Breaking News

ರಾಷ್ಟ್ರೀಯ

ಜಾನಪದ ಸಿಂಗ‌ರ್ ಮೇಲೆ ಹಲ್ಲೆ ಆರೋಪ – ಸತತ 5 ಗಂಟೆಗಳ ಕಾಲ ವಿಚಾರಣೆ ನಡೆಸಿದ ಪೊಲೀಸ್‌

ಜಾನಪದ ಸಿಂಗ‌ರ್ ಮೇಲೆ ಹಲ್ಲೆ ಆರೋಪ – ಸತತ 5 ಗಂಟೆಗಳ ಕಾಲ ವಿಚಾರಣೆ ನಡೆಸಿದ ಪೊಲೀಸ್‌ ಚಿಕ್ಕೋಡಿ : ಮೊನ್ನೆ ಅಷ್ಟೇ ಕಾರ್ ಡ್ರೈವ್ ಮಾಡುತ್ತಾ ಶೇಖರ ಹಕ್ಯಾಗೋಳ, ಅಶ್ವಿನಿ ಇರಗಾರ, ರೂಪಾ ಹಕ್ಯಾಗೋಳ ಮೇಲೆ ಪುಂಡತನ ಮೆರೆದಿದ್ದ ಮಾಳು ಉರ್ಪ ಮಾಳಪ್ಪ ನಿಪನಾಳ ಇವನಿಗೆ ರಾಯಬಾಗ ಸರ್ಕಲ್ ಇನ್ಸ್‌ಪೆಕ್ಟ‌ರ್ ಅವರು ಸತತ ಐದು ಗಂಟೆಗಳ ಕಾಲ ವಿಚಾರಣೆ ನಡೆಸಿದ ಬಳಿಕ ಸೂಕ್ತ ಕಾನೂನು ಕ್ರಮಕ್ಕೆ ಕೈಗೊಂಡಿದ್ದಾರೆ. ಆಧುನಿಕ …

Read More »

ಬಡ ವಿದ್ಯಾರ್ಥಿಗಳಿಗೆ ಮೋದಿ ಸರ್ಕಾರದ ಬಿಗ್ ಗಿಫ್ಟ್ !

ನವದೆಹಲಿ : ಮಧ್ಯಮ ವರ್ಗ ಅಥವಾ ಆರ್ಥಿಕವಾಗಿ ದುರ್ಬಲ ಜನರು ಹಣಕಾಸಿನ ಅಡಚಣೆಗಳಿಂದ ತಮ್ಮ ಅಧ್ಯಯನವನ್ನ ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ ಮತ್ತು ಅವರ ಕನಸುಗಳನ್ನ ಈಡೇರಿಸಿಕೊಳ್ಳಲು ವಿಫಲರಾಗುತ್ತಾರೆ. ಈ ಸಮಸ್ಯೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ.   ಬುಧವಾರ, ಸಚಿವ ಸಂಪುಟವು ಪ್ರಧಾನಮಂತ್ರಿ ವಿದ್ಯಾ ಲಕ್ಷ್ಮಿ ಶಿಕ್ಷಣ ಯೋಜನೆ ಎಂಬ ಯೋಜನೆಗೆ ಅನುಮೋದನೆ ನೀಡಿದ್ದು, ಇದರ ಅಡಿಯಲ್ಲಿ ಕುಟುಂಬದ ಆದಾಯ 8 ಲಕ್ಷಕ್ಕಿಂತ ಕಡಿಮೆ ಇರುವ ಮಕ್ಕಳಿಗೆ …

Read More »

ಡೊನಾಲ್ಡ್‌ Trumpಗೆ‌ ಮತ್ತೊಮ್ಮೆ‌ ಅಧ್ಯಕ್ಷ ಪಟ್ಟ; ಪ್ರಧಾನಿ ಮೋದಿ ಅಭಿನಂದನೆ

ವಾಷಿಂಗ್ಟನ್:‌ ಇಡೀ ಜಗತ್ತಿನ ಕುತೂಹಲಕ್ಕೆ ಕಾರಣವಾಗಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್‌ ಟ್ರಂಪ್‌ ನೇತೃತ್ವದ ರಿಪಬ್ಲಿಕನ್‌ ಪಕ್ಷ ಜಯಭೇರಿ ಬಾರಿಸಿರುವುದಾಗಿ ಬುಧವಾರ (ನ.06) ಘೋಷಿಸುವ ಮೂಲಕ ಟ್ರಂಪ್‌ 2ನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.   ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್‌ ಟ್ರಂಪ್‌ 270ಕ್ಕೂ ಅಧಿಕ ಎಲೆಕ್ಟ್ರೊರಲ್‌ ಮತ ಪಡೆದು ಜಯಭೇರಿ ಬಾರಿಸಿದ್ದು, ಕಮಲಾ ಹ್ಯಾರಿಸ್‌ 224 ಸ್ಥಾನ ಪಡೆದು ಪರಾಜಯಗೊಳ್ಳುವ ಮೂಲಕ ಅಮೆರಿಕದ ಮೊದಲ ಮಹಿಳಾ ಅಧ್ಯಕ್ಷೆಯಾಗಬೇಕೆಂಬ …

Read More »

ಸವಣೂರ ವಿಧಾನಸಭಾ ಕ್ಷೇತ್ರ ಪ್ರಚಾರದಲ್ಲಿ ಭಾಗವಹಿಸಿದ ಸತೀಶ್ ಜಾರಕಿಹೊಳಿ

ಶಿಗ್ಗಾವಿ (ಹಾವೇರಿ ಜಿಲ್ಲೆ): ಶಿಗ್ಗಾವಿ ವಿಧಾನಸಭಾ ಕ್ಷೇತ್ರವನ್ನು ತೆಕ್ಕೆಗೆ ತೆಗೆದುಕೊಳ್ಳಲು ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ ಮುಖಂಡರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ ಅಹ್ಮದ್ ಖಾನ್ ಪಠಾಣ ಪರ ಪ್ರಚಾರ ನಡೆಸುತ್ತಿರುವ ಮುಖಂಡರು, ‘ಜನಪರವಾದ ಐದು ಗ್ಯಾರಂಟಿ ಯೋಜನೆ ನೋಡಿ ಕಾಂಗ್ರೆಸ್‌ಗೆ ಮತ ನೀಡಿ’ ಎಂದು ಕೋರುತ್ತಿದ್ದಾರೆ. ಶಿಗ್ಗಾವಿ ಕ್ಷೇತ್ರದ ಚಾಕಾಪುರದಲ್ಲಿ ಭಾನುವಾರ ಪ್ರಚಾರ ನಡೆಸಿದ ಸಚಿವ ಸತೀಶ ಜಾರಕಿಹೊಳಿ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ …

Read More »

ಎಂಇಎಸ್‌ನಿಂದ ಕರಾಳ ದಿನ: 46 ಮಂದಿ ವಿರುದ್ಧ ದೂರು

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವಕ್ಕೆ ಪರ್ಯಾಯವಾಗಿ ನಗರದಲ್ಲಿ ನ.1ರಂದು ಕರಾಳ ದಿನ ಆಚರಿಸಿದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌)ಯ 46 ನಾಯಕರು ಸೇರಿ ಹಲವರ ವಿರುದ್ಧ ಇಲ್ಲಿನ ಮಾರ್ಕೆಟ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಜ್ಯೋತ್ಸವ ದಿನದಂದೇ ಎಂಇಎಸ್‌ನವರು ಪ್ರತಿವರ್ಷ ಕರಾಳ ದಿನ ಆಚರಿಸುತ್ತಾರೆ. ಈ ಬಾರಿ ಅದಕ್ಕೆ ಅನುಮತಿ ಕೋರಿ ಬಂದಿದ್ದ ಎಂಇಎಸ್‌ ನಿಯೋಗಕ್ಕೆ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌, ‘ಯಾವ ಕಾರಣಕ್ಕೂ ಕರಾಳ ದಿನಾಚರಣೆಗೆ ಅನುಮತಿ ಕೊಡುವುದಿಲ್ಲ’ ಎಂದು ತಿಳಿಸಿದ್ದರು. ನಗರ ಪೊಲೀಸ್‌ …

Read More »

ದಾರಿ ಮಧ್ಯೆಯೇ ಕೆಟ್ಟು ನಿಂತ ನಟ ಗುರುಪ್ರಸಾದ್ ಶವ ಸಾಗಿಸುತ್ತಿದ್ದ ಆಂಬುಲೆನ್ಸ್

ಬೆಂಗಳೂರು: ಇಂದು ಸ್ಯಾಂಡಲ್ ವುಡ್ ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯುತ್ತಿದ್ದ ವೇಳೆಯಲ್ಲಿ ದಾರಿಯ ಮಧ್ಯೆಯೇ ಆಂಬುಲೆನ್ಸ್ ಕೆಟ್ಟು ನಿಂತಿರುವುದಾಗಿ ತಿಳಿದು ಬಂದಿದೆ. ಗುರುಪ್ರಸಾದ್ ಅವರು ನೆಲಮಂಗಲ ಬಳಿಯ ಮಾದನಾಯಕನಹಳ್ಳಿಯಲ್ಲಿದ್ದಂತ ಬಾಡಿಗೆ ಫ್ಲ್ಯಾಟ್ ನಲ್ಲಿ ಇಂದು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಸ್ಥಳಕ್ಕೆ ತೆರಳಿದ್ದಂತ ಪೊಲೀಸರು, ನೇಣಿನ ಕುಣಿಕೆಯಿಂದ ಕೆಳಗೆ ಇಳಿಸಿ ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದರು. ನಟ ಗುರುಪ್ರಸಾದ್ ಶವವನ್ನು ಸಾಗಿಸುತ್ತಿದ್ದಂತ …

Read More »

ಬಿಜೆಪಿ ಅಧೋಗತಿಗೆ ತಳ್ಳಿದ್ದ ಸಾರಿಗೆ ನಿಗಮಗಳಿಗೆ ‘ಶಕ್ತಿ ಯೋಜನೆ’ ಶಕ್ತಿ ತುಂಬಿದೆ

ಬೆಂಗಳೂರು, ನವೆಂಬರ್ 02: ಶಕ್ತಿ ಯೋಜನೆ ಮರು ಪರಿಶೀಲಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳುತ್ತಿದ್ದಂತೆ ರಾಜ್ಯಾದ್ಯಂತೆ ಶಕ್ತಿ ಯೋಜನೆ ಕಿಡಿ ಹೊತ್ತಿಕೊಂಡಿದೆ. ಆರೋಪ, ಪ್ರತ್ಯಾರೋಪಗಳ ಮಧ್ಯೆ ಸವಾಲೆಸೆಯುವುದು, ಬಹಿರಂಗ ಚರ್ಚೆಗೆ ಆಹ್ವಾನ ನಡೆದಿದೆ. ಈ ಮಧ್ಯೆ ಶಕ್ತಿ ಯೋಜನೆಗಳ ಬಗ್ಗೆ ಮಾತನಾಡಿದ್ದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ರಾಮಲಿಂಗಾ ರೆಡ್ಡಿ ತಿರುಗೇಟು ನೀಡಿದ್ದಾರೆ. ಟ್ವೀಟ್ ಮೂಲಕ ಕಿರಿ ಕಾರಿರುವ ಸಚಿವ ರಾಮಲಿಂಗಾ ರೆಡ್ಡಿ ಅವರು, ಆರ್.ಅಶೋಕ್ ಅವರೆ …

Read More »

Waqf Board ಆಸ್ತಿ ವಿಚಾರ ಸದ್ಯ ಮುಗಿದು ಹೋದ ಅಧ್ಯಾಯ: ಗೃಹಸಚಿವ

ಬೆಂಗಳೂರು: ವಕ್ಫ್​ ಮಂಡಳಿ (Waqf Board) ಆಸ್ತಿ ವಿಚಾರವಾಗಿ ರೈತರಿಗೆ ಯಾವುದೇ ನೋಟಿಸ್ ಕೊಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೊಟ್ಟಿರುವ ನೋಟಿಸ್​​ ವಾಪಸ್ ಪಡೆಯಲು ಸೂಚಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ (DR. G. Parameshwar) ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಗೃಹಸಚಿವ ಪರಮೇಶ್ವರ (DR. G. Parameshwar), ವಕ್ಫ್​ ಮಂಡಳಿ (waqf Board) ಆಸ್ತಿ ವಿಚಾರ ಸದ್ಯ ಮುಗಿದು ಹೋದ …

Read More »

ನವೆಂಬರ್ 1ರಿಂದ ಹೊಸ ರೂಲ್ಸ್ ; ಇನ್ಮುಂದೆ ‘ಫೋನ್ ನಂಬರ್’ಗೆ ‘OTP’ ಬರೋದಿಲ್ಲ

ನವದೆಹಲಿ : OTP (ಒನ್ ಟೈಮ್ ಪಾಸ್‌ವರ್ಡ್) ಪರಿಶೀಲನೆ ಪ್ರಕ್ರಿಯೆಯು ಇಂದಿನ ಡಿಜಿಟಲ್ ಜಗತ್ತಿನಲ್ಲಿ ಬಹಳ ಮಹತ್ವದ್ದಾಗಿದೆ. ಎಲ್ಲಾ ರೀತಿಯ ಸೇವೆಗಳು ಆನ್‌ಲೈನ್‌’ನಲ್ಲಿ ಲಭ್ಯವಿದ್ದರೂ, ಬಳಕೆದಾರರನ್ನು OTP ಯೊಂದಿಗೆ ಗುರುತಿಸಲಾಗುತ್ತದೆ. ಭಾರತದಲ್ಲಿ ಹೆಚ್ಚಿನ ಆನ್‌ಲೈನ್ ವಹಿವಾಟುಗಳು ಭದ್ರತೆಗಾಗಿ OTP ಪರಿಶೀಲನೆಯನ್ನ ಅವಲಂಬಿಸಿವೆ. ಆದಾಗ್ಯೂ, ಡಿಜಿಟಲ್ ಭದ್ರತೆ ಮತ್ತು ವಂಚನೆಯನ್ನ ತಡೆಯುವ ಉದ್ದೇಶದಿಂದ ಟೆಲಿಕಾಂ ಕಂಪನಿಗಳು ನವೆಂಬರ್ 1 ರಿಂದ ಹೊಸ ನಿಯಮಗಳನ್ನ ಜಾರಿಗೆ ತರಲು ಸಿದ್ಧವಾಗಿವೆ. ಈ ಕಾರಣದಿಂದಾಗಿ, OTP …

Read More »

ಪಿಜಿಯಲ್ಲಿ ಯುವತಿಯನ್ನು ತಬ್ಬಿ ಮುತ್ತಿಕ್ಕಿ ಅಸಭ್ಯ ವರ್ತನೆ

ಬೆಂಗಳೂರು : ಬೆಂಗಳೂರು: ಪಿಜಿಯಲ್ಲಿ ಯುವತಿಯನ್ನು ತಬ್ಬಿ ಮುತ್ತಿಕ್ಕಿ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಪೀಣ್ಯ ಠಾಣೆ ಪೊಲೀಸರು ಸೆಕ್ಯುರಿಟಿ ಗಾರ್ಡ್ ನನ್ನು ಬಂಧಿಸಿದ್ದಾರೆ. ಬೆಂಗಳೂರಿನ ಪೀಣ್ಯದಲ್ಲಿರುವ ಪಿಜಿಯೊಂದರಲ್ಲಿ ಈ ಘಟನೆ ನಡೆದಿದೆ.ಯುವತಿಯೋರ್ವಳ ಹೆಸರಿಗೆ ಕೊರಿಯರ್ ಬಂದಿದ್ದು, ಅದನ್ನು ತೆಗೆದುಕೊಳ್ಳಲು ಹೊರಗಡೆ ಬಂದ ಯುವತಿ ಜೊತೆ ಸೆಕ್ಯೂರಿಟಿ ಗಾರ್ಡ್ ಅಸಭ್ಯವಾಗಿ ವರ್ತಿಸಿದ್ದು, ಘಟನೆ ಸಂಬಂಧ ಸೆಕ್ಯೂರಿಟಿ ಗಾರ್ಡ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪಶ್ಚಿಮ ಬಂಗಾಳ ಮೂಲದ ಯುವತಿ ಪೀಣ್ಯ ಸಮೀಪದ …

Read More »