Breaking News

ರಾಜ್ಯ

ಕ್ಷುಲ್ಲಕ ಕಾರಣಕ್ಕೆ ಯುವಕನ ಕೊಲೆ: ಸ್ನೇಹಿತರಿಬ್ಬರ ಬಂಧನ

ರಾಯಚೂರು : ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಕೊಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಲಿಂಗಸುಗೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಲಿಂಗಸುಗೂರು ತಾಲೂಕಿನ ಗುಡದನಾಳ ಗ್ರಾಮದ ಶಿವಪುತ್ರ ಅಲಿಯಾಸ್ ಶಿವು, ಅಭಿಷೇಕ ಅಲಿಯಾಸ್ ಅಭಿ ಎಂಬುವರು ಸ್ನೇಹಿತ ಶರಣಬಸವ (21) ನನ್ನು ಕೊಲೆ ಮಾಡಿದ್ದರು.   ಪ್ರಕರಣದ ಹಿನ್ನೆಲೆ : ಶರಣಬಸವ, ಅಭಿಷೇಕ, ಶಿವಪುತ್ರ ಈ ಮೂವರು ಸ್ನೇಹಿತರಾಗಿದ್ದರು. ಇವರು ಆಗಾಗ ಜೂಜಾಟ ಆಡುತ್ತಿದ್ದರು. ಹಣ ಕಳೆದುಕೊಂಡಾಗ ಮತ್ತು ಗೆದ್ದಾಗ ಪರಸ್ಪರ ಜಗಳವಾಡುತ್ತಿದ್ದರು. ಮೊಹರಂ ಹಾಗೂ …

Read More »

ಮನೆಯಲ್ಲಿಸಿಲಿಂಡರ್ ಸ್ಫೋಟಗೊಂಡು 9 ತಿಂಗಳ ಹಸುಗೂಸು ಸೇರಿ ಒಂದೇ ಕುಟುಂಬದ ಏಳು ಜನರಿಗೆ ಗಂಭೀರ ಗಾಯ

ಬೆಳಗಾವಿ: ಮನೆಯಲ್ಲಿಸಿಲಿಂಡರ್ ಸ್ಫೋಟಗೊಂಡು 9 ತಿಂಗಳ ಹಸುಗೂಸು ಸೇರಿ ಒಂದೇ ಕುಟುಂಬದ ಏಳು ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಗೋಕಾಕ್ ತಾಲೂಕಿನ ‌ಅಕ್ಕತಂಗೇರಹಾಳ ಗ್ರಾಮದಲ್ಲಿ ಶನಿವಾರ ಮಧ್ಯರಾತ್ರಿ ನಡೆದಿದೆ. ಸಿಲಿಂಡರ್ ಸ್ಫೋಟದ ಭೀಕರತೆಗೆ ಮನೆಯ ಹೆಂಚುಗಳು ಹಾರಿ ಹೋಗಿದ್ದು, ಮನೆಯಲ್ಲಿನ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ರಾಜಶ್ರೀ ನಿರ್ವಾಣಿ, ಅಶೋಕ ನಿರ್ವಾಣಿ, ಸೋಮನಗೌಡ ನಿರ್ವಾಣಿ, ದೀಪಾ ನಿರ್ವಾಣಿ ಮತ್ತು ಮಕ್ಕಳಾದ ನವೀನ ನಿರ್ವಾಣಿ, ವಿದ್ಯಾ ನಿರ್ವಾಣಿ, 9 ತಿಂಗಳ ಮಗು ಬಸನಗೌಡ ನಿರ್ವಾಣಿ …

Read More »

ಶ್ರೀ ಲಕ್ಷ್ಮೀ ಇಂಜಿನಿಯರಿಂಗ್ ವರ್ಕ್ಸ್ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರವನ್ನು ಉದ್ಘಾಟಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ

ಶ್ರೀ ಲಕ್ಷ್ಮೀ ಇಂಜಿನಿಯರಿಂಗ್ ವರ್ಕ್ಸ್ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರವನ್ನು ಉದ್ಘಾಟಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ ಗೋಕಾಕ : ನಗರದಲ್ಲಿ ನೂತನವಾಗಿ ಆರಂಭಗೊಂಡ ಲಕ್ಷ್ಮೀ ಇಂಜಿನಿಯರಿಂಗ್ ವರ್ಕ್ಸ್ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರವನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಉದ್ಘಾಟನೆ ಮಾಡಿದರು. ಈ ಸಚಿವರಾದ ಆಪ್ತ ಸಹಾಯಕರಾದ ಪಾಂಡು ಮನ್ನಿಕೇರಿ, ಶಾಸಕರ ಆಪ್ತ ಸಹಾಯಕರಾದ ನಿಂಗಪ್ಪಾ ಕುರಭೇಟ, ಮುಖಂಡರಾದ ವಿವೇಕ ಜತ್ತಿ, ಮುರಳಿ ಬಡಿಗೇರ, ಹೆಸ್ಕಾಂ ಅಧಿಕಾರಿಗಳಾದ …

Read More »

ಹಿಂದೂ ಕಾರ್ಯಕರ್ತರ ನೆರವಿಗೆ ಬೆಂಗಳೂರಿನಲ್ಲಿ ಕಚೇರಿ ಆರಂಭ: ಯತ್ನಾಳ್

ವಿಜಯಪುರ: ರಾಜ್ಯದಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಸಂತ್ರಸ್ತರಿಗೆ ಕಾನೂನು ನೆರವು ನೀಡುವುದಕ್ಕಾಗಿ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಕಛೇರಿ ತೆರೆಯುತ್ತೇನೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭರವಸೆ ನೀಡಿದ್ದಾರೆ.   ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡರೂ ಪೊಲೀಸರು ಪ್ರಕರಣ ದಾಖಲಿಸುವ, ಠಾಣೆಗೆ ಕರೆದೊಯ್ದು ಮುಚ್ಚಳಿಕೆ ಬರೆಸಿಕೊಳ್ಳುವ ಮೂಲಕ ದೌರ್ಜನ್ಯ ನಡೆಸುತ್ತಿದ್ದಾರೆ. …

Read More »

ಸಂತ್ರಸ್ತೆಯನ್ನು ಭೇಟಿಯಾದ ಕೇಂದ್ರ ಬಿಜೆಪಿ ಸತ್ಯಶೋಧನಾ ಸಮಿತಿ

ಬೆಳಗಾವಿ: ಬೆಳಗಾವಿಯ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಸಖಿ ಒನ್ ಸ್ಟಾಪ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ ಹಲ್ಲೆಗೈದ ಪ್ರಕರಣದ ಸಂತ್ರಸ್ತೆಯನ್ನು ಭೇಟಿ ಮಾಡಿರುವ ಕೇಂದ್ರ ಬಿಜೆಪಿ ಸತ್ಯಶೋಧನಾ ಸಮಿತಿ, ಮಹಿಳೆಯ ಆರೋಗ್ಯವನ್ನು ವಿಚಾರಿಸಿದೆ.   ಸಂಸದರಾದ ಅಪ್ರಜಿತಾ ಸಾರಂಗಿ, ಸುನಿತಾ ದುಗ್ಗಲ್, ರಂಜಿತಾ ಕೋಲಿ, ಲಾಕೆಟ್ ಚಟರ್ಜಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಶಾ ಲಾಕ್ರಾ ಅವರನ್ನೊಳಗೊಂಡ ಐದು ಜನರ ಸಮಿತಿ ಸಂತ್ರಸ್ತ ಮಹಿಳೆಗೆ ಸಾಂತ್ವನ ಹೇಳಿದರು. ಘಟನೆಯಿಂದ ಧೃತಿಗೆಡಬೇಡಿ …

Read More »

ಇಂದಿನಿಂದ ʻKPSCʼ ಗ್ರೂಪ್ ಸಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು :ಡಿಸೆಂಬರ್ 16 ರ ಇಂದು 17 ರ ನಾಳೆ ಕೆಪಿಎಸ್‍ಸಿ ವತಿಯಿಂದ ವಿವಿಧ ಇಲಾಖೆಗಳಲ್ಲಿನ ಗ್ರೂಪ್-ಸಿ ಹುದ್ದೆಗಳಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯ ಹಿನ್ನಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.   ಪರೀಕ್ಷೆಯಲ್ಲಿ ಭಾಗವಹಿಸಲಿರುವ ಎಲ್ಲಾ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಸ್ಮಾರ್ಟ್ ವಾಚ್, ಮೊಬೈಲ್, ಕ್ಯಾಲ್ಕ್ಯುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಪರೀಕ್ಷೆಗಳು …

Read More »

ಶಬರಿಮಲೆಯಲ್ಲಿ ಭಾರೀ ಜನದಟ್ಟಣೆ: ಅವ್ಯವಸ್ಥೆ ವಿರುದ್ಧ ಸಿಡಿದ ಭಕ್ತರಿಂದ ಪ್ರತಿಭಟನೆ

ತಿರುವನಂತಪುರಂ (ಕೇರಳ) : ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಶಬರಿಮಲೆಗೆ ಭಕ್ತರು ಧಾವಿಸಿದ್ದು, ಅದನ್ನು ನಿಯಂತ್ರಿಸಲು ಕೇರಳ ಸರ್ಕಾರ ವಿಫಲವಾಗಿದೆ. ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಂತ ಪರಿಣಾಮ ಬಾಲಕಿಯೊಬ್ಬಳು ಮೃತಪಟ್ಟರೆ, ಇನ್ನೊಂದು ಅವಘಡದಲ್ಲಿ ಯಾತ್ರಿಕನೊಬ್ಬ ಅಸುನೀಗಿದ ಘಟನೆ ನಡೆದಿದೆ. ಬುಧವಾರ ಬೆಳಗ್ಗೆ ಭಾರೀ ಜನದಟ್ಟಣೆಯಿಂದ ಬೇಸತ್ತ ಭಕ್ತರು ಪ್ರತಿಭಟನೆ ಕೂಡ ನಡೆಸಿದರು. ಈ ಮಧ್ಯೆ ಭಕ್ತರಿಗೆ ದರ್ಶನ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಸರ್ಕಾರ ತಿಳಿಸಿದೆ.     ಸರದಿಯಲ್ಲಿ ನಿಂತಿದ್ದ …

Read More »

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧ, ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು: ಸಿಎಂ

ಬೆಂಗಳೂರು/ಬೆಳಗಾವಿ: ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು ಹಾಗೂ ಅದು ತಾರತಮ್ಯ ನಿವಾರಣೆಗೆ ಪರಿಹಾರವೂ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸಭೆಯಲ್ಲಿ ಇಂದು ಉತ್ತರ ಕರ್ನಾಟಕದ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, “ಪ್ರತ್ಯೇಕ ಕರ್ನಾಟಕಕ್ಕೆ ಒತ್ತಾಯ ಮಾಡುವುದು ಏಕೀಕರಣಕ್ಕೆ ಹೋರಾಡಿ, ಪ್ರಾಣ ತ್ಯಾಗ ಮಾಡಿದವರಿಗೆ ನಾವು ಮಾಡುವ ಅವಮಾನ. ಏಕೀಕರಣಕ್ಕಾಗಿ ಬಹಳ ಜನ ಹೋರಾಡಿದರು. ಭಾಷಾವಾರು ಪ್ರಾಂತ್ರ್ಯ ರಚನೆಯಾಗುವಾಗಲೂ ಹೋರಾಟ ಮಾಡಿದವರಿದ್ದಾರೆ. ಹೈದರಾಬಾದ್ ಕರ್ನಾಟಕಕ್ಕೆ …

Read More »

ಇಂಧನ ಸಚಿವ ಕೆ ಜೆ ಜಾರ್ಜ್‌ ವಿರುದ್ಧ ದುರುದ್ದೇಶಪೂರಿತ ಪೋಸ್ಟ್‌ ಮಾಡಿದ್ದ ಆರೋಪಿಯ ಸೆರೆ

ಬೆಂಗಳೂರು: ತೆಲಂಗಾಣ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಇಂಧನ ಸಚಿವ ಕೆ ಜೆ ಜಾರ್ಜ್ ವಿರುದ್ಧ ಎಕ್ಸ್ ಖಾತೆಯಲ್ಲಿ ದುರುದ್ದೇಶಪೂರಿತ ಪೋಸ್ಟ್‌ ಮಾಡಿದ್ದ ಭಾರತ್‌ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪಾರ್ಟಿಯ ಐಟಿ ಸೆಲ್‌ ಉದ್ಯೋಗಿಯನ್ನು ಪೂರ್ವ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಬಿಆರ್‌ಎಸ್ ಪಕ್ಷದ ಕಾರ್ಯಕರ್ತ, ಪಕ್ಷದ ಐಟಿ ಸೆಲ್‌ ಉದ್ಯೋಗಿಯಾಗಿರುವ ತೆಲಂಗಾಣ ಕರೀಂನಗರ ನಿವಾಸಿ ರವಿಕಾಂತ್ ಶರ್ಮಾ (33) ಬಂಧಿತ ಆರೋಪಿ. ಆರೋಪಿಯ ತಂದೆ ಸಹ ಬಿಆರ್‌ಎಸ್ ಪಕ್ಷದ ಮಾಜಿ ಕಾರ್ಪೋರೇಟರ್‌ …

Read More »

ಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಠಾಣೆಯ ಪೊಲೀಸ್ ಇನ್ಸ್​ಪೆಕ್ಟರ್ ಅಮಾನತು

ಬೆಳಗಾವಿ: ಇಲ್ಲಿಯ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಅಮಾನವೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಠಾಣೆಯ ಪೊಲೀಸ್ ಇನ್ಸ್​ಪೆಕ್ಟರ್​ ವಿಜಯಕುಮಾರ ಸಿನ್ನೂರ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ ಆದೇಶ ಹೊರಡಿಸಿದ್ದಾರೆ.   ಹೈಕೋರ್ಟ್ ಈ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು, ಸರ್ಕಾರಕ್ಕೆ ಮತ್ತು ಪೊಲೀಸ್ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ ಆಯುಕ್ತ ಎಸ್ …

Read More »