Breaking News

ರಾಷ್ಟ್ರೀಯ

ನಾಡಹಬ್ಬದಲ್ಲಿ ಈ ಬಾರಿಯೂ ಅಧಿಕಾರಿಗಳದ್ದೇ ‘ದರ್ಬಾರ್‌’

ಮೈಸೂರು: ದಸರಾ ಮಹೋತ್ಸವದ ಕಾರ್ಯಕ್ರಮಗಳನ್ನು ರೂಪಿಸುವಲ್ಲಿ ಈ ಬಾರಿಯೂ ಅಧಿಕಾರಿಗಳದ್ದೇ ‘ದರ್ಬಾರ್‌’ ನಡೆಯುತ್ತಿದೆ. ಉಪ ಸಮಿತಿಗಳಿಗೆ ಅಧಿಕಾರೇತರರ ನೇಮಕ, ಭಾಗಿದಾರರು ಅಥವಾ ಸಾರ್ವಜನಿಕರ ಸಲಹೆಗಳನ್ನು ಆಲಿಸಿ ಸಹಭಾಗಿತ್ವ ಪಡೆದುಕೊಳ್ಳುವ ಕಾರ್ಯ ಈವರೆಗೂ ನಡೆದಿಲ್ಲ. ಮಹೋತ್ಸವಕ್ಕೆ ಅ.3ರಂದು ಚಾಲನೆ ದೊರೆಯಲಿದ್ದು, ಬಹಳ ದಿನಗಳೇನೂ ಉಳಿದಿಲ್ಲ. ಅದಕ್ಕೆ ಪೂರ್ವಭಾವಿಯಾಗಿ ಎಲ್ಲ ಕಾರ್ಯಕ್ರಮಗಳ ರೂಪರೇಷೆಯ ಸ್ಪಷ್ಟ ಚಿತ್ರಣ ದೊರೆಯಬೇಕು. ಹೊರ ಜಿಲ್ಲೆ, ಹೊರ ರಾಜ್ಯ ಮತ್ತು ವಿದೇಶಗಳ ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ನಡೆಯುವ ಉತ್ಸವವನ್ನು ರೂಪಿಸುವಲ್ಲಿ …

Read More »

ಗರ್ಭಿಣಿ ಪತ್ನಿಯನ್ನು ಕೊಂದು ಬಾವಿಗೆ ಎಸೆದ ಪಾಪಿ ಪತಿ.!

ಕೊಪ್ಪಳ : ಪಾಪಿ ಪತಿಯೋರ್ವ ಗರ್ಭಿಣಿ ಪತ್ನಿಯನ್ನು ಕೊಂದು ಬಾವಿಗೆ ಎಸೆದ ಘಟನೆ ಕೊಪ್ಪಳದ ತಾಳಕನಪೂರದಲ್ಲಿ ನಡೆದಿದೆ. ಸಂಗೀತಾ ಎಂಬ ಮಹಿಳೆ ಕೊಲೆಯಾಗಿದ್ದು, ಪತಿ ಬಾಬು ಎಂಬಾತ ಈ ಕೃತ್ಯ ಎಸಗಿದ್ದಾನೆ. 4 ತಿಂಗಳ ಗರ್ಭಿಣಿಯಾಗಿದ್ದ ಪತ್ನಿ ಸಂಗೀತಾಳನ್ನು ಬಾಬು ಜಮೀನಿಗೆ ಕರೆದೊಯ್ದು ಕೊಲೆ ಮಾಡಿ ನಂತರ ಬಾವಿಗೆ ಎಸೆದಿದ್ದಾನೆ. ಕೊಳೆದ ಸ್ಥಿತಿಯಲ್ಲಿ ಸಂಗೀತಾಳ ಮೃತದೇಹ ಪತ್ತೆಯಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Read More »

ಕೊಳ್ಳೇಗಾಲ: ನಕ್ಷತ್ರ ಆಮೆ ಸಾಗಾಟ ಮಾಡುತ್ತಿದ್ದ ಮೂವರ ಬಂಧನ

ಚಾಮರಾಜನಗರ, ಸೆಪ್ಟೆಂಬರ್, 19: ಇತ್ತೀಚೆಗಷ್ಟೇ ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಕೊಳ್ಳೇಗಾಲ ಸಿಐಡಿ ಪೊಲೀಸ್‌ ಅರಣ್ಯ ಸಂಚಾರಿ ದಳ ಬಂಧಿಸಿತ್ತು. ಇದೀಗ ಮತ್ತೆ ಮುಡಿಗುಂಡದ ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ ಜೀವಂತ ನಕ್ಷತ್ರ ಆಮೆಗಳನ್ನು ಸಾಗಣೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕೊಳ್ಳೇಗಾಲ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.   ಚಾಮರಾಜನಗರ ತಾಲ್ಲೂಕು ಕುಳ್ಳೂರು ಗ್ರಾಮದ ಮಾದೇಶ್, ತಮಿಳುನಾಡಿನ ಸತ್ತಿ ತಾಲ್ಲೂಕಿನ ಕಾನಗೆರೆ …

Read More »

ಕನ್ನಡ ಸಾಹಿತ್ಯ ಪರಿಷತ್ತಿನ ಎಡವಟ್ಟು: ಅಧ್ಯಕ್ಷ ಸ್ಥಾನಕ್ಕೆ ಕೊಲೆ ಆರೋಪಿ ಆಯ್ಕೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಗರಿ ಮಂಡ್ಯ ಜಿಲ್ಲೆ ಸಿದ್ಧವಾಗುತ್ತಿರುವ ಹೊತ್ತಲ್ಲೇ ಕನ್ನಡ ಸಾಹಿತ್ಯ ಪರಿಷತ್ತು ಎಡವಟ್ಟೊಂದನ್ನು ಮಾಡಿದೆ. ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಕೊಲೆ ಆರೋಪಿಯನ್ನು ಆಯ್ಕೆ ಮಾಡಿದ್ದು, ವಿವಾದಕ್ಕೆ ಕಾರಣವಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರನ್ನಾಗಿ ಎಂ.ಬಿ.ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ ಎಂ.ಬಿ.ಕುಮಾರ್ ವಿರುದ್ಧ ಕೊಲೆ ಆರೋಪವಿದೆ. ರೌಡಿಶೀಟರ್ ದೀಪು ಎಂಬಾತನ ಕೊಲೆ ಕೇಸ್ …

Read More »

ರಾಜ್ಯದಲ್ಲಿ ಡ್ರಗ್ಸ್ ದಂಧೆ ಹತೋಟಿಗೆ : ನೋವು ನಿವಾರಕ ಮಾತ್ರೆಗಳದೇ ಆತಂಕ : ಗೃಹ ಸಚಿವ ಪರಮೇಶ್ವರ

ರಾಜ್ಯದಲ್ಲಿ ಡ್ರಗ್ಸ್ ದಂಧೆ ಹತೋಟಿಗೆ : ನೋವು ನಿವಾರಕ ಮಾತ್ರೆಗಳದೇ ಆತಂಕ : ಗೃಹ ಸಚಿವ ಪರಮೇಶ್ವರ ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಡ್ರಗ್ಸ್ ದಂಧೆಯನ್ನು ತೀವ್ರ ಹತೋಟಿಕೆ ತಂದಿದ್ದೇವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ ಡ್ರಗ್ಸ್ ದಂಧೆಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನ …

Read More »

ಬೀದರ್‌ | ಲೋಕ ಅದಾಲತ್‌ನಲ್ಲಿ 17,476 ಪ್ರಕರಣ ಇತ್ಯರ್ಥ, ₹7.98 ಕೋಟಿ ಪರಿಹಾರ

ಬೀದರ್‌: ‘ಸೆ. 14ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಟ್ಟು 17,476 ಪ್ರಕರಣಗಳನ್ನು ಇತ್ಯರ್ಥಗೊಳಿಸಿದ್ದು, ₹7.98 ಕೋಟಿ ಪರಿಹಾರ ಕಕ್ಷಿದಾರರಿಗೆ ಒದಗಿಸಲಾಗಿದೆ’ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಎ.ಬನಸೋಡೆ ತಿಳಿಸಿದರು.   ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು ಪ್ರಕರಣಗಳಲ್ಲಿ 6,788 ಪೆಂಡಿಂಗ್‌ ಪ್ರಕರಣಗಳಿದ್ದವು. ಜಿಲ್ಲೆಯಾದ್ಯಂತ ಒಟ್ಟು 10,688 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು, ₹54.75 …

Read More »

HSRP’ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ.!

ಬೆಂಗಳೂರು : ವಾಹನ ಸವಾರರಿಗೆ ಗುಡ್ ನ್ಯೂಸ್ ಎಂಬಂತೆ ಹೈಕೋರ್ಟ್ ಹೆಚ್‌ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ ಮಾಡಿದೆ. ಈ ಮೂಲಕ ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್‌ ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ. ಇದರ ಅರ್ಜಿ ವಿಚಾರಣೆ ನವೆಂಬರ್ 20 …

Read More »

ಅತ್ಯಾಚಾರ ಸಂತ್ರಸ್ತೆಗೆ ಜಿಲ್ಲಾಡಳಿತ ನೆರವು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಕಾರ್ಕಳದಲ್ಲಿ ನಡೆದ ಯುವತಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ಪೈಶಾಚಿಕ ಕೃತ್ಯವಾಗಿದ್ದು, ಅತ್ಯಂತ ಖಂಡನೀಯ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿನ ಕ್ರಮ ಕೈಗೊಳ್ಳಲಿದೆ. ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.   ಮಾಹಿತಿ ಬಂದ ತತ್‌ಕ್ಷಣ ಘಟನೆಗೆ ಸಂಬಂಧಿಸಿ ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಲಾಗಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪೊಲೀಸರು ಕೂಲಂಕಷವಾಗಿ …

Read More »

ಅನಂತ್ ಕುಮಾರ್ ಹೆಗ್ಡೆಗೆ ಟಿಕೆಟ್ ತಪ್ಪಿಸಿದ್ದು ನಾನೆ : ಛಲವಾದಿ ನಾರಾಯಣಸ್ವಾಮಿ

ರಾಯಚೂರು : ಈ ಬಾರಿ ಲೋಕಸಭಾ ಚುನಾವಣೆಗೆ ಅನಂತ್ ಕುಮಾರ್‌ ಅವರಿಗೆ ಟಿಕೆಟ್ ಕೊಡಬೇಡಿ ಎಂದು ನಾನೇ ಹೇಳಿದ್ದೆ ಎಂದು ವಿಧಾನ ಪರಿಷತ್ ವಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಅಮೇರಿಕಾದಲ್ಲಿ ಮೀಸಲಾತಿ ಕುರಿತು ಸಂಸತ್ ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಖಂಡಿಸಿ ರಾಹುಲ್ ಗಾಂಧಿ ರಾಜೀನಾಮೆಗೆ ಆಗ್ರಹಿಸಿ ರಾಯಚೂರಿನಲ್ಲಿ ನಡೆದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ಅನಂತ ಕುಮಾರ್ ಹೆಗಡೆಗೆ ಕಳೆದ ಲೋಕಸಭಾ …

Read More »

ಹುಬ್ಬಳ್ಳಿ | ಕನ್ನಡ ಬೆಳೆಯಲು ಪುಸ್ತಕ ಓದಿ: ಎಸ್.ಎಲ್. ಭೈರಪ್ಪ

ಹುಬ್ಬಳ್ಳಿ: ‘ಪುಸ್ತಕ ಓದದಿದ್ದರೆ ಕನ್ನಡ ಬೆಳೆಯುವುದಿಲ್ಲ. ಪುಸ್ತಕ ಖರೀದಿಸಿ ಓದಬೇಕು’ ಎಂದು ಕಾದಂಬರಿಕಾರ ಎಸ್.ಎಲ್. ಭೈರಪ್ಪ ಸಲಹೆ ನೀಡಿದರು. ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಂಗಣದಲ್ಲಿ ಡಾ. ಡಿ.ಎಸ್. ಕರ್ಕಿ ಸಾಹಿತ್ಯ ವೇದಿಕೆ ಮತ್ತು ಸಾಹಿತ್ಯ ಪ್ರಕಾಶನವು ಸಾಹಿತ್ಯ ಭಂಡಾರದ ಮ. ಅನಂತಮೂರ್ತಿ ಅವರ ಪುಣ್ಯತಿಥಿ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಪ್ರಕಾಶಕರಿಗೆ ಸನ್ಮಾನ, ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ‘ನವೋದಯ ಕಾಲಘಟದಲ್ಲಿ ಹಲವಾರು ಕೃತಿಗಳು ಮೂಡಿಬಂದರೂ, ಸರಿಯಾದ ಪ್ರಕಾಶಕರು …

Read More »