Breaking News

ರಾಷ್ಟ್ರೀಯ

ಕ್ರಿಕೆಟಿಗ ಸುರೇಶ್ ರೈನಾ, ಬಾಲಿವುಡ್ ಸೆಲೆಬ್ರಿಟಿ ಸುಸ್ಸಾನ್ ಖಾನ್ ಸೇರಿದಂತೆ ಹಲವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಮುಂಬೈ: ಕೋವಿಡ್ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಕ್ರಿಕೆಟಿಗ ಸುರೇಶ್ ರೈನಾ, ಬಾಲಿವುಡ್ ಸೆಲೆಬ್ರಿಟಿ ಸುಸ್ಸಾನ್ ಖಾನ್ ಸೇರಿದಂತೆ ಹಲವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಮುಂಬೈ ವಿಮಾನ ನಿಲ್ದಾಣದ ಬಳಿಯಿರುವ ಡ್ರಾಗನ್ ಫ್ಲೈ ಕ್ಲಬ್ ಮೇಲೆ ದಾಳಿ ನಡೆಸಿದ ಪೊಲೀಸರು ಕೋವಿಡ್ ಮಾರ್ಗ ಸೂಚಿ ಪಾಲಿಸದ ಕಾರಣಕ್ಕೆ ಸುರೇಶ್ ರೈನಾ, ಸುಸ್ಸಾನ್ ಖಾನ್, ಸಿಂಗರ್ ಗುರು ರಾಂಧವ ಹಾಗೂ ಕ್ಲಬ್ ನ ಇಬ್ಬರು ಸ್ಟಾಫ್ ಸೇರಿದಂತೆ ಒಟ್ಟು 34 ಜನರನ್ನು ಬಂಧಿಸಿದ್ದಾರೆ. …

Read More »

ಮಹಾರಾಷ್ಟ್ರದಲ್ಲಿಮತ್ತೆ ನೈಟ್ ಕರ್ಫ್ಯೂ

ಮುಂಬೈ: ಕೊರೊನಾ ಸೋಂಕು ಮತ್ತೆ ಉಲ್ಬಣಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿನಾಳೆಯಿಂದ ಮತ್ತೆ ನೈಟ್ ಕರ್ಫ್ಯೂ ಘೋಷಣೆ ಮಾಡಲಾಗಿದೆ. ಮಹಾರಾಷ್ಟ್ರದ ಎಲ್ಲಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್​ ಕರ್ಫ್ಯೂ ಜಾರಿ ಇರಲಿದೆ ಅಂತಾ ಉದ್ಧವ್ ನೇತೃತ್ವದ ಸರ್ಕಾರ ತಿಳಿಸಿದೆ. ನಾಳೆ ರಾತ್ರಿ 11 ಗಂಟೆಯಿಂದ ಜನವರಿ 5 ರವರೆಗೆ ನೈಟ್​ ಕರ್ಫ್ಯೂ ಜಾರಿ ಇರಲಿದೆ. ಒಂದು ಸಮಯದಲ್ಲಿ ಕೊರೊನಾ ಹಾಟ್​ಸ್ಪಾಟ್​ ಆಗಿ ಮಹಾರಾಷ್ಟ್ರ …

Read More »

ಪೋಷಕರು ನಡೆಸುತ್ತಿರುವ ಪ್ರತಿಭಟನೆಗೆ ಉತ್ತರ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಪೋಷಕರ ವಿರುದ್ಧವೇ ಗೂಬೆ ಕೂರಿಸಿದ್ದಾರೆ.

ಬೆಂಗಳೂರು: ಖಾಸಗಿ ಶಾಲೆಗಳ ಶುಲ್ಕ ಟಾರ್ಚರ್ ವಿರೋಧಿಸಿ ಪೋಷಕರು ನಡೆಸುತ್ತಿರುವ ಪ್ರತಿಭಟನೆಗೆ ಉತ್ತರ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಪೋಷಕರ ವಿರುದ್ಧವೇ ಗೂಬೆ ಕೂರಿಸಿದ್ದಾರೆ. ಕೊರೋನಾದಿಂದಾಗಿ ಎಲ್ಲಾ ಕ್ಷೇತ್ರಗಳು ಆಎರ್ಹಿಕವಾಗಿ ಸಂಕಷ್ಟಕ್ಕೀಡಾಗಿವೆ. ಪೋಷಕರೂ ಆರ್ಥಿಕವಾಗಿ ಜರ್ಜರಿತರಾಗಿದ್ದಾರೆ. ಆದರೆ ಪೋಷಕರು ಆರ್ಥಿಕವಾಗಿ ಶಕ್ತಿವಂತರಾಗಿದ್ದಾಗ ಇಂತದ್ದೇ ಖಾಸಗಿ ಶಾಲೆಗಳಲ್ಲಿ ತಮ್ಮ ಮಕ್ಕಳು ಓದಬೇಕು ಎಂದು ಹಠಕ್ಕೆ ಬಿದ್ದು, ರಾತ್ರಿಯಿಡಿ ಶಾಲೆಗಳ ಮುಂದೆ ನಿಂತು ಅರ್ಜಿ ಪಡೆದರು. ತಮ್ಮ ಮಕ್ಕಳಿಗೆ ಅದೇ ಶಾಲೆಯಲ್ಲಿ …

Read More »

ಬಿಜೆಪಿ-ಜೆಡಿಎಸ್‌ ವಿಲೀನ ವಿಚಾರ:`ಸ್ವಯಂ ಆತ್ಮಹತ್ಯೆ’ ಮಾಡಿಕೊಳ್ಳುವ ಸನ್ನಿವೇಶ ಬಂದಿಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜನರ ಗಟ್ಟಿ ಧ್ವನಿಯಾದ ಜೆಡಿಎಸ್ ಅಂತಹ ಅವಿವೇಕತನ ಪ್ರದರ್ಶನ ಮಾಡುವುದಿಲ್ಲ. ಅಗತ್ಯವಿದ್ದಾಗ ವಿಷಯಾಧಾರಿತವಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಕಪೋಲಕಲ್ಪಿತ ಸುದ್ದಿಗಳಿಗೆ ಯಾವುದೇ ಪ್ರಾಮುಖ್ಯತೆ ಇಲ್ಲ. ನಾನು ಬದುಕಿರುವ ತನಕ ಇದು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. `ರೈತರ ಸಾಲಮನ್ನಾ’, `ಬಡವರ ಬಂಧು’ ಇಂತಹ ಕಾರ್ಯಕ್ರಮಗಳನ್ನು ನೀಡಿದ, ಶಿಸ್ತುಬದ್ಧ …

Read More »

ಬೆಳಗಾವಿ : ಪಾರ್ಟಿ ಮುಗಿಸಿ ಮನೆಗೆ ಹೊಗುತ್ತಿದ್ದ ವ್ಯಕ್ತಿಯನ್ನು ಕಳ್ಳನೆಂದು ಭಾವಿಸಿ ಕೊಲೆ ಮಾಡಿರುವ ಘಟನೆ ತಡರಾತ್ರಿ ನಡೆದಿದೆ.

ಬೆಳಗಾವಿ : ಪಾರ್ಟಿ ಮುಗಿಸಿ ಮನೆಗೆ ಹೊಗುತ್ತಿದ್ದ ವ್ಯಕ್ತಿಯನ್ನು ಕಳ್ಳನೆಂದು ಭಾವಿಸಿ ಕೊಲೆ ಮಾಡಿರುವ  ಘಟನೆ  ತಡರಾತ್ರಿ ನಡೆದಿದೆ. ಮುಚ್ಚಂಡಿ ಗ್ರಾಮದ ಆನಂದ ಮಾರುತಿ ಕೋಲಕಾರ( 58) ಕೊಲೆಯಾದ ವ್ಯಕ್ತಿ. ಈತ ನಿನ್ನೆ ರಾತ್ರಿ ಡಾಬಾದಲ್ಲಿ ಪಾರ್ಟಿ ಮುಗಿಸಿಕೊಂಡು ಗ್ರಾಮಕ್ಕೆ ತೆರಳುವ ವೇಳೆಯಲ್ಲಿ ಖನಗಾಂವ ಗ್ರಾಮದ ಸಮೀಪ ಕಳ್ಳನೆಂದು ಭಾವಿಸಿ,  ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದಾರೆ. ಬಳಿಕ ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ …

Read More »

ಸಿದ್ದರಾಮಯ್ಯ ಅವರ ಹೇಳಿಕೆ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯ: ಶಾಸಕ ಸತೀಶ್ ಜಾರಕಿಹೊಳಿ

ಯಮಕನಮರಡಿ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಲು ಒಳ ಒಪ್ಪಂದ ಕಾರಣ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ರಾಜ್ಯಕ್ಕೆ ಸಂಬಂಧಪಟ್ಟ ವಿಷಯವಲ್ಲ. ಅದನ್ನು ಇಷ್ಟು ದೊಡ್ಡದು ಮಾಡುವ ಅವಶ್ಯಕತೆಯೂ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ಕೇವಲ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯ. ಸ್ಥಳೀಯ ಸಮಸ್ಯೆ ಬಗ್ಗೆ ಹೇಳಿದ್ದಾರೆ. ಎಲ್ಲರೂ ಈ ಹೇಳಿಕೆಗೆ ಅಭಿಪ್ರಾಯ ನೀಡುವುದು ಸೂಕ್ತವಲ್ಲ ಎಂದು ಹೇಳಿದರು.‌ ಕಳೆದ ಆರು …

Read More »

ಗೊಂದಲಗಳನ್ನು ಸೃಷ್ಟಿಸುತ್ತಿದೆ ಕೊರೊನಾ ಲಸಿಕೆ..!

ಜಕಾರ್ತ, ಡಿ.20- ಮಹಾಮಾರಿ ಕೊರೊನಾಗೆ ಔಷ ಸಿಕ್ಕಿದೆ. ವಿಶ್ವಕ್ಕೆ ಎದುರಾಗಿರುವ ಕಂಟಕ ಮುಕ್ತಿ ದೊರೆಯಲಿದೆ ಎಂಬ ಆಶಾದಾಯಕ ಬೆಳವಣಿಗೆಯ ನಡುವೆಯೇ ಲಸಿಕೆ ತಯಾರಿಕೆಗೆ ಬಳಕೆ ಮಾಡಲಾಗಿರುವ ಅಂಶಗಳು ಧಾರ್ಮಿಕ ವಿವಾದಕ್ಕೆ ಎಡೆ ಮಾಡಿಕೊಟ್ಟಿವೆ. ಇಂಡೋನೇಷ್ಯಾದ ರಾಜ ತಾಂತ್ರಿಕರು ಮತ್ತು ಇಸ್ಲಾಂ ಧಾರ್ಮಿಕ ಗುರುಗಳು ಅಲ್ಲಿ ಔಷಧ ತಯಾರಿಕೆಯ ಪ್ರಕ್ರಿಯೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಆನಂತರ ಇಂಡೋನೇಷ್ಯಾಗೆ ಲಕ್ಷ ಗಟ್ಟಲೆ ಔಷಯ ಡೋಸೇಜ್‍ಗಳನ್ನು ಕಳುಹಿಸಲಾಗಿದೆ. ಕೊರೊನಾ ಲಸಿಕೆ ಉತ್ಪಾದಕ ಕಂಪೆನಿಗಳು ಸುರಕ್ಷತೆ , …

Read More »

ಗರ್ಭಿಣಿಯನ್ನು 7 ಕಿಲೋ ಮೀಟರ್ ವೆರೆಗೆ ಸ್ವಯಂ ಸೇವಕರು ಹೊತ್ತುಕೊಂಡು ಹೋಗಿ, ಅಂಬುಲೆನ್ಸ್ ಗೆ ತಲುಪಿಸಿರುವ ಘಟನೆ

ಹೈದರಾಬಾದ್: ಹೆರಿಗೆ ನೋವಿನಿಂದ ಬಳಲುತ್ತಿರುವ ಗರ್ಭಿಣಿಯನ್ನು 7 ಕಿಲೋ ಮೀಟರ್ ವೆರೆಗೆ ಸ್ವಯಂ ಸೇವಕರು ಹೊತ್ತುಕೊಂಡು ಹೋಗಿ, ಅಂಬುಲೆನ್ಸ್ ಗೆ ತಲುಪಿಸಿರುವ ಘಟನೆ ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯ ಬೊಂಡಪಲ್ಲಿ ಪ್ರದೇಶದಲ್ಲಿ ನಡೆದಿದೆ. ಬುಡಕಟ್ಟು ಸಮುದಾಯದ ತುಂಬು ಗರ್ಭಿಣಿಯೊಬ್ಬರಿಗೆ ನಿನ್ನೆ ಸಂಜೆ ಸುಮಾರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಕೂಡಲೇ ಮಹಿಳೆಯ ಪತಿ ಕಾಮೇಶ್ 108 ಗೆ ಕರೆಮಾಡಿದ್ದಾರೆ. ಆದರೆ ಇವರು ಇರುವಲ್ಲಿಗೆ ಅಂಬುಲೆನ್ಸ್ ಬರಲು ಸರಿಯಾದ ಮಾರ್ಗ ಇರಲಿಲ್ಲ. ನಂತರ …

Read More »

ಗೋಕಾಕದ ಕೆ,ಎಲ್,ಇ,ಆಂಗ್ಲ ಮಾದ್ಯಮ ಶಾಲಾ ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕ

  ಗೋಕಾಕದ ಕೆ,ಎಲ್,ಇ,ಆಂಗ್ಲ ಮಾದ್ಯಮ ಶಾಲಾ ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕ ಮತ್ತು ಗೋಕಾಕ ತಾಲೂಕಾ ಘಟಕದ ಸಂಯುಕ್ತ ಆಶ್ರಯದಲ್ಲಿ ಎಸ್,ಎಸ್,ಎಲ್,ಸಿ, ಮತ್ತು ಪಿ,ಯು,ಸಿ,ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವೀರಶೈವ ಲಿಂಗಾಯತ ರಾಷ್ಟ್ರಿಯ ಉಪಾದಕ್ಷರಾದ ಪ್ರಭಾಕರ ಕೊರೆ ಮಾತನಾಡಿ,ನೂರು ವರ್ಷದಲ್ಲಿ ಶಿಕ್ಷಣ ವಂಚಿತರಾದವರು ಇವತ್ತು ಪ್ರತಿ ಹಳ್ಳಿ ಹಳ್ಳಿಯಲ್ಲೂ ಸಾವಿರಾರು ವಿದ್ಯಾರ್ಥಿಗಳಿಗೆ ಬೇದ ,ವರ್ಣ ಇಲ್ಲದೆ ಪ್ರತಿ ಸಮಾಜದವರಿಗೆ ಕೆ,ಎಲ್,ಇ,ಶಿಕ್ಷಣ ಸಂಸ್ಥೆ ಶಿಕ್ಷಣ …

Read More »

ಗೋವಾದಲ್ಲಿ ನಕಾರಾತ್ಮಕ ಅಭಿಪ್ರಾಯ ಹೊಂದಿದವರಿಗೆ ಮತ್ತು ದೇಶ ವಿರೋಧಿ ಶಕ್ತಿಗಳಿಗೆ ಜಾಗ ಇಲ್ಲ: ಪ್ರಮೋದ್ ಸಾವಂತ್

ಪಣಜಿ,ಡಿ.10-ಗೋವಾದಲ್ಲಿ ನಕಾರಾತ್ಮಕ ಅಭಿಪ್ರಾಯ ಹೊಂದಿದವರಿಗೆ ಮತ್ತು ದೇಶ ವಿರೋಧಿ ಶಕ್ತಿಗಳಿಗೆ ಜಾಗ ಇಲ್ಲ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಗುಡುಗಿದ್ದಾರೆ. ಗೋವಾ ವಿಮೋಚನಾ ದಿನದ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮಾತನಾಡಿದ ಅವರು, ದ್ವಿಪಥ ರೈಲ್ವೆ ಹಳಿ ಯೋಜನೆಗೆ ವಿರೋಸುತ್ತಿರುವವರ ವಿರುದ್ಧ ಹರಿಹಾಯ್ದಿದ್ದಾರೆ. ಗೋವಾ ರಾಜ್ಯದವರು ಆಶಾವಾದಿಗಳು. ಅವರ ನಡುವೆ ನಕಾರಾತ್ಮಕ ಭಾವನೆ ಉಳ್ಳವರಿಗೆ, ವಿಛಿದ್ರಕಾರಿ ಮನೋಭಾವವುಳ್ಳವರಿಗೆ ಜಾಗವಿಲ್ಲ ಎಂದಿದ್ದಾರೆ. ಗೋವಾಕ್ಕೆ ಕಲ್ಲಿದ್ದಲು ಸಾಗಾಣಿಕೆ ಸಲುವಾಗಿ ರೈಲ್ವೆ ಹಳಿಗಳನ್ನು ದ್ವಿಪಥಕ್ಕೆ ಪರಿವರ್ತಿಸುವ ಕಾಮಗಾರಿಯನ್ನು …

Read More »