Breaking News

ರಾಷ್ಟ್ರೀಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ : 5 ಸಾವು

ಮದುರೈ,ಅ.24- ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಿದ್ದಂತೆ ತಮಿಳುನಾಡಿನ ಪಟಾಕಿ ತಯಾರಿಕಾ ಕಾರ್ಖಾನೆಗಳಲ್ಲಿ ಬೆಂಕಿ ಮತ್ತು ಸ್ಫೋಟ ದುರಂತಗಳು ಮರುಕಳಿಸುತ್ತಿವೆ. ಮಧುರೈ ಪಟಾಕಿ ತಯಾರಿಕಾ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಸ್ಫೋಟ ಸಂಭವಿಸಿ, ಐವರು ಮೃತಪಟ್ಟು, ಇತರ ಮೂವರಿಗೆ ಗಂಭೀರ ಗಾಯಗಳಾಗಿವೆ. ಕಲ್ಲುಪಟ್ಟಿ ಪ್ರದೇಶದ ಪಟಾಕಿ ತಯಾರಿಕೆ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ನಂತರ ಭಾರೀ ಸ್ಫೋಟ ಸಂಭಸಿತು. ಈ ದುರ್ಘಟನೆಯಲ್ಲಿ ಐವರು ಸ್ಥಳದಲ್ಲೇ ಸಾವಿಗೀಡಾದರು.ಸುದ್ದಿ ತಿಳಿದ ಕೂಡಲೆ ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ …

Read More »

ಹಬ್ಬಕ್ಕೆ ದಿನಸಿ ಖರೀದಿಸಲು ಬಂದ ವ್ಯಕ್ತಿ ಹೃದಯಾಘಾತದಿಂದ ಇದ್ದಕ್ಕಿದ್ದಂತೆ ಕುಸಿದು ಬಿದ್ದು ರಸ್ತೆಯಲ್ಲಿ ಸಾವನ್ನಪ್ಪಿದ್ದಾರೆ.

ಹಾಸನ: ಹಬ್ಬಕ್ಕೆ ದಿನಸಿ ಖರೀದಿಸಲು ಬಂದ ವ್ಯಕ್ತಿ ಹೃದಯಾಘಾತದಿಂದ ಇದ್ದಕ್ಕಿದ್ದಂತೆ ಕುಸಿದು ಬಿದ್ದು ರಸ್ತೆಯಲ್ಲಿ ಸಾವನ್ನಪ್ಪಿದ್ದಾರೆ. ಹಾಸನದ ಎಂಜಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಇಂದು ಬೆಳಗ್ಗೆ 10:45 ರ ಸುಮಾರಿಗೆ ವ್ಯಕ್ತಿಯೊಬ್ಬರು ಎಂಜಿ ರಸ್ತೆಗೆ ಕುಟುಂಬದವರ ಜೊತೆಗೆ ಹಬ್ಬಕ್ಕೆ ದಿನಸಿ ಖರೀದಿಸಲು ಬಂದಿದ್ದಾರೆ. ಈ ವೇಳೆ ಅವರು ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣ ಅಂಬುಲೆನ್ಸ್ ಗೆ ಕರೆ ಮಾಡಿದರೂ ಸುಮಾರು ಅರ್ಧ ಗಂಟೆ ಆಂಬುಲೆನ್ಸ್ ತಡವಾಗಿ ಬಂದಿದೆ. ಅಷ್ಟರಲ್ಲಾಗಲೇ ವ್ಯಕ್ತಿಯ …

Read More »

ರಾಜ್ಯದಲ್ಲಿ ಕೊರೊನಾ ಕ್ರಿಮಿ ಹಾವು ಏಣಿ ಆಟ ಆಡುತ್ತಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕ್ರಿಮಿ ಹಾವು ಏಣಿ ಆಟ ಆಡುತ್ತಿದೆ. ಸೋಂಕಿತರ ಸಂಖ್ಯೆ ಕಡಿಮೆಯಾಗಿ ಇನ್ನೇನು ಕೊರೊನಾ ಹಾವಳಿ ಕಡಿಮೆಯಾಯಿತು ಅಂದುಕೊಳ್ಳುವಷ್ಟರಲ್ಲೇ ಮತ್ತೆ ಧುತ್ತನೆ ಕಾಣಿಸಿಬಿಡುತ್ತಿದೆ ಈ ಕ್ರಿಮಿ. ಇದು ಸರ್ಕಾರಕ್ಕೂ ತಲೆಬೇನೆಯಾಗಿದೆ. ಜನಾನೂ ಹೈರಾಣಗೊಂಡಿದ್ದಾರೆ. ಈ ಮಧ್ಯೆ ಕೊವಿಡ್ ಉಸ್ತುವಾರಿಯನ್ನು ಏಕಾಂಗಿಯಾಗಿ ಒಬ್ಬರ ಹೆಗಲಿಗೆ ಜವಾಬ್ದಾರಿ ವಹಿಸಲಾಗಿದ್ದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್​ ಕೊರೊನಾ ಕ್ರಿಮಿಯನ್ನು ಕಟ್ಟಿಹಾಕಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೂ ಆದಷ್ಟು …

Read More »

ಹಿರಿಯ ಅಧಿಕಾರಿಯ ಆಕ್ರೋಶಕ್ಕೆ ಬೇಸತ್ತು ಪೊಲೀಸ್​ ಅಧಿಕಾರಿಯೊಬ್ಬರು ರಾಜೀನಾಮೆ ನೀಡಿದ್ದಾರೆ ಎಂಬ ಮಾತು ಕೇಳಿಬಂದಿದೆ.

ಬಳ್ಳಾರಿ: ಹಿರಿಯ ಅಧಿಕಾರಿಯ ಆಕ್ರೋಶಕ್ಕೆ ಬೇಸತ್ತು ಪೊಲೀಸ್​ ಅಧಿಕಾರಿಯೊಬ್ಬರು ರಾಜೀನಾಮೆ ನೀಡಿದ್ದಾರೆ ಎಂಬ ಮಾತು ಕೇಳಿಬಂದಿದೆ. ಹಂಪಿ Dy. SP ಎಸ್.ಎಸ್. ಕಾಶಿಗೌಡ ಅಧಿಕಾರಿಗಳ ಆಕ್ರೋಶಕ್ಕೆ ಬೇಸತ್ತು ರಾಜೀನಾಮೆ ನೀಡಿದ್ದಾರೆ ಎಂಬ ಮಾತು ಕೇಳಿಬಂದಿದೆ.  DG&IGPಗೆ ರಾಜೀನಾಮೆ ಸಲ್ಲಿಸಿದ Dy. SP ಕಾಶಿಗೌಡ IGP ನಂಜುಂಡಸ್ವಾಮಿ ರಾಜೀನಾಮೆ ನೀಡುವಂತೆ ಹೇಳಿದ ಹಿನ್ನೆಲೆ ರಾಜೀನಾಮೆ ನೀಡಿದ್ದೇನೆ ಎಂದು ಈ ಬಗ್ಗೆ ಪೊಲೀಸ್ WhatsApp ಗ್ರೂಪ್​ನಲ್ಲಿ ಬರೆದುಕೊಂಡಿದ್ದಾರೆ. ಏನಿದು ರಾಜೀನಾಮೆ ಪ್ರಕರಣ? ಹಂಪಿ ಸುತ್ತಮುತ್ತ …

Read More »

ರಸ್ತೆ ದಾಟುತ್ತಿದ್ದ ಜಿಂಕೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸಾವನ್ನಪ್ಪಿರೋ ಘಟನೆ

ಮೈಸೂರು: ರಸ್ತೆ ದಾಟುತ್ತಿದ್ದ ಜಿಂಕೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ನಾಗಾಪುರ ಬಳಿ ನಡೆದಿದೆ. ಹುಣಸೂರು-ನಾಗರಹೊಳೆ ರಸ್ತೆಯಲ್ಲಿರುವ ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದ ಬಳಿ ಅವಘಡ ಸಂಭವಿಸಿದೆ. ಬೈಕ್​ ಡಿಕ್ಕಿ ಹೊಡೆದ ರಭಸಕ್ಕೆ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿದೆ. ಇನ್ನು ಬೈಕ್​ ಸವಾರ ಸಂತೋಷ್​ಗೆ ಗಾಯಗಳಾಗಿದ್ದು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

Read More »

ನಗರದಲ್ಲಿ ಬೆಳ್ಳಂಬೆಳಗ್ಗೆ ನಿವೃತ್ತ ಪ್ರೊಫೆಸರ್​ನನ್ನು ಕೊಲೆಗೈದಿರುವ ಘಟನೆ ಲಿಂಗರಾಜ ನಗರದಲ್ಲಿ ನಡೆದಿದೆ.

ಹುಬ್ಬಳ್ಳಿ: ನಗರದಲ್ಲಿ ಬೆಳ್ಳಂಬೆಳಗ್ಗೆ ನಿವೃತ್ತ ಪ್ರೊಫೆಸರ್​ನನ್ನು ಕೊಲೆಗೈದಿರುವ ಘಟನೆ ಲಿಂಗರಾಜ ನಗರದಲ್ಲಿ ನಡೆದಿದೆ. ಚಾಕುವಿನಿಂದ ಇರಿದು ನಿವೃತ್ತ ಪ್ರೊಫೆಸರ್ ಶಂಕ್ರಪ್ಪ ಮುಶನ್ನವರ ಕೊಲೆ ಮಾಡಲಾಗಿದೆ. ಶಂಕ್ರಪ್ಪ ಗದಗ ಜಿಲ್ಲೆಯ ಕಾನೂನು ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಕರ್ತವ್ಯ ನಿರ್ವಹಿಸಿದ್ದು ಇತ್ತೀಚೆಗೆ ನಿವೃತ್ತಿ ಪಡೆದು ಹುಬ್ಬಳ್ಳಿಯಲ್ಲಿ ನೆಲೆಸಿದ್ದರು ಎಂದು ತಿಳದುಬಂದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಳಿಯನೇ ಕೊಲೆ ಮಾಡಿರುವ ಶಂಕೆ‌ ವ್ಯಕ್ತವಾಗಿದೆ. ಸ್ಥಳಕ್ಕೆ ವಿದ್ಯಾನಗರ ಠಾಣೆ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಶಂಕ್ರಪ್ಪರ …

Read More »

ಪೊಲೀಸರ ಮೇಲೂ ತಲವಾರು ಬೀಸಿದ ಬಂಟ್ವಾಳ ಹತ್ಯೆ ಪ್ರಕರಣದ ಆರೋಪಿ | ಆರೋಪಿಯ ಮೇಲೆ ಪೊಲೀಸರಿಂದ ಫೈರಿಂಗ್

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮೆಲ್ಕಾರ್ ನಲ್ಲಿ ನಿನ್ನೆ ರಾತ್ರಿ ಉಮರ್ ಫಾರೂಕ್ ಎಂಬಾತನನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು. ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಪ್ರಮುಖ ಆರೋಪಿ ಖಲೀಲ್ ಹಾಗೂ ಆತನ ಇಬ್ಬರು ಸಹಚರರು ಬೆಂಗಳೂರಿಗೆ ತೆರಳಲು ಯತ್ನಿಸುತ್ತಿರುವ ಮಾಹಿತಿ ಆಧರಿಸಿ ಪೊಲೀಸರು ಅವರನ್ನು ಬೆನ್ನಟ್ಟಿ ಹೋಗಿದ್ದು, ಗುಂಡ್ಯ ಸಮೀಪದಲ್ಲಿ ಖಲೀಲ್ ಪೊಲೀಸರ ಮೇಲೆ ತಲವಾರು ಬೀಸಿದ್ದಾನೆ ಎಂದು …

Read More »

ಮೂಡಲಗಿ ಪುರಸಭೆ ನೂತನ ಅಧ್ಯಕ್ಷರಾಗಿ ಹಣಮಂತ ಗುಡ್ಲಮನಿ ಹಾಗೂ ಉಪಾಧ್ಯಕ್ಷರಾಗಿ ರೇಣುಕಾ ಹಾದಿಮನಿ ಅವಿರೋಧ ಆಯ್ಕೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ.

ಮೂಡಲಗಿ: ಬಹುನಿರಕ್ಷಿತ ಕುತುಹಲಕ್ಕೆ ಕಾರಣವಾಗಿದ ಸ್ಥಳೀಯ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ, ಹಣಮಂತ ಗುಡ್ಲಮನಿ ಹಾಗೂ ರೇಣುಖಾ ಹಾದಿಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಡಿ.ಜೆ. ಮಹಾತ್ ಪ್ರಕಟಣೆಯಲ್ಲಿ ತಿಳಿಸಿದರು. ಶುಕ್ರವಾರ ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಕುರಿತು ಚುನಾವಣಾ ಪ್ರಕೀಯೇಗಳು ಜರುಗಿದವು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದರಂತೆ ಚುನಾವಣಾ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧವಾಗಿ ಎರಡು ಸ್ಥಾನಗಳಿಗೆ ಚುನಾವಣಾ ಆಯ್ಕೆ ಪ್ರಕೀಯೇ ಜರುಗಿತು.   ನೂತನ …

Read More »

ನಾನೇನು ಬಂಡೆ, ಕನಕಪುರ ಬಂಡೆ ಅಂತ ಹೆಸರು ಇಟ್ಕೊಂಡಿಲ್ಲ. ಬಂಡೆ ಎಂಬುದು ಪ್ರಕೃತಿ. ಅದನ್ನು ಕಡೆದರೆ ಆಕೃತಿ, ಪೂಜಿಸುವುದು ಸಂಸ್ಕೃತಿ ಎಂದು ಬಿಜೆಪಿ ನಾಯಕರಿಗೆ ತಿರುಗೇಟು

ಬೆಂಗಳೂರು: ಬಿಜೆಪಿ ಅಧ್ಯಕ್ಷರು ಯಾರೋ ಬಂಡೆಯನ್ನ ಡೈನಾಮಿಟ್​ ಇಟ್ಟು ಪುಡಿ ಪುಡಿ ಮಾಡುತ್ತೇನೆ ಎಂದಿದ್ದಾರೆ. ನಾನೇನು ಬಂಡೆ, ಕನಕಪುರ ಬಂಡೆ ಅಂತ ಹೆಸರು ಇಟ್ಕೊಂಡಿಲ್ಲ. ಬಂಡೆ ಎಂಬುದು ಪ್ರಕೃತಿ. ಅದನ್ನು ಕಡೆದರೆ ಆಕೃತಿ, ಪೂಜಿಸುವುದು ಸಂಸ್ಕೃತಿ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಬಗ್ಗೆ ಮಾತನಾಡಿದರೆ, ಬಿಜೆಪಿ ನಾಕರುಗೆ ಪ್ರಮೋಷನ್​ ಸಿಗುತ್ತದೆ ಎನ್ನಿಸುತ್ತದೆ. ಅದಕ್ಕಾಗಿ ಚುನಾವಣಾ ಸಮಯದಲ್ಲಿ ಅಶ್ವತ್ಥ ನಾರಾಯಣ್​ ಸಾಹೇಬ್ರು, ಅಶೋಕಣ್ಣ ಮತ್ತು …

Read More »

ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಶಿಫಾರಸ್ಸಿನಂತೆ ವಾಲ್ಮೀಕಿ ಸಮುದಾಯಕ್ಕೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸಿ ಸರ್ಕಾರ ಅಸೂಚನೆ ಹೊರಡಿಸಲೇಬೇಕು. ಡಿಸೆಂಬರ್ 10ರೊಳಗೆ ನಮ್ಮ ಬೇಡಿಕೆ ಈಡೇರದಿದ್ದರೆ ವಾಲ್ಮೀಕಿ ಸಮುದಾಯದ ಸಚಿವರು ಮತ್ತು ಶಾಸಕರು ಹಾಲಿಯಿಂದ ಮಾಜಿಯಾಗಲು ಸಿದ್ದರಿದ್ದಾರೆ ಎಂದು ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದರು.

ಬೆಂಗಳೂರು,ಅ.23- ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸಿ ಡಿಸೆಂಬರ್ 10ರೊಳಗೆ ರಾಜ್ಯ ಸರ್ಕಾರ ಅಕೃತವಾಗಿ ಆದೇಶ ಹೊರಡಿಸದಿದ್ದರೆ ಸಮುದಾಯದ ಸಚಿವರು ಮತ್ತು ಶಾಸಕರು ರಾಜೀನಾಮೆ ನೀಡಲು ಹಿಂದೆಮುಂದೆ ನೋಡುವುದಿಲ್ಲ ಎಂದು ವಾಲ್ಮೀಕಿ ಸಮುದಾಯದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ .ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಶಿಫಾರಸ್ಸಿನಂತೆ ವಾಲ್ಮೀಕಿ ಸಮುದಾಯಕ್ಕೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸಿ ಸರ್ಕಾರ ಅಸೂಚನೆ …

Read More »