ನವದೆಹಲಿ: ಗದಗ ಯಲವಿಗಿ ರೈಲು ಯೋಜನೆ ಡಿಪಿಆರ್ಗೆ ಒಪ್ಪಿಗೆ ನೀಡಿ ತ್ವರಿತಗತಿಯಲ್ಲಿ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿರುವ ಅವರು, ಕೇಂದ್ರ ಸರ್ಕಾರ ಯೋಜನೆಗೆ ಒಪ್ಪಿಗೆ ನೀಡಿದ್ದು, ಡಿಪಿಆರ್ಗೆ ಅನುಮತಿ ನೀಡಿ ಯೋಜನೆ ಕಾರ್ಯಾರಂಭ ಮಾಡಬೇಕು. ನಾನು ರಾಜ್ಯ ಸರ್ಕಾರಕ್ಕೆ ಭೂಸ್ವಾಧೀನ ಕೈಗೊಳ್ಳಲು ಆಗ್ರಹಿಸಿದ್ದೇನೆ. ಡಿಪಿಆರ್ಗೆ ಒಪ್ಪಿಗೆ ನೀಡುವುದರಿಂದ …
Read More »ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್
ಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು ಇಂದು ಭಾರತ್ ಬಂದ್ಗೆ ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈ ಬಂದ್ ನಡೆಯುತ್ತಿದ್ದು, ರಾಜ್ಯದಲ್ಲೂ ಪ್ರತಿಭಟನೆಗೆ ಕರೆ ನೀಡಲಾಗಿದೆ. ಐಎನ್ಟಿಯುಸಿ, ಎಐಟಿಯುಸಿ, ಎಚ್ಎಂಎಸ್, ಸಿಐಟಿಯು, ಎಐಯುಟಿಯುಸಿ, ಟಿಯುಸಿಸಿ, ಎಸ್ಇಡಬ್ಲ್ಯೂಎ, ಎಐಸಿಸಿಟಿಯು, ಎಲ್ಪಿಎಫ್ ಮತ್ತು ಯುಟಿಯುಸಿ ಸೇರಿದಂತೆ 10 ಕೇಂದ್ರ ಕಾರ್ಮಿಕ ಸಂಘಗಳು ಪ್ರತಿಭಟನೆಯ ಕಹಳೆ ಮೊಳಗಿಸಲಿವೆ. ಈ ಕಾರ್ಮಿಕ ರೈತ ಸಂಘಟನೆಗಳಿಗೆ …
Read More »ಅಮೆರಿಕ ಜೊತೆ ವ್ಯಾಪಾರ ಒಪ್ಪಂದ| ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ, ನಿಮಗೆ ನಾಚಿಕೆ ಇಲ್ಲ: ಬಿಜೆಪಿ ವಿರುದ್ಧ ರಾಗಾ ವಾಗ್ದಾಳಿ
ನವದೆಹಲಿ: ಭಾರತ ಯಾರಿಂದ ತೈಲ ಖರೀದಿಸಬಹುದು ಅಥವಾ ಖರೀದಿಸಬಾರದು ಎಂದು ಅಮೆರಿಕ ನಿರ್ಧರಿಸುತ್ತಿದೆ. ಅಮೆರಿಕದೊಂದಿಗಿನ ವ್ಯಾಪರ ಒಪ್ಪಂದದ ಮೂಲಕ ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ. ನಿಮಗೆ ನಾಚಿಕೆ ಇಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಅವರು, ಅಮೆರಿಕದೊಂದಿಗೆ ಸಮಾನ ಪ್ರಯೋಜನಗಳನ್ನು ಪಡೆಯದೇ ಒಪ್ಪಂದ ಮಾಡಿಕೊಳ್ಳುವ ಮೂಲಕ ಸರ್ಕಾರ ಸಂಪೂರ್ಣ ಶರಣಾಗಿದೆ ಎಂದು ಆರೋಪಿಸಿದ್ದಾರೆ. ಈ …
Read More »ಫೆ.17 ಕ್ಕೆ ಭಾರತಕ್ಕೆ ಫ್ರೆಂಚ್ ಅಧ್ಯಕ್ಷರ ಭೇಟಿ
ನವದೆಹಲಿ: ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಫೆಬ್ರವರಿ 17 ರಿಂದ 19 ರವರೆಗೆ ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಸಹಕಾರದ ಕುರಿತು ಚರ್ಚಿಸಲಿದ್ದಾರೆ. ವಿದೇಶಾಂಗ ಸಚಿವಾಲಯ ಮಂಗಳವಾರ ಭೇಟಿ ಬಗ್ಗೆ ಪ್ರಕಟಣೆ ಹೊರಡಿಸಿದೆ. ಕಳೆದ ವರ್ಷ ಫೆಬ್ರವರಿಯಲ್ಲಿ ಪ್ರಧಾನಿ ಮೋದಿ ಫ್ರಾನ್ಸ್ಗೆ ಭೇಟಿ ನೀಡಿದ್ದರು. ಅದರ ನಂತರ ಫ್ರೆಂಚ್ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಉಭಯ ನಾಯಕರು ವ್ಯಾಪಕ ಶ್ರೇಣಿಯ ಕ್ಷೇತ್ರಗಳಲ್ಲಿ ಚರ್ಚೆ ನಡೆಸುವ …
Read More »ರೈಲ್ವೆ ಸೇವೆಗಳೆಲ್ಲವೂ ಈಗ ಒಂದೇ ಕಡೆ – `Railone App’ ಬಿಡುಗಡೆ
ನವದೆಹಲಿ: ಭಾರತೀಯ ರೈಲ್ವೆಯು ತನ್ನ ಅಧಿಕೃತ `ಆಲ್-ಇನ್-ಒನ್’ ಸೂಪರ್ ಆ್ಯಪ್ ಆದ `ರೈಲ್ಒನ್’ ಅನ್ನು ಬಿಡುಗಡೆ ಮಾಡಿದೆ. ಈ ಆ್ಯಪ್ ಪ್ರಯಾಣಿಕರಿಗೆ ಹಲವಾರು ರೈಲ್ವೆ ಸೇವೆಗಳನ್ನು ಪಡೆಯಲು ಸುಲಭ ಮತ್ತು ಅನುಕೂಲಕರ ಡಿಜಿಟಲ್ ವೇದಿಕೆಯನ್ನು ಒದಗಿಸುತ್ತದೆ. ಈ ಮೂಲಕ ಹಲವಾರು ಸೌಲಭ್ಯಗಳನ್ನು ಪ್ರಯಾಣಿಕರು ಒಂದೇ ಆ್ಯಪ್ನಡಿಯಲ್ಲಿ ಪಡೆದುಕೊಳ್ಳುತ್ತಾರೆ. ರೈಲ್ವೆ ಪ್ರಯಾಣವನ್ನು ಹೆಚ್ಚು ಸ್ಮಾರ್ಟ್, ವೇಗ ಮತ್ತು ತೊಂದರೆರಹಿತವಾಗಿಸುತ್ತದೆ. ರೈಲ್ಒನ್ ಆ್ಯಪ್ ಮೂಲಕ ಪ್ರಯಾಣಿಕರು ಕಾಯ್ದಿರಿಸಿದ ಟಿಕೆಟ್ಗಳು, ಕಾಯ್ದಿರಿಸದ ಟಿಕೆಟ್ಗಳು, ಪ್ಲಾಟ್ಫಾರ್ಮ್ …
Read More »ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು ನೀಡಿದ ರೋಷನ್ ಬೇಗ್
ನವದೆಹಲಿ: ನಾನು ರಾಜಕೀಯದಿಂದ ನಾಪತ್ತೆಯಾಗಿಲ್ಲ, ಎಲ್ಲರೂ ಸೇರಿ ಕೋರ್ಟ್ ಕೇಸ್ಗಳಲ್ಲಿ ಸಿಲುಕಿಸಿದ್ದರು ನಿಧಾನವಾಗಿ ಅವುಗಳಿಂದ ಆಚೆ ಬರುತ್ತಿದ್ದೇನೆ. ರಾಜಕೀಯ ನನ್ನ ರಕ್ತದಲ್ಲಿದೆ, ವಿದ್ಯಾರ್ಥಿ ಜೀವನದಿಂದ ರಾಜಕೀಯ ಮಾಡುತ್ತಿದ್ದೇನೆ. ಮುಂದೆ ನಾನು ಸಕ್ರೀಯ ರಾಜಕೀಯಕ್ಕೆ ಮರಳುತ್ತೇನೆ ಎಂದು ಮಾಜಿ ಸಚಿವ ರೋಷನ್ ಬೇಗ್ ಹೇಳಿದ್ದಾರೆ. ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿ ಬಳಿಕ ಮಾತಮಾಡಿದ ಅವರು ಅವರು, ನಾನು ಚಿಕ್ಕಪ್ಪ ದೊಡ್ಡಪ್ಪ ಮೂಲಕ ರಾಜಕೀಯಕ್ಕೆ …
Read More »ಗಂಟಲಿನ ಸೋಂಕಿನಿಂದ ಎನ್ಸಿಪಿ ನಾಯಕ ಶರದ್ ಪವಾರ್ ಆಸ್ಪತ್ರೆಗೆ ದಾಖಲು
ಪುಣೆ, ಫೆಬ್ರವರಿ 9: ಎನ್ಸಿಪಿ ನಾಯಕ ಶರದ್ ಪವಾರ್ ಗಂಟಲು ಸಂಬಂಧಿತ ಸಮಸ್ಯೆಗಳು, ಕೆಮ್ಮು ಮತ್ತು ಜ್ವರದ ಕಾರಣದಿಂದ ಇಂದು ಮಧ್ಯಾಹ್ನ ಪುಣೆಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಅವರನ್ನು ಮಹಾರಾಷ್ಟ್ರದ ಬಾರಾಮತಿಯಲ್ಲಿರುವ ಅವರ ನಿವಾಸದಿಂದ ಆಸ್ಪತ್ರೆಗೆ ಸೇರಿಸಲಾಯಿತು. ಬಾರಾಮತಿಯಲ್ಲಿದ್ದಾಗಲೇ ಅವರು ಅಸ್ವಸ್ಥರಾಗಿದ್ದರು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದರೂ ಅವರ ಅನಾರೋಗ್ಯ ಮುಂದುವರಿದ ಕಾರಣದಿಂದ ಚಿಕಿತ್ಸೆಗಾಗಿ ಅವರನ್ನು ಪುಣೆಗೆ ಸ್ಥಳಾಂತರಿಸಲು ವೈದ್ಯರು ಸಲಹೆ ನೀಡಿದರು. ಎನ್ಸಿಪಿ ನಾಯಕ ಶರದ್ …
Read More »ಬಿಗ್ ಡೀಲ್ ಸಕ್ಸಸ್ – ಭಾರತದ ಮೇಲಿನ 25% ಹೆಚ್ಚುವರಿ ಸುಂಕ ಕಡಿತ ಆದೇಶಕ್ಕೆ ಟ್ರಂಪ್ ಸಹಿ
ವಾಷಿಂಗ್ಟನ್: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ಕೊನೆಗೂ ಸಕ್ಸಸ್ ಕಂಡಿದೆ. ರಷ್ಯಾ ತೈಲ ಖರೀದಿ ಹಿನ್ನೆಲೆ ಭಾರತದ ಆಮದು ಸರಕುಗಳ ಮೇಲೆ ವಿಧಿಸಲಾಗಿದ್ದ ಹೆಚ್ಚುವರಿ 25% ಸುಂಕ ಕಡಿತಗೊಳಿಸುವ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ. ಹೌದು. ಅಮೆರಿಕ ಮತ್ತು ಭಾರತದ ನಡುವೆ 500 ಶತಕೋಟಿ ಡಾಲರ್ ಒಪ್ಪಂದವಾಗಿದ್ದು, ಈ ಹಿನ್ನೆಲೆ ಭಾರತದ ಮೇಲಿನ ಮೂಲ ಸುಂಕವನ್ನ 25% ನಿಂದ 15%ಗೆ ಇಳಿಕೆ ಮಾಡಲಾಗಿತ್ತು. …
Read More »ಕೇರಳದ ಮೆಡಿಕಲ್ ಕಾಲೇಜು ಬಳಿ ಸ್ಫೋಟಕ ತುಂಬಿದ 100 ಕ್ಕೂ ಹೆಚ್ಚು ಬಾಕ್ಸ್ ವಶಕ್ಕೆ – ಬೆಚ್ಚಿಬಿದ್ದ ಜನ
ತಿರುವನಂತಪುರಂ: ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಬೆಚ್ಚಿಬೀಳುವ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ವೈದ್ಯಕೀಯ ಕಾಲೇಜು ಬಳಿಯ ವ್ಯಾನ್ನಿಂದ ಜಿಲೆಟಿನ್ ಕಡ್ಡಿಗಳು ಸೇರಿದಂತೆ ಸ್ಫೋಟಕ ತುಂಬಿದ 100ಕ್ಕೂ ಹೆಚ್ಚು ಬಾಕ್ಸ್ಗಳನ್ನ ಪೊಲೀಸರು ಜಪ್ತಿ ಮಾಡಿದ್ದಾರೆ. ಸ್ಫೋಟಕ ತಿಂಬಿದ ಪೆಟ್ಟಿಗೆಗಳನ್ನ ಪಿಕಪ್ ವಾಹನದಲ್ಲಿ ರಹಸ್ಯವಾಗಿ ಸಾಗಿಸಲಾಗುತ್ತಿತ್ತು. ಆದ್ರೆ ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಸಿಕ್ಕಿಬಿದ್ದಿದ್ದು, ಇಡೀ ಕೇರಳದಾದ್ಯಂತ ಕಳವಳಕ್ಕೆ ಕಾರಣವಾಗಿದೆ. ಪಾಲಕ್ಕಾಡ್ ಟೌನ್ ಸೌತ್ ಪೊಲೀಸ್ ಠಾಣೆಯ ಅಧಿಕಾರಿಗಳ ಪ್ರಕಾರ, ಪಾಲಕ್ಕಾಡ್ ವೈದ್ಯಕೀಯ ಕಾಲೇಜು …
Read More »ಕರ್ನಾಟಕ ರಾಜ್ಯಪಾಲರ ಸಹಿ ದುರ್ಬಳಕೆ, ಸುಳ್ಳು ನೇಮಕಾತಿ ಆದೇಶ!
ಬೆಂಗಳೂರು: ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರ ಸಹಿ ನಕಲು ಮಾಡಿ ಖೊಟ್ಟಿ ಲೆಟರ್ಹೆಡ್ ಬಳಸುತ್ತಿದ್ದ ನಕಲಿ ಐಪಿಎಸ್, ಐಎಎಸ್ ಅಧಿಕಾರಿ ಎಚ್.ಎನ್. ಸುಜಯೇಂದ್ರ (45) ಎಂಬಾತನ ವಿರುದ್ಧ ವಿಜಯನಗರ ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರದೀಪ್ ನೀಡಿದ ದೂರಿನನ್ವಯ ಸುಜಯೇಂದ್ರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ರಾಜ್ಯಪಾಲರ ಹೆಸರಿನ ಲೆಟರ್ಹೆಡ್ ಬಳಸಿರುವ ಸುಜಯೇಂದ್ರ, ರಾಜ್ಯಪಾಲರ ಸಹಿ ನಕಲು ಮಾಡಿ ವೆಲ್ಲೂರ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ …
Read More »
Laxmi News 24×7