Breaking News

ರಾಷ್ಟ್ರೀಯ

130.00 ಲಕ್ಷಗಳಡಿ ಇಂದು ಗೋಕಾಕ ನಗರದಲ್ಲಿ ಪೌರಕಾರ್ಮಿಕರ ವಸತಿ ಸಮುಚ್ಚಯ ಕಟ್ಟಡಗಳ ಉದ್ಘಾಟನೆ.

ಗೋಕಾಕ : ಇಲ್ಲಿಯ ನಗರಸಭೆ ಅನುದಾನದಡಿ ಪೌರಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆ ಯಡಿಯಲ್ಲಿ ಅಂದಾಜು ರೂ.130.00 ಲಕ್ಷಗಳಡಿ G+2ಮಾದರಿಯಲ್ಲಿ ನಿರ್ಮಿಸಿದ ಪೌರಕಾರ್ಮಿಕರ ವಸತಿ ಸಮುಚ್ಛಯ ಕಟ್ಟಡಗಳನ್ನು ಜುಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಉದ್ಘಾಟಿಸಿದರು. ರವಿವಾರದಂದು ನಗರದ ಮೆಳವಂಕಿ ರಸ್ತೆ, ಅಡಿಬಟ್ಟಿ ಕಾಲೋನಿಯ ನಾಕಾ ನಂಬರ್ 01ರಲ್ಲಿ ನಿರ್ಮಾಣವಾದ ಪೌರಕಾರ್ಮಿಕರ ವಸತಿ ಸಮುಚ್ಛಯ ಉದ್ಘಾಟಿಸಿ ಮಾತನಾಡಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪೌರ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು …

Read More »

ಮಹಾರಾಷ್ಟ್ರದಲ್ಲಿ ಭಾರೀ ಮಳೆ ಹಿನ್ನೆಲೆ ವಿಜಯಪುರದಲ್ಲಿ ಪ್ರವಾಹ ಭೀತಿ

ವಿಜಯಪುರ,  ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬಸವನಾಡಿನಲ್ಲಿ ಪ್ರವಾಹ ಭೀತಿ ಎದುರಾಗಿದೆ. ಮಹಾರಾಷ್ಟ್ರದಲ್ಲಿ ಉಗಮವಾಗುವ ಮೂರು ನದಿಗಳು ವಿಜಯಪುರ ಜಿಲ್ಲೆಯಲ್ಲಿ ಹರಿಯುತ್ತಿದ್ದೂ, ಮೂರೂ ನದಿಗಳು ಉಕ್ಕಿ ಹರಿಯುತ್ತಿವೆ. ಭೀಮಾ ನದಿಗೆ ಮಹಾರಾಷ್ಟ್ರ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರದ ಸಮಾನಾಂತರ ನಿರ್ಮಿಸಿರುವ ಎಲ್ಲ 8 ಬ್ಯಾರೇಜುಗಳೂ ಮುಳುಗಡೆಯಾಗಿವೆ. ಭೀಮಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ನದಿ ತೀರದ ಕರ್ನಾಟಕ ಮತ್ತು ಮಹಾರಾಷ್ಟ್ರದ ಅಪಾರ ಪ್ರಮಾಮದ …

Read More »

ಎಡಬಿಡಂಗಿ, ಅವಕಾಶವಾದಿಯಿಂದ ನಾವು ಸ್ವಾಭಿಮಾನದ ಪಾಠ ಕಲಿಯಬೇಕಾಗಿಲ್ಲ; ಸಿದ್ದರಾಮಯ್ಯಗೆ ಕುಮಾರಸ್ವಾಮಿ ತಿರುಗೇಟು

ಬೆಂಗಳೂರು : ಆತ್ಮವಂಚನೆಯ ರಾಜಕಾರಣಿಯಾದ ನಿಮ್ಮಿಂದ ಜೆಡಿಎಸ್​ ಪಕ್ಷದವರು ಕಲಿಯಬೇಕಾಗಿದ್ದು ಏನೂ ಇಲ್ಲ. ಅಧಿಕಾರದ ಆಸೆಗಾಗಿ ಬೇರೆ ಪಕ್ಷಕ್ಕೆ ಜಿಗಿದವರು ನೀವು. ನಿಮ್ಮಿಂದ ನಾವು ಕಲಿಯಬೇಕಾಗಿಲ್ಲ. ಈಗ ನಮ್ಮನ್ನು ಅವಕಾಶವಾದಿ ಪಕ್ಷ ಎಂದು ಹೇಳುತ್ತಿದ್ದೀರಿ. ಈ ಮೂಲಕ ನಿಮ್ಮ ಊಸರವಳ್ಳಿ ರಾಜಕಾರಣದ ಬಣ್ಣ ಬಯಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸಿದ್ದರಾಮಯ್ಯನವರ ವಿರುದ್ಧ ಸರಣಿ ಟ್ವೀಟ್​ಗಳನ್ನು ಮಾಡಿರುವ ಮಾಜಿ ಸಿಎಂ …

Read More »

ಮಕ್ಕಳಿಗೆ ಸಿಗಬೇಕಾದ ಪೌಷ್ಟಿಕ ಆಹಾರ ಅಂಗನವಾಡಿ ಕಾರ್ಯಕರ್ತೆಯರ ಮನೆಗೆ

ಬೀದರ್ : ಗರ್ಭಿಣಿಯರಿಗೆ ಮತ್ತು ಮಕ್ಕಳಿಗೆ ಪೌಷ್ಠಿಕ ಆಹಾರ ಸಿಗಬೇಕು ಎಂಬ ಉದ್ದೇಶದಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯ ಮುಖಾಂತರ ಸರ್ಕಾರ‌ ಅಂಗನವಾಡಿಗಳ ಮೂಲಕ ಪೌಷ್ಠಿಕ ಆಹಾರ ನೀಡುತ್ತಿದೆ. ಆದರೆ ಗಡಿ ಜಿಲ್ಲೆ ಬೀದರನಲ್ಲಿ ಗರ್ಭಿಣಿಯರು, ಮಕ್ಕಳ ಹೊಟ್ಟೆ ಸೇರಬೇಕಾದ ಪೌಷ್ಠಿಕ ಆಹಾರ ಧಾನ್ಯ ಅಂಗನವಾಡಿ ಕಾರ್ಯಕರ್ತೆಯರ ಹೊಟ್ಟೆ ಪಾಲಾಗುತ್ತಿದೆ. ಪಾಲಕರ ತಿಳುವಳಿಕೆ ಕೊರತೆಯಿಂದ ಬೀದರ್ ಜಿಲ್ಲೆಯಲ್ಲಿ ಅಪೌಷ್ಟಿಕತೆ ಮಕ್ಕಳ ಪ್ರಮಾಣ ಗಣನೀಯವಾಗಿದೆ. ಈ ಸಮಸ್ಯೆಯನ್ನು ಕೇಂದ್ರ …

Read More »

ಅಕ್ರಮ ಸಂಬಂಧದ ಹಿನ್ನಲೆಯಲ್ಲಿ ಕೊಲೆ : ಆರು ಮಂದಿ ಆರೋಪಿಗಳ ಸೆರೆ

ಟಿ.ನರಸೀಪುರ, -ತಾಲೂಕಿನ ಕೇತುಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಬನ್ನೂರು ಪೋಲೀಸರು ಯಶಸ್ವಿಯಾಗಿದ್ದು ಘಟನೆಯ ಸಂಬಂಧ 7 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಕೇತುಪುರ ಗ್ರಾಮದ ಕೆ.ಆರ್.ಸುಭಾಷ್ (23),ಚಂದನ್(22),ಸಂಜಯ (24),ಪುನೀತ್ (22), ವಿನಯ (30),ರವಿ(24) ಹಾಗು ಚಂದ್ರು(25) ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳು ಸೆ.12 ರಂದು ಬನ್ನೂರು ಪೋಲೀಸ್ ಠಾಣಾ ವ್ಯಾಪ್ತಿಯ ಕೇತುಪುರ ಗ್ರಾಮದಲ್ಲಿ ಕೃಷ್ಣೇಗೌಡ ಎಂಬುವರ ಪುತ್ರ ಸಿದ್ದರಾಜು ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. …

Read More »

ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ ದೇವೇಗೌಡ; ಕನ್ನಡದಲ್ಲಿ ಪ್ರಮಾಣ ಮೊದಲ ಬಾರಿ ಭಾನುವಾರವೂ ನಡೆಯುತ್ತಿರುವ ಅಧಿವೇಶನ

ಸಂಸತ್ ಮುಂಗಾರು ಅಧಿವೇಶನ ಆರಂಭವಾಗಿದ್ದು, ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬೆಳಗ್ಗೆ ಸುಮಾರು 9 ಗಂಟೆಗೆ ರಾಜ್ಯಸಭೆ ಸಭಾಧ್ಯಕ್ಷ ವೆಂಕಯ್ಯನಾಯ್ಡು ಸಮ್ಮುಖದಲ್ಲಿ ಹೆಚ್.ಡಿ.ದೇವೇಗೌಡ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಸಂಸತ್‍ನ ಮುಂಗಾರು ಅಧಿವೇಶನ ಭಾನುವಾರ ಕೂಡ ನಡೆಯುತ್ತಿರುವುದು ವಿಶೇಷ. ದೇವೇಗೌಡರು 24 ವರ್ಷಗಳ ಬಳಿಕ ಎರಡನೇ ಬಾರಿಗೆ ರಾಜ್ಯಸಭೆ ಸದಸ್ಯರಾಗಿದ್ದಾರೆ. ಈ ಹಿಂದೆ ಪ್ರಧಾನ …

Read More »

ಕರುನಾಡಿಗೆ ಮತ್ತೆ ವರುಣಾಘಾತ; ಹವಾಮಾನ ಇಲಾಖೆ ಎಚ್ಚರಿಕೆ.

ಬೆಳಗಾವಿ ಸೇರಿ ಉತ್ತರದ ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಹಿನ್ನಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಕರುನಾಡಿಗೆ ವರಣನ ಕಂಟಕವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಹಾಗೂ ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಈಗಾಗಲೇ ವರುಣನ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, …

Read More »

ರಾಜ್ಯಸಭಾ ಸದಸ್ಯರಾಗಿ ದೇವೇಗೌಡರು ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಮಾಜಿ ಪ್ರಧಾನ ಮಂತ್ರಿ ಮತ್ತು ಜಾತ್ಯಾತೀತ ಜೆಡಿಎಸ್ ಮುಖ್ಯಸ್ಥ ಎಚ್.ಡಿ.ದೇವೇಗೌಡ ಅವರು ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಸಂಸತ್‍ನ ಮುಂಗಾರು ಅಧಿವೇಶನ ಭಾನುವಾರ ಕೂಡ ನಡೆಯುತ್ತಿದೆ. ಹೀಗಾಗಿ ದೇವೇಗೌಡರು ಶನಿವಾರ ರಾತ್ರಿಯೇ ದೆಹಲಿಗೆ ಹೋಗಿದ್ದರು. ಇಂದು ಬೆಳಗ್ಗೆ ಸುಮಾರು 9 ಗಂಟೆಗೆ ರಾಜ್ಯಸಭೆ ಸಭಾಧ್ಯಕ್ಷ ವೆಂಕಯ್ಯನಾಯ್ಡು ಸಮ್ಮುಖದಲ್ಲಿ ಎಚ್.ಡಿ.ದೇವೇಗೌಡ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ರಾಜ್ಯಸಭೆ ಸದಸ್ಯರಾದ ಬಳಿಕ …

Read More »

ಸಾವಿರಾರು ಎಕರೆ ರೈತರ ಫಲವತ್ತಾದ ಭೂಮಿ ಸರ್ಕಾರದ ಸ್ವಾಧೀನಕ್ಕೆ’

ನಾಗಮಂಗಲ  : ಸ್ಥಳೀಯ ನಿರುದ್ಯೋಗಿಗಳಿಗೆ ಉದ್ಯೋಗ ಸಿಗಲಿ ಎಂಬ ಕಾರಣಕ್ಕೆ ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಈ ಪ್ರದೇಶದ ಬರಡು ಭೂಮಿಯಲ್ಲಿ ಕೈಗಾರಿಕಾ ಯೋಜನೆ ರೂಪಿಸಿದ್ದೆ. ಆದರೀಗ ಕೃಷಿಗೆ ಯೋಗ್ಯವಾದ ಫಲವತ್ತಾದ ಭೂಮಿಯನ್ನು ವಶಪಡಿಸಿಕೊಳ್ಳಲು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಏನೇ ಆದರೂ ರೈತರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು. ತಾಲೂಕಿನ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ರೈತರ ಕೃಷಿಗೆ ಯೋಗ್ಯವಾದ …

Read More »

ಎಸ್‍ಪಿಬಿ ಆರೋಗ್ಯದಲ್ಲಿ ಚೇತರಿಕೆ- ಕುಳಿತುಕೊಳ್ತಾರೆ, ಊಟ ಮಾಡ್ತಾರೆ ಗಾನ ಗಾರುಡಿಗ

ಚೆನ್ನೈ: ಹಿರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದ್ದು, ಸ್ವಲ್ಪ ಮಟ್ಟಿಗೆ ಕುಳಿತುಕೊಳ್ಳುವುದು ಹಾಗೂ ಸ್ವಲ್ಪ ಆಹಾರವನ್ನು ಸೇವಿಸುತ್ತಿದ್ದಾರೆ ಎಂದು ಅವರ ಪುತ್ರ ಚರಣ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪೋಸ್ಟ್ ಮಾಡುವ ಮೂಲಕ ಮಾಹಿತಿ ನೀಡಿದ್ದು, ಆಪ್ಪನ ಆರೋಗ್ಯ ಸ್ಥಿರವಾಗಿದ್ದು, ವೆಂಟಿಲೇಟರ್‍ನಲ್ಲೇ ಇದ್ದಾರೆ. ಉಳಿದೆಲ್ಲ ವರದಿಗಳು ನಾರ್ಮಲ್ ಆಗಿದ್ದು, ಯಾವುದೇ ಇನ್ಫೆಕ್ಷನ್ ಕಂಡು ಬಂದಿಲ್ಲ. ಆದರೆ ಶ್ವಾಸಕೋಶ ಹಾಗೂ ಉಸಿರಾಟದಲ್ಲಿ ಇನ್ನೂ ಹೆಚ್ಚಿನ ವೃದ್ಧಿಯಾಗಬೇಕಿದೆ. ಇದೀಗ ಅವರು …

Read More »