Breaking News

ರಾಷ್ಟ್ರೀಯ

ರಾಗಿಣಿ ಸೇರಿ 6 ಮಂದಿಗೆ 14 ದಿನ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರಕ್ಕೆ ಶಿಫ್ಟ್..!

ಬೆಂಗಳೂರು,ಸೆ.14- ಡ್ರಗ್ಸ್ ಜಾಲ ಪ್ರಕರಣದಲ್ಲಿ ಸಿಲುಕಿರುವ ಸ್ಯಾಂಡಲ್‍ವುಡ್ ನಟಿ ರಾಗಿಣಿ ದ್ವಿವೇದಿ ಸೇರಿ 6 ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು ಪರಪ್ಪನ ಅಗ್ರಹಾರ ಜೈಲಿಗೆ ಹೋಗಬೇಕಾಗಿದೆ. ಡ್ರಗ್ಸ್ ಜಾಲ ಪ್ರಕರಣದಲ್ಲಿ ಸಿಲುಕಿ ಸಿಸಿಬಿ ವಶದಲ್ಲಿರುವ ರಾಗಿಣಿ ಅವರ 12 ದಿನದ ಹಾಗೂ ಸಂಜನಾ ಅವರ ಒಂದು ವಾರದ ಪೊಲೀಸ್ ಕಸ್ಟಡಿ ಅವಧಿ ಮುಗಿದಿದ್ದು, ಈ ಇಬ್ಬರನ್ನು ಕೆಸಿಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಿ ನ್ಯಾಯಾಲಯಕ್ಕೆ ಹಾಜರಿಪಡಿಸಲಾಯಿತು. ವಿಡಿಯೋ …

Read More »

ಕುಮಾರಸ್ವಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿತಪ್ಪೇನು..?ರೇವಣ್ಣ

ಹಾಸನ ,ಸೆ.14- ಪಕ್ಷದ ಶಾಸಕರ ಕ್ಷೇತ್ರಗಳಿಗೆ ಸಹಕಾರ ಕೋರಿ ಮುಖ್ಯಮಂತ್ರಿಗಳನ್ನು ಭೇಟಿಯಾದರೆ ತಪ್ಪೇನು ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ. ತಮ್ಮ ಶಾಸಕರ ಕ್ಷೇತ್ರಗಳಿಗೆ ಸಹಾಯ ಕೋರಲ ಸಿಎಂ ಭೇಟಿ ಮಾಡಿ ಮಾತುಕತೆ ನಡೆಸಲಾಗಿದೆ ಎಂದು ಹೇಳಿದರು. ರಾಜಕೀಯ ಒತ್ತಡದಿಂದ ಕಾನೂನು ಬಾಹಿರ ಕೆಲಸಗಳನ್ನು ಮಾಡಿದರೆ ಅಂತಹ …

Read More »

ಜಮೀರ್ ಪರ ಮಾತಾಡಿ ಸಿದ್ದರಾಮಯ್ಯನವರು ತಮ್ಮ ವ್ಯಕ್ತಿತ್ವ ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ : ಸಚಿವ ಜಗದೀಶ್ ಶೆಟ್ಟರ್​

ಧಾರವಾಡ : ಮಾಜಿ ಸಚಿವ ಜಮೀರ್ ಅಹಮ್ಮದ್ ಅವರು ಕ್ಯಾಸಿನೋಗೆ ಹೋಗಿದ್ದು ತಪ್ಪಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಈ ಮೂಲಕ ತಮ್ಮ ವ್ಯಕ್ತಿತ್ವವನ್ನು ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಸಚಿವ ಜಗದೀಶ್ ಶೆಟ್ಟರ್​ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು ಕ್ಯಾಸಿನೋಗೂ ಹೋಗ ಬಾರದು, ಜೂಜು ಆಡಬಾರದು ಎಂದು ಸಿದ್ದರಾಮಯ್ಯ ಹೇಳಬೇಕಿತ್ತು. ಆದರೆ, ಜಮೀರ್ ಕ್ಯಾಸಿನೋಗೆ ಹೋಗಿದ್ದು ತಪ್ಪಲ್ಲ ಅಂತಾ ಹೇಳಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದರು. …

Read More »

ಡಿಸಿಎಂ ಕಾರಜೋಳ ನಿರಾಸಕ್ತಿ; ಕಾರ್ಖಾನೆ ಉಳಿವಿಗಾಗಿ ಬೀದಿಗಿಳಿದ ರೈತರು

ಬಾಗಲಕೋಟೆ: ಮುಧೋಳದ ರೈತರ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಉಳಿಸುವಂತೆ ಒತ್ತಾಯಿಸಿ ಕೊನೆಗೂ ರೈತರು ಬೀದಿಗಿಳಿದಿದ್ದಾರೆ. ಮುಧೋಳದಿಂದ ಬಾಗಲಕೋಟೆವರೆಗೂ ಪಾದಯಾತ್ರೆ ಕೂಡ ಆರಂಭಿಸಿದ್ದಾರೆ. ರೈತರ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ತೀವ್ರ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದು, ರೈತರ ಬಾಕಿ ಹಣ ಪಾವತಿಗಾಗಿ ಈಗಾಗಲೇ ಜಿಲ್ಲಾಡಳಿತ ೪೦ ಕೋಟಿ ರೂ.ಗಳ ಸಕ್ಕರೆಯನ್ನು ಮಾರಾಟ ಮಾಡಿ ಹಣ ಪಾವತಿಸುವ ವ್ಯವಸ್ಥೆ ಮಾಡಿಕೊಂಡಿದೆ. ತಾಂತ್ರಿಕ ಕಾರಣಗಳಿಂದ ಇದುವರೆಗೂ ಬಾಕಿ ಹಣ ಪಾವತಿ ಆಗಿಲ್ಲ. ಯಾವುದೇ ಕಾರಣಕ್ಕೂ …

Read More »

ಮೇಕೆದಾಟು ಯೋಜನಾ ಪ್ರದೇಶಕ್ಕೆ‌ ಭೇಟಿ‌ ನೀಡಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌

ರಾಮನಗರ:   ಜಿಲ್ಲೆಯ ಮುಗ್ಗೂರು ಮತ್ತು ಹನೂರು ಅರಣ್ಯ ವಲಯದಲ್ಲಿರುವ ಒಂಟಿಗುಂಡುವಿನ ಬಳಿ ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಾಣ ಮಾಡಲು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾಗಿದ್ದು, ಕೇಂದ್ರ ಸರ್ಕಾರ ಅನುಮತಿ ನೀಡಿದ ಕೂಡಲೇ ಯೋಜನೆ‌ ಪ್ರಾರಂಭಿಸಲಾಗುವುದು‌ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ತಿಳಿಸಿದರು. ಮೇಕೆದಾಟು ಯೋಜನಾ ಪ್ರದೇಶಕ್ಕೆ‌ ಭೇಟಿ‌ ನೀಡಿ, ಸ್ಥಳ ಪರಿಶೀಲನೆ ಮಾಡಿದ ಸಚಿವರು, ಅಣೆಕಟ್ಟು ನಿರ್ಮಾಣ ಸಂಬಂಧ ಕೇಂದ್ರದ ಜಲಶಕ್ತಿ ಸಚಿವಾಲಯ ಈಗಾಗಲೇ ಅನುಮತಿ ನೀಡಿದೆ.   …

Read More »

ಕನ್ನಡ ಭಾಷೆಯೇ ನಮಗೆ ಬಹುಮುಖ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹಿಂದಿ ಹೇರಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಗೋಕಾಕ: ಹಿಂದಿ, ಇಂಗ್ಲೀಷ ನಂತರ ಮೊದಲು ಕರ್ನಾಟಕದಲ್ಲಿ ಮೊದಲು ಕನ್ನಡಕ್ಕೆ ಆದ್ಯತೆ ನೀಡಬೇಕು, ಕನ್ನಡ ಭಾಷೆಯೇ ನಮಗೆ ಬಹುಮುಖ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹಿಂದಿ ಹೇರಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದ ಹಿಲ್ ಗಾರ್ಡನ್ ತಮ್ಮ ನಿವಾಸದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆಯೂ ದೇಶ್ಯಾದ್ಯಂತ ಹಿಂದಿ ಹೇರಿಕೆಗೆ ನಡೆದಿತ್ತು. ಹಲವು ರಾಜ್ಯಗಳು ಇದನ್ನು ಖಂಡಿಸಿದ್ದವು. ಮೊದಲು ಪ್ರಾದೇಶಿಕ ಭಾಷೆಗೆ ಒತ್ತು ನೀಡಬೇಕು. ಇಲ್ಲಿಯವರೆಗೂ ಕನ್ನಡ …

Read More »

ಜಿಲ್ಲಾ ವಾಲ್ಮೀಕಿ ಸಮಿತಿಯಿಂದ ತುರ್ತು ಸಭೆ

ಯಾದಗಿರಿ:ವಾಟ್ಸಪ್ಪಿನಲ್ಲಿ ಜಗತ್ತಿಗೆ ರಾಮಾಯಣದಂತಹ ಶ್ರೇಷ್ಠ ಗ್ರಂಥವನ್ನು ನೀಡಿ ಶ್ರೀರಾಮಚಂದ್ರನೆಂಬ ಪುರುಶೋತ್ತಮನನ್ನು ಪ್ರಪಂಚಕ್ಕೆ ಪರಿಚಯಿಸಿದ ಶ್ರೇಷ್ಠಕವಿ ಶ್ರೀ ಮಹರ್ಷಿ ವಾಲ್ಮೀಕಿ ಋಷಿಗಳ ಭಾವಚಿತ್ರಕ್ಕೆ ಕೆಲ ಕಿಡಿಗೇಡಿಗಳು ಅವಮಾನ ಮಾಡಿರುವುದರ ಹಿನ್ನೆಲೆಯಲ್ಲಿ ತುರ್ತುಸಭೆಯನ್ನು ಕರೆಯಲಾಗಿತ್ತು.ಯಾದಗಿರಿಯ ಜಿಲ್ಲಾ ವಾಲ್ಮೀಕಿ ಭವನದಲ್ಲಿ ಜಿಲ್ಲಾ ಸಮಿತಿಯಿಂದ ಈ ಸಭೆ ಕರೆಯಲಾಗಿತ್ತು.13/09/2020ರಂದು ಜಿಲ್ಲೆಯ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕರೆಯಲಾದ ಈ ಸಭೆಯಲ್ಲಿ ಜಿಲ್ಲೆಯ ವಾಲ್ಮೀಕಿ ಸಮುದಾಯದ ಗಣ್ಯರು ಭಾಗವಹಿಸಿದ್ದರು. ಘಟನೆ:ಕಳೆದ 12/03/2020 ರಂದು ಯಾರೋ ದುಷ್ಕರ್ಮಿಗಳು ಮಹರ್ಷಿ ವಾಲ್ಮೀಕಿ …

Read More »

ನಾಯಕತ್ವ ಬದಲಾವಣೆ ಕೇಳಿದ ಶಾಸಕರಿಗೆ ಬಿಜೆಪಿ ಹೈಕಮಾಂಡ್ ಸಂದೇಶ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಮತ್ತು ಸಿಎಂ ಬದಲಾವಣೆ ಕೇಳಿರುವ ಶಾಸಕರಿಗೆ ಬಿಜೆಪಿ ಹೈಕಮಾಂಡ್ ಸಂದೇಶ ರವಾನಿಸಿದೆ ಎನ್ನಲಾಗಿದೆ. ಕೆಲ ಲಿಂಗಾಯತ ಶಾಸಕರೇ ಸಿಎಂ ಯಡಿಯೂರಪ್ಪ ವಿರುದ್ಧ ತಿರುಗಿ ಬಿದ್ದಿದ್ದು, ವಯಸ್ಸಿನ ಕಾರಣ ನೀಡಿದ್ದಾರೆ ಎನ್ನಲಾಗಿದೆ. ಸಿಎಂ ಪ್ರವಾಸಕ್ಕೂ ಮುನ್ನವೇ ದೆಹಲಿಗೆ ಭೇಟಿ ನೀಡಿರುವ ಮಾಜಿ ಸಿಎಂ, ಸಚಿವ ಜಗದೀಶ್ ಶೆಟ್ಟರ್ ಹಿರಿಯ ನಾಯಕರನ್ನ ಭೇಟಿ ಮಾಡಿ, ನಾಯಕತ್ವ ಬದಲಾವಣೆ ಕುರಿತು ತಮ್ಮ ಅಭಿಪ್ರಾಯವನ್ನ ತಿಳಿಸಿದ್ದಾರೆ. ಹೈ ಪ್ರಶ್ನೆಯ ಸಂದೇಶ: …

Read More »

ಆರೆಸ್ಸೆಸ್‌ ರೀತಿಯ ತರಬೇತಿ: ನಮ್ಮ ಶತ್ರುವಿಗೂ ನೀಡೆವು: ಬಿ. ಕೆ. ಹರಿಪ್ರಸಾದ

ಬೆಳಗಾವಿ: ಆರೆಸ್ಸೆಸ್‌ ರೀತಿ ಯಲ್ಲಿ ನಮ್ಮ ಶತ್ರುಗಳಿಗೂ ತರಬೇತಿ ನೀಡುವುದಿಲ್ಲ. ಆರೆಸ್ಸೆಸ್‌ಗೂ ಕಾಂಗ್ರೆಸ್‌ ತರಬೇತಿ ಶಿಬಿರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಬಿ. ಕೆ. ಹರಿಪ್ರಸಾದ್‌ ಅವರು ಸ್ಪಷ್ಟಪಡಿಸಿದರು.   ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೆಸ್ಸೆಸ್‌ ರೀತಿಯ ಸಂಘಟನೆ ಕಾಂಗ್ರೆಸ್‌ಗೆ ಅಗತ್ಯವಿಲ್ಲ. ಪಕ್ಷದ ಕಾರ್ಯಕರ್ತರಿಗೆ ತರಬೇತಿ ನೀಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಘಟಪ್ರಭಾದಲ್ಲಿ ನಾ.ಸು. ಹರ್ಡೀಕರ ಸಮಾಧಿ ಸ್ಥಳದಲ್ಲಿ ಕೇಂದ್ರ ಸ್ಥಾಪಿಸಲಾಗಿದ್ದು, …

Read More »

ರೈತರಿಗೆ ತೊಂದರೆಯಾದರೆ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ: ಬಿ.ಸಿ ಪಾಟೀಲ

ಬೆಳಗಾವಿ: ನಗರಕ್ಕೆ ಸೋಮವಾರ ಆಗಮಿಸಿದ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರನ್ನು ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಪಕ್ಷದ ಕಾರ್ಯಾಲಯದಲ್ಲಿ ಪಕ್ಷದ ಪರವಾಗಿ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕಾರ್ಯಕರ್ತರು ಪಕ್ಷದ ಆಸ್ತಿ ಹಾಗೂ ರೈತರು ದೇಶದ ಬೆನ್ನೆಲುಬು ನಿಮ್ಮೆಲ್ಲರ ಸಮಸ್ಯೆಗಳಿಗೆ ಸದಾ ಸ್ಪಂದಿಸುವೆ ಎಂದು ಹೇಳಿದರು.   ರೈತರ ಬಗ್ಗೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಏನಾದರೂ ತೊಂದರೆ ಇದ್ದರೆ ನಮಗೆ ತಿಳಿಸಿದರೆ ಅದಕ್ಕೆ ಪರಿಹಾರ ಒದಗಿಸಲು ಪ್ರಾಮಾಣಿಕ …

Read More »