Breaking News

ರಾಜ್ಯ

ಬೆಳಗಾವಿಯಲ್ಲಿ ಕಾರು-ಸ್ಕೂಟರ್​ ನಡುವೆ ಭೀಕರ ಅಪಘಾತ

ಬೆಳಗಾವಿ, ಜ.02: ಬೆಳಗಾವಿಯ ಮಜಗಾವಿ ಬಳಿ ವೇಗವಾಗಿ ಬಂದ ಕಾರೊಂದು ಹಿಂಬದಿಯಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕಾರು ಡಿಕ್ಕಿಯ(Accident) ರಭಸಕ್ಕೆ ಯುವತಿ ಬರೊಬ್ಬರಿಐವತ್ತು ಮೀಟರ್ಹಾರಿ ಬಿದ್ದಿದ್ದಾರೆ. ಬ್ರಹ್ಮನಗರದ ನಿವಾಸಿ ದಿವ್ಯಾ ಪಾಟೀಲ್ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಸಾರ್ವಜನಿಕರು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಅಷ್ಟೆ ಅಲ್ಲ, ಸ್ಕೂಟಿಗೆ ಗುದ್ದಿದ ಬಳಿಕ ಎದರಿದ್ದ ಕಾರಿಗೂ ಡಿಕ್ಕಿ ಹೊಡೆದಿದೆ. ಈ ಘಟನೆ ಬೆಳಗಾವಿ ದಕ್ಷಿಣ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Read More »

ಕೋಳಿ ತೂಕದಲ್ಲಿ ಮೋಸ ಮಾಡಿದವರನ್ನು ಮರಕ್ಕೆ ಕಟ್ಟಿ ಹಾಕಿದ ರೈತ

ಮಂಡ್ಯ: ಕೋಳಿ ಫಾರಂನಲ್ಲಿ ಮಾಂಸದ ಕೋಳಿ ತುಂಬುವಾಗ ಮೋಸ ಮಾಡಲು ಯತ್ನಿಸಿದವರನ್ನು ರೈತ ಮರಕ್ಕೆ ಕಟ್ಟಿ ಹಾಕಿದ ಘಟನೆ ಪಾಂಡವಪುರ ತಾಲೂಕಿನ ಚಿಕ್ಕಬ್ಯಾಡರಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ಹನುಮಂತೇಗೌಡಗೆ ಸೇರಿದ ಕೋಳಿಫಾರಂನಲ್ಲಿ ವಂಚನೆ ನಡೆದಿದೆ. ಹನುಂತೇಗೌಡ ತಮ್ಮ ಕೋಳಿ ಫಾರಂನಲ್ಲಿ ಸಾಕು ಕೋಳಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿದ್ದರು. ಮೈಸೂರು ಮೂಲದ ಎನ್.ಆರ್ ಚಿಕನ್ ಕಂಪನಿ ಕೋಳಿ ಖರೀದಿಸಲು ಬರುತ್ತಿತ್ತು. ವಂಚಕರು ಕಳೆದ ಮೂರ್ನಾಲ್ಕು ತಿಂಗಳಿಂದ ಈ ರೈತನಿಗೆ ಕೋಳಿ …

Read More »

ಕಾಶಿಯಲ್ಲೂ ಮಸೀದಿ‌ ಒಡೆದು ಹಾಕಿ ಮಂದಿರ ಕಟ್ಟುತ್ತೇವೆ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಅಯೋಧ್ಯೆಯಲ್ಲಿ ರಾಮ ಮಂದಿರ ಆಗಬೇಕೆಂಬ ತೀರ್ಮಾನವಾಗುತ್ತಿದ್ದಂತೆ ಕಾಶಿ ಮಥುರಾದಲ್ಲಿ ಸರ್ವೇಗೆ ಆದೇಶವಾಗಿದೆ. ನಮ್ಮ ಪರವಾಗಿ ತೀರ್ಪು ಬರುತ್ತದೆ. ಕಾಶಿಯಲ್ಲೂ ಮಸೀದಿ‌ ಒಡೆದು ಹಾಕಿ ಕಾಶಿ ಮಂದಿರ ಕಟ್ಟುತ್ತೇವೆ. ಮಥುರಾದಲ್ಲು ಶ್ರೀ ಕೃಷ್ಣನ ದೇವಸ್ಥಾನ ಕಟ್ಟಿಯೇ ಕಟ್ಟುತ್ತೇವೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.   ಶಿವಮೊಗ್ಗದಲ್ಲಿ ಮಾತನಾಡಿದ ಅವರು, 496 ವರ್ಷದ ಕೆಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ಧ್ವಂಸ ಮಾಡಿದ್ದರು. ಮಸೀದಿ ಕಟ್ಟಿ ಬಾಬರ್ ಮಸೀದಿ ಕಟ್ಟಿದ್ದರು. ಗುಲಾಮಗಿರಿ …

Read More »

Ram Mandir ಲೋಕಾರ್ಪಣೆಗೆ ನನಗೂ ಆಹ್ವಾನವಿಲ್ಲ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ವಿಜಯಪುರ: ಅಯೋಧ್ಯಾ ರಾಮ ಮಂದಿರ ಲೋಕಾರ್ಪಣೆಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರವಲ್ಲ ದೇಶದಲ್ಲಿ ಬಿಜೆಪಿ ಆಡಳಿತ ಇರುವ ಮುಖ್ಯಮಂತ್ರಿಗಳಿಗೂ ಆಹ್ವಾನ ನೀಡಿಲ್ಲ. ಭಾರತ ಸರ್ಕಾರದ ಸಚಿವನಾಗಿರುವ ನನಗೂ ಆಹ್ವಾನವಿಲ್ಲ. ನನ್ನನ್ನು ಕರೆಯುವ ಮಾತಿರಲಿ, ಬರಬೇಡವೆಂದೂ ಹೇಳಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರತಿಕ್ರಿಯಿಸಿದ್ದಾರೆ.   ಬುಧವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಯಾರನ್ನು ಆಹ್ವಾನಿಸಬೇಕು ಎಂಬುದನ್ನು ರಾಮ ಮಂದಿರ ಸಮಿತಿ ನಿರ್ಧರಿಸುತ್ತದೆ. ಈ …

Read More »

ನೀನು ಕುಟುಂಬದಿಂದ ದೂರನೇ ಇರಬೇಕು.. Bigg Boss ಮನೆಯಲ್ಲಿ ಪ್ರತಾಪ್‌ ಭವಿಷ್ಯ ನುಡಿದ ಗುರೂಜಿ

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ -10 ಶುರುವಾಗಿ 80 ದಿನ ಮೇಲಾಗಿದೆ. ಫಿನಾಲೆ ವಾರದತ್ತ ಮನೆಯ ಆಟ ಸಾಗುತ್ತಿದ್ದಂತೆ ಸ್ಪರ್ಧಿಗಳ ಆಟವೂ ಕಾವು ಪಡೆದುಕೊಳ್ಳುತ್ತಿದೆ. ಈ ವಾರ ಪ್ರತಾಪ್‌, ಮೈಕಲ್‌, ಕಾರ್ತಿಕ್‌ , ತುಕಾಲಿ ಸಂತೋಷ್‌, ವರ್ತೂರು ಸಂತೋಷ್‌ ನಾಮಿನೇಟ್‌ ಆಗಿದ್ದಾರೆ. ಇವರಲ್ಲಿ ಒಬ್ಬರು ಮನೆ ಬಿಟ್ಟು ಹೋಗುತ್ತಾರೋ ಅಥವಾ ಎಲಿನೇಷನ್‌ ನಲ್ಲಿ ಏನಾದರೂ ಟ್ವಿಸ್ಟ್‌ & ಟರ್ನ್‌ ಇರಲಿದೆಯೋ ಎನ್ನುವುದನ್ನು ಕಾದುನೋಡಬೇಕಿದೆ. ಇನ್ನೊಂದೆಡೆ ಬಿಗ್‌ ಬಾಸ್‌ ಮನೆಗೆ ಶ್ರೀವಿದ್ಯಾಶಂಕರಾನಂದ ಸರಸ್ವತಿ …

Read More »

806 ಕೋಟಿ ರೂಪಾಯಿ ಬಾಕಿ ಪಾವತಿಸಿ: ಮಹಾರಾಷ್ಟ್ರ ಎಲ್‌ ಐಸಿಗೆ ಜಿಎಸ್‌ ಟಿ ನೋಟಿಸ್

ಮುಂಬೈ: ಸಾರ್ವಜನಿಕ ವಲಯದ ಪ್ರಮುಖ ಇನ್ಸೂರೆನ್ಸ್‌ (ಎಲ್‌ ಐಸಿ) ಕಂಪನಿಗೆ ಸರಕು ಮತ್ತು ಸೇವಾ ತೆರಿಗೆ (GST) ಅಧಿಕಾರಿಗಳು 806 ಕೋಟಿ ರೂಪಾಯಿ ತೆರಿಗೆ ಪಾವತಿಸುವಂತೆ ನೋಟಿಸ್‌ ಜಾರಿಗೊಳಿಸಿರುವುದಾಗಿ ವರದಿ ತಿಳಿಸಿದೆ. ಮಹಾರಾಷ್ಟ್ರದ ಜಿಎಸ್‌ ಟಿ ಅಧಿಕಾರಿಗಳು ಈ ನೋಟಿಸ್‌ ಜಾರಿಗೊಳಿಸಿದ್ದಾರೆ.   2017-18ನೇ ಸಾಲಿನ ಜಿಎಸ್‌ ಟಿ ಪಾವತಿಯಲ್ಲಿನ ತೆರಿಗೆ ಪಾವತಿಗೆ ಸಂಬಂಧಿಸಿದ ನೋಟಿಸ್‌ ಅನ್ನು 2024ರ ಜನವರಿ 1ರಂದು ಜಾರಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2017-18ನೇ ಸಾಲಿನ ಬಾಕಿ …

Read More »

ನನ್ನ ರಾಜೀನಾಮೆ ಕೇಳಲು ನೀವ್ಯಾರು..’: ಕಿಡಿಕಾರಿದ ಮಧು ಬಂಗಾರಪ್ಪ

ಶಿವಮೊಗ್ಗ: ವಿಜಯೇಂದ್ರ ಮೊನ್ನೆ ಮೊನ್ನೆ ಯಡಿಯೂರಪ್ಪ ಪರ ಮತ ಕೇಳಿರಬೇಕು. ನಾನು ಆಗಲೇ ನಿಮ್ಮ ತಂದೆಯವರ ಪರ ಪ್ರಚಾರ ಮಾಡಿದ್ದೆ. ವಿಜಯೇಂದ್ರಗೆ ಒಂದು ಕಿವಿ ಮಾತು ಹೇಳುತ್ತೇನೆ. 2004 ರಲ್ಲಿ ಮೊದಲ ಚುನಾವಣೆಗೆ ನಿಂತಿದ್ದೆ. ನಾನು ನಾಮಪತ್ರ ಬೆಳಗ್ಗೆ ಸಲ್ಲಿಸಿ ಸಂಜೆ ಯಡಿಯೂರಪ್ಪ ನವರ ನಾಮಪತ್ರ ಸಲ್ಲಿಸಲು ಹೋಗಿದ್ದೆ. 1999 ಯಡಿಯೂರಪ್ಪ ನವರು ಸೋತಿದ್ದಾಗ ಬಂಗಾರಪ್ಪನವರು ಬಿಜೆಪಿಗೆ ಹೋಗಿದ್ದರು. ಅವತ್ತು ಒಂದು ಸಭೆ ನಡೆದಿತ್ತು. ಆ ಸಭೆಯಲ್ಲಿ ವಿಜಯೇಂದ್ರ ಇರಲಿಲ್ಲ …

Read More »

ಶಾಲಾ ಪೂರ್ವ ಶಿಕ್ಷಣದಿಂದ ವಂಚಿತರಾಗುತ್ತಿರುವ ಮಕ್ಕಳು; ಕಡ್ಡಾಯ ಶಿಕ್ಷಣ ಮಾಯ..

ದೋಟಿಹಾಳ: ಸ್ವಾತಂತ್ರ‍್ಯ ಸಿಕ್ಕು 75 ವರ್ಷ ಕಳೆದರೂ ಇನ್ನೂ ರಾಜ್ಯದ ಎಷ್ಟೋ 3-6 ವರ್ಷದೊಳಗಿನ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣ ಸಿಗುತ್ತಿಲ್ಲ ಎಂಬುವುದೇ ಒಂದು ದುರಂತವಾಗಿದೆ. ಇದಕ್ಕೆ ತಾಜಾ ಉದಾಹರಣೆ, ಕೊಪ್ಪಳ ಜಿಲ್ಲೆಯ ಗಡಿಭಾಗದಲ್ಲಿರುವ ಕುಷ್ಟಗಿ ತಾಲೂಕಿನ ಕಿಲ್ಲಾರಹಟ್ಟಿ ಗ್ರಾಪಂ ವ್ಯಾಪ್ತಿಯ ರಾಮ್‌ಜೀ ನಾಯಕ್ ತಾಂಡದ 3-6 ವರ್ಷದ ಒಳಗಿನ ಮಕ್ಕಳ ಸ್ಥಿತಿ.   ರಾಮಜೀ ನಾಯಕ್ ತಾಂಡದಲ್ಲಿ 3-6 ವರ್ಷದ ಒಳಗಿನ ಸುಮಾರು 18-20 ಮಕ್ಕಳು ಇದ್ದಾರೆ. ಈ ಮಕ್ಕಳಿಗೆ …

Read More »

ಪ್ರೇಮ ವಿಚಾರಕ್ಕೆ ಕಲ್ಲು ತೂರಾಟ. ಮನೆ, ವಾಹನಗಳು ಧ್ವಂಸ, ಬಿಗುವಿನ ವಾತಾವರಣ

ಬೆಳಗಾವಿ: ಯುವಕ ಹಾಗೂ ಅಪ್ರಾಪ್ತ ಬಾಲಕಿಯ ನಡುವಿನ ಪ್ರೇಮ ವಿಚಾರಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ವಹಿಸಿದ್ದ ವ್ಯಕ್ತಿಯ ಮನೆಯ ಮೇಲೆ 25 ರಿಂದ 30 ಜನರ ಗುಂಪೊಂದು ಸೋಮವಾರ ರಾತ್ರಿ ಏಕಾಏಕಿ ದಾಳಿ ನಡೆಸಿ ಮನೆ ಧ್ವಂಸಗೊಳಿಸಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಬೆಳಕಿಗೆ ಬಂದಿದ್ದು, ಬೆಳಗಾವಿ ತಾಲೂಕಿನ ನಾವಗೆ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.   ತಾಲೂಕಿನ ಕರ್ಲೆ ಗ್ರಾಮದ ಹೈಸ್ಕೂಲ್ ವಿದ್ಯಾರ್ಥಿನಿ ಹಾಗೂ ನಾವಗೆ ಗ್ರಾಮದ ಕಾಲೇಜು …

Read More »

ಶಾಲೆಯ ಬೀಗ‌ ಮುರಿದ ಕಳ್ಳ

ದಾಂಡೇಲಿ : ನಗರದ ಸೆಂಟ್ ಮೈಕಲ್ ಕಾನ್ವೆಂಟ್ ಪ್ರೌಢಶಾಲೆ ಮತ್ತು ಇ.ಎಂ.ಎಸ್ ಆಂಗ್ಲ ಮಾಧ್ಯಮ ಶಾಲೆಯ ಬೀಗ‌ ಮುರಿದು ಕಳ್ಳತನ ಮಾಡಿರುವ ಘಟನೆ ಮಂಗಳವಾರ ನಸುಕಿನ ವೇಳೆಯಲ್ಲಿ ನಡೆದಿದೆ. ಸೆಂಟ್ ಮೈಕಲ್ ಕಾನ್ವೆಂಟ್ ಪ್ರೌಢಶಾಲೆಯಲ್ಲಿ ಶಾಲೆಯ ಮುಂಭಾಗದ ಬಾಗಿಲಿನ ಬೀಗ ಮುರಿದು ಆನಂತರ ಕಚೇರಿ ಕೊಠಡಿಯ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು, ಅಲ್ಲಿದ್ದ ಗೋಡ್ರೇಜ್ ಕಬಾಟಿನ ಬೀಗ ಒಡೆದು ಸರಿಸುಮಾರು 5 ರಿಂದ 7 ಸಾವಿರ ರೂಪಾಯಿ ನಗದನ್ನು ಕಳ್ಳತನ …

Read More »