Breaking News

ರಾಷ್ಟ್ರೀಯ

MRPಗಿಂತ ಅಧಿಕ ಬೆಲೆಗೆ ರೈತರಿಗೆ ಕೆಲ ಆಗ್ರೋ ಏಜೆನ್ಸಿಗಳು ರಸಗೊಬ್ಬರ ಮಾರಾಟ ಮಾಡಿದ ಆರೋಪದ ಮೇಲೆ ಕೃಷಿ ಅಧಿಕಾರಿಗಳು 8 ಆಗ್ರೋ ಏಜೆನ್ಸಿಗಳ ಲೈಸನ್ಸ್​ ರದ್ದು

ಕಲಬುರಗಿ: ರೈತರಿಗೆ ಕೆಲ ಆಗ್ರೋ ಏಜೆನ್ಸಿಗಳು MRPಗಿಂತ ಅಧಿಕ ಬೆಲೆಯಲ್ಲಿ ರಸಗೊಬ್ಬರ ಮಾರಾಟ ಮಾಡುತ್ತಿರುವ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆ ಕೃಷಿ ಅಧಿಕಾರಿಗಳು 8 ಆಗ್ರೋ ಏಜೆನ್ಸಿಗಳ ಲೈಸನ್ಸ್​ ರದ್ದುಪಡಿಸಿದ್ದಾರೆ. “DAP ಗೊಬ್ಬರದ ದರ 1,350 ಇದ್ದರೆ 1,600, 1,800ಕ್ಕೆ ರೂಪಾಯಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಯುರಿಯಾ ರಸಗೊಬ್ಬರ 266 ರೂಪಾಯಿ ಇದ್ದರೆ 900 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ ಎಂದು ರೈತರು ದೂರಿದ್ದರು. ನಿಗದಿತ ಬೆಲೆಗಿಂತ ಹೆಚ್ಚಿನ …

Read More »

ಎಸ್​ಸಿ, ಎಸ್​ಟಿಗೆ ಮಾತ್ರ ಮೀಸಲಿಟ್ಟ ಹಣ ಗ್ಯಾರಂಟಿಗಳಿಗೆ: ಮತ್ತೆ ವಿವಾದ ಮೈಮೇಲೆ ಎಳೆದುಕೊಳ್ಳಲು ಮುಂದಾದ ಸರ್ಕಾರ

ಬೆಂಗಳೂರು, ಜುಲೈ 28: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ (SC ST) ಅಭಿವೃದ್ಧಿಗೆ ಮೀಸಲಿಟ್ಟಿದ್ದ ಅನುದಾನದಿಂದ ಉಚಿತ ಗ್ಯಾರಂಟಿ ಯೋಜನೆಗಳಿಗೆ (Guarantee Schemes) ಹಣ ಬಳಸಿ ತೀವ್ರ ಟೀಕೆಗೆ ಗುರಿಯಾಗಿದ್ದ ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರ ಇದೀಗ ಮತ್ತೊಮ್ಮೆ ವಿವಾದ ಮೈಮೇಲೆ ಎಳೆದುಕೊಂಡಿದೆ. ಎಸ್​ಸಿ, ಎಸ್​ಟಿಗೆ ಮಾತ್ರ ಮೀಸಲಿಟ್ಟ ಎಸ್​ಸಿಎಸ್​​ಪಿ-ಟಿಎಸ್​​ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್ ಮಾಡಲು ಮುಂದಾಗಿದೆ. ಎಸ್​ಸಿಎಸ್​​ಪಿ-ಟಿಎಸ್​​ಪಿ (ಪರಿಶಿಷ್ಟ ಜಾತಿ ಉಪ ಯಜನೆ ಮತ್ತು ಬುಡಕಟ್ಟು ಉಪಯೋಜನೆ) ಯೋಜನೆಯಡಿ 2025-26ರ ಸಾಲಿನಲ್ಲಿ 42,017.51 ಕೋಟಿ ರೂ. …

Read More »

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಬಳಿ ಇರುವ ಕಂಪ್ಲಿ ಸೇತುವೆ ಮೇಲಿನ ಸಂಚಾರ ನಿಷೇಧ ಮಾಡಿ ಲೋಕೋಪಯೋಗಿ ಇಲಾಖೆ ಆದೇಶ ಹೊರಡಿಸಿದೆ.

ಗಂಗಾವತಿ (ಕೊಪ್ಪಳ) : ತುಂಗಭದ್ರಾ ಜಲಾಶಯದಿಂದ ನದಿಗೆ 90 ಸಾವಿರ ಕ್ಯೂಸೆಕ್‌ಗೂ ಅಧಿಕ ಪ್ರಮಾಣದ ನೀರು ಹರಿಸಿದ ಪರಿಣಾಮ, ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಬಳಿ ಇರುವ ಕಂಪ್ಲಿ ಸೇತುವೆ ಮೇಲಿನ ಸಂಚಾರ ನಿಷೇಧ ಮಾಡಿ ಲೋಕೋಪಯೋಗಿ ಇಲಾಖೆ ಆದೇಶ ಹೊರಡಿಸಿದೆ. ಲೋಕೋಪಯೋಗಿ ಇಲಾಖೆಯ ಗಂಗಾವತಿ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಿಶ್ವನಾಥ್ ಈ ಆದೇಶ ಹೊರಡಿಸಿದ್ದು, ನದಿಯಲ್ಲಿ ಪ್ರವಾಹದ ಸನ್ನಿವೇಶ ನಿರ್ಮಾಣವಾಗಿದೆ. ಹೀಗಾಗಿ ಸೇತುವೆ ಮೇಲಿನ ವಾಹನ ಮತ್ತು ಜನ ಸಂಚಾರ …

Read More »

ಬೆಂಗಳೂರು: ಗಸ್ತಿನಲ್ಲಿದ್ದ ಕಾನ್ಸ್‌ಟೇಬಲ್ ಮೇಲೆ ಡ್ಯಾಗರ್‌ನಿಂದ ಹಲ್ಲೆ; ಅಪ್ರಾಪ್ತ ಸಹಿತ ನಾಲ್ವರ ಬಂಧನ

ಬೆಂಗಳೂರು: ಪೊಲೀಸ್​​​ ಹೆಡ್​​ ಕಾನ್ಸ್‌ಟೇಬಲ್​​ ಒಬ್ಬರ ಮೇಲೆ ಕಿಡಿಗೇಡಿಗಳು ಡ್ಯಾಗರ್‌ನಿಂದ ಹಲ್ಲೆಗೈದಿರುವ ಘಟನೆ ಚಾಮರಾಜಪೇಟೆಯ ವಾಲ್ಮೀಕಿನಗರದ 2ನೇ ಮುಖ್ಯರಸ್ತೆಯಲ್ಲಿ ನಡೆದಿದೆ. ಜುಲೈ 26ರಂದು ರಾತ್ರಿ 9:30ರ ಸುಮಾರಿಗೆ ಘಟನೆ ನಡೆದಿದೆ. ಹೆಡ್ ಕಾನ್ಸ್‌ಟೇಬಲ್ ಸಂತೋಷ್​ ಅವರ ಎಡಗೈಗೆ ಗಂಭೀರ ಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಚಾಮರಾಜಪೇಟೆ ಠಾಣೆ ಪೊಲೀಸರು ತಬ್ರೇಜ್, ಅಬ್ರೇಜ್, ಸಲ್ಮಾನ್ ಪಾಶಾ ಹಾಗೂ ಓರ್ವ ಅಪ್ರಾಪ್ತನನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಮದ್ಯದ ನಶೆಯಲ್ಲಿ ಹಲ್ಲೆ: …

Read More »

ಕಮಲಾಪುರದ ಮೃಗಾಲಯದಲ್ಲಿ ಹೆಣ್ಣು ಹುಲಿಯೊಂದು ಸಾವನ್ನಪ್ಪಿದೆ. ಇನ್ನು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಕಾಡಾನೆ ದಾಳಿಗೆ ಯುವಕನೋರ್ವ ಮೃತಪಟ್ಟಿದ್ದಾನೆ.

ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದಲ್ಲಿನ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯದಲ್ಲಿನ ‘ಸಿಂಧು’ ಎಂಬ ಹೆಸರಿನ ಹೆಣ್ಣು ಹುಲಿ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದೆ. ಈ ಹುಲಿಗೆ ಅಂದಾಜು 17 ರಿಂದ 18 ವರ್ಷ ವಯಸ್ಸಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ವಯೋಸಹಜವಾಗಿ ಮೃತಪಟ್ಟಿರುತ್ತದೆ ಎಂದು ಉಪಸಂರಕ್ಷಣಾಧಿಕಾರಿ ಹಾಗೂ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ರಾಜೇಶ್ ನಾಯ್ಕ ತಿಳಿಸಿದ್ದಾರೆ.ಎರಡು ತಿಂಗಳಲ್ಲಿ ಎರಡು ಹುಲಿ ಸಾವು: ಕಳೆದ ತಿಂಗಳು ಜೂನ್​ನಲ್ಲಿ ಇದೇ ಮೃಗಾಲಯದಲ್ಲಿ ದೇವಿ ಹೆಸರಿನ ಹೆಣ್ಣು ಹುಲಿ ವಯೋಸಹಜ …

Read More »

ನಾಲ್ವಡಿ ಒಡೆಯರ್ ಅವರೊಂದಿಗೆ ಸಿದ್ದರಾಮಯ್ಯನವರ ಹೋಲಿಕೆ ಕೆಲಸದ ವಿಚಾರವಾಗಿಯೇ ವಿನಃ ವ್ಯಕ್ತಿಗತವಲ್ಲ: ಸಚಿವ ಮಹದೇವಪ್ಪ

ನಾಲ್ವಡಿ ಒಡೆಯರ್ ಅವರೊಂದಿಗೆ ಸಿದ್ದರಾಮಯ್ಯನವರ ಹೋಲಿಕೆ ಕೆಲಸದ ವಿಚಾರವಾಗಿಯೇ ವಿನಃ ವ್ಯಕ್ತಿಗತವಲ್ಲ: ಸಚಿವ ಮಹದೇವಪ್ಪ ದಾವಣಗೆರೆ/ಹಾವೇರಿ: “ನಾಲ್ವಡಿ ಕೃಷ್ಣರಾಜ ಒಡೆಯರ್​ ಅವರು ಜನಪರ, ಸಾಮಾಜಿಕ ನ್ಯಾಯದ ಪರವಾಗಿ ಮಹತ್ವದ ಸಮ ಸಮಾಜವನ್ನು ನಿರ್ಮಾಣ ಮಾಡಿದವರು. ಒಬ್ಬ ವ್ಯಕ್ತಿಯನ್ನು ಮತ್ತೊಬ್ಬ ವ್ಯಕ್ತಿ ಜೊತೆಗೆ ಹೋಲಿಕೆ ಮಾಡುವುದು ಸರಿಯಲ್ಲ, ಅವರು ಅವರಿಗೆ ಸಾಟಿ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರೊಂದಿಗೆ ಸಿಎಂ ಸಿದ್ದರಾಮಯ್ಯನವರ ಹೋಲಿಕೆ ಕೆಲಸದ ವಿಚಾರವಾಗಿಯೇ ವಿನಃ ವ್ಯಕ್ತಿಗತವಲ್ಲ. ಕಾಮಾಲೆ ಕಣ್ಣಿಂದ ನೋಡಿದ್ದೆಲ್ಲ ಹಳದಿ, …

Read More »

ಉತ್ತರಕನ್ನಡದಲ್ಲಿ ಭಾರಿ ಮಳೆ

ಕಾರವಾರ (ಉತ್ತರಕನ್ನಡ): ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಭಾರಿ ಗಾಳಿ ಸಹಿತ ಮಳೆಗೆ ಜನಜೀವನ ತತ್ತರಗೊಂಡಿದೆ. ಜಿಲ್ಲೆಯ ಕೆಲ ನದಿ ತೀರದ ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ಮುಂದುವರೆದಿರುವುದು ಒಂದೆಡೆಯಾದರೆ, ಹಲವೆಡೆ ಹೆದ್ದಾರಿಗಳಲ್ಲಿ ಗುಡ್ಡ ಕುಸಿತವಾಗುತ್ತಿರುವುದು ಇನ್ನಷ್ಟು ಆತಂಕ ಮೂಡಿಸಿದೆ. ಜಿಲ್ಲೆಯಲ್ಲಿ ಕಳೆದ ಒಂದು ವಾರದ ಅವಧಿಯಲ್ಲಿ 312 ಮಿ.ಮೀ ಮಳೆಯಾಗಿದೆ. ಅದರಲ್ಲಿಯೂ ಘಟ್ಟದ ಮೇಲ್ಭಾಗದ ಸಿದ್ದಾಪುರ ತಾಲೂಕು ಸೇರಿದಂತೆ ಕರಾವಳಿ ತಾಲೂಕುಗಳಲ್ಲಿ 400 ರಿಂದ 600 ಮಿ.ಮೀ.ವರೆಗೆ ಮಳೆ …

Read More »

ಕಲಬುರಗಿ: ಮಳೆ ಅಬ್ಬರಕ್ಕೆ ಮನೆಗಳು ಕುಸಿತ, ಜಾನುವಾರುಗಳು ನೀರುಪಾಲು

ಕಲಬುರಗಿ: ಜಿಲ್ಲೆಯಾದ್ಯಂತ ಕಳೆದರೆಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಹಳ್ಳಗಳು ತುಂಬಿ ಹರಿಯುತ್ತಿವೆ. ಹಲವಡೆ ಮನೆಗಳ ಗೋಡೆ ಕುಸಿದಿದ್ದು, ಜಾನುವಾರುಗಳು ನೀರಿನಲ್ಲಿ ಕೊಚ್ಚಿಹೋದ ಘಟನೆಗಳು ಸಂಭವಿಸಿವೆ. ಕಮಲಾಪುರ ತಾಲೂಕಿನ ಕುದಮೂಡ ಗ್ರಾಮದ ಸೇತುವೆ ಮೇಲೆ ಹಳ್ಳದ ನೀರಿನ ರಭಸಕ್ಕೆ ಸಿಲುಕಿ ಜಾನುವಾರುಗಳು ಕೊಚ್ಚಿಕೊಂಡು ಹೋಗಿವೆ. ಗ್ರಾಮದ ರೈತರು ತಮ್ಮ ಜಾನುವಾರುಗಳನ್ನು ಜಮೀನುಗಳಿಗೆ ಕರೆದೊಯ್ಯುವಾಗ ಘಟನೆ ನಡೆದಿದೆ. ತಮ್ಮ ಕಣ್ಣೆದುರಲ್ಲೇ ತಾವು ಸಾಕಿ, ಸಲುಹಿದ ಜಾನುವಾರುಗಳು ಕೊಚ್ಚಿಕೊಂಡು ಹೋಗುತ್ತಿರುವಾಗ ಕಾಪಾಡಲು ಸಾಧ್ಯವಾಗದೆ ರೈತರು …

Read More »

ಶ್ರೀ ಶಿವಯೋಗಿ ಟೇಕ್ವಾಂಡೋ ಸ್ಪೋರ್ಟ್ ಅಕಾಡೆಮಿ ಘಟಪ್ರಭಾ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಸತ್ಕಾರ

ಶ್ರೀ ಶಿವಯೋಗಿ ಟೇಕ್ವಾಂಡೋ ಸ್ಪೋರ್ಟ್ ಅಕಾಡೆಮಿ ಘಟಪ್ರಭಾ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಸತ್ಕಾರ ಬೆಂಗಳೂರು : ಶ್ರೀ ಶಿವಯೋಗಿ ಟೇಕ್ವಾಂಡೋ ಸ್ಪೋರ್ಟ್ ಅಕಾಡೆಮಿ ಘಟಪ್ರಭಾ ವಿದ್ಯಾರ್ಥಿಗಳು 42 ರಾಜ್ಯ ಟೇಕ್ವಾಂಡೋ ಚಾಂಪಿಯನ್ಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಸತ್ಕಾರ ಮಾಡಿದರು.   ಚಿನ್ನದ ಪದಕ ವಿಜೇತ ವಿದ್ಯಾರ್ಥಿಗಳು ರಂಗನಾಥ ಸ ನಾವಿ, ಅನುಷ್ಕಾ ಮೇತ್ರಿ, ಉತ್ತಮ ಕಾಟೋಜಿ, ಸತೀಶ್ ಮೇತ್ರಿ, ಸುಪ್ರೀತ ನಾಯಕ, ಸುಶ್ಮಿತಾ ಮೇತ್ರಿ, ಶಿವಂ ಕುಲಗೋಡ, …

Read More »

ಸಂಗನಕೇರಿ ಮತ್ತು ಸುತ್ತಮುತ್ತಲಿನ ಬಡ ಜನತೆಗೆ ಉತ್ತಮವಾದ ಆರೋಗ್ಯ ಸೇವೆಯನ್ನು ದೊರಕಿಸಿಕೊಡಲು ಸಂಗನಕೇರಿ ಪಟ್ಟಣದಲ್ಲಿ ಸುಸಜ್ಜಿತವಾದ ಸರ್ಕಾರಿ ಆಸ್ಪತ್ರೆಯನ್ನು ನಿರ್ಮಿಸಿಕೊಡಲಾಗುತ್ತಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು

ಮೂಡಲಗಿ- ಸಂಗನಕೇರಿ ಮತ್ತು ಸುತ್ತಮುತ್ತಲಿನ ಬಡ ಜನತೆಗೆ ಉತ್ತಮವಾದ ಆರೋಗ್ಯ ಸೇವೆಯನ್ನು ದೊರಕಿಸಿಕೊಡಲು ಸಂಗನಕೇರಿ ಪಟ್ಟಣದಲ್ಲಿ ಸುಸಜ್ಜಿತವಾದ ಸರ್ಕಾರಿ ಆಸ್ಪತ್ರೆಯನ್ನು ನಿರ್ಮಿಸಿಕೊಡಲಾಗುತ್ತಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದರು. ಶನಿವಾರದಂದು ತಾಲ್ಲೂಕಿನ ಅರಭಾವಿ ಪಟ್ಟಣ ಪಂಚಾಯತ ವ್ಯಾಪ್ತಿಯ ಸಂಗನಕೇರಿ ಪಟ್ಟಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಸರ್ಕಾರಿ ಆಸ್ಪತ್ರೆಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು. …

Read More »