Breaking News

ರಾಷ್ಟ್ರೀಯ

ಬೆಳಗಾವಿ : ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ

ಬೆಳಗಾವಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ರೈತರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.   ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ನೂತನ ಕೃಷಿ ಕಾಯ್ದೆ ಗಳು ರೈತರಿಗೆ ಮಾರಕವಾಗಿವೆ. ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ …

Read More »

ಭೀಕರ ಅಪಘಾತ : 18 ವರ್ಷದ ಯುವತಿ ಸೇರಿ ಮೂವರು ಸಾವು

ಕಲಬುರಗಿ : ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ಚಿತ್ತಾಪುರ ತಾಲ್ಲೂಕಿನ ರಾವೂರ್ ಗ್ರಾಮದ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ. ಭೀಮಾಶಂಕರ್ ಪ್ಯಾಟಿ, ಅಕ್ಬರ್ ಪಟೇಲ್ ಮತ್ತು 18 ವರ್ಷದ ಯುವತಿ ಜವರಾಯನ ಅಟ್ಟಹಾಸಕ್ಕೆ ಕೊನೆಯುಸಿರೆಳೆದಿದ್ದಾರೆ. ಈ ಮೂವರು ಒಂದೆ ದ್ವಿ ಚಕ್ರದ ಮೇಲೆ ಹೊಗುತ್ತಿರುವ ವೇಳೆ ದುರ್ಘಟನೆ ನಡೆದಿದೆ. ಮೃತದೇಹಗಳು ರಕ್ತಸಿಕ್ತವಾಗಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಬೈಕ್​ ನಜ್ಜುಗುಜ್ಜಾಗಿದೆ. ಈ …

Read More »

ಸಂಪುಟ ವಿಸ್ತರಣೆಯೋ,ಪುನರ್ ರಚನೆಯೋ ಇಂದೇ ಗೊತ್ತಾಗತ್ತೆ: ಸಿಎಂ ಸಚಿವ ಆಕಾಂಕ್ಷಿಗಳಲ್ಲಿ ಹೆಚ್ಚಿದ ಟೆನ್ಸನ್!!

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಏನೆಂಬುದು ಇಂದೇ ಗೊತ್ತಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದು, ಆ ಮೂಲಕ ಸಚಿವರು ಹಾಗೂ ಆಕಾಂಕ್ಷಿಗಳಲ್ಲಿ ಎದೆಬಡಿತ ಹೆಚ್ಚಿಸಿದ್ದಾರೆ. ಮಾಜಿ ಪ್ರಧಾನಿ ಲಾಲ್ ಬಹಾದುರ್ ಶಾಸ್ತ್ರಿ ಅವರ‌ 54ನೇ ಪುಣ್ಯತಿಥಿ ನಿಮಿತ್ತ ವಿಧಾನಸೌಧದ ಬಳಿ ಅವರ ಭಾವಚಿತ್ರಕ್ಕೆ ಸೋಮವಾರ ಮಾಲಾರ್ಪಣೆ ಮಾಡಿದ ಬಳಿಕ ಸಿಎಂ ಮಾಧ್ಯಮದವರೊಂದಿಗೆ ಮಾತನಾಡಿದರು. ಖಾಲಿಯಿರುವ 7 ಸ್ಥಾನಗಳನ್ನು ತುಂಬುವುದು ಖಚಿತ. ಬುಧವಾರ ಇಲ್ಲವೇ ಗುರುವಾರ ನೂತನ …

Read More »

ಶಾಸಕ ಎಂ.ಸಿ. ಮನಗೂಳಿ ಏರ್ ಲಿಫ್ಟ್ ಮೂಲಕ ಆಸ್ಪತ್ರೆಗೆ ದಾಖಲು

ವಿಜಯಪುರ: ಅನಾರೋಗ್ಯದಿಂದ ಬಳಲುತ್ತಿರುವ ಸಿಂದಗಿ ಶಾಸಕ ಎಂ.ಸಿ. ಮನಗೂಳಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ದಿನಗಳ ಹಿಂದೆ ಕಲಬುರಗಿಯಿಂದ ಏರ್​ಲಿಫ್ಟ್ ಮೂಲಕ ಶಾಸಕರನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದ್ದು, ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಫ ಕಟ್ಟಿದ ಹಿನ್ನೆಲೆಯಲ್ಲಿ ಶಾಸಕ ಮನಗೂಳಿ ತೀವ್ರ ಅಸ್ವಸ್ಥರಾಗಿದ್ದರು. ಸದ್ಯ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More »

ಬೆಳಗಾವಿ ಕೋಟೆ ಕೆರೆಯಲ್ಲಿ ಅಪರಿಚಿತ ಶವ ಪತ್ತೆ

ಬೆಳಗಾವಿ : ಇಲ್ಲಿನ ಕೋಟೆ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಇಂದು ಮಧ್ಯಾಹ್ನ ಪತ್ತೆಯಾಗಿದ್ದು, ಅಲ್ಲಿಗೆ ಬರುವ ವಾಯು ವಿಹಾರಿಗಳಿಗೆ ಆತಂಕ ಮನೆ ಮಾಡಿದೆ.   ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಾರ್ಕೇಟ್ ಠಾಣೆ ಪೊಲೀಸರು ಭೇಟಿ ನೀಡಿ, ಶವವನ್ನು ಕೆರೆಯಿಂದ ಹೊರಗೆ ತೆಗೆಯಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ತನಿಖೆಯ ಬಳಿಕವೇ ಸತ್ಯ ತಿಳಿಯಬೇಕಾಗಿದೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ಬೆಳಗಾವಿಯ ಮುಂದಿನ ಪಾಲಿಕೆ ಮೇಯರ್ ಬಿಜೆಪಿಯವರಾಗಿರ್ತಾರೆ: ಸಚಿವ ಭೈರತಿ ಬಸವರಾಜ್

ಬೆಳಗಾವಿ: ಮುಂದಿನ ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮಾಡುತ್ತೇನೆ ಎಂದು ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ. ನಗರದಲ್ಲಿ ಇಂದು ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲ್ಲಿಸಿಕೊಂಡು ಬರುತ್ತೇವೆ ಎಂದರು. ಸಂಕ್ರಾತಿ ಬಳಿಕ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಹೇಳಿದ್ದಾರೆ. ಸಂಪುಟ ವಿಸ್ತರಣೆ ಸಿಎಂ ಯಡಿಯೂರಪ್ಪ ಅವರ ವಿವೇಚನೆಗೆ ಬಿಟ್ಟದ್ದು, ಈ ಬಗ್ಗೆ …

Read More »

ಸಿದ್ದು, ಡಿಕೆಶಿ ಅಷ್ಟೇ ಅಲ್ಲ, ಕಾಂಗ್ರೆಸ್ ನಲ್ಲಿ ಹಲವು ಸಿಎಂ ಅಭ್ಯರ್ಥಿಗಳಿದ್ದಾರೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ 2023 ಕ್ಕೆ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ಬರಲಿದೆ!!

ಹುಬ್ಬಳ್ಳಿ: 2023 ಕ್ಕೆ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಅವಿರತವಾಗಿ ಶ್ರಮವಹಿಸುತ್ತಿರುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ವೈಫಲ್ಯ, ಭ್ರಷ್ಟಾಚಾರ, ದುರಾಡಳಿತ ಹೀಗೆ ಸಾಕಷ್ಟು ವಿಷಯಗಳಿವೆ. ಅವುಗಳನ್ನು ಬಗ್ಗೆ ಜನರ ಗಮನೆ ಸೆಳೆಯುತ್ತೇವೆ. ಯಳಮಟ್ಟದಿಂದ ಪಕ್ಷ ಸಂಘಟನೆ ಮಾಡಿ ಮತ್ತೆ ಅಧಿಕಾರದ ಗದ್ದುಗೆ ಏರುತ್ತೇವೆ ಎಂದು ಹೇಳಿದರು. ಕಾಂಗ್ರೆಸ್ ಮುಂದಿನ ಸಿಎಂ ಅಭ್ಯರ್ಥಿ ಚರ್ಚೆ ಸದ್ಯ ಅಪ್ರಸ್ತುವಾಗಿದೆ …

Read More »

ಗೋಕಾಕ ಅಭಿವೃದ್ದಿಗೆ 100 ಕೋಟಿ ಪ್ರಸ್ತಾವಣೆ, ಶೀಘ್ರ ಅನುದಾನ ಸಿಗುವ ನಿರೀಕ್ಷೆಯಿದೆ : ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಿ.ಸಿ. ರಸ್ತೆ, ಚರಂಡಿ, ಪ್ರೀಕಾಸ್ಟ್ ಪೇವರ್ಸ್ ರಸ್ತೆ, ತೆರದ ಭಾಂವಿ, ಸಮುದಾಯ ಭವನ ಹಾಗೂ ಪಿಕ್-ಅಪ್ ನಿರ್ಮಾಣ ಕಾಮಗಾರಿಗಳನ್ನು ಆರಂಭಿಸಲಾಗಿದೆ ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೆಶ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. 2019-20ನೇ ಸಾಲಿನ ವಿಶೇಷ ಘಟಕ (ಎಸ್‍ಸಿಪಿ) ಹಾಗೂ ಗಿರಿಜನ ಉಪಯೋಜನೆ (ಟಿಎಸ್‍ಪಿ) ಯೋಜನೆಗಳ ಅಡಿ 30 ಕೋಟಿ ರೂ. ಮತ್ತು ಅದೇ ಅವಧಿಯ ಉಳಿಕೆ ಅನುದಾನದಲ್ಲಿ 31.05 ಕೋಟಿ …

Read More »

ಬಿಗ್ ಬಾಸ್-8 ಸೀಸನ್ ಯಾವಾಗ ಪ್ರಾರಂಭ ಗೊತ್ತಾ..?

ಸಿನಿಮಾ ಡೆಸ್ಕ್ : ಕನ್ನಡ ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಯಶಸ್ವಿಯಾಗಿ 7 ಸೀಸನ್ ಗಳನ್ನು ಮುಗಿಸಿ ಇದೀಗ 8 ನೇ ಸೀಸನ್ ಮೂಲಕ ಮತ್ತೆ ಕಿರುತೆರೆ ಪ್ರೇಕ್ಷಕರನ್ನು ರಂಜಿಸಲು ಬರುತ್ತಿದೆ. ಬಿಗ್ ಬಾಸ್ ನ ಮೊದಲ ಸೀಸನ್ ನಿಂದಲೂ ನಿರೂಪಣೆ ಜವಾಬ್ದಾರಿ ಹೊತ್ತ ಕಿಚ್ಚ ಸುದೀಪ್ ಯಶಸ್ವಿಯಾಗಿ ಏಳು ಸೀಸನ್ ಪೂರೈಸಿದ್ದಾರೆ. ಇದೀಗ ಮತ್ತೆ ಸೀಸನ್ 8 ನ್ನು ಹೋಸ್ಟ್ ಮಾಡಲು ಕಿಚ್ಚ ಬರುತ್ತಿದ್ದಾರೆ. ಇನ್ನೂ, …

Read More »

ಕೊರೋನಾ ದೃಢ ಗೋಕಾಕದಲ್ಲಿ ಎರಡು ಶಾಲೆಗಳು ಬಂದ್

  ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಮೂರು ಜನ ಶಿಕ್ಷಕರಿಗೆ ಕೊರಾನಾ ದೃಡವಾದ ಹಿನ್ನೆಲೆಯಲ್ಲಿ ಗೋಕಾಕ ತಾಲೂಕಿನ ಅದರಲ್ಲಿ ಶಾಲೆಗಳಾದ ಕನಸಗೇರಿ ಪ್ರಾಥಮಿಕ ಶಿಕ್ಷಕ ಹಾಗೂ ಹೀರೆನಂದಿ ಪ್ರೌಡಶಾಲೆಯ ಒರ್ವ ಶಿಕ್ಷಕನಿಗೆ ಕೊರಾನಾ ಪೊಸಿಟೀವ್ ದೃಡವಾದ ಹಿನ್ನೆಲೆ ಇಬ್ಬರು ಶಿಕ್ಷಕರು ಸೆಲ್ಪ್ ಹೋಮ್ ಕ್ವಾರೈಂಟೈನ್ ಆಗಿದ್ದು, ಈ ಗ್ರಾಮದ ಎರಡು ಶಾಲೆಗಳನ್ನು ಮೂರು ದಿನ ಬಂದ್ ಮಾಡಿ ಪ್ರಾರಂಭ ಮಾಡುವದಕ್ಕಿಂತ ಮುಂಚೆ ಸ್ಥಳಿಯ ಗ್ರಾಮ ಪಂಚಾಯತಿಯವರಿಂದ ಆ ಶಾಲೆಗಳಿಗೆ ಸಾನಿಟೈಜರ ಮಾಡಿಸಿ …

Read More »