ಹುಬ್ಬಳ್ಳಿ: ರೈಲ್ವೆ ಮಂಡಳಿಯು ರೈಲು ಸಂಖ್ಯೆ 07355/07356 ಎಸ್ಎಸ್ಎಸ್ ಹುಬ್ಬಳ್ಳಿ–ರಾಮನಾಥಪುರಂ–ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲುಗಳ ಸಂಚಾರದ ಅವಧಿಯನ್ನು ವಿಸ್ತರಿಸಲು ಅನುಮೋದನೆ ನೀಡಿದೆ. ರೈಲು ಸಂಖ್ಯೆ 07355 ಎಸ್ಎಸ್ಎಸ್ ಹುಬ್ಬಳ್ಳಿ–ರಾಮನಾಥಪುರಂ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಈ ಮೊದಲು ಅಕ್ಟೋಬರ್ 25, 2025ರ ವರೆಗೆ ಓಡಿಸಲು ಸೂಚಿಸಲಾಗಿತ್ತು. ಈಗ, ಇದು ನವೆಂಬರ್ 1, 2025 ರಿಂದ ನವೆಂಬರ್ 29, 2025 ರ ವರೆಗೆ ತನ್ನ ಸೇವೆಯನ್ನು …
Read More »ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: 11 ಆರೋಪಿಗಳ ವಿರುದ್ಧ ಚಾರ್ಜ್ಶೀಟ್
ಬೆಂಗಳೂರು: ದಕ್ಷಿಣ ಕನ್ನಡದ ಬಜ್ಪೆ ಬಳಿ ನಡೆದಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಬಂಧಿತ 11 ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬುಧವಾರ ಚಾರ್ಜ್ ಶೀಟ್ ಸಲ್ಲಿಸಿದೆ. ಬಂಧಿತ ಆರೋಪಿಗಳಾದ ಅಬ್ದುಲ್ ಸಫ್ವಾನ್, ನಿಯಾಜ್, ಮೊಹಮ್ಮದ್, ನೌಶಾದ್, ಆದಿಲ್ ಮಹರೂಫ್, ಕಲಂದರ್ ಶಫಿ, ಎಂ.ನಾಗರಾಜ, ರಂಜಿತ್, ಮಹಮ್ಮದ್ ರಿಜ್ವಾನ್, ಅಜರುದ್ದೀನ್ ಮತ್ತು ಅಬ್ದುಲ್ ಖಾದರ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ 1967, ಭಾರತೀಯ ನ್ಯಾಯ …
Read More »ಐಟಿ ಉದ್ಯೋಗಿಗಳ ಕನ್ನಡ ಪ್ರೇಮ
ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ಸಂಭ್ರಮಕ್ಕೆ ಗಡಿಜಿಲ್ಲೆ ಬೆಳಗಾವಿಯಲ್ಲಿ ಸಂಭ್ರಮ ಕಳೆಗಟ್ಟಿದೆ. ಈ ಬಾರಿಯ ರಾಜ್ಯೋತ್ಸವದಲ್ಲಿ ಇಲ್ಲಿನ ಬೆಳಗಾವಿ ಕೆಎ ಪುಟ ತಂಡದ “ಸೋತ್ರು ಗೆದ್ರು ಆರ್ ಸಿಬಿ ಬಿಡಾಂಗಿಲ್ಲಾ, ಜೀವಾ ಹೋದ್ರು ಬೆಳಗಾವಿ ಕೊಡಾಂಗಿಲ್ಲ” ಬರಹದ ಟೀಶರ್ಟ್ ಗಳು ಗಮನ ಸೆಳೆಯುತ್ತಿವೆ. ಕಳೆದ 10 ವರ್ಷಗಳಿಂದ ಈ ಪುಟ ಗಡಿಯಲ್ಲಿ ಕನ್ನಡದ ಕೈಂಕರ್ಯಕ್ಕೆ ಪಣ ತೊಟ್ಟಿದೆ. ಸಾಮಾಜಿಕ ಜಾಲತಾಣದಲ್ಲಿ ಸಂಚಲನವನ್ನೇ ಸೃಷ್ಟಿಸಿದೆ. ಹೌದು, ಒಂದೆಡೆ ಬೆಳಗಾವಿಯಲ್ಲಿ ಕನ್ನಡ ಗಟ್ಟಿಗೊಳಿಸಲು ವಿವಿಧ …
Read More »ಕಾನಿಪ ಜಿಲ್ಲಾಧ್ಯಕ್ಷರಾಗಿ ಡಾ.ಭೀಮಶಿ ಜಾರಕಿಹೊಳಿ ಅವಿರೋಧ ಆಯ್ಕೆ
ಬೆಳಗಾವಿ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಘಟಕಕ್ಕೆ 2025-28 ರ ಅವಧಿಗೆ ನಡೆದ ಚುನಾವಣೆಗೆ ಎಲ್ಲ ಹುದ್ಧೆಗಳಿಗೆ ಒಂದೊಂದೆ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಬಹುತೇಕ ಜಿಲ್ಲೆಯ ಎಲ್ಲ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧಿಕೃತ ಘೋಷಣೆ ಆಗಬೇಕಿದೆ. ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಡಾ. ಭೀಮಶಿ ಎಲ್.ಜಾರಕಿಹೊಳಿ, ಉಪಾಧ್ಯಕ್ಷರಾಗಿ ಕುಂತಿನಾಥ ಕಲಮನಿ, ತಾನಾಜಿರಾವ್ ಮುರಂಕರ, ಭೀಮಪ್ಪ ಕಿಚಡಿ, ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಮಠದ, ಕಾರ್ಯದರ್ಶಿಯಾಗಿ ಸದಾಶಿವ ಸಂಕಪ್ಪಗೋಳ, ರವಿ ಹುಲಕುಂದ, …
Read More »ಖಾಸಬಾಗ ಪಾಟೀಲ್ ಗಲ್ಲಿಯಲ್ಲಿ ರಸ್ತೆ ಕಾಮಗಾರಿಗೆ ಚಾಲನೆ
ಶಾಸಕ ಅಭಯ್ ಪಾಟೀಲರ ವಿಶೇಷ ಪ್ರಯತ್ನ…ಖಾಸಬಾಗ ಪಾಟೀಲ್ ಗಲ್ಲಿಯಲ್ಲಿ ರಸ್ತೆ ಕಾಮಗಾರಿಗೆ ಚಾಲನೆಶಾಸಕ ಅಭಯ್ ಪಾಟೀಲರ ವಿಶೇಷ ಪ್ರಯತ್ನ… ಖಾಸಬಾಗ ಪಾಟೀಲ್ ಗಲ್ಲಿಯಲ್ಲಿ ರಸ್ತೆ ಕಾಮಗಾರಿಗೆ ಚಾಲನೆಸ್ಥಳೀಯರಿಂದ ವ್ಯಕ್ತವಾದ ಮೆಚ್ಚುಗೆ ಯುಜಿಡಿ ಲೈನ್ ಬಳಿಕ ರಸ್ತೆ ಸುಧಾರಣೆಗೆ ಆದ್ಯತೆ ಬೆಳಗಾವಿ ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ. 21ರ ಖಾಸಬಾಗ ಪಾಟೀಲ್ ಗಲ್ಲಿಯಲ್ಲಿ ರಸ್ತೆ ಕಾಮಗಾರಿಗೆ ಇಂದು ಚಾಲನೆಯನ್ನು ನೀಡಲಾಯಿತು. ಬೆಳಗಾವಿಯ ದಕ್ಷಿಣಭಾಗದಲ್ಲಿ ಅಭಿವೃದ್ಧಿ ಪರ್ವ ಆರಂಭಗೊಂಡಿದೆ. ವಾರ್ಡ್ …
Read More »ಅಪರಿಚಿತ ವಾಹನ ಡಿಕ್ಕಿ: ರಜೆಗೆ ಬಂದಿದ್ದ ಬಾಗಲಕೋಟೆ ಯೋಧ ಸ್ಥಳದಲ್ಲೇ ದುರ್ಮರಣ ಬೈಕ್’ಗೆ ಅಪರಿಚಿತ ವಾಹನ ಡಿಕ್ಕಿ
ಅಪರಿಚಿತ ವಾಹನ ಡಿಕ್ಕಿ: ರಜೆಗೆ ಬಂದಿದ್ದ ಬಾಗಲಕೋಟೆ ಯೋಧ ಸ್ಥಳದಲ್ಲೇ ದುರ್ಮರಣ ಬೈಕ್’ಗೆ ಅಪರಿಚಿತ ವಾಹನ ಡಿಕ್ಕಿ ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾವು..ಕುಳಗೇರಿ ಕ್ರಾಸ್ ಬಳಿ ಘಟನೆ.. ಹನುಮಂತ ಹಟ್ಟಿ(26) ಮೃತ ಯೋಧ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದ ಭಾರತೀಯ ಸೇನೆಯ ಯೋಧರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಾದಾಮಿ ತಾಲ್ಲೂಕಿನ ಸೋಮನಕೊಪ್ಪ ಗ್ರಾಮದ ನಿವಾಸಿ ಹಾಗೂ …
Read More »ಕ್ರಾಂತಿ ಮಹಿಳಾ ಮಂಡಳ ಉಮಾ ಸಂಗೀತ ಪ್ರತಿಷ್ಠಾನದಿಂದ ಹಿರಿಯ ನಾಗರಿಕ ದಿನಾಚರಣೆ ಗುರು, ಹಿರಿಯರನ್ನು ಗೌರವಿಸಿ: ಜಯ ಜೋಶಿ
ಕ್ರಾಂತಿ ಮಹಿಳಾ ಮಂಡಳ ಉಮಾ ಸಂಗೀತ ಪ್ರತಿಷ್ಠಾನದಿಂದ ಹಿರಿಯ ನಾಗರಿಕ ದಿನಾಚರಣೆ ಗುರು, ಹಿರಿಯರನ್ನು ಗೌರವಿಸಿ: ಜಯ ಜೋಶಿ ಬೆಳಗಾವಿ: ಇಂದಿನ ಯುವ ಪೀಳಿಗೆಗೆ ಹಿರಿಯರ ಅನುಭವದ ಮಾತುಗಳ ಅವಶ್ಯಕತೆ ಇದೆ. ಹಿರಿಯರನ್ನು ಗೌರವಿಸುವುದು ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಯುವಕರು ರೂಡಿಸಿಕೊಳ್ಳಬೇಕು ಎಂದು ಜಯ ಜೋಶಿ ಅವರು ಹೇಳಿದರು. ನಗರದ ಹಿಂದವಾಡಿಯ ಲಕ್ಷ್ಮಿ ಮಂದಿರದಲ್ಲಿ ಕ್ರಾಂತಿ ಮಹಿಳಾ ಮಂಡಳ ಉಮಾ ಸಂಗೀತ ಪ್ರತಿಷ್ಠಾನ ವತಿಯಿಂದ ಹಿರಿಯ ನಾಗರಿಕ ದಿನಾಚರಣೆಯನ್ನು …
Read More »ಗೋಕಾಕನ ನೂತನ ಕಂದಾಯ ನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ಸಂತೋಷ ಪಾಶ್ಚಾಪುರ…!
ಗೋಕಾಕ: ಗೋಕಾಕ ತಾಲ್ಲೂಕನ ನೂತನ ಕಂದಾಯ ನಿರೀಕ್ಷಕರಾಗಿ ಸಂತೋಷ ಪಾಶ್ಚಾಪುರ ಅವರು ಇಂದು (ಮಂಗಳವಾರ) ಅಧಿಕಾರವನ್ನು ಸ್ವೀಕಾರಿಸಿದ್ದಾರೆ. ಗ್ರಾಮ ಆಡಳಿತ ಅಧಿಕಾರಿಯಾಗಿ ಸುದೀರ್ಘ 23 ವರ್ಷಗಳ ಕಾಲ ಕಂದಾಯ ಇಲಾಖೆಯಲ್ಲಿ ಸೇವೆಯನ್ನು ಸಲ್ಲಿಸಿ ಸಂತೋಷ ಪಾಶ್ಚಾಪುರ ಅವರು ಸದ್ಯ ಗೋಕಾಕನ ಕಂದಾಯ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂತೋಷ ಪಾಶ್ಚಾಪುರ ಅವರು ಕರ್ತವ್ಯ ನಿಷ್ಠೆ, ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ, ಸರಳ ಮತ್ತು ಸಜ್ಜನಿಕೆಯ ವಕ್ತಿತ್ವವನ್ನು ಹೊಂದಿದ್ದಾರೆ.
Read More »ಮೈಸೂರಿನ ಇಂದಿರಾನಗರದ ದೊಡ್ಡಕೆರೆ ಮೈದಾನದಲ್ಲಿರುವ ಕರ್ನಾಟಕ ವಸ್ತು ಪ್ರದರ್ಶನ
ಮೈಸೂರಿನ ಇಂದಿರಾನಗರದ ದೊಡ್ಡಕೆರೆ ಮೈದಾನದಲ್ಲಿರುವ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಕಚೇರಿಗೆ ಭೇಟಿ ನೀಡಿ, ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಅಯುಬ್ ಖಾನ್ ಅವರಿಂದ ಸನ್ಮಾನ ಸ್ವೀಕರಿಸಿದ ಸಚಿವ ಸತೀಶ ಜಾರಕಿಹೊಳಿ.. ಈ ವೇಳೆ ಇಲ್ಲಿ ನೂತನವಾಗಿ ಬೃಂದಾವನ ಉದ್ಯಾನ ಮಾದರಿಯಲ್ಲಿ ನಿರ್ಮಿಸಲಾದ ಮ್ಯೂಸಿಕಲ್ ಫೌಂಟೆನ್ ಪ್ರದರ್ಶನವನ್ನು ವೀಕ್ಷಿಸಿದೆ. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಅನಿಲ್ ಚಿಕ್ಕಮಾದು, ಶ್ರೀ ಹರೀಶ್ ಗೌಡ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
Read More »ಸುರಂಗ ರಸ್ತೆ ಬದಲು ಮೆಟ್ರೋ ವಿಸ್ತರಣೆ, ಸಾರ್ವಜನಿಕ ಸಾರಿಗೆಗೆ ಆದ್ಯತೆಯಿಂದ ಮಾತ್ರ ಸಂಚಾರದಟ್ಟಣೆ ತಹಬದಿಗೆ: ಸಂಸದ ತೇಜಸ್ವಿ ಸೂರ್ಯ
ಬೆಂಗಳೂರು: 18 ಕಿಲೋ ಮೀಟರ್ ಉದ್ದದ ಸುರಂಗ ಮಾರ್ಗ ರಸ್ತೆ ನಿರ್ಮಾಣದಿಂದ ನಗರದಲ್ಲಿ ಸಂಚಾರ ದಟ್ಟಣೆ ನಿವಾರಣೆ ಹೇಗೆ ಸಾಧ್ಯ. ಪೂರ್ವ ಸಿದ್ಧತೆ ನಡೆಸದೆ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ. ಸಾರ್ವಜನಿಕರ ಹಣ ಪೋಲು ಮಾಡುವ ಬದಲು ಸಮೂಹ ಸಾರಿಗೆಗೆ ಆದ್ಯತೆ ನೀಡುವಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಾಧ್ಯಮಗೋಷ್ಟಿಯಲ್ಲಿ ಸುರಂಗ ರಸ್ತೆ ನಿರ್ಮಾಣದಿಂದಾಗಿ ಎದುರಾಗುವ ತೊಡಕುಗಳು ಹಾಗೂ …
Read More »
Laxmi News 24×7