ನವದೆಹಲಿ: ಮುಂಬರಲಿರುವ ನವೆಂಬರ್ ಮತ್ತು ಡಿಸೆಂಬರ್ನಲ್ಲಿ ಭಾರತದಲ್ಲಿ ನಡೆಯಲಿರುವ ಮದುವೆಗಳಿಗಾಗಿ ಬರೋಬ್ಬರಿ 4.55 ಲಕ್ಷ ಕೋಟಿ ರೂ.ಖರ್ಚಾಗಲಿದೆ ಎಂದು ಪ್ರಭುದಾಸ್ ಲಿಲ್ಲದೇರ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ತನ್ನ ವರದಿಯಲ್ಲಿ ತಿಳಿಸಿದೆ. ಅಲ್ಲದೇ, ಈ 2 ತಿಂಗಳಲ್ಲಿ ಬರೋಬ್ಬರಿ 35 ಲಕ್ಷ ಮದುವೆಗಳು ನಡೆಯಲಿದ್ದು, 2023ರ ಇದೇ ತಿಂಗಳುಗಳಲ್ಲಿ 32 ಲಕ್ಷ ಮದುವೆ ದೇಶಾದ್ಯಂತ ನಡೆದಿತ್ತು ಎಂದೂ ತಿಳಿಸಿದೆ. “ಬ್ಯಾಂಡ್, ಬಾಜಾ, ಭಾರತ್ ಆಯಂಡ್ ಮಾರ್ಕೆಟ್ಸ್’ ಶೀರ್ಷಿಕೆ ಅನ್ವಯ ಸಂಸ್ಥೆ ಈ ವರದಿಯನ್ನು …
Read More »Bigg Boss 18: ಬಿಗ್ ಬಾಸ್ ಆರಂಭಕ್ಕೆ ಡೇಟ್ ಫಿಕ್ಸ್; ನಿರೂಪಣೆಗೆ ರೆಡಿಯಾದ ಸಲ್ಮಾನ್
ಮುಂಬಯಿ: ಹಿಂದಿ ಬಿಗ್ ಬಾಸ್-18 (Bigg Boss -18) ಕಾರ್ಯಕ್ರಮ ಆರಂಭಕ್ಕೆ ಡೇಟ್ ಫಿಕ್ಸ್ ಆಗಿದೆ. ಆ ಮೂಲಕ ಕುತೂಹಲಕ್ಕೆ ತೆರೆ ಬಿದ್ದಿದೆ. ಸಲ್ಮಾನ್ ಖಾನ್ (Salman Khan) ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮದ ಪ್ರೋಮೊ ಇತ್ತೀಚೆಗೆ ರಿಲೀಸ್ ಆಗಿತ್ತು. “ಬಿಗ್ ಬಾಸ್ ನೋಡಲಿದ್ದಾರೆ ಮನೆಯವರ ಭವಿಷ್ಯ, ಈಗ ಆಗಲಿದೆ ಸಮಯದ ತಾಂಡವ್” ಎಂದು ಸಲ್ಮಾನ್ ಖಾನ್ ಅವರ ಹಿನ್ನೆಲೆ ಧ್ವನಿಯಲ್ಲಿ ಹೊಸ ಸೀಸನ್ನ ಲೋಗೋ ರಿವೀಲ್ ಆಗಿತ್ತು. ಶೋನಲ್ಲಿ ಈ …
Read More »ಸ್ವರ್ಗನೂ ಇಲ್ಲೇ, ನರಕನೂ ಇಲ್ಲೇ.. ಬಿಗ್ಬಾಸ್ ಮನೆಯ ಫೋಟೋಸ್ ವೈರಲ್
ಬೆಂಗಳೂರು: ಬಿಗ್ ಬಾಸ್ ಕನ್ನಡ-11 (Bigg Boss Kannada-11) ಆರಂಭಕ್ಕೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದೆ. ಮುಂದಿನ ವಾರದಿಂದಲೇ ದೊಡ್ಮನೆ ಆಟ ಅದ್ಧೂರಿ ಆಗಿಯೇ ಆರಂಭಗೊಳ್ಳಲಿದೆ. ಕಿಚ್ಚ ಸುದೀಪ್ (Kiccha Sudeep) ಟಿಪ್ ಟಾಪ್ ಆಗಿಯೇ ಬಿಗ್ ಬಾಸ್ ಮನೆಯ ʼಕಿಂಗ್ʼ ಆಗಿ ಈ ಬಾರಿಯೂ ಕಾಣಿಸಿಕೊಳ್ಳಲಿದ್ದಾರೆ. ಅವರೇ ಶೋ ನಡೆಸಿಕೊಡಲಿದ್ದಾರೆ ಎನ್ನುವ ವಿಚಾರ ಬಹಿರಂಗವಾದ ಬಳಿಕ ಪ್ರೇಕ್ಷಕರ ಕುತೂಹಲ ಸೀಸನ್ -11ರ ಮೇಲೆ ಹೆಚ್ಚಾಗಿದೆ. ಕಲರ್ಸ್ ಕನ್ನಡ …
Read More »ಅತ್ಯಾಚಾರದಂತಹ ಕೃತ್ಯಕ್ಕೆ ಕೋಮುಬಣ್ಣ ಬಳಿಯುವ ಕೆಲಸವಾಗಬಾರದು
ಮುಧೋಳ : ಅತ್ಯಾಚಾರದಂತಹ ಹೇಯ ಕೃತ್ಯದಲ್ಲಿ ಯಾವುದೇ ಧರ್ಮದವರು ಭಾಗಿಯಾದರೂ ದೊಡ್ಡ ಅಪರಾಧ. ಅಂತಹ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಸಿಬೇಕು ಎಂದು ಸಾಮಾಜಿಕ ಹೋರಾಟಗಾರ ಯಲ್ಲಪ್ಪ ಹೆಗಡೆ ಸರ್ಕಾರಕ್ಕೆ ಒತ್ತಾಯಿಸಿದರು. ನಗರದ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಖಂಡಿಸಿ ಅಲ್ಪಸಂಖ್ಯಾತ ಸೌಹಾರ್ದ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ತಹಸೀಲ್ದಾರ್ ಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಅತ್ಯಾಚಾರದಂತಹ ಪ್ರಕರಣಗಳನ್ನು ಮುಂದಿಟ್ಟುಕೊಂಡು ಕೆಲವು ಕೋಮುವಾದ ಸಂಘಟನೆಗಳು ಸಮಾಜದಲ್ಲಿ …
Read More »ದೇವಸ್ಥಾನ ಪ್ರವೇಶ: ಯುವಕನ ಮೇಲೆ ಹಲ್ಲೆ ಖಂಡನೀಯ
ರಾಮದುರ್ಗ: ಬಾದಾಮಿ ತಾಲ್ಲೂಕಿನ ಉಗಲಾಟದಲ್ಲಿ ದೇವಸ್ಥಾನದ ಗರ್ಭಗುಡಿ ಪ್ರವೇಶ ಮಾಡಿದ ದಲಿತ ಯುವಕನಿಗೆ ಸವರ್ಣೀಯರು ಹಲ್ಲೆ ಮಾಡಿದ ಘಟನೆಯನ್ನು ಖಂಡಿಸಿ ಇಲ್ಲಿನ ಸಿಪಿಐ (ಎಂ) ಕಾರ್ಯಕರ್ತರು ಪ್ರತಿಭಟನೆ ಮಾಡಿ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಅವರಿಗೆ ಮನವಿ ಸಲ್ಲಿಸಿದರು. ಬಾದಾಮಿ ತಾಲ್ಲೂಕಿನ ಉಗಲಾಟ ಗ್ರಾಮದ ದ್ಯಾಮವ್ವನ ದೇವಸ್ಥಾನದ ಗರ್ಭಗುಡಿ ಪ್ರವೇಶ ಮಾಡಿದ ದಲಿತ ಯುವಕ ಅರ್ಜುನ ಮಾದರನ ಮೇಲೆ ಸವರ್ಣೀಯರು ಹಲ್ಲೆ ಮಾಡಿದ ಘಟನೆ ಅಮಾನೀಯವಾಗಿದೆ. ತಪ್ಪಿತಸ್ಥರ ಮೇಲೆ ಶೀಘ್ರಮ …
Read More »ಕುಂದಗೋಳ | ಕೃಷಿ ಇಲಾಖೆ ಹುದ್ದೆ ಖಾಲಿ: ದೊರೆಯದ ಮಾಹಿತಿ
ಗುಡಗೇರಿ: ಕುಂದಗೋಳ ತಾಲ್ಲೂಕಿನಲ್ಲಿ ಬಹುತೇಕರು ಕೃಷಿಯನ್ನೆ ನಂಬಿಕೊಂಡು ಜೀವನ ಕಟ್ಟಿಕೊಂಡಿದ್ದು, ಸಮರ್ಪಕವಾಗಿ ಮಾಹಿತಿ ನೀಡಬೇಕಾದ ಕೃಷಿ ಇಲಾಖೆಯಲ್ಲಿ ಅಧಿಕಾರಿ ಹುದ್ದೆ ಖಾಲಿ ಇರುವುದರಿಂದ ಈ ಇಲಾಖೆ ಇದ್ದುಇಲ್ಲದಂತೆ ಆಗಿದೆ. ತಾಲ್ಲೂಕಿನಲ್ಲಿ ಒಟ್ಟು 58 ಸಾವಿರ ಹೆಕ್ಟೇರ್ ಸಾಗುವಳಿ ಕ್ಷೇತ್ರವಿದೆ. ಆದರೆ ಕೃಷಿಗೆ ಪೂರಕವಾದ ಮಾಹಿತಿ ಕೂರತೆಯಿಂದಾಗಿ ರೈತರು ಲಾಭದಾಯಕ ಬೆಳೆ ಬೆಳೆಯಲು ವಿಫಲರಾಗುತ್ತಿದ್ದಾರೆ, ಮೆಣಸಿನಕಾಯಿ ಈ ಭಾಗದಲ್ಲಿ ಪ್ರಸಿದ್ದಿ ಬೆಳೆ. ಆದರೆ ಇಳುವರಿ ಕುಂಠಿತದಿಂದ ರೈತರು ಬೆಳೆ ಬೆಳೆಯದೇ ಕೈಬಿಟ್ಟಿದ್ದಾರೆ …
Read More »2ಎ ಮೀಸಲಾತಿ ಹೋರಾಟ: ಪಂಚಮಸಾಲಿ ವಕೀಲರ ರಾಜ್ಯಮಟ್ಟದ ಸಮಾವೇಶ ಯಶಸ್ವಿ
ಬೆಳಗಾವಿ: ‘ಪಂಚಮಸಾಲಿ ಸಮಾಜವನ್ನು ಎಲ್ಲರೂ ಬಳಸಿಕೊಂಡರು, ಬೆಳೆದರು. ಆದರೆ, ಸಮಾಜವನ್ನು ಹಿಂದಕ್ಕೆ ತಳ್ಳಿದರು. ಸಮಾಜಕ್ಕೆ 2ಎ ಮೀಸಲಾತಿ ಕೊಡಿಸುವವರೆಗೂ ನಾವು ವಿಶ್ರಮಿಸಬಾರದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊನೆಯ ಅವಕಾಶ ಕೊಡುತ್ತಿದ್ದೇವೆ’ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ, ಲಿಂಗಾಯತ ಒಳಪಂಗಡಗಳಿಗೆ ಒಬಿಸಿ ನೀಡಬೇಕು ಎಂದು ಆಗ್ರಹಿಸಿ, ಇಲ್ಲಿನ ಗಾಂಧಿ ಭವನದಲ್ಲಿ ಭಾನುವಾರ ನಡೆದ ಪಂಚಮಸಾಲಿ ಸಮಾಜದ ವಕೀಲರ ರಾಜ್ಯಮಟ್ಟದ ಪರಿಷತ್ನಲ್ಲಿ ಮಾತನಾಡಿದ …
Read More »ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ | ವಕೀಲರ ಹೋರಾಟಕ್ಕೆ ಮಣಿದ ಸಿಎಂ: ಚರ್ಚೆಗೆ ಆಹ್ವಾನ
ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ, ನಗರದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ವಕೀಲರ ಪರಿಷತ್ ಯಶಸ್ವಿಯಾಯಿತು. ವಕೀಲರ ಒತ್ತಡಕ್ಕೆ ಮಣಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 15ರಂದು ಚರ್ಚೆಗೆ ಆಹ್ವಾನಿಸಿದರು. ಕೂಡಲಸಂಗಮದ ಪಂಚಮಸಾಲಿ ಪೀಠದ ಪ್ರಥಮ ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ, ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ವಕೀಲರ ಪರಿಷತ್ತು, ನ್ಯಾಯಪೀಠ- ಕೂಡಲಸಂಗಮ, ಜಿಲ್ಲಾ ವಕೀಲರ ಪರಿಷತ್ ಆಶ್ರಯದಲ್ಲಿ ರಾಜ್ಯದ ವಿವಿಧೆಡೆಯಿಂದ ಪಂಚಮಸಾಲಿ ಸಮಾಜದ ವಕೀಲರು ಸಮಾವೇಶಗೊಂಡರು. ಇಡೀ …
Read More »ಜಮೀನು ವಿವಾದ: ಗ್ರಾಮದ ಹಿರಿಯನ ಕೊಲೆ
ಯಮಕನಮರಡಿ: ಹುಕ್ಕೇರಿ ತಾಲ್ಲೂಕಿನ ಹೊಸೂರು ಗ್ರಾಮದ ಹದ್ದಿಯಲ್ಲಿ ಶುಕ್ರವಾರ ತಡರಾತ್ರಿ, ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಅಪಘಾತ ಎಂಬಂತೆ ಬಿಂಬಿಸಲಾಗಿದೆ. ತಡರಾತ್ರಿಯೇ ಕಾರ್ಯಪ್ರವೃತ್ತರಾದ ಇಲ್ಲಿನ ಪೊಲೀಸರು ನಾಲ್ಕೇ ತಾಸಿನಲ್ಲಿ ಪ್ರಕರಣ ಭೇದಿಸಿ ಮೂವರನ್ನು ಬಂಧಿಸಿದ್ದಾರೆ. ಬೈಕ್ ಮೇಲೆ ತೆರಳುತ್ತಿದ್ದ, ಗ್ರಾಮದ ಹಿರಿಯ ವಿಠ್ಠಲ ಜೋತಪ್ಪ ರಾಮಗೋನಟ್ಟಿ (60) ಕೊಲೆಯಾದವರು. ಬೈಕ್ ಓಡಿಸುತ್ತಿದ್ದ ಭೀಮಪ್ಪ ಅವರ ಹಿಂದಿದ್ದ ಬಾಬು ಗಾಯಗೊಂಡಿದ್ದಾರೆ. ಭೀಮಪ್ಪ ಅವರನ್ನು ಕೊಲೆ ಮಾಡುವ ಉದ್ದೇಶದಿಂದ ಬೈಕಿಗೆ ಕಾರು ಡಿಕ್ಕಿ …
Read More »ಸರ್ಕಾರಿ ಜಾಗ ಅತಿಕ್ರಮಣ; ತೆರವಿಗೆ ಕ್ರಮವಹಿಸಿ
ಧಾರವಾಡ: ‘ಒತ್ತುವರಿ ನಿರಂತರವಾಗಿ ನಡೆಯುತ್ತಿದೆ. ಒತ್ತುವರಿ ತೆರವುಗೊಳಿಸಿ ಸರ್ಕಾರದ ಆಸ್ತಿ ಸಂರಕ್ಷಣೆಗೆ ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದು ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ಕೋರ್ಟ್ ಅಧ್ಯಕ್ಷ ನ್ಯಾಯಮೂರ್ತಿ ಬಿ.ಎ.ಪಾಟೀಲ ಹೇಳಿದರು. ಕರ್ನಾಟಕ ಭೂ ಕಬಳಿಕೆ ವಿಶೇಷ ಕೋರ್ಟ್, ಕಂದಾಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ …
Read More »