ದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕಲ್ ಆರ್. ಪಾಂಪಿಯೋ ಅಕ್ಟೋಬರ್ 25 ರಿಂದ 30 ರವರೆಗೆ ಭಾರತದ ನವದೆಹಲಿ, ಶ್ರೀಲಂಕಾದ ಕೊಲೊಂಬೊ, ಮಾಲ್ಡೀವ್ಸ್ನ ಮಾಲೆ ಮತ್ತು ಇಂಡೋನೇಷ್ಯಾದ ಜಕಾರ್ತಕ್ಕೆ ಭೇಟಿ ನೀಡಲಿದ್ದಾರೆ. ಕಾರ್ಯದರ್ಶಿ ಪಾಂಪಿಯೋ ಮತ್ತು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಮಾರ್ಕ್ ಟಿ. ಎಸ್ಪರ್ ನವದೆಹಲಿಯಲ್ಲಿ ನಡೆಯಲಿರುವ ಮೂರನೇ ವಾರ್ಷಿಕ ಅಮೆರಿಕ-ಭಾರತ 2+2 ಸಚಿವರ ಮಟ್ಟದ ಮಾತುಕತೆಯಲ್ಲಿ ಭಾರತದ ಸಹಭಾಗಿಗಳೊಂದಿಗೆ ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ಅಮೆರಿಕ- ಭಾರತದ ನಡುವಿನ ಸಮಗ್ರ ಜಾಗತಿಕ …
Read More »ಅನ್ನಭಾಗ್ಯದ ಅಕ್ಕಿ ಚೀಲಗಳು ಚರಂಡಿ ಮತ್ತು ರಸ್ತೆಯಲ್ಲೆಲ್ಲಾ ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ.
ಬಾಗಲಕೋಟೆ: ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ ಅನ್ನಭಾಗ್ಯದ ಅಕ್ಕಿ ಚೀಲಗಳು ಚರಂಡಿ ಮತ್ತು ರಸ್ತೆಯಲ್ಲೆಲ್ಲಾ ಪತ್ತೆಯಾಗಿರುವ ಘಟನೆ ಜಿಲ್ಲೆಯ ಜಮಖಂಡಿಯ ಜೋಳದ ಬಜಾರ್ನಲ್ಲಿ ನಡೆದಿದೆ. ಅನ್ನಭಾಗ್ಯ ಯೋಜನೆಯ 13 ಅಕ್ಕಿ ಮೂಟೆಗಳು ಜೋಳದ ಬಜಾರ್ನಲ್ಲಿ ಪತ್ತೆಯಾಗಿದೆ. ಹೀಗಾಗಿ, ಅಕ್ಕಿ ಮೂಟೆಗಳ ಕಳ್ಳ ಸಾಗಾಟಕ್ಕೆ ಯತ್ನಿಸಿ ಕೊನೆಗೆ ಅದನ್ನು ಅಲ್ಲೇ ಬಿಟ್ಟುಹೋಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಘಟನೆ ಬಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಆಹಾರ ಇಲಾಖೆ ಅಧಿಕಾರಿಗಳು ಭೇಟಿ ಕೊಟ್ಟು …
Read More »ಗುಡಿಸಲು ತೆರವು ವೇಳೆ ಅರಣ್ಯ ಸಿಬ್ಬಂದಿ ಮೇಲೆ ಬಡಿಗೆ ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಚಿಕ್ಕಮಗಳೂರು: ಗುಡಿಸಲು ತೆರವು ವೇಳೆ ಅರಣ್ಯ ಸಿಬ್ಬಂದಿ ಮೇಲೆ ಬಡಿಗೆ ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಅಂದ ಹಾಗೆ, ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದಲ್ಲಿ 2 ದಿನಗಳ ಹಿಂದೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಜಾಗ ತಮ್ಮದೆಂದು ಹಲ್ಲೆಗೆ ಯತ್ನಿಸಿರುವ ಕುಟುಂಬಸ್ಥರ ವಿರುದ್ಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುಡಿಸಲು ತೆರವು ಮಾಡುತ್ತಿದ್ದ ವೇಳೆ ಅರಣ್ಯ …
Read More »ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಬರ್ಬರ ಕೊಲೆ
ಮಂಡ್ಯ: ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಬರ್ಬರ ಕೊಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಕ್ರಾಸ್ ಬಳಿ ನಡೆದಿದೆ. ಪಾಲಹಳ್ಳಿ ಹರೀಶ್ ಅಲಿಯಾಸ್ ಕಳ್ಳಪಚ್ಚಿ ಹತ್ಯೆಯಾದ ರೌಡಿಶೀಟರ್. ನಿನ್ನೆ ರಾತ್ರಿ ಶ್ರೀರಂಗಪಟ್ಟಣದಿಂದ ಪಾಲಹಳ್ಳಿಗೆ ತೆರಳುವ ವೇಳೆ ದುಷ್ಕರ್ಮಿಗಳು, ರೌಡಿಶೀಟರ್ ಕಾರನ್ನ ಅಡ್ಡಗಟ್ಟಿ ಕಣ್ಣಿಗೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ …
Read More »ಬಂಡೀಪುರದಲ್ಲಿ ಸಫಾರಿ ವೇಳೆ ಹುಲಿ ನೋಡಿದ್ದಾಗಿ ನಟ ಧನ್ವೀರ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ.
ಮೈಸೂರು: ಬಂಡೀಪುರದಲ್ಲಿ ಸಫಾರಿ ವೇಳೆ ಹುಲಿ ನೋಡಿದ್ದಾಗಿ ನಟ ಧನ್ವೀರ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ. ಧನ್ವೀರ್ ರಾತ್ರಿ ಸಫಾರಿ ಮಾಡಿರುವ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದ್ದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. ತಮ್ಮ ಸಫಾರಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಧನ್ವೀರ್ ಬಂಡೀಪುರದಲ್ಲಿ ರಾತ್ರಿ ಸಫಾರಿ ನಡೆಸಿರುವುದು ಕಾನೂನುಬಾಹಿರ ಎಂದು ಹಲವರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಸಿನಿಮಾ ಹೀರೋಗೆ ಬಂಡೀಪುರದಲ್ಲಿ ರಾತ್ರಿ ಸಫಾರಿ ನಡೆಸಲು ಅನುಮತಿ ನೀಡಲಾಗಿದೆ. …
Read More »ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಕುಸಿದುಬಿದ್ದಿದೆ.
ಚಿಕ್ಕಬಳ್ಳಾಪುರ: ಮನೆ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕಿನ ವೈಜಕೂರು ಗ್ರಾಮದಲ್ಲಿ ನಡೆದಿದೆ. ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಕುಸಿದುಬಿದ್ದಿದೆ. ತಂದೆ ರವಿಕುಮಾರ್, ಮಗ ರಾಹುಲ್ ಮೃತರು. ಘಟನೆಯಲ್ಲಿ ತಾಯಿ ಮುನಿರಾಜಮ್ಮ, ಮಗಳು ರುಚಿತಾಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಚಿಕ್ಕಬಳ್ಳಾಪುರದಲ್ಲಿ ಭಾರಿ ಅನಾಹುತ ನಡೆದಿದೆ. ಮಳೆ ರಭಸಕ್ಕೆ ಮನೆ ಕುಸಿದು ತಂದೆ-ಮಗ ಇಬ್ಬರೂ ಮೃತಪಟ್ಟಿದ್ದು, ತಾಯಿ-ಮಗಳು ಆಸ್ಪತ್ರೆಯಲ್ಲಿ …
Read More »ದಕ್ಷ ಪೊಲೀಸ್ ಅಧಿಕಾರಿ, ಕರ್ನಾಟಕ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಅಣ್ಣಾಮಲೈ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ
ಬೆಂಗಳೂರು: ದಕ್ಷ ಪೊಲೀಸ್ ಅಧಿಕಾರಿ, ಕರ್ನಾಟಕ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಅಣ್ಣಾಮಲೈ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಇದು ನಿಮಗೆಲ್ಲ ತಿಳಿದಿರುವ ಸಂಗತಿ. ಆದರೆ ಈಗ ಅದೇ ಅಣ್ಣಾಮಲೈ ಶೂಟಿಂಗ್ನಲ್ಲಿ ಬ್ಯೂಸಿಯಾಗಿದ್ದಾರೆ. ನೈಸ್ ರಸ್ತೆಯಲ್ಲಿ ನಡೆಯುತ್ತಿರುವ ಸಿನಿಮಾವೊಂದರ ಶೂಟಿಂಗ್ನಲ್ಲಿ ಗೆಸ್ಟ್ ರೋಲ್ನಲ್ಲಿ ನಟಿಸುತ್ತಿರುವ ಅಣ್ಣಾಮಲೈ. ಬೆಳ್ಳಂ ಬೆಳಗ್ಗೆ ಬುಲೆಟ್ ಗಾಡಿ ಓಡಿಸುತ್ತ ಸಿನಿಮಾ ಶೂಟಿಂಗ್ನಲ್ಲಿ ಭಾಗಿಯಾಗಿದ್ದಾರೆ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ …
Read More »ನಿಮ್ಮ ಪಕ್ಷದಲ್ಲಿ ನಿಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಿ ಸಿಟಿ ರವಿಯವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಟಾಂಗ್
ಬೆಂಗಳೂರು: ನಿಮ್ಮ ಪಕ್ಷದಲ್ಲಿ ನಿಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಿ ಎಂದು ಟ್ವೀಟ್ ಮಾಡುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಯವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ. ಸದ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಿದ್ದರಾಮಯ್ಯ ಅವರ ನಡುವೆ ಟ್ವಿಟ್ಟರ್ ವಾರ್ ನಡೆಯುತ್ತಿದೆ. ಇಂದು ನಳಿನ್ ಅವರನ್ನು ಸಿದ್ದರಾಮಯ್ಯ ಕಾಡುಮನುಷ್ಯನಿಗೆ ಹೊಲಿಕೆ ಮಾಡಿದಕ್ಕೆ ಬಿಜೆಪಿ ನಾಯಕರು ಸಿದ್ದರಾಮಯ್ಯನ ಮೇಲೆ ಮುಗಿಬಿದ್ದಿದ್ದಾರೆ. ಈಗ ಸಿಟಿ ರವಿಯವರೂ …
Read More »ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣ ಮಾಸುವ ಮುನ್ನವೇ ಇದೀಗ ಅಂತಹುದೇ ಮತ್ತೊಂದು ಘಟನೆ ಉತ್ತರ ಪ್ರದೇಶದಲ್ಲಿ 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ಉತ್ತರ ಪ್ರದೇಶ: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಉತ್ತರಪ್ರದೇಶದ ಹತ್ರಾಸ್ ನಲ್ಲಿ ಗ್ಯಾಂಗ್ ರೇಪ್ ಪ್ರಕರಣ ಮಾಸುವ ಮುನ್ನವೇ ಇದೀಗ ಅಂತಹುದೇ ಮತ್ತೊಂದು ಘಟನೆ ಉತ್ತರ ಪ್ರದೇಶದಲ್ಲಿ ಸಂಭವಿಸಿದೆ. 15 ವರ್ಷದ ಬಾಲಕಿಯ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಉತ್ತರಪ್ರದೇಶದ ರಾಂಪುರ ಜಿಲ್ಲೆಯ ಕೆಮ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಈ ಭೀಕರ ಘಟನೆ ನಡೆದಿದ್ದು, ಬಾಲಕಿಯ ಮನೆಯಲ್ಲಿಯೇ ಮನೆ ನಿರ್ಮಾಣದ ಕೆಲಸ ಮಾಡುತ್ತಿದ್ದ ಇಬ್ಬರು ಕಟ್ಟಡ …
Read More »ಪೋಕರಿ ಕಟೀಲ್ ಕಾಡು ಮನುಷ್ಯ, ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್: ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಇದೀಗ ಪ್ರತಿಯಾಗಿ ಸಿದ್ದರಾಮಯ್ಯ ಸರಣಿ ಟ್ವೀಟ್ಗಳ ಮೂಲಕ ತಿರುಗೇಟು ನೀಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಈ ನಳಿನ್ ಕುಮಾರ್ ಅವರಿಗೆ ಸ್ವಲ್ಪ ಬುದ್ಧಿ ಹೇಳಿ …
Read More »