ಮೂಡಲಗಿ: ಬೆಳಗಾವಿ ಜಿಲ್ಲೆ ಹಾಗೂ ಮಹಾರಾಷ್ಟ್ರದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಮಾರ್ಕಂಡೇಯ ನದಿಯಿಂದ ಘಟಪ್ರಭಾ ನದಿಗೆ ಗುರುವಾರದಂದು ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವದರಿಂದ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಹಾರಾಷ್ಟ್ರ ಭಾಗದಲ್ಲಿ ಭಾರಿ ಮಳೆ ಮೈದುಂಬಿ ಸುರಿಯುತ್ತಿರುವ ಘಟಪ್ರಭೆ ನದಿ ಮೈದುಂಬಿ ಹರಿಯುತ್ತಿದ್ದು ಮೂಡಲಗಿ ತಾಲೂಕಿನ ಸುಣಧೋಳಿ, ಕಮ¯ದಿನ್ನಿ, ಹುಣಶ್ಯಾಳ ಪಿ.ವಾಯ್, ಢವಳೇಶ್ವರ, ಅವರಾದಿ ಹಾಗೂ ಗೋಕಾಕ ತಾಲೂಕಿನ ಉದಗಟ್ಟಿ …
Read More »ಶಾಸಕ ಎಸ್.ರಾಮಲಿಂಗಾ ರೆಡ್ಡಿ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಹೈದರಾಬಾದ್: ಟಿಆರ್ ಎಸ್ ಪಕ್ಷದ ಶಾಸಕ ಎಸ್.ರಾಮಲಿಂಗಾ ರೆಡ್ಡಿ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಮಲಿಂಗಾ ರೆಡ್ಡಿಯವರು ದುಬ್ಬಾಕಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. 59 ವರ್ಷದ ರಾಮಲಿಂಗಾ ರೆಡ್ಡಿ ಇತ್ತೀಚೆಗೆ ಕೊಂಪಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಮೊಳಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆನಾರೋಗ್ಯ ಹಿನ್ನೆಲೆಯಲ್ಲಿ ಶಾಸಕರನ್ನು ರಾತ್ರಿ ಸುಮಾರು 2.30ಕ್ಕೆ ಗಾಚಿಬೌಲಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೆಲಂಗಾಣ ರಾಷ್ಟ್ರೀಯ ಪಕ್ಷದ ಹಿರಿಯ ನಾಯಕರಲ್ಲಿ ರಾಮಲಿಂಗಾ ರೆಡ್ಡಿ ಸಹ ಒಬ್ಬರಾಗಿದ್ದರು. ಶಾಸಕರ ಅಂತಿಮ ವಿಧಿವಿಧಾನಗಳು …
Read More »ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ : ಕೆಲವೆಡೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ
ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಮಳೆ ಮತ್ತೆ ಬಿರುಸು ಪಡೆದುಕೊಂಡಿದೆ. ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಹಾಸನ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ನದಿಗಳ ನೀರಿನ ಮಟ್ಟದಲ್ಲಿ ಭಾರಿ ಏರಿಕೆ ಕಂಡು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಅಲ್ಲಲ್ಲಿ ಮತ್ತೆ ಮಣ್ಣು ಕುಸಿತದ ಪ್ರಕರಣಗಳು ವರದಿಯಾಗುತ್ತಿವೆ. ಮೂಡಿಗೆರೆ ತಾಲೂಕಿನ ಮುಗ್ರಹಳ್ಳಿ ಸೇತುವೆ ಕುಸಿಯುವ ಹಂತ ತಲುಪಿದ್ದು, ಸ್ಥಳೀಯರಲ್ಲಿ ಆತಂಕ …
Read More »ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಭೂಮಿ ಪೂಜೆಯ ವೇದಿಕೆಯ ಕಾರ್ಯಕ್ರಮದಲ್ಲಿ ಕರ್ನಾಟಕದ ಕಂಪು ಮೊಳಗಿದೆ.
ಅಯೋಧ್ಯೆ: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಭೂಮಿ ಪೂಜೆಯ ವೇದಿಕೆಯ ಕಾರ್ಯಕ್ರಮದಲ್ಲಿ ಕರ್ನಾಟಕದ ಕಂಪು ಮೊಳಗಿದೆ. ಮಧ್ಯಾಹ್ನ ಗರ್ಭಗುಡಿ ಇರುವ ಜಾಗದಲ್ಲಿ ಭೂಮಿ ಪೂಜೆ ನಡೆದ ಬಳಿಕ ವೇದಿಕೆಯ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮೂರು ಬಾರಿ ಕರ್ನಾಟಕ ಪ್ರಸ್ತಾಪವಾಯಿತು. ವೇದಿಕೆಯಲ್ಲಿ ಬಟನ್ ಒತ್ತುವ ಮೂಲಕ ಮೋದಿ ಶಿಲಾಫಲಕವನ್ನು ಅನಾವರಣಗೊಳಿಸಿದರು. ಇದಾದ ಬಳಿಕ ಪ್ರಧಾನಿಯನ್ನು ಕೋದಂಡರಾಮನ ವಿಗ್ರಹವನ್ನು ನೀಡುವ ಮೂಲಕ ಗೌರವಿಸಲಾಯಿತು. ಈ ವೇಳೆ ನಿರೂಪಕರು ಕರ್ನಾಟಕದಿಂದ ಈ ವಿಗ್ರಹವನ್ನು …
Read More »ರಾಹುಲ್ ಗಾಂಧಿ ಪ್ರಭು ಶ್ರೀ ರಾಮನ ಅನೇಕ ಶ್ರೇಷ್ಠ ಗುಣಗಳನ್ನು ಒಳಗೊಂಡ ಟ್ವೀಟ್ ವೊಂದನ್ನು ಮಾಡಿದ್ದಾರೆ.
ಹೊಸದಿಲ್ಲಿ: ಅಯೋಧ್ಯೆಯ ರಾಮ ಜನ್ಮಭೂಮಿ ದೇವಸ್ಥಾನದ ಭವ್ಯ ಅಡಿಪಾಯ ಹಾಕುವ ಸಮಾರಂಭ ನಡೆಯುತ್ತಿರುವ ದಿನ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಭು ಶ್ರೀ ರಾಮನ ಅನೇಕ ಶ್ರೇಷ್ಠ ಗುಣಗಳನ್ನು ಒಳಗೊಂಡ ಟ್ವೀಟ್ ವೊಂದನ್ನು ಮಾಡಿದ್ದಾರೆ. ಹಿಂದಿಯಲ್ಲಿ ಟ್ವೀಟ್ ಮಾಡಿರುವ ರಾಹುಲ, ಪ್ರಭು ರಾಮ್ ಅತ್ಯುತ್ತಮ ಮಾನವೀಯ ಮೌಲ್ಯಗಳ ಸಾಕಾರ ಮೂರ್ತಿಯಾಗಿದ್ದಾರೆ, “ಅವರು ನಮ್ಮ ಹೃದಯದ ಆಳದಲ್ಲಿ ನೆಲೆಸಿರುವ ಮಾನವೀಯತೆಯ ಚೈತನ್ಯ” ಎಂದು ಹೇಳಿದ್ದಾರೆ. “ರಾಮ್ ಎಂದರೆ ಪ್ರೀತಿ, ಅವನು ಎಂದಿಗೂ …
Read More »ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ
ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ಇಂದು ಕೂಡ ಮೋಡ ಕವಿದ ವಾತಾವರಣ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಕವಿದ ವಾತಾವರಣ ಮುಂದುವರಿದಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ …
Read More »ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ಹೊಸ ತಿರುವು
ಮುಂಬೈ: 34 ವರ್ಷದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇದೀಗ ಸುಶಾಂತ್ ಮಾಜಿ ಗೆಳತಿ ನಟಿ ಅಂಕಿತಾ ಲೋಖಂಡೆ, ನನ್ನನ್ನು ಯಾರೂ ಖರೀದಿಸಲು ಸಾಧ್ಯವಿಲ್ಲ ಎಂದು ಇನ್ಸ್ಟಾಗ್ರಾಂನಲ್ಲಿ ಫೋಟೋ ಪೋಸ್ಟ್ ಮಾಡಿಕೊಂಡಿದ್ದಾರೆ. ಸುಶಾಂತ್ ನಿಧನದ ಒಂದು ತಿಂಗಳ ಬಳಿಕ ಅಂಕಿತಾ ತಮ್ಮ ಅಭಿಪ್ರಾಯಗಳನ್ನು ಮಾಧ್ಯಮಗಳ ಮುಂದೆ ಹಂಚಿಕೊಳ್ಳುತ್ತಿದ್ದಾರೆ. ಸುಶಾಂತ್ ಜೊತೆಗಿನ ಸ್ನೇಹ, ಒಡನಾಟ, ನಿಗೂಢ ಸಾವಿನ ಬಗ್ಗೆ ಹಲವು ವಿಷಯಗಳನ್ನು ಅಂಕಿತಾ ಶೇರ್ …
Read More »ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸುತ್ತಮುತ್ತ ಭಾರೀ ಮಳೆ
ಶಿವಮೊಗ್ಗ/ಮಡಿಕೇರಿ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸುತ್ತಮುತ್ತ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಭಾರೀ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ಮನೆಯ ಮೇಲೆ ಬಿದ್ದ ಪರಿಣಾಮ ಮನೆ ಜಖಂಗೊಂಡಿರುವ ಘಟನೆ ನಗರ ಹೋಬಳಿಯ ಮಾಸ್ತಿಕಟ್ಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಇಂದ್ರಮನೆಯಲ್ಲಿ ನಡೆದಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಮಗು ಹಾಗೂ ನಾಲ್ವರು ಅಪಾಯದಿಂದ ಪಾರಾಗಿದ್ದು, ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಗಾಯಾಳು ಮಹಿಳೆಯರಿಗೆ ಮಾಸ್ತಿಕಟ್ಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗಾಳಿ …
Read More »ಕೊರೊನಾ ಅನಾರೋಗ್ಯದ ನಡುವೆಯೂ ಕರ್ತವ್ಯ ನಿಷ್ಠೆ ಮೆರೆದ ಸಿಎಂ ಯಡಿಯೂರಪ್ಪ – ವರ್ಕ್ ಫ್ರಮ್ ಹಾಸ್ಪಿಟಲ್
ಬೆಂಗಳೂರು: ಕೊರೊನಾ ಸೋಂಕು ತಗುಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅನಾರೋಗ್ಯದ ನಡುವೆಯೂ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ. ಇವತ್ತು ಕೆಲವು ಮಹತ್ವದ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಆಸ್ಪತ್ರೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದು ಈ ಮೂಲಕ ಕೊರೊನಾ ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿದ್ದರೂ ಕರ್ತವ್ಯನಿಷ್ಠೆ ಮೆರೆಯುವ ಮೂಲಕ ರಾಜ್ಯದ ಜನತೆಗೆ ಸಂದೇಶ ರವಾನಿಸಿದ್ದಾರೆ. ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವ ಸಿಎಂ ಸರ್ಕಾರಿ ಕಚೇರಿ ಕೆಲಸ ಕಾರ್ಯಗಳಿಗೆ ಯಾವುದೇ …
Read More »ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಗೂ ಕರೋನಾ ಸೊಂಕು ಧೃಡ, ಆತಂಕದಲ್ಲಿ ಕೇಂದ್ರ ಸಚಿವ ಸಂಪುಟ ಸದ್ಯಸರು
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ನಂತರ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕರೋನವೈರಸ್ ಸೊಂಕಿಗೆ ಈಡಾಗಿದ್ದಾರೆ ಎನ್ನಲಾಗಿದೆ. ಪ್ರಧಾನ್ ಅವರನ್ನು ಹರಿಯಾಣದ ಗುರುಗ್ರಾಮ್ (ಹಿಂದಿನ ಗುರ್ಗಾಂವ್) ದ ಮೇದಂತ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ……. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ …
Read More »