Breaking News

ರಾಷ್ಟ್ರೀಯ

ಬಾಲಿವುಡ್ ನಟಿ ರಿಯಾ ಚಕ್ರವರ್ತಿಗೆ ಜಾಮೀನು ಸಿಗುತ್ತಾ,,,,,,?

ಮುಂಬೈ: ನ್ಯಾಯಾಂಗ ಬಂಧನದಲ್ಲಿರುವ ಬಾಲಿವುಡ್ ನಟಿ ರಿಯಾ ಚಕ್ರವರ್ತಿಗೆ ಜಾಮೀನು ಸಿಗುತ್ತಾ ಅನ್ನೋದುತಿಳಿಯಲಿದೆ. ಇಂದು ನ್ಯಾಯಾಲಯ ವಾದ-ಪ್ರತಿವಾದ ಆಲಿಸಿದ್ದು, ಶುಕ್ರವಾರ ತೀರ್ಪನ್ನ ನ್ಯಾಯಾಲಯ ಕಾಯ್ದಿರಿಸಿದೆ. ಹಾಗಾಗಿ ಇಂದು ಸಹ ರಿಯಾ ಬೈಖಲಾ ಜೈಲೂಟ ಸವಿಯಬೇಕಿದೆ.ಎನ್‍ಸಿಬಿ ಪರ ವಕೀಲರ ವಾದ: ಜಾಮೀನು ನೀಡದಂತೆ ಎನ್‍ಸಿಬಿ (ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ) ಪರ ವಕೀಲರೂ ಕೊನೆಯವರೆಗೂ ವಾದ ಮಂಡಿಸಿದ್ದರು. ಪ್ರಕರಣ ತನಿಖಾ ಹಂತದಲ್ಲಿದ್ದು, ರಿಯಾ ಚಕ್ರವರ್ತಿ ನ್ಯಾಯಾಂಗ ಬಂಧನದಲ್ಲಿರೋದು ಒಳ್ಳೆಯದು. ಕಳೆದ ನಾಲ್ಕೈದು ದಿನಗಳಿಂದ …

Read More »

ಇಡಿ ಅಧಿಕಾರಿಗಳ ಶಾಕ್ಆನಂದ್ ಅಪ್ಪುಗೋಳಆಸ್ತಿ ವಶಕ್ಕೆ

ನವದೆಹಲಿ: ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಹಾಗೂ ನಿರ್ಮಾಪಕ ಆನಂದ್ ಅಪ್ಪುಗೋಳಗೆ  ನೀಡಿದ್ದಾರೆ. ಬ್ಯಾಂಕ್ ಖಾತೆಯಲ್ಲಿದ್ದ ಹಣ ಮತ್ತು ಸ್ಥಿರಾಸ್ತಿ ಸೇರಿ ಒಟ್ಟು 31.35 ಕೋಟಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗಾವಿಯಲ್ಲಿ ಆನಂದ್ ಅಪ್ಪುಗೋಳ ಒಡೆತನದಲ್ಲಿರುವ ಹನುಮಾನ್ ನಗರದ ಬಂಗಲೆ, ಬಾಕ್ಸೈಟ್ ರಸ್ತೆಯಲ್ಲಿರುವ ಖಾಲಿ ನಿವೇಶನ, ಬಿ.ಕೆ ಬಾಳೆಕುಂದ್ರಿಯಲ್ಲಿನ ಮನೆ ಹಾಗೂ ನೆಹರು ನಗರದಲ್ಲಿರುವ ಕಚೇರಿ, ಬ್ಯಾಂಕ್ ಖಾತೆಯಲ್ಲಿದ್ದ ಹಣ ಸೇರಿ ಒಟ್ಟು 31.35 …

Read More »

ಸಿಸಿಬಿ ತನಿಖೆಯಿಂದ ಕೆಲವರ ಬಣ್ಣ ಬಯಲಾಗಿದೆ. ಸಧ್ಯದಲ್ಲಿಯೇ ಎಲ್ಲರ ಬಣ್ಣ ಬಯಲಾಗುತ್ತೆ:B.S.Y.

ಬೆಂಗಳೂರು: ಡ್ರಗ್ಸ್ ಮಾಫಿಯಾ ವಿಚಾರವಾಗಿ ಸಿಎಂ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದು,  ಸಿಸಿಬಿ ತನಿಖೆ ನಡೆಸುತ್ತಿದೆ. ಕೆಲವರ ಬಣ್ಣ ಬಯಲಾಗಿದೆ. ಸದ್ಯದರಲ್ಲಿಯೇ ಪ್ರಕರಣದಲ್ಲಿ ಭಾಗಿಯಾಗಿದ ಎಲ್ಲರ ಬಣ್ಣ ಬಯಲಾಗುತ್ತಿದೆ ಎಂದಿದ್ದಾರೆ. ಡ್ರಗ್ಸ್‌ ಪ್ರಕರಣವನ್ನ ಸರ್ಕಾರ ತುಂಬಾ ಗಂಭೀರವಾಗಿ ಪರಿಗಣಿಸಿದೆ.  ಹಿಂದಿನ ಸರ್ಕಾರದಂತೆ ನಾವು ನಿರ್ಲಕ್ಷ್ಯ ಮಾಡುವುದಿಲ್ಲ. ಎಂತಹ ಒತ್ತಡಕ್ಕೂ ನಮ್ಮ ಸರ್ಕಾರ ಮಣಿಯುವುದಿಲ್ಲ. ನ್ಯಾಯಾಯುತವಾಗಿ ತನಿಖೆ ನಡೆಸುತ್ತೇವೆ. ಸಿಸಿಬಿ ತನಿಖೆಯಿಂದ ಕೆಲವರ ಬಣ್ಣ ಬಯಲಾಗಿದೆ. ಸಧ್ಯದಲ್ಲಿಯೇ ಎಲ್ಲರ ಬಣ್ಣ ಬಯಲಾಗುತ್ತೆ …

Read More »

ಅತಿವೃಷ್ಟಿಯಿಂದ ಬೆಳೆ ಹಾನಿ: ಪರಿಹಾರಕ್ಕೆ ಆಗ್ರಹ

ಸವದತ್ತಿ: ‘ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದಾಗಿ ಬೆಳೆ ಹಾನಿಯಾಗಿದ್ದು, ಕಂಗಾಲಾಗಿರುವ ರೈತರಿಗೆ ಕೂಡಲೇ ಸಮರ್ಪಕ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿ ರೈತ ಸಂಘದವರು ಉಪ ತಹಶೀಲ್ದಾರ್‌ ಆರ್.ಎಸ್. ನೇಸರಗಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಬಿಜ್ಜೂರ ಮಾತನಾಡಿ, ‘ಬರ, ನೆರೆ, ಅತಿವೃಷ್ಟಿ ಹೀಗೆ ಒಂದಿಲ್ಲೊಂದು ತೊಂದರೆಗೆ ರೈತರು ಪ್ರತಿ ವರ್ಷವೂ ಸಿಲುಕುತ್ತಿದ್ದೇವೆ. ಕಷ್ಟಪಟ್ಟು ಬೆಳೆದ ಬೆಳೆ ನಮ್ಮ ಕೈ ಸೇರುತ್ತಿಲ್ಲ. ಈ ಬಾರಿ ಅತಿವೃಷ್ಟಿಯಿಂದ ಹೆಸರು, ಮೆಕ್ಕೆಜೋಳ, …

Read More »

ಮೂರ್ನಾಲ್ಕು ವರ್ಷಗಳಿಂದ ಶೀತಿಲಗೊಂಡ ಸರ್ಕಾರಿ ಶಾಲೆ

ರಾಯಬಾಗ : ಮೂರ್ನಾಲ್ಕು ವರ್ಷಗಳಿಂದ ಶೀತಿಲಗೊಂಡ ಸರ್ಕಾರಿ ಶಾಲೆ ಮೂರ್ನಾಲ್ಕು ವರ್ಷಗಳಿಂದ ಶಾಲೆ ಶೀತಿಲಗೊಂಡಿದ್ದು ಇದರಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದು ಈ ಬಗ್ಗೆ ಹಲವಾರು ಬಾರಿ ಶಾಸಕರಿಗೆ, ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಕೂಡಾ ಕ್ಯಾರೆ ಎನ್ನದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು. ಹೌದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ದಿಗ್ಗೇವಾಡಿ ಗ್ರಾಮದಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಂಪೂರ್ಣ ಶೀತಲ ಗೊಂಡಿದ್ದು ಸುಮಾರು ಮೂರ್ನಾಲ್ಕು ವರ್ಷಗಳಿಂದ ಹಂಚುಗಳು ಒಡೆದ …

Read More »

ಕೆಪಿಎಸ್‌ಸಿಯ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ ದಿನಾಂಕ ಪ್ರಕಟ

ಬೆಂಗಳೂರು, : ಕರ್ನಾಟಕ ಲೋಕ ಸೇವಾ ಆಯೋಗವು ವಿವಿಧ ಇಲಾಖೆಯ ಹುದ್ದೆಗಳ ಪೂರ್ವಭಾವಿ ಹಾಗೂ ಇಲಾಖಾ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ. ಇದೇ ತಿಂಗಳ 17ರಂದು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಮೂಹ ‘ಎ’ ವೃಂದದ ಸಹಾಯಕ ನಿಯಂತ್ರಕರ 54 ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ ನಡೆಯಲಿದೆ.   ಬೆಂಗಳೂರು ಕೇಂದ್ರ ಹಾಗೂ ಆಯೋಗದ ವಿಭಾಗೀಯ ಕೇಂದ್ರಗಳಾದ …

Read More »

ಅಕ್ಟೋಬರ್​ ಅಂತ್ಯಕ್ಕೆ ಕರೊನಾ ಲಸಿಕೆ; ಸಾಧ್ಯತೆ ತಳ್ಳಿ ಹಾಕಲಾಗದು; ಹೀಗಿದೆ ತಜ್ಞರ ವಿಶ್ಲೇಷಣೆ

ನವದೆಹಲಿ: ಆಕ್ಸ್​ಫರ್ಡ್​ ವಿವಿ ಹಾಗೂ ಬ್ರಿಟನ್​ನ ಆಸ್ಟ್ರಾಜೆನೆಕಾ ಕಂಪನಿಗಳು ಜಂಟಿಯಾಗಿ ಅಭಿವೃದ್ಧಿಪಡಿಸುತ್ತಿರುವ ಕೋವಿಡ್​ ಲಸಿಕೆಯ ಕ್ಲಿನಿಕಲ್​ ಟ್ರಯಲ್​ ಸದ್ಯಕ್ಕೆ ಸ್ಥಗಿತಗೊಂಡಿದೆ. ಸಂಶೋಧನೆಯಲ್ಲಿ ಮೂಂಚೂಣಿಯಲ್ಲಿದ್ದ ಕಂಪನಿ ಮೂರನೇ ಹಂತದ ಪರೀಕ್ಷೆಯಲ್ಲಿ ತೊಡಗಿದೆ. ಇದು ಯಶಸ್ವಿಯಾಗಿದ್ದರೆ, ಅಕ್ಟೋಬರ್​ ಅಂತ್ಯಕ್ಕೆಲ್ಲ ಲಸಿಕೆ ದೊರೆಯುವ ಬಗ್ಗೆ ಭಾರಿ ನಿರೀಕ್ಷೆ ಹೊಂದಲಾಗಿತ್ತು. ಆಕ್ಸ್​ಫರ್ಡ್​ ಲಸಿಕೆ ಪಡೆದ ವ್ಯಕ್ತಿಗೆ ಗಂಭೀರ ಅಡ್ಡ ಪರಿಣಾಮ ಉಂಟಾದ ಬೆನ್ನಲ್ಲೇ, ಔಷಧ ತಯಾರಿಕೆಯಲ್ಲಿ ಯಾವುದೇ ತರಾತುರಿಯಿಲ್ಲ. ಎಲ್ಲ ಮಾನದಂಡಗಳನ್ನು ಪೂರೈಸಿದ ಬಳಿಕವಷ್ಟೇ ಲಸಿಕೆಗೆ ಮಾನ್ಯತೆ …

Read More »

ಮಂಗಳೂರು ಗೋಲಿಬಾರ್‌ : 21 ಆರೋಪಿಗಳಿಗೆ ಬೇಲ್‌

ಮಂಗಳೂರು : ದೇಶಾದ್ಯಂತ ಸಂಚಲನ ಮೂಡಿಸಿದ್ದ ಮಂಗಳೂರು ಗಲಭೆ-ಗೋಲಿಬಾರ್‌ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ 21 ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಿ ಬುಧವಾರ ಆದೇಶ ನೀಡಿದೆ.   2019ರ ಡಿ.19ರಂದು ಬೆಳಗ್ಗೆ ಮಂಗಳೂರು ನಗರದ ಸ್ಟೇಟ್‌ಬ್ಯಾಂಕ್‌ ಸಮೀಪ ಪೌರತ್ವ ಕಾಯ್ದೆ (ಸಿಎಎ) ವಿರೋಧಿಸಿ ಕೆಲವರು ಪ್ರತಿಭಟನೆಗೆ ನಡೆಸಲು ಸಮಾವೇಶಗೊಂಡಿದ್ದರು. ನಿರ್ಬಂಧ ಇದ್ದರೂ ಅನುಮತಿ ಇಲ್ಲದೆ ನಡೆದ ಈ ಪ್ರತಿಭಟನೆ ವೇಳೆ ಪೊಲೀಸರು-ಪ್ರತಿಭಟನಾಕಾರ ನಡುವೆ ಘರ್ಷಣೆ ನಡೆದು, ಗೋಲಿಬಾರ್‌ ಆಗಿತ್ತು. ಆ …

Read More »

ಹಗರಿಬೊಮ್ಮನಹಳ್ಳಿ: ಜೀವನದಲ್ಲಿ ಜಿಗುಪ್ಸೆ ವಿಷಸೇವಿಸಿ ಯುವಕ ಆತ್ಮಹತ್ಯೆ

ಹಗರಿಬೊಮ್ಮನಹಳ್ಳಿ  : ಯುವಕನೊಬ್ಬ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಸೊನ್ನ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಸೊನ್ನ ಗ್ರಾಮದ ನಿವಾಸಿ ಬಡಿಗೇರ್‌ ಸಿದ್ದೇಶ (22) ಎಂಬುವನೇ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.   ಮೃತ ಬಡಿಗೇರ್‌ ಸಿದ್ದೇಶ ಬಹುದಿನಗಳಿಂದ ಮೂರ್ಛೆ ರ್‍ರೋಗ ಮತ್ತು ಮೂಲವ್ಯಾಧಿ ಕಾಯಿಲೆಗಳಿಂದ ಬಳಲುತ್ತಿದ್ದು, ಇದರಿಂದ ಜಿಗುಪ್ಸೆ ಹೊಂದಿದ್ದನೆಂದು ಎಂದು ಹೇಳಲಾಗುತ್ತಿದೆ. ಹೀಗಾಗಿ ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ವಿಷ …

Read More »

ರಫೆಲ್ ಜೆಟ್ ಭಾರತಕ್ಕೆ ಪ್ರಸ್ತುತ ಪರಿಸ್ಥಿತಿಯಲ್ಲಿ ಸಹಾಯ ಮಾಡುತ್ತದೆ : ರಾಜನಾಥ್ ಸಿಂಗ್

ನವದೆಹಲಿ : ‘ರಫೇಲ್ ಜೆಟ್‌ ಭಾರತ ಮತ್ತು ಫ್ರಾನ್ಸ್ ನಡುವಿನ ಸಂಬಂಧಗಳ ಬಲವನ್ನು ತೋರಿಸುತ್ತದೆ’ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.ಇದನ್ನು ಭಾರತದ ರಕ್ಷಣಾ ಇತಿಹಾಸದಲ್ಲಿ ಒಂದು ಐತಿಹಾಸಿಕ ಕ್ಷಣ ಎಂದು ಕರೆಯುತ್ತಾರೆ ರಫಲೆ ಜೆಟ್‌ಗಳು ಭಾರತಕ್ಕೆ ತನ್ನ ಪ್ರಸ್ತುತ ಭದ್ರತಾ ಪರಿಸ್ಥಿತಿಯಲ್ಲಿ ಸಹಾಯ ಮಾಡುತ್ತವೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. ‘ನಮ್ಮ ಪ್ರಸ್ತುತ ಪರಿಸ್ಥಿತಿಗೆ ಈ ಪ್ರಚೋದನೆಯು ನಿರ್ಣಾಯಕವಾಗಿದೆ. ಇದು ನಮ್ಮ ಪ್ರಸ್ತುತ ಪ್ರಾದೇಶಿಕ ಪರಿಸ್ಥಿತಿಗೆ ಮುಖ್ಯವಾಗಿದೆ. …

Read More »