ಚೆನ್ನೈ, ಅ. 14- ತಮಿಳುನಾಡಿನ ಸೂಪರ್ಸ್ಟಾರ್ ರಜನಿಕಾಂತ್, ತಲ್ಲಾ ಅಜಿತ್, ಸೂರ್ಯ, ಇಳಯದಳಪತಿ ವಿಜಯ್ ಮನೆಗಳಲ್ಲಿ ಬಾಂಬ್ ಇರಿಸುವುದಾಗಿ ಬೆದರಿಕೆ ಒಡ್ಡಿರುವ ಘಟನೆ ಮಾಸುವ ಮುನ್ನವೇ ಈಗ ಧನುಷ್ ಹಾಗೂ ಕ್ಯಾಪ್ಟನ್ ಪ್ರಭಾಕರ್ ಖ್ಯಾತಿಯ ವಿಜಯಕಾಂತ್ಗೂ ಬೆದರಿಕೆ ಕರೆಗಳು ಬಂದಿವೆ. ತಮಿಳಿನ ಸೂಪರ್ಸ್ಟಾರ್ ರಜನಿಕಾಂತ್ರ ಅಳಿಯ, ನಟ ಧನುಷ್ ಹಾಗೂ ನಟ ಹಾಗೂ ಡಿಎಂಡಿಕೆ ಪಕ್ಷದ ಮುಖಂಡ ವಿಜಯಕಾಂತ್ರ ಮನೆಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆಗಳು ಬಂದ ಹಿನ್ನೆಲೆಯಲ್ಲಿ ಪೊಲೀಸ್ …
Read More »ರಜನೀಕಾಂತ್ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ
ಚೆನ್ನೈ: ತಮಗೆ ಚೆನ್ನೈ ಪಾಲಿಕೆ ನೀಡಿದ್ದ ತೆರಿಗೆ ನೋಟಿಸ್ ಅನ್ನು ಪ್ರಶ್ನಿಸಿ ಚಿತ್ರನಟ ರಜನೀಕಾಂತ್ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಕಲ್ಯಾಣ ಮಂಟಪಕ್ಕೆ 6.50 ಲಕ್ಷ ಆಸ್ತಿ ತೆರಿಗೆ ವಿಧಿಸಿದ್ದ ಗ್ರೇಟರ್ ಚೆನ್ನೈ ಕಾರ್ಪೋರೇಷನ್ ವಿರುದ್ಧ ರಜನೀಕಾಂತ್ ಕೋರ್ಟ್ ಮೆಟ್ಟಿಲೇರಿದ್ದರು. ತಮಿಳುನಾಡಿನ ಕೊಡಂಬಕ್ಕಂನಲ್ಲಿ ರಜನಿಕಾಂತ್ ಅವರ ಕಲ್ಯಾಣ ಮಂಟಪವಿದ್ದು, ಅದರ ತೆರಿಗೆ ಹಣವನ್ನು ಕಟ್ಟುವಂತೆ ಜಾರಿ ಮಾಡಲಾಗಿದ್ದ ನೋಟಿಸನ್ನು ಅವರು ಪ್ರಶ್ನಿಸಿದ್ದರು. ಕಳೆದ ಏಪ್ರಿಲ್ನಿಂದ ಸೆಪ್ಟಂಬರ್ವರೆಗೆ ಅರ್ಧ ವರ್ಷದ ತೆರಿಗೆ ನೀಡುವಂತೆ …
Read More »ಮತಾಂತರಗೊಂಡು ಮದುವೆಯಾದಳು : ಹಿಂಸೆಯನ್ನು ಸಹಿಸಲಾರದೇ ವಿಧಾನಸಭೆಯ ಕಟ್ಟಡದೆದುರೇ ಬೆಂಕಿ ಹಚ್ಚಿಕೊಂಡಳು
ಲಖನೌ: ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಯುವತಿಯೊಬ್ಬಳು, ಗಂಡನ ಮನೆಯವರು ಕೊಡುವ ಹಿಂಸೆಯನ್ನು ಸಹಿಸಿಲಾರದೇ ಇಲ್ಲಿಯ ವಿಧಾನಸಭೆಯ ಕಟ್ಟಡದೆದುರೇ ಎದುರೇ ಬೆಂಕಿಹಚ್ಚಿಕೊಂಡಿರುವ ಘಟನೆ ನಡೆದಿದೆ. ಅಂಜನಾ ತಿವಾರಿ ಅಲಿಯಾಸ್ ಆಯೇಷಾ ಇಂಥದ್ದೊಂದು ಕೃತ್ಯ ಎಸಗಿದ್ದಾಳೆ. ಗಂಭೀರವಾಗಿ ಗಾಯಗೊಂಡಿರುವ ಈಕೆಯನ್ನು ಇದೀಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಂಜನಾ ಈ ಮೊದಲು ಅಖಿಲೇಶ್ ಎಂಬುವವರನ್ನು ವಿವಾಹವಾಗಿದ್ದರು. ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದ ಹಿನ್ನೆಲೆಯಲ್ಲಿ ವಿಚ್ಛೇದನ ಪಡೆದುಕೊಂಡಿದ್ದರು. ನಂತರ ಅಂಜನಾ, ಆಸಿಫ್ ಎಂಬುವವನ ಬಲೆಗೆ ಬಿದ್ದರು. ಈಕೆಯನ್ನು ಪ್ರೀತಿಸುವ …
Read More »ನಂದಿ ಗಿರಿಧಾಮ ತೋಟಗಾರಿಕಾ ಇಲಾಖೆಯ ಕೈಜಾರುತ್ತದಾ? ಮುಂದೇನು?
ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿ ಗಿರಿಧಾಮದಲ್ಲಿ ಕುಟುಂಬ ಸಮೇತ ವಾಸ್ತ್ಯವ್ಯ ಹೂಡಿದ್ದ ತೋಟಗಾರಿಕೆ ಸಚಿವ ನಾರಾಯಣ ಗೌಡ, ನಂದಿ ಗಿರಿಧಾಮದ ಪ್ರಕೃತಿ ಸೌಂದರ್ಯಕ್ಕೆ ಮರುಳಾದ್ರು. ನಂದಿ ಗಿರಿಧಾಮದ ಪ್ರಕೃತಿ ಸೌಂದರ್ಯಕ್ಕೆ ಮರುಳಾದ ಸಚಿವ ನಾರಾಯಣ ಗೌಡ ರಾತ್ರಿಯೇ ನಂದಿ ಗಿರಿಧಾಮದಲ್ಲಿ ಕುಟುಂಬ ಸಮೇತ ವಾಸ್ತವ್ಯ ಹೂಡಿದ್ದ ಸಚಿವರು, ಬೆಳ್ಳಂಬೆಳಿಗ್ಗೆ ಎದ್ದು ನಂದಿ ಗಿರಿಧಾಮದ ರಸ್ತೆಗಳಲ್ಲಿ ರೌಂಡ್ಸ್ ಹಾಕಿದರು. ಇದೇ ಮೊದಲ ಬಾರಿಗೆ ನಾನು ಸಚಿವನಾದ ನಂತರ ನಂದಿ ಗಿರಿಧಾಮಕ್ಕೆ ಆಗಮಿಸಿದ್ದೇನೆ. …
Read More »ರಾಜ್ಯ-ಕೇಂದ್ರ ಸರ್ಕಾರಕ್ಕೆ ಸಂದೇಶ ರವಾನಿಸಲು ಈ ಚುನಾವಣೆ: ಡಿ.ಕೆ. ಶಿವಕುಮಾರ್
ಬೆಂಗಳೂರು: ಈ ಬಾರಿಯ ಉಪಚುನಾವಣೆಯನ್ನು ಬಿ.ಎಸ್. ಯಡಿಯೂರಪ್ಪ ಅವರ ರಾಜ್ಯ ಸರ್ಕಾರವನ್ನು ಅಥವಾ ಮೋದಿ ಅವರ ಕೇಂದ್ರ ಸರ್ಕಾರ ಬೀಳಿಸಲು ಎದುರಿಸುತ್ತಿಲ್ಲ. ಬದಲಿಗೆ ಎರಡೂ ಸರ್ಕಾರಗಳಿಗೆ ಸಂದೇಶ ರವಾನಿಸಲು ಈ ಚುನಾವಣೆ ಎದುರಿಸುತ್ತೇದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್ ಅವರು ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಿಷ್ಟು: ‘ರಾಜರಾಜೇಶ್ವರಿ …
Read More »ರಸ್ತೆಬದಿಯಲ್ಲೇ ದುಷ್ಕರ್ಮಿಗಳು ವ್ಯಕ್ತಿಯೊಬ್ಬರ ತಲೆ ಕಡಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ದಾವಣಗೆರೆ: ರಸ್ತೆಬದಿಯಲ್ಲೇ ದುಷ್ಕರ್ಮಿಗಳು ವ್ಯಕ್ತಿಯೊಬ್ಬರ ತಲೆ ಕಡಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಜಗಳೂರು ತಾಲೂಕಿನ ಅಶ್ವತ್ಥರೆಡ್ಡಿ ನಗರ ಸಮೀಪದ ಬಿದರಕೆರೆ ರಸ್ತೆಯಲ್ಲಿ ಬುಧವಾರ ಬೆಳಗಿನ ಜಾವ ಈ ದುರ್ಘಟನೆ ಸಂಭವಿಸಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಎಗ್ರೈಸ್ ವ್ಯಾಪಾರಿ ಬಸವರಾಜ(45) ಭೀಕರವಾಗಿ ಕೊಲೆಯಾದವ. ಗೋಪಗೊಂಡನಹಳ್ಳಿ ಸಮೀಪದಲ್ಲಿರುವ ಹೊಲಕ್ಕೆಂದು ಬುಧವಾರ ಬೆಳಗಿನ ಜಾವ ಬಸವರಾಜ ಹೋಗುತ್ತಿದ್ದ ಎನ್ನಲಾಗಿದೆ. ಈ ವೇಳೆ ದುಷ್ಕರ್ಮಿಗಳು ಕೊಲೆ ಮಾಡಿ ಶವ ಎಸೆದು ಪರಾರಿಯಾಗಿದ್ದಾರೆ …
Read More »DC ಕಚೇರಿಯಲ್ಲಿ ಹಾವು ಪ್ರತ್ಯಕ್ಷ! ಕೆಲಸ ಬಿಟ್ಟು ಓಡಿ ಹೋದ ಸಿಬ್ಬಂದಿ..
ಚಿಕ್ಕಮಗಳೂರು: ಕೆರೆ ಹಾವೊಂದು ಅತ್ತಿಂದಿತ್ತ ಓಡಾಡಿ ಸಿಬ್ಬಂದಿಗಳಲ್ಲಿ ಆತಂಕ ಹುಟ್ಟಿಸಿದ್ದ ಪ್ರಸಂಗ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಆವರಣದ ಮಧ್ಯದಲ್ಲಿ ಗಾಂಧಿ ಪ್ರತಿಮೆ ಸುತ್ತಲೂ ಇರೋ ಹುಲ್ಲು ಹಾಸಿನ ಮೇಲೆ ಕೆರೆ ಹಾವನ್ನ ಕಂಡು ಸಿಬ್ಬಂದಿಗಳು ಹಾಗೂ ಕೆಲಸಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದ ಜನಸಾಮಾನ್ಯರು ಗಾಬರಿಯಾಗಿದ್ದರು. ಒಂದು ಆಫೀಸಿನಿಂದ ಮತ್ತೊಂದು ಆಫೀಸ್ ಗೆ ಹೋಗುವಾಗ ಹಾವನ್ನ ಕಂಡ ಸಿಬ್ಬಂದಿಗಳು ಗಾಬರಿಗೊಂಡಿದ್ದರು. ಅತ್ಯಂತ ವೇಗವಾಗಿ ಓಡುವ ಕೆರೆ ಹಾವು ಸಿಬ್ಬಂದಿಗಳ …
Read More »ಹೊಸಕೋಟೆ: ಕ್ಯಾಂಟರ್, ಬೈಕ್ ಮುಖಾಮುಖಿ ಡಿಕ್ಕಿ, ದಂಪತಿ ಸ್ಥಳದಲ್ಲೇ ಸಾವು
ದೇವನಹಳ್ಳಿ: ಕ್ಯಾಂಟರ್ ಮತ್ತು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಭೀಕರ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಶಿವನಾಪುರ ಕ್ರಾಸ್ ಬಳಿ ನಡೆದಿದೆ. ಆಂಧ್ರ ಮೂಲದ ಸುಬ್ಬಯ್ಯ(45) ಮತ್ತು ಅರುಣ(40) ದಂಪತಿ ಮೃತರು. ಬೈಕ್ನಲ್ಲಿ ಆಂಧ್ರದಿಂದ ಬೆಂಗಳೂರಿಗೆ ಬರ್ತಿದ್ದ ವೇಳೆ ಎದುರಿನಿಂದ ಬಂದ ಕ್ಯಾಂಟರ್ ಮುಖಾಮುಖಿಯಾಗಿದೆ. ಈ ಪರಿಣಾಮ ಬೈಕ್ನಲ್ಲಿ ಇಬ್ಬರೂ ಪ್ರಾಣ ಕಳೆದುಕೊಂಡಿದ್ದಾರೆ. ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »10 ವರ್ಷದಿಂದ ಬತ್ತಿದ್ದ ಕೊಳವೆ ಬಾವಿಗಳಿಗೆ ಮರು ಜೀವ! ಉಕ್ಕುತ್ತಿದ್ದಾಳೆ ಗಂಗೆ..
ಬಾಗಲಕೋಟೆ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ಬತ್ತಿದ್ದ ಕೊಳವೆ ಬಾವಿಗಳು ಮರು ಜೀವ ಪಡೆದುಕೊಳ್ಳುತ್ತಿವೆ. 10 ವರ್ಷಗಳಿಂದ ಬತ್ತಿದ್ದ ಕೊಳವೆ ಬಾವಿಗಳಲ್ಲಿ ನೀರು ಉಕ್ಕುತ್ತಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಭಾರಿ ಮಳೆಯಿಂದಾಗಿ ಕೆರೆಗಳು ತುಂಬಿವೆ. ರಸ್ತೆಗಳಲ್ಲಿ ನೀರು ನಿಂತಿದೆ. ಇದರ ಜೊತೆಗೆ ಜಿಲ್ಲೆಯ ಹಲವೆಡೆ ಹಲವು ವರ್ಷಗಳಿಂದ ಬತ್ತಿ ಹೋಗಿದ್ದ ಕೊಳವೆ ಬಾವಿಗಳಲ್ಲಿ ನೀರು ಹರಿಯುತ್ತಿದೆ. ಚಿಮ್ಮಡ, ರಬಕವಿಯ ಬ್ರಹ್ಮಾನಂದ ನಗರದಲ್ಲಿನ ವಿಜಯ ಹೂಗಾರ ಮನೆಯ ಬೋರ್ವೆಲ್ನಲ್ಲಿ …
Read More »ಸಿದ್ದು ಸಿಎಂ ಆಗಿದ್ದಾಗ 2 ವರ್ಷ ಡಿಕೆಶಿಯನ್ನು ಸಂಪುಟಕ್ಕೆ ತೆಗೆದುಕೊಂಡಿರಲಿಲ್ಲ.. ಯಾಕೆ?’
ಬೆಳಗಾವಿ: ಮೊನ್ನೆ ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆದ ಸಚಿವರ ಖಾತೆ ಬದಲಾವಣೆ ಬಗ್ಗೆ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ. ಅಸಮರ್ಥರೆಂಬ ಕಾರಣಕ್ಕೆ ಖಾತೆ ಬದಲಾಯಿಸುವುದಿಲ್ಲ. ಉತ್ತಮವಾಗಿ ಕೆಲಸ ನಡೆಯಲು ಖಾತೆ ಬದಲಾವಣೆ ಅಗತ್ಯವಿರುತ್ತದೆ. ಖಾತೆಗಳ ಅದಲು ಬದಲು ಮುಖ್ಯಮಂತ್ರಿಗಿರುವ ಪರಮಾಧಿಕಾರ. ನಮ್ಮ ಪಕ್ಷದ ವರಿಷ್ಠರ ಜತೆಗೆ ಮಾತುಕತೆ ಮಾಡಿಕೊಂಡು ತೀರ್ಮಾನ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಯಾವುದೇ ಹರುಳಿಲ್ಲ, ರಾಜಕೀಯವಾಗಿ ಹೇಳಿಕೆ …
Read More »