ್ಲಿ ತನಗೆ ಅನ್ಯಾಯವಾಗ್ತಿದೆ ಎಂದು ಆರೋಪಿಸಿ ಮೊಬೈಟ್​​ ಟವರ್​​ ಏರಿದ್ದಾನೆ. ನನಗೆ ನ್ಯಾಯ ಕೊಡಿಸಿ ಅಲ್ಲಿಯ ವರೆಗೆ ಮೊಬೈಲ್ ಟವರ್​ನಿಂದ ಇಳಿಯಲ್ಲ ಎಂದು ಪಟ್ಟುಹಿಡಿದಿದ್ದಾನೆ. ಸಧ್ಯ ಸ್ಥಳಕ್ಕೆ ಪೊಲೀಸರು ಆಗಮಿಸಿ ಸಿದ್ದೇಗೌಡನನ್ನು ಕೆಳಗಿಳಿಸಲು ಹರಸಾಹಸಪಡುತ್ತಿದ್ದಾರೆ. ವಿದ್ಯುತ್ ತಂತಿ ತಗುಲಿ …

Read More »

ಅಯೋಧ್ಯೆ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಇಂದಿನಿಂದ ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಜ.22ರವರೆಗೆ ಉಚಿತ ಹೆರಿಗೆ

ವಿಜಯಪುರ, ಜ.18: ಅಯೋಧ್ಯೆಯಲ್ಲಿ ಶ್ರೀರಾಮೋತ್ಸವದ ಸಂಭ್ರಮ ಮುಗಿಲು ಮುಟ್ಟಿದೆ (Ayodhya Ram Mandir). ನಿನ್ನೆ ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ವಿಗ್ರಹಣದ ಮೆರವಣಿಗೆ ಅದ್ಧೂರಿಯಾಗಿ ನೆರವೇರಿತು ಇಂದು ರಾಮನ ಮೂರ್ತಿ ಗರ್ಭಗುಡಿ ಪ್ರವೇಶಿಸಿದೆ. ಮತ್ತೊಂದೆಡೆ ವಿಜಯಪುರದ ಜ್ಞಾನಯೋಗಿ ಸಿದ್ದೇಶ್ವರಶ್ರೀ ಆಸ್ಪತ್ರೆಯಲ್ಲಿ (JSS Hospital) ಇಂದಿನಿಂದ ನಾಲ್ಕು ದಿನಗಳ ಕಾಲ ಉಚಿತ ಹೆರಿಗೆ ಘೋಷಣೆ ಮಾಡಲಾಗಿದೆ. ಇಂದಿನಿಂದ ಜನವರಿ 22ರವರೆಗೆ ಜನಿಸಿದ ನವಜಾತ ಶಿಶುಗಳನ್ನು ರಾಮ ಹಾಗೂ ಸೀತೆ ಪ್ರತಿರೂಪ ಎಂದು ಪರಿಗಣಿಸಿ ಉಚಿತ ಹೆರಿಗೆ …

Read More »

ಟಿಕೆಟ್‌ ಕೊಟ್ರೆ ಸೋಲು ಗ್ಯಾರಂಟಿ: ಮುದ್ದಹನುಮೇಗೌಡರರಿಗೆ ಪರೋಕ್ಷ ಎಚ್ಚರಿಕೆ ಕೊಟ್ಟ ಹಾಲಪ್ಪ

ತುಮಕೂರು: ಜನ ಸಾಮಾನ್ಯರ ಜೊತೆ ಒಡನಾಟ ಇರೋದು ಗೊತ್ತು. ತುಮಕೂರಿನಲ್ಲಿ ಸಭೆ ಮಾಡಿ ಜನರ ಕಷ್ಟ ಆಲಿಸೋದು ಗೊತ್ತು. ದೆಹಲಿಗೆ ಹೋಗೋದು, ಬಾಂಬೆಗೆ ಹೋಗೋದು, ಸೋಫಾ ಮೇಲೆ ಕುಳಿತು ಫೋಟೋ ಕ್ಲಿಕ್ ಮಾಡೋದು ನನಗೆ ಗೊತ್ತಿಲ್ಲ ಎಂದು ಲೋಕಸಭೆ ಟಿಕೆಟ್‌ ಆಕಾಂಕ್ಷಿ ಮುರುಳೀಧರ್ ಹಾಲಪ್ಪ ಅವರು ಕಾಂಗ್ರೆಸ್‌ ಸೇರಲು ತುದಿಗಾಲಿನಲ್ಲಿ ನಿಂತಿರುವ ಮುದ್ದಹನುಮೇಗೌಡರ ವಿರುದ್ಧ ಕಿಡಿ ಕಾರಿದ್ದಾರೆ.   ಕಾಂಗ್ರೆಸ್‌ ಸೇರಿ ಲೋಕಸಭೆ ಚುನಾವಣೆ ಕಣಕ್ಕಿಳಿಯಲು ಪ್ರಯತ್ನಿಸುತ್ತಿರುವ ಮುದ್ದಹನುಮೇಗೌಡರ ವಿರುದ್ಧ …

Read More »