Breaking News

ರಾಷ್ಟ್ರೀಯ

ನೆಲಸಮಗೊಳಿಸಿರುವ ಬಡವರ ಮನೆ ನಿರ್ಮಿಸಿ ಕೊಡಿ : ಅಶೋಕ ಪೂಜಾರಿ

ಗೋಕಾಕ : ತಾಲ್ಲೂಕಿನ ಧುಪದಾಳ ಗ್ರಾಮದಲ್ಲಿ ನೆಲಸಮ ಮಾಡಿದ ಬಡವರ ಮನೆಗಳನ್ನು ಸರ್ಕಾರದಿಂದ ಶೀಘ್ರದಲ್ಲಿ ಮರು ನಿರ್ಮಾಣ ಮಾಡಬೇಕು ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಆಗ್ರಹಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಧುಪದಾಳ( ನವಿಲಮಾಳ) ಸಮೀಪದಲ್ಲಿರುವ ಸರ್ವೆ ನಂ.173/1ರಲ್ಲಿ 140 ಎಕರೆ ಜಮೀನು ಪಾಳು ಬಿದ್ದಿದೆ. ಈ ಜಾಗದಲ್ಲಿ ವಸತಿ ರಹಿತ ಬಡವರು, ಕೂಲಿ ಕಾರ್ಮಿಕರು , ಗೋಕಾಕ್ ಮಿಲ್ ಕಾರ್ಮಿಕರು ಸುಮಾರು 8 ವರ್ಷಗಳಿಂದ ಮನೆ ಕಟ್ಟಿಕೊಂಡಿದ್ದಾರೆ. …

Read More »

ಖಾನಾಪುರ : ಮಗಳ ಗಂಡನನ್ನ ಕೊಚ್ಚಿ ಕೊಲೆಗೈದ ಪಾಪಿ ಮಾವ

ಕಕ್ಕೇರಿ : ಕೌಟುಂಬಿಕ ಕಲಹದಿಂದ ಅಳಿಯನನ್ನ ಕೊಚ್ಚಿ ಕೊಲೆಗೈದಿರುವ ಘಟನೆ ಖಾನಾಪುರ ತಾಲ್ಲೂಕಿನ ಕಕ್ಕೇರಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಬಿಷ್ಟಪ್ಪ ಕೊನಸಕುಂಪಿ(43) ಕೊಲೆಯಾದ ದುರ್ದೈವಿ. ಸೋಮವಾರ ರಾತ್ರಿ ಬಿಷ್ಟಪ್ಪ ತನ್ನ ಹೆಂಡತಿಯ ತಂದೆಯೊಂದಿಗೆ ಜಗಳವಾಡಿದ್ದಾನೆ. ಬಳಿಕ ರಾತ್ರಿ ಭತ್ತದ ರಾಶಿ ಕಾಯಲು ಕಣದಲ್ಲಿ ಹೋಗಿದ್ದಾನೆ. ಈ ವೇಳೆ ಮಾವ ಮಲಗಿದ್ದ ಬಿಷ್ಟಪ್ಪ ನ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಕೊಂದು ಹಾಕಿ, ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಆರೋಪಿ ಹೆಸರು ತಿಳಿದು …

Read More »

ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ತೀರ್ಮಾನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು : ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಗೆ ಮುಂದಾಗಿರುವ ಕೆಎಂಎಫ್, ಪ್ರತಿ ಟನ್‍ಗೆ 15 ಸಾವಿರ ರೂ.ಗಳನ್ನು ನಿಗದಿಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ಇಲ್ಲಿನ ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ಜರುಗಿದ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆದೇಶದ ಮೇರೆಗೆ ರೈತರ ಅನುಕೂಲಕ್ಕಾಗಿ ಮೆಕ್ಕಜೋಳ ಖರೀದಿಗೆ ನಮ್ಮ ಸಂಸ್ಥೆ ಮುಂದಾಗಿದ್ದು, ಅಂದಾಜು …

Read More »

ಕುರ್ಚಿ ಬಿಟ್ಟು ಎದ್ದೇಳಿ, ರೈತರ ಮೇಲೆ ಟಿಯರ್ ಗ್ಯಾಸ್ ಮತ್ತು ಅವರ ಮೇಲೆ ದಬ್ಬಾಳಿಕೆ ನಡೆಸುವುದನ್ನು ಬಿಡಿ: ರಾಹುಲ್ ಗಾಂಧಿ,

ಹೊಸದಿಲ್ಲಿ:   ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಅವರ ಹಕ್ಕುಗಳನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೋದಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಅನ್ನದಾತರು ರಸ್ತೆಯಲ್ಲಿ ಕುಳಿತಿದ್ದರೇ ಟಿವಿಯಲ್ಲಿ ಭಾಷಣಗಳು ಬರುತ್ತಿವೆ, ಶ್ರಮಜೀವಿಗಳ ಋಣದಲ್ಲಿದ್ದೇವೆ, ಅವರಿಗೆ ನ್ಯಾಯ ಒದಗಿಸುವ ಮೂಲಕ ಅವರ ಋಣ ತೀರಿಸಬೇಕಿದೆ. ರೈತರ ಶ್ರಮಕ್ಕೆ ಎಲ್ಲರೂ ಆಭಾರಿಯಾಗಿದ್ದಾರೆ, ಹೀಗಾಗಿ ಅವರಿಗೆ ನ್ಯಾಯ ಒದಗಿಸುವ ಮೂಲಕ ನಾವು ಅವರು ಋಣವನ್ನು ತೀರಿಸಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಕುರ್ಚಿ ಬಿಟ್ಟು …

Read More »

ರೈತ ಪ್ರತಿಭಟನೆ ಯಶಸ್ಸಿಗೆ ಗುರುದ್ವಾರಗಳಲ್ಲಿ ವಿಶೇಷ ಪೂಜೆ

ನವದೆಹಲಿ,ಡಿ.1-ಕೇಂದ್ರದ ಹೊಸ ಕೃಷಿ ನೀತಿ ವಿರೋಧಿಸಿ ರೈತರು ಹಮ್ಮಿಕೊಂಡಿರುವ ಚಳವಳಿ ಯಶಸ್ಸಿಗಾಗಿ ರಾಜಧಾನಿಯಲ್ಲಿರುವ ಗುರುದ್ವಾರಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ರೈತರಿಗೆ ಮಾರಕವಾಗಿರುವ ಕೃಷಿ ನೀತಿಯನ್ನು ಸರ್ಕಾರ ಈ ಕೂಡಲೇ ಹಿಂಪಡೆಯಬೇಕು. ಕೃಷಿಕರ ಹೋರಾಟ ಯಶಸ್ವಿಯಾಗಬೇಕು ಎಂಬ ಉದ್ದೇಶದಿಂದ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ ಎಂದು ಗುರುದ್ವಾರ ವ್ಯವಸ್ಥಪನಾ ಮಂಡಳಿ ಮಂಜಿಂದರ್ ಸಿಂಗ್ ತಿಳಿಸಿದ್ದಾರೆ. ಹೋರಾಟ ನಡೆಸುತ್ತಿರುವ ರೈತರನ್ನು ಖಲಿಸ್ತಾನಿಗಳು ಹಾಗೂ ಭಯೋತ್ಪಾದಕರಿಗೆ ಹೋಲಿಸಿರುವ ಬಿಜೆಪಿ ಮುಖಂಡರ ಹೇಳಿಕೆಗೆ ತಿರುಗೇಟು ನೀಡಿರುವ …

Read More »

ದೇವಸ್ಥಾನ ಜಮೀನು ವಿವಾದ: ಬೆಳಗಾವಿಯಲ್ಲಿ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಸ್ಥಿತಿ ಚಿಂತಾಜನಕ

ಬೆಳಗಾವಿ : ತಾಲ್ಲೂಕಿನ ಗೌಂಡವಾಡ ಗ್ರಾಮದ ಕಾಳಬೈರವನಾಥ್ ದೇವಸ್ಥಾನದ ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಐದು ಜನರ ಗುಂಪು ಓರ್ವ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಗೌಂಡವಾಡ ಗ್ರಾಮದ ಸತೀಶ್ ಪಾಟೀಲ(34) ಹಲ್ಲೆಗೊಳಗಾದ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದು, ಸ್ಥಿತಿ ಚಿಂತಾಜನಕವಾಗಿದೆ. ನಿನ್ನೆ ರಾತ್ರಿ 9.30 ರ ಸುಮಾರಿಗೆ ಬೆಳಗಾವಿ ನಗರದ ಮರಾಠ ಮಂಡಳ ಕಾಲೇಜ್ ಸಮೀಪವಿರುವ ತಮ್ಮ ಅಂಗಡಿಯನ್ನು ಬಂದ್ ಮಾಡಿಕೊಂಡು ಮನೆಗೆ …

Read More »

ರಾಜಕಾರಣದಲ್ಲಿ ಯಾವ ಶಾಪವೂ ತಟ್ಟುವುದಿಲ್ಲ: ಸಾರಾ ಮಹೇಶ್ ಗೆ ಸಚಿವ ರಮೇಶ್ ತಿರುಗೇಟು

ಬೆಳಗಾವಿ : ಎಚ್.ವಿಶ್ವನಾಥ್ ಅವರಿಗೆ ಚಾಮುಂಡೇಶ್ವರಿ ಶಾಪ ತಟ್ಟಿದೆ ಎಂದು ಸಾ.ರಾ ಮಹೇಶ್ ಹೇಳಿಕೆಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮಂಗಳವಾರ ತಿರುಗೇಟು ನೀಡಿದ್ದಾರೆ. ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದವರಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಯಾವುದೇ ಶಾಪ ತಟ್ಟುವುದಿಲ್ಲ. ಎಚ್.ವಿಶ್ವನಾಥ್ ಅವರ ಹೈಕೋರ್ಟ್ ಆದೇಶದ ಕುರಿತು ಸುಪ್ರೀಂ ಕೋರ್ಟ್ ಅಪೀಲು ಸಲ್ಲಿಸುತ್ತೇವೆ ಎಂದಿದ್ದಾರೆ. ವಿಶ್ವನಾಥ್ ಅವರ ಜೊತೆಗೆ ನೂರಕ್ಕೆ ನೂರರಷ್ಟು 17 ಜನರು ಜೊತೆಗಿದ್ದೇವೆ. ಸುಪ್ರೀಂ ಕೋರ್ಟ್ ಬಾಗಿಲು ತಟ್ಟುತ್ತೇವೆ ಎನ್ನುವ …

Read More »

ಭೀಕರ ಅಪಘಾತ : ಸ್ಥಳದಲ್ಲೇ ಬೈಕ್ ಸವಾರಿಬ್ಬರು ಸಾವು

ದಕ್ಷಿಣ ಕನ್ನಡ : ಪಿಕಪ್ ವಾಹನವೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಕೃಷ್ಣ ಪ್ರಸಾದ್ ಶೆಟ್ಟಿ, ಜಯರಾಮ್ ಗೌಡ ಮೃತ ದುರ್ದೈವಿಗಳು. ದ್ವಿಚಕ್ರ ವಾಹನದ ಮೇಲೆ ಇಬ್ಬರು ಮನೆಗೆ ತೆರಳುತ್ತಿದ್ದರು. ಹಿಂದಿನಿಂದ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದರು, ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದರು. ಸ್ಥಳೀಯರು ಮಾಹಿತಿ ನೀಡಿದ ಆದಾರದ ಮೇಲೆ ಕಾರ್ಯಾಚರಣೆ ನಡೆಸಿ ಪೊಲೀಸರು …

Read More »

ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆಗೆ ಕ್ಷಣಗಣನೆ

  ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಮಧ್ಯಾಹ್ನ 11.30ಕ್ಕೆ ಗ್ರಾಮ ಪಂಚಾಯಿತಿ ಚುನಾವಣಾ ದಿನಾಂಕ ಪ್ರಕಟಿಸಲಿದೆ. ಬಿಜೆಪಿ , ಕಾಂಗ್ರೆಸ್ ಮತ್ತು ಜೆಡಿಎಸ್ ಗ್ರಾಮ ಪಂಚಾಯಿತಿ ಚುನಾವಣೆಗೆ ತಯಾರಿ ನಡೆಸಿವೆ. ಗ್ರಾಮ ಪಂಚಾಯಿತಿ ಗೆಲುವಿಗೆ ತಂತ್ರ ಪ್ರತಿತಂತ್ರಗಳನ್ನು ರೂಪಿಸುವ ಮೂಲಕ ಮತ್ತೊಂದು ಮತ ಸಮರಕ್ಕೆ ಇಳಿಯಲಿವೆ. ಬಿಜೆಪಿ ಈಗಾಗಲೇ ಗ್ರಾಮ ಸ್ವರಾಜ್ ಸಮಾವೇಶದ ಮೂಲಕ ಚುನಾವಣಾ ರಣಕಹಳೆ ಮೊಳಗಿಸಿದೆ. ಜೆಡಿಎಸ್ ಕೂಡ ಪ್ರಮುಖರ ಸಭೆ ನಡೆಸಿ ತೊಡೆ ತಟ್ಟಲು ರೆಡಿಯಾಗಿದೆ. …

Read More »

ಅರಬಿ ಸಮುದ್ರದಲ್ಲಿ ಪತನಗೊಂಡ ಮಿಗ್‌ ಅವಶೇಷ ಪತ್ತೆ : ಪೈಲಟ್ ಸುಳಿವು ಇನ್ನೂ ಸಿಕ್ಕಿಲ್ಲ

ಹೊಸದಿಲ್ಲಿ: ಅರಬಿ ಸಮುದ್ರದಲ್ಲಿ ಗುರುವಾರ ಪತನಗೊಂಡಿದ್ದ ಭಾರತೀಯ ವಾಯುಸೇನೆಯ ಮಿಗ್‌-29 ಕೆ ಯುದ್ಧವಿಮಾನದ ಕೆಲವು ಭಾಗಗಳು ಪತ್ತೆಯಾಗಿವೆ. ಆದರೆ ನಾಪತ್ತೆಯಾಗಿರುವ ಪೈಲಟ್‌ನ ಸುಳಿವು ಸಿಕ್ಕಿಲ್ಲ. ಗುರುವಾರ ಸಂಜೆ ಐಎನ್‌ಎಸ್‌ ವಿಕ್ರಮಾದಿತ್ಯ ಸಮರ ನೌಕೆಯಿಂದ ಹಾರಾಟ ನಡೆಸುವ ವೇಳೆ ಈ ಮಿಗ್‌ ವಿಮಾನ ಪತನಗೊಂಡಿತ್ತು. ರವಿವಾರ ಅದರ ಟರ್ಬೋ ಚಾರ್ಜರ್‌, ಇಂಧನ ಟ್ಯಾಂಕ್‌ ಮತ್ತು ಕೆಲವು ಭಾಗಗಳನ್ನು ನೌಕಾಪಡೆಯ ಶೋಧ ತಂಡ ಪತ್ತೆ ಹಚ್ಚಿದೆ. ಇಬ್ಬರು ಪೈಲಟ್‌ಗಳ ಪೈಕಿ ಓರ್ವರನ್ನು ಗುರುವಾರವೇ …

Read More »