ಉಡುಪಿ : ಜಿಲ್ಲೆಯ ಕಾಪು ಠಾಣಾ ವ್ಯಾಪ್ತಿಯಲ್ಲಿ ಮೃತಪಟ್ಟ ವ್ಯಕ್ತಿಯ ಸಹೋದರ ಅಂತ್ಯಕ್ರಿಯೆಗೆ ಮೃತದೇಹ ಸ್ವೀಕರಿಸಲು ಒಪ್ಪದ ಕಾರಣ ಸಮಾಜ ಸೇವಕ ವಿಶು ಶೆಟ್ಟಿ ಅವರೇ ಮುಂದೆ ನಿಂತು ಮೃತನ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ರುದ್ರ ಭೂಮಿಯಲ್ಲಿ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರು ಮೃತನ ಸಹೋದರನನ್ನು ಕರೆಯಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ಕೊನೆಗೆ ಅಂತ್ಯಸಂಸ್ಕಾರ ನಡೆಸಲು ಮೃತ ದೇಹವನ್ನು ಪಡೆಯಲು ಸಹೋದರ ನಿರಾಕರಿಸಿದರು. …
Read More »ಶಾಂತೈ ವೃದ್ಧಾಶ್ರಮದ ಸಹಯೋಗದೊಂದಿಗೆ ಕಪ್ಲೇಶ್ವರ ಚೌಕ್ ಗಣೇಶೋತ್ಸವದಲ್ಲಿ ಹಿರಿಯರನ್ನು ಸನ್ಮಾನಿಸಲಾಯಿತು
ಶಾಂತೈ ವೃದ್ಧಾಶ್ರಮದ ಸಹಯೋಗದೊಂದಿಗೆ ಕಪ್ಲೇಶ್ವರ ಚೌಕ್ ಗಣೇಶೋತ್ಸವದಲ್ಲಿ ಹಿರಿಯರನ್ನು ಸನ್ಮಾನಿಸಲಾಯಿತು ಹೃದಯಸ್ಪರ್ಶಿ ಸತ್ಕಾರದಲ್ಲಿ, ಕಪ್ಲೇಶ್ವರ ಚೌಕ್ ಗಣೇಶೋತ್ಸವ ಮಂಡಳಿಯ ಸಹಯೋಗದೊಂದಿಗೆ, ಶಾಂತೈ ವೃದ್ಧಾಶ್ರಮವು ಇಂದು ಸ್ಥಳೀಯ ಸುಮಾರು 50 ಹಿರಿಯರನ್ನು ಸನ್ಮಾನಿಸಿತು. ಈ ಕಾರ್ಯಕ್ರಮವು ಭಕ್ತಿ ಮತ್ತು ಗೌರವದಿಂದ ಗುರುತಿಸಲ್ಪಟ್ಟಿತು, ಪ್ರತಿಯೊಬ್ಬ ಹಿರಿಯರಿಗೂ ಅವರ ದೈನಂದಿನ ಆರೋಗ್ಯ ಅಗತ್ಯಗಳನ್ನು ಪೂರೈಸಲು ಶಾಲು, ಹೂವುಗಳು ಮತ್ತು ವಿಶೇಷ ಔಷಧಿ ಪೆಟ್ಟಿಗೆಯನ್ನು ನೀಡಿ ಸನ್ಮಾನಿಸಲಾಯಿತು. ಕಪಿಲ್ ಭೋಸಲೆ, ಪಪ್ಪು ಲಗಾಡೆ, ದೀಪಕ್ ಜಾಧವ್, …
Read More »ರಾಷ್ಟ್ರಪತಿಗಳ ಮೈಸೂರು ಪ್ರವಾಸ: ಚಾಮುಂಡೇಶ್ವರಿ ದರ್ಶನ, ಅರಮನೆಗೆ ಭೇಟಿ
ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರದಿಂದ (ಸೆ.1) ಎರಡು ದಿನ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜೊತೆಗೆ ಆಯಿಷ್ ಸಂಸ್ಥೆಯ ವಜ್ರ ಮಹೋತ್ಸವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ರಾಷ್ಟ್ರಪತಿಗಳ ಸ್ವಾಗತಕ್ಕೆ ನಗರದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (ಆಯಿಷ್)ಯಲ್ಲಿ ಸೆ.1 ರಂದು ನಡೆಯಲಿರುವ 60ನೇ ವರ್ಷದ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿಯಾಗಲಿದ್ದಾರೆ. ರಾಷ್ಟ್ರಪತಿ ಆಗಮನ …
Read More »ಕೆ.ಎನ್.ರಾಜಣ್ಣ ಮನೆಗೆ ವಿವಿಧ ಮಠಾಧೀಶರ ಭೇಟಿ:
ತುಮಕೂರು: ಸಚಿವ ಸಂಪುಟದಿಂದ ವಜಾಗೊಂಡಿರುವ ಕೆ.ಎನ್.ರಾಜಣ್ಣ ಅವರ ನಿವಾಸಕ್ಕೆ ವಿವಿಧ ಮಠಗಳ 15ಕ್ಕೂ ಹೆಚ್ಚು ಸ್ವಾಮೀಜಿಗಳು ಭಾನುವಾರ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಚಿತ್ರದುರ್ಗದ ಜಗದ್ಗುರು ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಮಾತನಾಡಿ, “ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ತೆಗೆದು ಹಾಕಿರುವುದು ಇಡೀ ಹಿಂದುಳಿದ ಸಮುದಾಯಕ್ಕೆ ಅನ್ಯಾಯ ಮಾಡಿದಂತಾಗಿದೆ. ಅವರನ್ನು ವಾಪಸ್ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸುವ ಮೂಲಕ ಹಿಂದುಳಿದ ವರ್ಗಗಳ ಸಮುದಾಯಕ್ಕೆ ನ್ಯಾಯ ಒದಗಿಸಿಕೊಡಬೇಕೆಂಬ ಆಶಯದೊಂದಿಗೆ ಕಾಂಗ್ರೆಸ್ ಹೈಕಮಾಂಡ್ ಅನ್ನು …
Read More »ಡಿಕೆ ಶಿವಕುಮಾರ್ ಒಂದು ಕಾಲು ಬಿಜೆಪಿಯಲ್ಲಿಟ್ಟಿದ್ದಾರೆ ಎಂದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು, ಆಗಸ್ಟ್ 31: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಒಂದು ಕಾಲು ಬಿಜೆಪಿಯಲ್ಲಿ (BJP ಇಟ್ಟಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Bsanagouda Patil Yatnal) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಈಗಾಗಲೇ ದೆಹಲಿಯಲ್ಲಿ ಒಂದು ಸುತ್ತಿನ ಚರ್ಚೆ ನಡೆಸಿದ್ದಾರೆ. ಆದರೆ ಅವರಿಗೆ ಶಾಸಕರ ಬೆಂಬಲ ಕಡಿಮೆ ಇದೆ ಎಂಬ ಕಾರಣಕ್ಕೆ ಅದು ಮುಂದುವರಿಯಲಿಲ್ಲ ಎಂದು ಯತ್ನಾಳ್ ಹೇಳಿದ್ದಾರೆ. ಆದರೆ ಇದಕ್ಕೆ ತಿರುಗೇಟು ನೀಡಿರುವ ಡಿಕೆ ಶಿವಕುಮಾರ್, ಆ ಸೆಗಣಿ …
Read More »ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕೈಗಾರಿಕಾ ಸ್ಪಂದನ ಸಭೆ: ಸಮಸ್ಯೆಗಳ ನಿವಾರಣೆಗೆ ಗಡುವು
ಬೆಳಗಾವಿ : ಜಿಲ್ಲೆಯ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಹತ್ವದ ಸಭೆ ನಡೆದಿದ್ದು, ಸಮಸ್ಯೆಗಳಿಗೆ ಸಮಯಮಿತಿಯಲ್ಲಿ ಸ್ಪಂದಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ಫೌಂಡ್ರಿ ಕ್ಲಸ್ಟರ್ ಸಭಾಭವನದಲ್ಲಿ ನಡೆದ ಸಭೆಯಲ್ಲಿ, ಕೈಗಾರಿಕಾ ಸ್ಪಂದನೆ (ಗ್ರಿವೆನ್ಸಿಸ್), ಏಕಗವಾಕ್ಷಿ, ಸಿಎಸ್ಆರ್ ಫಂಡ್, ಸ್ಕಿಲ್ ಡೆವಲಪ್ ಮೆಂಟ್, ಪಿಎಂ ವಿಶ್ವಕರ್ಮ ಯೋಜನೆ, ಪ್ರಧಾನ ಮಂತ್ರಿ ಉದ್ಯೋಗ ಸೃಜನೆ ಯೋಜನೆ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು. ವಿಶೇಷವಾಗಿ, …
Read More »ನಿರಂತರ ಮಳೆಗೆ ಧಾರವಾಡದಲ್ಲಿ ಕುಸಿದು ಬಿದ್ದ ಮನೆ ಗೋಡೆ,. ಪ್ರಾಣಾಪಾಯದಿಂದ ಪಾರಾದ ಏಳು ಜನ.
ನಿರಂತರ ಮಳೆಗೆ ಧಾರವಾಡದಲ್ಲಿ ಕುಸಿದು ಬಿದ್ದ ಮನೆ ಗೋಡೆ,. ಪ್ರಾಣಾಪಾಯದಿಂದ ಪಾರಾದ ಏಳು ಜನ. : ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆಯೊಂದು ಕುಸಿದು ಬಿದ್ದಿದೆ. ಪರಿಣಾಮ ಮನೆಯಲ್ಲಿದ್ದ ಮಗು ಸೇರಿ ಏಳು ಜನ ಪ್ರಾಣಾಪಾಯದಿಂದ ಪಾರಾದ ಘಟನೆ ಧಾರವಾಡದ ದುರ್ಗಾ ಕಾಲೊನಿಯಲ್ಲಿ ಸಂಭವಿಸಿದೆ. ವೈ- ಲಕ್ಷ್ಮಣ ಗಾಳಿ ಎಂಬುವವರಿಗೆ ಸೇರಿದ ಮನೆಯ ಗೋಡೆಯೇ ಕುಸಿದು ಬಿದ್ದಿದೆ. ಇದೇ ಗೋಡೆ ಆ ಇಡೀ ಮನೆಗೆ ಆಸರೆಯಾಗಿತ್ತು. …
Read More »ಶಾಲೆ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ
ಶಾಲೆ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ ಯಾದಗಿರಿ: ಇಲ್ಲಿನ ಸರ್ಕಾರಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶಾಲೆಯ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ನಡೆದಿದೆ. ಆಗಸ್ಟ್ 27ರಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಗೆ ಹೆರಿಗೆ ನೋವು ಕಾಣಿಸಿಕೊಂಡಿರುವುದನ್ನು ಗಮನಿಸಿದ ಸಹಪಾಠಿಗಳು ಶಾಲಾ ಆಡಳಿತ ಮಂಡಳಿಗೆ ಮಾಹಿತಿ ನೀಡಿದ ನಂತರ, ಈ ವಿಷಯ ಬೆಳಕಿಗೆ …
Read More »ಮುಧೋಳದಲ್ಲಿ ಒಳಮೀಸಲಾತಿ ಜಾರಿಗೆ ಸಂಭ್ರಮಾಚರಣೆ!
ಮುಧೋಳದಲ್ಲಿ ಒಳಮೀಸಲಾತಿ ಜಾರಿಗೆ ಸಂಭ್ರಮಾಚರಣೆ! ಸಚಿವ ಆರ್.ಬಿ. ತಿಮ್ಮಾಪುರಗೆ ಹೂವಿನ ಮಾಳೆ, ಬಾಳೆ ಗೊನೆ ನೀಡಿದ ಯುವಕರ ಮುಧೋಳದಲ್ಲಿ ಒಳಮೀಸಲಾತಿ ಜಾರಿಗೆ ಸಂಭ್ರಮಾಚರಣೆ! ಸಚಿವ ಆರ್.ಬಿ. ತಿಮ್ಮಾಪುರಗೆ ಹೂವಿನ ಮಾಳೆ, ಬಾಳೆ ಗೊನೆ ನೀಡಿದ ಯುವಕರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂತಸ ಎಸ್ಸಿ ಎಡಗೈ ಸಮುದಾಯದ ಮುಖಂಡರು ಯುವಕರಿಂದ ಸನ್ಮಾನ ರಾಜ್ಯ ಸರ್ಕಾರ ಇತ್ತೀಚೆಗೆ ಒಳಮೀಸಲಾತಿಯನ್ನು ಜಾರಿಗೆ ತಂದ ಹಿನ್ನೆಲೆ, ಮುಧೋಳ ನಗರದಲ್ಲಿ ಸಂಭ್ರಮದ ವಾತಾವರಣ ಕಂಡುಬಂತು. …
Read More »ಆಲ್ಕೋಮೀಟರ್ಗಳ ಖಚಿತತೆ ಕುರಿತು ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್
ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸುವವರನ್ನು ಪರೀಕ್ಷಿಸುವ ಬ್ರೀತ್ ಅನಲೈಸರ್ಗಳು(ಆಲ್ಕೋ ಮೀಟರ್) ದೋಷರಹಿತವಾಗಿವೆ ಎಂಬುದಾಗಿ ಖಚಿತ ಪಡಿಸುವಿರಾ? ಎಂದು ನಗರ ಸಂಚಾರಿ ಪೊಲೀಸರನ್ನು ಹೈಕೋರ್ಟ್ ಮೌಖಿಕವಾಗಿ ಪ್ರಶ್ನಿಸಿದೆ. ಮದ್ಯಸೇವನೆ ಮಾಡದಿದ್ದರೂ ಮದ್ಯಪಾನ ಮಾಡಿರುವುದಾಗಿ ಬ್ರೀತ್ ಅನಲೈಸರ್ ತೋರಿಸಿದ ಪರಿಣಾಮ 10 ಸಾವಿರ ರೂ. ದಂಡ ವಿಧಿಸಿದ್ದ ಪೊಲೀಸರ ಕ್ರಮ ಪ್ರಶ್ನಿಸಿ ನಗರದ ಸಿ. ಅಜಯ್ ಕುಮಾರ್ ಕಶ್ಯಪ್ ಎಂಬುವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ …
Read More »