ಆಂಧ್ರಪ್ರದೇಶ : ತಿರುಪತಿ ತಿರುಮಲ ದೇವಾಲಯದಲ್ಲಿನ ಬಾಯ್ಲರ್ ನಿಂದ ಬಿಸಿನೀರು ಸೋರಿಕೆಯಾಗಿ, ಕಾರ್ಮಿಕರಿಗೆ ಸಿಡಿದಿದ್ದರಿಂದಾಗಿ, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ಈ ಕುರಿತಂತೆ ಪ್ರಕಟಣೆ ಹೊರಡಿಸಿರುವಂತ ಟಿಟಿಡಿ, ಅಡುಗೆ ಮನೆಯಲ್ಲಿ ಬಾಯ್ಲರ್ ನಿಂದ ನೀರು ಸೋರಿಕೆಯಾಗಿ, ಕಾರ್ಮಿಕರ ಮೇಲೆ ಬಿದ್ದಿರುವ ಪರಿಣಾಮ, ಐವರು ಕೆಲಸಗಾರರು ಗಾಯಗೊಂಡಿದ್ದಾರೆ. ಇಂತಹ ಕಾರ್ಮಿಕರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡುತ್ತಿರುವುದಾಗಿ ತಿಳಿಸಿದೆ.
Read More »ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ
ಚೆನ್ನೈ: ತಮಿಳುನಾಡಿನ ಚೆನ್ನೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ನಾಲ್ವರನ್ನು ಬಂಧಿಸಿ ಗುದನಾಳಗಳಲ್ಲಿ ಇಟ್ಟುಕೊಂಡು ಸಾಗಿಸುತ್ತಿದ್ದ ಪೇಸ್ಟ್ ರೂಪದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಚೆನ್ನೈಗೆ ಆಗಮಿಸಿದ ನಾಲ್ವರು ಪ್ರಯಾಣಿಕರು ಚಿನ್ನದ ಪೇಸ್ಟ್ ಇಟ್ಟುಕೊಂಡು ಸಾಗಿಸುತ್ತಿದ್ದರು. ಇದರ ಮೌಲ್ಯ 45.5 ಲಕ್ಷ ರೂಪಾಯಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 864 ಗ್ರಾಂ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಸಾಗಿಸಲಾಗುತ್ತಿತ್ತು. ಪರಿಶೀಲನೆ ವೇಳೆ ಚಿನ್ನ ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯಕೀಯ ವಿಧಾನಗಳ ಮೂಲಕ ಹೊರತೆಗೆಯಲಾಗಿದೆ.
Read More »ನಿಮ್ಮ ಆಡಳಿತವು ರೈತರಿಗೆ ಟಿಪ್ಪು ಆಡಳಿತದಂತಿತ್ತು ಎಂದು ರಾಜ್ಯ ಬಿಜೆಪಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದೆ.
ಬೆಂಗಳೂರು : ನಿಮ್ಮ ಆಡಳಿತವು ರೈತರಿಗೆ ಟಿಪ್ಪು ಆಡಳಿತದಂತಿತ್ತು ಎಂದು ರಾಜ್ಯ ಬಿಜೆಪಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದೆ. ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ, ಸಿದ್ದರಾಮಯ್ಯನವರೇ ನಿಮ್ಮ ಆಡಳಿತವು ರೈತರಿಗೆ ಟಿಪ್ಪು ಆಡಳಿತದಂತಿತ್ತು. ರೈತರ ಪಾಲಿಗೆ ಮರಣಕೂಪದಂತಿದ್ದ ನಿಮ್ಮ ಅವಧಿಯಲ್ಲಿ 3000 ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡದ್ದು ದುರ್ದೈವ. ಅನ್ನದಾತರು ಸಾವಿಗೆ ಶರಣಾಗುತ್ತಿದ್ದರೆ ನೀವು ಮಾತ್ರ …
Read More »ದಿವಂಗತ ಶಾಸಕ ಬಿ. ನಾರಾಯಣರಾವ್ ಅವರ ಸಮಾಧಿ ಸ್ಥಳದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡುವಾಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪಂಜೆ ಜಾರಿದ ಪ್ರಸಂಗ ನಡೆದಿದೆ.
ಬಸವಕಲ್ಯಾಣ : ದಿವಂಗತ ಶಾಸಕ ಬಿ. ನಾರಾಯಣರಾವ್ ಅವರ ಸಮಾಧಿ ಸ್ಥಳದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡುವಾಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪಂಜೆ ಜಾರಿದ ಪ್ರಸಂಗ ನಡೆದಿದೆ. ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ನಿಂತು ಮಾತನಾಡುವಾಗ ಪಂಜೆ ಸಡಿಲಗೊಂಡು ಬೀಳುವ ಹಂತದಲ್ಲಿತ್ತು. ಅದನ್ನು ಗಮನಿಸಿದ ನಗರ ಠಾಣೆ ಪಿಎಸ್ ಐ ಗುರುಪಾಟೀಲ್ ಅವರು ವೇದಿಕೆಗೆ ಆಗಮಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಖಂಡ್ರೆ ಮತ್ತು ಹಮನಾಬಾದ ಶಾಸಕ ರಾಜಶೇಖರ್ ಪಾಟೀಲ್ …
Read More »ನೀಟಾಗಿ ಡ್ರೆಸ್ ಮಾಡಿಕೊಂಡು ಮದುವೆ ನಡೆಯುತ್ತಿದ್ದ ಕಲ್ಯಾಣ ಮಂಟಪಗಳಿಗೆ ಒಬ್ಬ ಗೃಹಿಣಿಯಂತೆ ನುಗ್ಗಿ ಮಹಿಳೆಯರ ಆಭರಣಗಳನ್ನು ಕಳವು ಮಾಡುತ್ತಿದ್ದ ಕಳ್ಳಿಯನ್ನು
ನೀಟಾಗಿ ಡ್ರೆಸ್ ಮಾಡಿಕೊಂಡು ಮದುವೆ ನಡೆಯುತ್ತಿದ್ದ ಕಲ್ಯಾಣ ಮಂಟಪಗಳಿಗೆ ಒಬ್ಬ ಗೃಹಿಣಿಯಂತೆ ನುಗ್ಗಿ ಮಹಿಳೆಯರ ಆಭರಣಗಳನ್ನು ಕಳವು ಮಾಡುತ್ತಿದ್ದ ಕಳ್ಳಿಯನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ . ಬಂಧಿತ ಮಹಿಳೆಯನ್ನು ಕಮಲಮ್ಮ (26) ಎಂದು ಗುರುತಿಸಲಾಗಿದ್ದು ಆಕೆ ನಾಗರಹೊಳೆಯ ನಿವಾಸಿಯೆಂದು ತಿಳಿದುಬಂದಿದೆ . ಪೊಲೀಸರ ಪ್ರಕಾರ ಕಮಲಮ್ಮನ ಕಳುವು ಮಾಡುವ ರೀತಿ ಸುಲಭವಾಗಿತ್ತು . ಮದುವೆ ನಡೆಯುತ್ತಿದ್ದ ಛತ್ರಗಳಿಗೆ ಆಕೆ ಸದ್ಗೃಹಿಣಿಯಂತೆ ಡ್ರೆಸ್ ಮಾಡಿಕೊಂಡು ಮದುವೆಮನೆಗಳ …
Read More »ಗಜಪಡೆ. ಸದ್ಯ ಗಜಪಡೆಯನ್ನು ಸಿದ್ದಪಡಿಸಲಾಗುತ್ತಿದೆ. ಆನೆಗಳಿಗೆ ಅರಮನೆಯ ಆವರಣದ ತಾತ್ಕಾಲಿಕ ಸ್ನಾನದ ಹೊಂಡದಲ್ಲಿ ಸ್ನಾನ ಮಾಡಿಸಿ ಸಿಂಗರಿಸಲಾಗುತ್ತಿದೆ.
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಜಂಬೂ ಸವಾರಿಯ ಪ್ರಮುಖ ಆಕರ್ಷಣೆ ಎಂದರೆ ಅದು ಗಜಪಡೆ. ಸದ್ಯ ಗಜಪಡೆಯನ್ನು ಸಿದ್ದಪಡಿಸಲಾಗುತ್ತಿದೆ. ಆನೆಗಳಿಗೆ ಅರಮನೆಯ ಆವರಣದ ತಾತ್ಕಾಲಿಕ ಸ್ನಾನದ ಹೊಂಡದಲ್ಲಿ ಸ್ನಾನ ಮಾಡಿಸಿ ಸಿಂಗರಿಸಲಾಗುತ್ತಿದೆ. ಕಲಾವಿದ ನಾಗಲಿಂಗಪ್ಪ ನೇತೃತ್ವದಲ್ಲಿ ಗಜಪಡೆಗೆ ಬಣ್ಣ ಹಚ್ಚುವ ಕೆಲಸ ಆರಂಭವಾಗಿದೆ. ಹುಣಸೂರು ಮೂಲದ ಒಟ್ಟು 5 ಕಲಾವಿದರು ದಸರಾ ಆನೆಗಳಿಗೆ ಪ್ರತೀ ಬಾರಿಯಂತೆ ವಿಶೇಷ ಬಣ್ಣಗಳಿಂದ ಅಲಂಕರಿಸುತ್ತಿದ್ದಾರೆ. …
Read More »ವ್ಯಾಪ್ತಿಯಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿಯಾಗಿತ್ತು. ಹೀಗಾಗಿ ಕಂದಾಯ ಸಚಿವ R.ಅಶೋಕ್ 25 ಸಾವಿರ ರೂ. ಪರಿಹಾರದ ಚೆಕ್ ವಿತರಿಸಿದ್ದರು
ಬೆಂಗಳೂರು: ಹೊಸಕೆರೆ ಹಳ್ಳಿಯ ದತ್ತಾತ್ರೇಯ ನಗರ ವ್ಯಾಪ್ತಿಯಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿಯಾಗಿತ್ತು. ಹೀಗಾಗಿ ಕಂದಾಯ ಸಚಿವ R.ಅಶೋಕ್ 25 ಸಾವಿರ ರೂ. ಪರಿಹಾರದ ಚೆಕ್ ವಿತರಿಸಿದ್ದರು. ಇದು ಸಂತ್ರಸ್ಥರಿಗೆ ಕೊಂಚ ಖುಷಿ ನೀಡಿತ್ತು. ಆದರೆ ಪರಿಹಾರ ಹಣ ಪಡೆದವರಿಗೆ ಬಿಬಿಎಂಪಿ ಶಾಕ್ ನೀಡಲಿದೆ. ದತ್ತಾತ್ರೇಯನಗರದಲ್ಲಿ ರಾಜಕಾಲುವೆ ಒತ್ತುವರಿಯಾದ ಹಿನ್ನೆಲೆಯಲ್ಲಿ ಒತ್ತುವರಿ ಜಾಗ ಪತ್ತೆಗೆ ಪಾಲಿಕೆಯ ಅಧಿಕಾರಿಗಳು ಮುಂದಾಗಿದ್ದಾರೆ. ಪರಿಹಾರ ಪಡೆದ 344 …
Read More »ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ.
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸರಳವಾಗಿ ಜಂಬೂಸವಾರಿ ಮೆರವಣಿಗೆ ನಡೆಯುತ್ತಿದ್ದ ಹಿಂದಿನ ವೈಭವವನ್ನು ಕಳೆದುಕೊಂಡಿದೆ. ಆಗಿದ್ರೆ ಕೊರೊನಾ ದಸರಾ ಜಂಬೂಸವಾರಿ ಹೇಗಿರುತ್ತೇ ಅನ್ನೋ ಬಗ್ಗೆ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ. ಕೊರೊನಾ ನಡುವೆ ಜಂಬೂ ಸವಾರಿ ಮೆರವಣಿಗೆ! ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಕೇವಲ ಆಚರಣೆಗೆ ಮಾತ್ರ ಜಂಬೂಸವಾರಿ ಸೀಮಿತವಾಗಿದೆ. ಕೇವಲ ಅರಮನೆಯ …
Read More »ಮಣ್ಣಿನ ಚಾವಣಿ ಕುಸಿದು ಬಿದ್ದು ಒಂದೇ ಕುಟುಂಬದ ಐವರು ಮಹಿಳೆಯರು ದಾರುಣ ಸಾವು
ಹೈದರಾಬಾದ್: ಪೂರ್ವಜರು ಕಟ್ಟಿಸಿದ್ದ ಹಳೇ ಮನೆಯ ಮಣ್ಣಿನ ಚಾವಣಿ ಕುಸಿದು ಬಿದ್ದು ಒಂದೇ ಕುಟುಂಬದ ಐವರು ಮಹಿಳೆಯರು ದಾರುಣ ಸಾವಿಗೀಡಾಗಿರುವ ಘಟನೆ ತೆಲಂಗಾಣದ ವಾನಪರ್ತೆ ಜಿಲ್ಲೆಯಲ್ಲಿ ನಡೆದಿದೆ. ದುರಂತವೆಂದರೆ ಸಾವಿಗೂ ಮುನ್ನ ಐವರು ಸಹ ಕುಟುಂಬದ ಸದಸ್ಯರೊಬ್ಬರ ತಿಥಿ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಗೋಪಾಲ್ಪೇಟೆ ಮಂಡಲದ ಬುದ್ದರಾಮ್ ಗ್ರಾಮದಲ್ಲಿ ಇಂದು (ಅ.25) ಬೆಳ್ಳಂಬೆಳಗ್ಗೆ ದುರ್ಘಟನೆ ಸಂಭವಿಸಿದೆ. ನಾಲ್ವರು ಗಂಡು ಮಕ್ಕಳು ತಮ್ಮ ಪತ್ನಿ ಹಾಗೂ ಮಕ್ಕಳ ಜತೆ ಸೇರಿ ತಂದೆಯ ವರ್ಷದ ತಿಥಿ …
Read More »ಸುರೇಶ್ ಅಂಗಡಿ ಸಿಎಂ ಆಗುತ್ತಿದ್ರು ಅಂತಾ ರಮೇಶ್ ಜಾರಕಿಹೊಳಿ ಪರೋಕ್ಷವಾಗಿ ಹೇಳಿಕೆ ಕೊಟ್ರಾ ಅನ್ನೋ ಮಾತು ಕೇಳಿಬಂದಿದೆ.
ಬೆಳಗಾವಿ: ಸುರೇಶ್ ಅಂಗಡಿ ಬದುಕಿದ್ದರೆ 2-3 ತಿಂಗಳಲ್ಲಿ ದೊಡ್ಡ ಹುದ್ದೆ ಸಿಗುತ್ತಿತ್ತು ಎಂದು ಗೋಕಾಕ್ನಲ್ಲಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಸುರೇಶ್ ಅಂಗಡಿಗೆ ಒಳ್ಳೆಯ ಭವಿಷ್ಯವಿರುತ್ತಿತ್ತು. ಅವರಿಗೆ ವಿಚಿತ್ರ ಹುದ್ದೆ ಸಿಗುತ್ತಿತ್ತು ಎಂದು ರಮೇಶ್ ಹೇಳಿದ್ದಾರೆ. ಈ ಮೂಲಕ ಸುರೇಶ್ ಅಂಗಡಿ ಸಿಎಂ ಆಗುತ್ತಿದ್ರು ಅಂತಾ ರಮೇಶ್ ಜಾರಕಿಹೊಳಿ ಪರೋಕ್ಷವಾಗಿ ಹೇಳಿಕೆ ಕೊಟ್ರಾ ಅನ್ನೋ ಮಾತು ಕೇಳಿಬಂದಿದೆ. ಆದರೆ ಸುರೇಶ್ ಅಂಗಡಿ ನಮ್ಮನ್ನಗಲಿದ್ದು ದುರ್ದೈವ. ಒಳ್ಳೆಯವರನ್ನು ಆ ದೇವರು …
Read More »
Laxmi News 24×7