ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಬಳಸಿ ನೃತ್ಯ ಮಾಡಿದ ಆರೋಪದಡಿ ನಾಲ್ಕು ವಿಚಾರಣಾಧೀನ ಕೈದಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಅಮಾನತುಗೊಂಡ ಬೆಂಗಳೂರು ಕೇಂದ್ರ ಕಾರಾಗೃಹ ಅಧೀಕ್ಷಕ ಇಮಾಮ್ ಸಾಬ್ ಮ್ಯಾಗೇರಿ ನೀಡಿದ ದೂರು ಆಧರಿಸಿ ಕಾರ್ತಿಕ್, ಧನಂಜಯ, ಮಂಜುನಾಥ್ ಹಾಗೂ ಚರಣ್ ರಾವ್ ಎಂಬುವರ ವಿರುದ್ಧ ಕರ್ನಾಟಕ ಕಾರಾಗೃಹ (ತಿದ್ದುಪಡಿ) ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ ಗಳಡಿ ಪ್ರಕರಣ ದಾಖಲಾಗಿದೆ. ಪರಪ್ಪನ ಕಾರಾಗೃಹದಲ್ಲಿ ಉಗ್ರ ಜುಹಾಬ್ ಶಕೀಲ್ …
Read More »ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ: ಇಬ್ಬರು ಅಧಿಕಾರಿಗಳು ಸಸ್ಪೆಂಡ್: ಓರ್ವ ಅಧಿಕಾರಿ ಎತ್ತಂಗಡಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದ್ದು, ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಜೈಲಾಧಿಕಾರಿಗಳ ಜೊತೆ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಗೃಹ ಸಚಿವ ಪರಮೇಶ್ವರ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣದ ತನಿಖೆಗೆ ನಾಲ್ವರು ಅಧಿಕಾರಿಗಳ ಸಮಿತಿ ರಚಿಸಲಾಗಿದ್ದು, ಒಂದು ತಿಂಗಳ ಒಳಗಾಗಿ ಸಮಿತಿ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದರು. ಪ್ರಕರಣ ಸಂಬಂಧ ಓರ್ವ ಅಧಿಕಾರಿಯನ್ನು ತಕ್ಷಣ ವರ್ಗಾವಣೆ ಮಾಡಲಾಗಿದೆ. …
Read More »ಬೆಳಗಾವಿಯಲ್ಲಿ ಇತಿಹಾಸ ನಿರ್ಮಿಸಿದ ‘ನಮಾಮಿ ಗಂಗೆ’
ಬೆಳಗಾವಿಯಲ್ಲಿ ಇತಿಹಾಸ ನಿರ್ಮಿಸಿದ ‘ನಮಾಮಿ ಗಂಗೆ’ ವೈಜಯಂತಿ ಕಾಶಿ ಉಪಸ್ಥಿತಿಯಲ್ಲಿ ಶಾಂತಲಾ ನಾಟ್ಯಾಲಯದ ವಿದ್ಯಾರ್ಥಿಗಳಿಂದ ಮನಮೋಹಕ ಪ್ರದರ್ಶನ ಬೆಳಗಾವಿ : ಗಂಗಾ ನದಿಯ ಕಥಾನಕವನ್ನು ಬಿಂಬಿಸುವ ನಮಾಮಿ ಗಂಗೆ ಎನ್ನುವ 56 ನಿಮಿಷಗಳ ಅದ್ಭುತ ನೃತ್ಯ ರೂಪಕ ಪ್ರದರ್ಶನದ ಮೂಲಕ ಬೆಳಗಾವಿಯ ಶಾಂತಲಾ ನಾಟ್ಯಾಲಯದ ವಿದ್ಯಾರ್ಥಿಗಳು ಶನಿವಾರ ಸಂಜೆ ಹೊಸ ಇತಿಹಾಸ ನಿರ್ಮಾಣ ಮಾಡಿದರು. ಶಾಂತಲಾ ನಾಟ್ಯಾಲಯದ 36ನೇ ವಾರ್ಷಿಕೋತ್ಸವದ ನಿಮಿತ್ತ ಕೇಂದ್ರ ಸಂಸ್ಕೃತಿ ಸಚಿವಾಲಯದ ಸಹಯೋಗದಲ್ಲಿ ಲೋಕಮಾನ್ಯ ರಂಗಮಂದಿರದಲ್ಲಿ …
Read More »ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ
ಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ. ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು ಸೌತ್ ಇಂಡಿಯಾ ಶುಗರ್ ಮಿಲ್ಸ್ ಅಸೋಸಿಯೇಷನ್ ಅಧ್ಯಕ್ಷ ಯೋಗೇಶ್ ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಇಂದು ಸಿಎಂ ಸಿದ್ದರಾಮಯ್ಯ ಜೊತೆ ಸಭೆ ಅಗಿದೆ. ರೈತರ ಸಮಸ್ಯೆ ಮತ್ತು ಕಾರ್ಖಾನೆಯ ಸಮಸ್ಯೆ ಬಗ್ಗೆ ಚರ್ಚೆ ನಡೆದಿದೆ. ಸಕ್ಕರೆ ಬೆಲೆ ಹಾಗೂ ಎಥನಾಲ್ ಬೆಲೆ ಹೆಚ್ಚಳ ಮಾಡಿಲ್ಲ. ಹೀಗಾಗಿ ಎಫ್ಆರ್ಪಿ ದರವನ್ನು ಸರಿಯಾದ …
Read More »ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿಪ್ರತಿಭಟನೆ: ಪೊಲೀಸರು – ರೈತರ ನಡುವೆ ಜಟಾಪಟಿ
ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಚಾಮರಾಜನಗರದಲ್ಲಿ ಪ್ರತಿಭಟನೆ: ಪೊಲೀಸರು – ರೈತರ ನಡುವೆ ಜಟಾಪಟಿ ಚಾಮರಾಜನಗರ: ಕಬ್ಬಿಗೆ ಬೆಲೆ ಹೆಚ್ಚಳ ಘೋಷಣೆ ಮಾಡುವಂತೆ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘವು ಚಾಮರಾಜನಗರದ ದೊಡ್ಡರಾಯಪೇಟೆ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ರೈತ ಮುಖಂಡರಾದ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಮಹೇಶ್ ಪ್ರಭು ಹಾಗೂ ಮಹೇಶ್ ಕುಮಾರ್ ನೇತೃತ್ವದಲ್ಲಿ ಜಮಾಯಿಸಿದ ರೈತರು ರಾಷ್ಟ್ರೀಯ ಹೆದ್ದಾರಿಯನ್ನು ಒಂದು …
Read More »ಹಣದುಬ್ಬರಕ್ಕೆ ಅನುಗುಣವಾಗಿ ಬಳಕೆದಾರರ ಶುಲ್ಕ ಪರಿಷ್ಕರಣೆಗೆ ಸಂಪನ್ಮೂಲ ಕ್ರೋಢೀಕರಣ ಸಮಿತಿ ಶಿಫಾರಸು
ಬೆಂಗಳೂರು: ಸಾರ್ವಜನಿಕ ಸೇವೆಗಳಲ್ಲಿ ಬಳಕೆದಾರ ಶುಲ್ಕಗಳನ್ನು ತರ್ಕಬದ್ಧಗೊಳಿಸಿ, ಹಣದುಬ್ಬರಕ್ಕೆ ಅನುಗುಣವಾಗಿ ಬಳಕೆದಾರರ ಶುಲ್ಕಗಳನ್ನು ಸ್ವಯಂಚಾಲಿತವಾಗಿ ಪರಿಷ್ಕರಿಸುವ ವ್ಯವಸ್ಥೆಯನ್ನು ರೂಪಿಸುವಂತೆ ಸಂಪನ್ಮೂಲ ಕ್ರೋಢೀಕರಣ ಸಮಿತಿ (RMC) ತನ್ನ ಅಂತಿಮ ವರದಿಯಲ್ಲಿ ಶಿಫಾರಸು ಮಾಡಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಬಲಪಡಿಸುವ ಉದ್ದೇಶದಿಂದ ಆಗಸ್ಟ್ 2024ರಲ್ಲಿ ರಚಿಸಲಾದ ಸಂಪನ್ಮೂಲ ಕ್ರೋಢೀಕರಣ ಸಮಿತಿ ತನ್ನ ಅಂತಿಮ ವರದಿಯನ್ನು ಸಿಎಂ ಸಿದ್ದರಾಮಯ್ಯಗೆ ಸಲ್ಲಿಸಿದೆ. ಸಂಪನ್ಮೂಲ ಕ್ರೋಢೀಕರಣ ಸಮಿತಿಯು ಕೈಗೊಂಡ ಸಮಗ್ರ ವಿಶ್ಲೇಷಣೆ ಮತ್ತು …
Read More »ಸುಳೆಗಾಳಿ ಗ್ರಾಮದ ಹೊರ ವಲಯದಲ್ಲಿ ಹೃದಯವಿದ್ರಾವಕ ಘಟನೆವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳ ದಾರುಣ ಸಾವು.
ಸುಳೆಗಾಳಿ ಗ್ರಾಮದ ಹೊರ ವಲಯದಲ್ಲಿ ಹೃದಯವಿದ್ರಾವಕ ಘಟನೆವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳ ದಾರುಣ ಸಾವು. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸುಳೆಗಾಳಿ ಗ್ರಾಮದ ಹೊರ ವಲಯದಲ್ಲಿ ಘಟನೆ.ರೈತರ ಜಮೀನಿನಲ್ಲಿ ಹಾದು ಹೋಗುತ್ತಿ ವೇಳೆ ಘಟನೆ. ಸ್ಥಳಕ್ಕೆ ಹಿರಿಯ ಅಣ್ಯಾಧಿಕಾರಗಳ ಭೇಟಿ ಪರಿಶೀಲನೆ.ಆನೆಗಳ ಸಾವಿನ ಬಗ್ಗೆ ತನಿಖೆ ನಡೆಸುತ್ತಿರೋ ಅರಣ್ಯಾಧಿಕಾರಿಗಳು. ಸುಳೆಗಾಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆ ಹಾವಳಿ. ಕಾಡು ಪ್ರಾಣಿ ದಾಳಿ ತಪ್ಪಿಸಲು ವಿದ್ಯುತ್ ತಂತಿ ಬೇಲಿ ಹಾಕಿರೋ ಸಾಧ್ಯತೆ. …
Read More »ಸುರಂಗ ರಸ್ತೆ ಬದಲು ಮೆಟ್ರೋ ವಿಸ್ತರಣೆ, ಸಾರ್ವಜನಿಕ ಸಾರಿಗೆಗೆ ಆದ್ಯತೆಯಿಂದ ಮಾತ್ರ ಸಂಚಾರದಟ್ಟಣೆ ತಹಬದಿಗೆ: ಸಂಸದ ತೇಜಸ್ವಿ ಸೂರ್ಯ
ಬೆಂಗಳೂರು: 18 ಕಿಲೋ ಮೀಟರ್ ಉದ್ದದ ಸುರಂಗ ಮಾರ್ಗ ರಸ್ತೆ ನಿರ್ಮಾಣದಿಂದ ನಗರದಲ್ಲಿ ಸಂಚಾರ ದಟ್ಟಣೆ ನಿವಾರಣೆ ಹೇಗೆ ಸಾಧ್ಯ. ಪೂರ್ವ ಸಿದ್ಧತೆ ನಡೆಸದೆ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ. ಸಾರ್ವಜನಿಕರ ಹಣ ಪೋಲು ಮಾಡುವ ಬದಲು ಸಮೂಹ ಸಾರಿಗೆಗೆ ಆದ್ಯತೆ ನೀಡುವಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಾಧ್ಯಮಗೋಷ್ಟಿಯಲ್ಲಿ ಸುರಂಗ ರಸ್ತೆ ನಿರ್ಮಾಣದಿಂದಾಗಿ ಎದುರಾಗುವ ತೊಡಕುಗಳು ಹಾಗೂ …
Read More »ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ
ಮಂಗಳೂರು, ಅಕ್ಟೋಬರ್ 27: ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್ ಐ ಆರ್ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ …
Read More »ರಸ್ತೆ ದುರಸ್ತಿಗೆ ರೋಡ್ನಲ್ಲಿ ಹೋಮ: ಈಗಲೂ ಸರಿಪಡಿಸದಿದ್ದರೆ ಮತ್ತೊಂದು ಪ್ರತಿಭಟನೆ
ರಸ್ತೆ ದುರಸ್ತಿಗೆ ರೋಡ್ನಲ್ಲಿ ಹೋಮ: ಈಗಲೂ ಸರಿಪಡಿಸದಿದ್ದರೆ ಮತ್ತೊಂದು ಪ್ರತಿಭಟನೆ ಹಾವೇರಿ: ರಾಣೆಬೆನ್ನೂರಿನ ಗೌರಿಶಂಕರ್ ನಗರದ 2ನೇ ಹಂತ 1ನೇ ಕ್ರಾಸ್ ರಸ್ತೆ ಹದಗೆಟ್ಟಿದ್ದು, ರಸ್ತೆ ದುರಸ್ತಿಗೆ ಆಗ್ರಹಿಸಿ ರೈತ ಸಂಘಟನೆ ಹಾಗೂ ಸ್ಥಳೀಯರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ರಾಣೆಬೆನ್ನೂರಿನ ಗೌರಿಶಂಕರ ನಗರದಲ್ಲಿ ಎರಡನೇ ಹಂತ, ಮೊದಲನೇ ಕ್ರಾಸ್ ರಸ್ತೆ ಸರಿಪಡಿಸುವಂತೆ ಆಗ್ರಹಿಸಿ ರೋಡ್ನಲ್ಲಿ ಹೋಮ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಶಾಸಕ ಅರುಣ್ ಕುಮಾರ್ ಪೂಜಾರ್ …
Read More »
Laxmi News 24×7