Breaking News

ರಾಷ್ಟ್ರೀಯ

ಫೆ. 10 ರಿಂದ ಬೆಂಗಳೂರಿನಲ್ಲಿ ‘ಏರೋ ಇಂಡಿಯಾ-2025’ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ

ಬೆಂಗಳೂರು: ಬೆಂಗಳೂರಿನ ಯಲಹಂಕ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ‘ಏರೋ ಇಂಡಿಯಾ- 2025’ ಫೆಬ್ರವರಿ 10 ರಿಂದ 14ರ ವರೆಗೆ 5 ದಿನಗಳ ಕಾಲ ನಡೆಯಲಿದೆ. ರಕ್ಷಣಾ ಇಲಾಖೆ, ಭಾರತೀಯ ವಾಯು ಸೇನೆ, ಹೆಚ್.ಎ.ಎಲ್., ಡಿ.ಆರ್.ಡಿ.ಒ., ನಾಗರಿಕ ವಿಮಾನಯಾನ ಸಚಿವಾಲಯಗಳು ಜಂಟಿಯಾಗಿ ಆಯೋಜಿಸುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ದೇಶ ವಿದೇಶಗಳ ವೈಮಾನಿಕ ಕ್ಷೇತ್ರದ ನೂರಾರು ಕಂಪನಿಗಳು ಭಾಗವಹಿಸಲಿವೆ. ಯುದ್ಧವಿಮಾನ, …

Read More »

ಆಗುವುದಾಗಿ ಪುಸಲಾಯಿಸಿ ಬಾಲಕಿ ಮೇಲೆ ಅ*ತ್ಯಾಚಾರ: 20 ವರ್ಷ ಜೈಲು ಶಿಕ್ಷೆ

ಬೆಳಗಾವಿ: ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ಪುಸಲಾಯಿಸಿ ಬಾಡಿಗೆ ಮನೆಯಲ್ಲಿ ಗಂಡ-ಹೆಂಡತಿ ಎಂದು ಹೇಳಿ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಇಲ್ಲಿನ ಜಿಲ್ಲಾ ಪೋಕ್ಸೋ ನ್ಯಾಯಾಲಯ ಗುರುವಾರ ಮಹತ್ವದ ತೀರ್ಪು ನೀಡಿದೆ.   ಚಿಕ್ಕೋಡಿ ತಾಲೂಕಿನ ಕುರ್ಲಿ ಗ್ರಾಮದ ಶ್ರೀಸಂಗಮ ಕೃಷ್ಣಾತ್ ನಿಕಾಡೆ(24) ಎಂಬ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಹೆಚ್ಚುವರಿ ಜಿಲ್ಲಾ …

Read More »

ಕಿವುಡ ಮಕ್ಕಳ ಶಾಲೆಯಲ್ಲಿ ಗಾಂಧಿ ಜಯಂತಿ

ಬೆಳಗಾವಿ: ಇಲ್ಲಿನ ಆಜಮ್‌ ನಗರದ ಸರ್ಕಾರಿ ಕಿವುಡ ಮಕ್ಕಳ ಶಾಲೆಯಲ್ಲಿ ಬುಧವಾರ ಗಾಂಧಿ ಜಯಂತಿಯನ್ನು ವಿಶೇಷವಾಗಿ ಆಚರಿಸಲಾಯಿತು. ಮಾತು ಬಾರದ ಹಾಗೂ ಕಿವಿ ಕೇಳದ ಮಕ್ಕಳೇ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಸಾಧನೆಗಳನ್ನು ಸಂಜ್ಞೆಯ ಬಿತ್ತರಿಸಿದರು. ವಿದ್ಯಾರ್ಥಿಗಳೇ ಸಂಪೂರ್ಣ ಕಾರ್ಯಕ್ರಮವನ್ನು ನಿರ್ವಹಿಸಿದರು. ಸಂಜ್ಞೆಯ ಮೂಲಕವೇ ಭಾಷಣ ಮಾಡಿದರು. ನಿರೂಪಣೆ, ಸ್ವಾಗತ, ಮಾಲಾರ್ಪಣೆ, ವಂದನಾರ್ಪಣೆ ಎಲ್ಲವೂ ವಿದ್ಯಾರ್ಥಿನಿಯರೇ ಮಾಡಿ ಗಮನ ಸೆಳೆದರು. ಇದಕ್ಕೂ ಮುನ್ನ ಶ್ರಮದಾನದ ಮಾಡಿದ ಶಿಕ್ಷಕಿ …

Read More »

ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲ್ಲೂಕಿನ ಗ್ರಾಮವೊಂದರ ಬಾಲಕಿಯನ್ನು ಅಪಹರಿಸಿ, ಪದೇಪದೇ ಅತ್ಯಾಚಾರ ಎಸಗಿದ ಅಪರಾಧಿಗೆ ಇಲ್ಲಿನ ವಿಶೇಷ ಪೋಕ್ಸೊ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ. ಸವದತ್ತಿ ತಾಲ್ಲೂಕಿನ ಬಸರಗಿ ಗ್ರಾಮದ ಹನುಮಂತ ಪುಂಡಲೀಕ ಚಿ‍ಪ್ಪಲಕಟ್ಟಿ (21) ಶಿಕ್ಷೆಗೆ ಒಳಗಾದವ. ಬಾಲಕಿಯೊಬ್ಬಳನ್ನು ಪುಸಲಾಯಿಸಿ, ಅಪಹರಣ ಮಾಡಿಕೊಂಡು ಹೋಗಿ ಮೇಲಿಂದ ಮೇಲೆ ಅತ್ಯಾಚಾರ ಎಸಗಿದ್ದ. 2019ರ ನವಂಬರ್‌ 7ರಂದು …

Read More »

ಇಂದು ಸಂಭವಿಸಲಿದೆ ಮತ್ತೊಂದು ಖಗೋಳ ವಿಸ್ಮಯ : ಎಲ್ಲೆಲ್ಲೆ ಗೋಚರಿಸಲಿದೆ `ಸೂರ್ಯಗ್ರಹಣ’?

ನವದೆಹಲಿ : ಹಿಂದೂ ಧರ್ಮದಲ್ಲಿ ಜ್ಯೋತಿಷ್ಯದ ಪ್ರಕಾರ, ಸೂರ್ಯಗ್ರಹಣಕ್ಕೆ ವಿಶೇಷ ಮಹತ್ವವಿದೆ. ಸೂರ್ಯಗ್ರಹಣವು ಖಗೋಳ ವಿದ್ಯಮಾನವಾಗಿದೆ. ಚಂದ್ರನು ಭೂಮಿ ಮತ್ತು ಸೂರ್ಯನ ನಡುವೆ ಹಾದುಹೋದಾಗ ಸೂರ್ಯ ಗ್ರಹಣ ಸಂಭವಿಸುತ್ತದೆ. ಈ ಸಮಯದಲ್ಲಿ ಭೂಮಿಯ ಮೇಲಿನ ಸೂರ್ಯನ ಬೆಳಕು ಕಡಿಮೆಯಾಗುತ್ತದೆ ಅಥವಾ ಸಂಪೂರ್ಣವಾಗಿ ಕಣ್ಮರೆಯಾಗುತ್ತದೆ. ಈ ವಿದ್ಯಮಾನವನ್ನು ಸೂರ್ಯ ಗ್ರಹಣ ಎಂದು ಕರೆಯಲಾಗುತ್ತದೆ. ಸಾಮಾನ್ಯವಾಗಿ, ಸೂರ್ಯಗ್ರಹಣವು ಅಮಾವಾಸ್ಯೆಯ ದಿನದಂದು ಸಂಭವಿಸುತ್ತದೆ. 2024 ರಲ್ಲಿ ಎರಡು ಸೂರ್ಯ ಗ್ರಹಣಗಳು ಮತ್ತು ಎರಡು ಚಂದ್ರ …

Read More »

ಮರ್ಡರ್ ಕೇಸ್ ದಾಖಲಿಸಿಕೊಂಡು ತನಿಖೆ ಮಾಡಲು ಒತ್ತಾಯ…!!

ಮರ್ಡರ್ ಕೇಸ್ ದಾಖಲಿಸಿಕೊಂಡು ತನಿಖೆ ಮಾಡಲು ಒತ್ತಾಯ…!! ಇವತ್ತು ಮಾನ್ಯ ಪೊಲೀಸ್ ಆಯುಕ್ತರು ಬೆಳಗಾವಿ ಇವರನ್ನು ಭೇಟಿ ಮಾಡಿದ ನೀಲಜಿ, ಶಿಂದೋಳ್ಳಿ ಗ್ರಾಮದ ಹಿರಿಯರು, ಇಲ್ಲಿಯ ರಹವಾಸಿಯಾದ ಶ್ರೀಮತಿ ಭಾರತಿ ಕಾನಪ್ಪ ಪೂಜಾರಿ ಎಂಬ ಮಹಿಳೆ 4 ದಿನಗಳ ಹಿಂದೆ ಗ್ರಾಮದ ಶ್ರೀ ಮಸಣವ್ವ ದೇವಸ್ಥಾನದಲ್ಲಿ ಕಳ್ಳರು ಕಳತನದಲ್ಲಿ ತೊಡಗಿದ್ದಾಗ ಮಹಿಳೆ ನೋಡಿದ್ದಾಳೆ ಎಂಬ ಕಾರಣಕ್ಕೆ ಕಳ್ಳರು ಮಹಿಳೆಯನ್ನು ಬಾವಿಗೆ ನೂಕಿ ಕೊಲೆ ಮಾಡಿರುವ ಶಂಕೆ ಇದ್ದು.ಈ ಪ್ರಕರಣವನ್ನು ಕೊಲೆ …

Read More »

ಸಿದ್ದರಾಮಯ್ಯ ಜೊತೆ ಉಂಡು ತಿಂದವರೇ ಬೆನ್ನಿಗೆ ಚೂರಿ ಹಾಕಿದ್ರು : ಸಿಎಂ ಬಾಲ್ಯ ಸ್ನೇಹಿತ ಕರಿಯಪ್ಪ ಹೇಳಿಕೆ

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ, ಮುಡಾಗೆ 14 ನಿವೇಶನಗಳನ್ನ ಹಿಂತಿರುಗಿಸಿದ್ದು, ಈ ಒಂದು ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಬಾಲ್ಯ ಸ್ನೇಹಿತ ಕರಿಯಪ್ಪ ಮಾತನಾಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬಾರದು ಎಂದು ಸಿದ್ದರಾಮಯ್ಯ ಬಾಲ್ಯ ಸ್ನೇಹಿತ ಕರಿಯಪ್ಪ ಹೇಳಿಕೆ ನೀಡಿದ್ದು, ಸಿದ್ದರಾಮಯ್ಯ ಎಲ್ಲಾ ಭಾಗ್ಯಗಳನ್ನು ಕೊಟ್ಟವರು. 40 ವರ್ಷದಿಂದ ಯಾವುದೇ ಕಳಂಕ ಇರಲಿಲ್ಲ. ಸೈಟ್ ವಿಚಾರ ನಮಗೆ …

Read More »

ಮಹಿಳಾ ಟಿ20 ವಿಶ್ವಕಪ್; ಅಕ್ಟೋಬರ್ 4ರಂದು ಭಾರತ ಹಾಗೂ ನ್ಯೂಜಿಲ್ಯಾಂಡ್ ಮುಖಾಮುಖಿ

ಪುರುಷರ ಟಿ-20 ವಿಶ್ವಕಪ್ ನಲ್ಲಿ ಭಾರತ ತಂಡ ಟ್ರೋಫಿ ಎತ್ತಿ ಹಿಡಿಯುವ ಮೂಲಕ ಸಂಭ್ರಮಿಸಿದ್ದು, ಇದೀಗ ಮಹಿಳಾ ಟಿ20 ವಿಶ್ವಕಪ್ ಗೆ ಕ್ಷಣಗಣನೆ ಆರಂಭವಾಗಿದೆ. ಇದೆ ಅಕ್ಟೋಬರ್ ಮೂರರಂದು ಮಹಿಳಾ ಟಿ20 ವಿಶ್ವಕಪ್ ಪ್ರಾರಂಭವಾಗಲಿದ್ದು, ಅಕ್ಟೋಬರ್ 4ಕ್ಕೆ ಭಾರತ ಹಾಗೂ ನ್ಯೂಜಿಲ್ಯಾಂಡ್ ಮುಖಾಮುಖಿಯಾಗಲಿವೆ. ಟಿ20 ವಿಶ್ವಕಪ್ ಗೆ ಮಹಿಳೆಯರೇ ರೆಫ್ರಿ-ಅಂಪೈರ್ಸ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.ಮಹಿಳಾ ಭಾರತ ತಂಡ; ಹರ್ಮನ್‌ಪ್ರೀತ್ ಕೌರ್ [ನಾಯಕಿ], ಯಾಸ್ತಿಕಾ ಭಾಟಿಯಾ , ಪೂಜಾ ವಸ್ತ್ರಾಕರ್, ಅರುಂಧತಿ …

Read More »

ಧಾರವಾಡ: ಗ್ರಾಮ ಆಡಳಿತಾಧಿಕಾರಿಗಳು ಅನಿರ್ದಿಷ್ಟಾವಧಿ ಪ್ರತಿಭಟನೆ

ಧಾರವಾಡ: ಗ್ರಾಮ ಆಡಳಿತಾಧಿಕಾರಿಗಳಿಗೆ ಮೂಲ ಸೌಲಭ್ಯಗಳನ್ನು ಒದಗಿಸಬೇಕು, ಮೊಬೈಲ್ ಆಯಪ್ ಗಳಲ್ಲಿ ವಿವರ ಅಪ್ ಲೋಡ್ ಮಾಡುವಂತೆ ಒತ್ತಡ ಹೇರುವುದನ್ನು ನಿಲ್ಲಿಸಬೇಕು ಎಂದು ಗ್ರಾಮ ಆಡಳಿತಾಧಿಕಾರಿಗಳು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತಿದ್ದಾರೆ. ಗುಣಮಟ್ಟದ ಮೊಬೈಲ್ ಫೋನ್, ಸಿಯುಜಿ ಸಿಮ್, ಡೇಟಾ ನೀಡಬೇಕು. ಮೇಜು, ಕುರ್ಚಿ, ಅಲ್ಮೆರಾ, ಗೂಗಲ್ ಕ್ರೋಮ್ ಬುಕ್, ಲ್ಯಾಪ್ ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಕಸಬಾ …

Read More »

ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

ಮೈಸೂರು: ಖಾಸಗಿ ಜಮೀನಿನಲ್ಲಿ ನಡೆದ ರೇವ್ ಪಾರ್ಟಿಯ ಮೇಲೆ ಮೈಸೂರು ಪೊಲೀಸರು ದಾಳಿ ನಡೆಸಿದ್ದಾರೆ. ಒಟ್ಟು 50 ಕ್ಕೂ ಜನರನ್ನು ಪೊಲೀಸರು ಬಂಧಿಸಿದ್ದು, ಹಲವು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಸಾಂಸ್ಕೃತಿಕ ನಗರಿಯಲ್ಲಿ ದಸರಾ ಸಂದರ್ಭದಲ್ಲಿ ರೇವ್ ಪಾರ್ಟಿ ನಡೆಯುತ್ತಿತ್ತು. ಮೈಸೂರಿನ ಹೊರವಲಯದಲ್ಲಿ ರೇವ್ ಪಾರ್ಟಿ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ಪಾರ್ಟಿ ಮೇಲೆ ದಾಳಿ ಮಾಡಿದ್ದಾರೆ. 50ಕ್ಕೂ ಹೆಚ್ಚು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಎ.ಎಸ್.ಪಿ ಪಿ.ನಾಗೇಂದ್ರ ಹಾಗೂ ಡಿವೈಎಸ್ಪಿ ಕರೀಂ …

Read More »