ಸಮಾನತೆಯ ಹಾದಿಯಲ್ಲಿ ದೇಶವು ಸಾಗಬೇಕಾದ ದಾರಿ ಇನ್ನೂ ಇದೆಯಾದರೂ ಈ ನಿಟ್ಟಿನಲ್ಲಿ ಒಂದು ರಾಷ್ಟ್ರವಾಗಿ, ಸಮಾಜವಾಗಿ ನಾವು ಕೆಲವು ವರ್ಷಗಳಿಂದ ಗಮನಾರ್ಹ ಹೆಜ್ಜೆಗಳನ್ನು ಇಡುತ್ತಾ ಸಾಗುತ್ತಿದ್ದೇವೆ. ಈ ನಿಟ್ಟಿನಲ್ಲಿ ಈಗ ಸುಪ್ರೀಂ ಕೋರ್ಟ್ ನೀಡಿರುವ ಆದೇಶವೊ ಒಂದೆನ್ನಬಹುದು. ಹಿಂದೂ ಅವಿಭಜಿತ ಕುಟುಂಬದಲ್ಲಿ ಪಿತ್ರಾರ್ಜಿತ ಆಸ್ತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮಗಳಿಗೆ ತಂದೆಯ ಪಿತ್ರಾರ್ಜಿತ ಆಸ್ತಿಯ ಮೇಲೆ ಸಮಾನ ಹಕ್ಕಿರುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ. ಇದಷ್ಟೇ ಅಲ್ಲದೇ …
Read More »ಎಸೆಸೆಲ್ಸಿ ಪೂರಕ ಪರೀಕ್ಷೆ: ಅರ್ಜಿ ಆಹ್ವಾನ
ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಅಭ್ಯರ್ಥಿ ಗಳಿಗೆ ಸೆಪ್ಟಂಬರ್ನಲ್ಲಿ ಪೂರಕ ಪರೀಕ್ಷೆ ನಡೆಯಲಿದ್ದು, ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಕಾರಣಗಳಿಂದ ಗೈರುಹಾಜರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದು. ಅವರನ್ನು ಪ್ರಥಮ ಅವಕಾಶ ಎಂದು ಪರಿಗಣಿಸಲಾಗುವುದು. ಅದೇ ರೀತಿ, ಈ ಪ್ರಕರಣಗಳಿಂದ ವಿದ್ಯಾರ್ಥಿಗಳು ಕೆಲ ವಿಷಯಗಳಿಗೆ ಹಾಜರಾಗಿ, ಹಲವು ವಿಷಯಗಳಿಗೆ ಗೈರುಹಾಜರಾದರೂ, ಪೂರಕ ಪರೀಕ್ಷೆಯಲ್ಲಿ ನೋಂದಾಯಿಸಿಕೊಂಡರೆ, ಅಂಥವರನ್ನೂ ಪ್ರಥಮ ಅವಕಾಶ ಎಂದು ಪರಿಗಣಿಸಲಾಗುವುದು. ಆದರೆ, ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿಲ್ಲದಿರುವ ಬಗ್ಗೆ ಸ್ವತಃ ವಿದ್ಯಾರ್ಥಿಗಳ ಪೋಷಕರ …
Read More »ರಾಮ ಮಂದಿರ ಭೂಮಿ ಪೂಜೆಯಲ್ಲಿ ಪಾಲ್ಗೊಂಡಿದ್ದ ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥರಿಗೆ ಕೊರೋನಾ ವೈರಸ್ ದೃಢ
ಹೊಸದಿಲ್ಲಿ: ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆಯಲ್ಲಿ ಪಾಲ್ಗೊಂಡಿದ್ದ ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥರಿಗೆ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥರಾಗಿರುವ ಮಹಂತ್ ನೃತ್ಯ ಗೋಪಾಲ್ ದಾಲ್ ಅವರಿಗೆ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿ ತಿಳಿಸಿವೆ. ಕೋಟ್ಯಾಂತ ಭಾರತೀಯರ ಕನಸ್ಸಾಗಿದ್ದ ಅಯೋಧ್ಯೆ ರಾಮಮಂದಿರದ ಭೂಮಿ ಪೂಜೆ ಆಗಸ್ಟ್ 5 ರಂದು ನೆರವೇರಿಸಲಾಗಿತ್ತು. ಕಾರ್ಯಕ್ರಮದಲ್ಲಿ ಐವರು ಪ್ರಮುಖ ನಾಯಕರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. …
Read More »ಭಾರತದ ಮಾಜಿ ನಾಯಕ ಎಂಎಸ್ ಧೋನಿ ಅವರು ಕೊರೊನಾ ಟೆಸ್ಟ್ಗೆ ಒಳಾಗಿದ್ದಾರೆ.
ಮುಂಬೈ: ಕ್ರಿಕೆಟ್ನಿಂದ ಸಲ್ಪ ಸಮಯ ದೂರ ಉಳಿದಿದ್ದ ಭಾರತದ ಮಾಜಿ ನಾಯಕ ಎಂಎಸ್ ಧೋನಿ ಅವರು ಕೊರೊನಾ ಟೆಸ್ಟ್ಗೆ ಒಳಾಗಿದ್ದಾರೆ. ಕೊರೊನಾ ವೈರಸ್ ಕಾರಣದಿಂದ ಮುಂದಕ್ಕೆ ಹೋಗಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 13ನೇ ಆವೃತ್ತಿಯನ್ನು ಸೆಪ್ಟೆಂಬರ್ 19ರಿಂದ ಪ್ರಾರಂಭ ಮಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತೀರ್ಮಾನ ಮಾಡಿದೆ. ಭಾರತದಲ್ಲಿ ಸೋಂಕು ಹಿಡಿತಕ್ಕೆ ಬಾರದ ಕಾರಣ ಟೂರ್ನಿಯನ್ನು ಯುಎಇಗೆ ಸ್ಥಳಾಂತರಿಸಲಾಗಿದೆ. ಈ ನಡುವೆ ಫ್ರಾಂಚೈಸಿಗಳು ತಮ್ಮ ತಂಡದ …
Read More »2 ತಿಂಗಳ ಕಂದಮ್ಮನನ್ನು 45 ಸಾವಿರ ರೂ. ಗೆ ಮಾರಾಟ……
ಹೈದರಾಬಾದ್: ಪತಿ ಪತ್ನಿ ಜಗಳದಲ್ಲಿ ಕೂಸು ಬಡವಾಯ್ತು ಎಂಬಂತೆ ಆರ್ಥಿಕ ಸಂಕಷ್ಟದಿಂದಾಗಿ ಮಹಿಳೆಯೊಬ್ಬರು ತನ್ನ 2 ತಿಂಗಳ ಕಂದಮ್ಮನನ್ನು 45 ಸಾವಿರ ರೂ. ಗೆ ಮಾರಾಟ ಮಾಡಿರುವ ಅಮಾನವೀಯ ಘಟನೆ ಹೈದರಾಬಾದ್ನ ಸುಭಾನ್ಪುರ್ ಪ್ರದೇಶದಲ್ಲಿ ನಡೆದಿದೆ. ಮಹಿಳೆಯನ್ನು ಝೋಯಾ ಖಾನ್ ಎಂದು ಗುರುತಿಸಲಾಗಿದೆ. ಆಗಸ್ಟ್ 11 ರಂದು ಅಬ್ದುಲ್ ಮುಜಾಹೇದ್ ಎಂಬ ವ್ಯಕ್ತಿ ಹಬೀಬ್ ನಗರ ಪೊಲೀಸ್ ಠಾಣೆಗೆ ಬಂದು ತನ್ನ ಪತ್ನಿ ಮಗುವನ್ನು ಮಾರಿರುವುದಾಗಿ ದೂರು ನೀಡಿದ್ದ. ಅಲ್ಲದೆ …
Read More »ಮೆಡಿಕಲ್ ಕಾಲೇಜಿನ ಕಟ್ಟಡದಿಂದ ಜಿಗಿದ ನರ್ಸಿಂಗ್ ವಿದ್ಯಾರ್ಥಿನಿ
ಲಕ್ನೋ: ನರ್ಸಿಂಗ್ ವಿದ್ಯಾರ್ಥಿನ ಮೆಡಿಕಲ್ ಕಾಲೇಜಿನ ಕಟ್ಟಡದ ಮೊದಲ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳವಾರ ನಡೆದಿದೆ. ಬುಧವಾರ ಪೊಲೀಸರು ಘಟನೆ ಕುರಿತು ಮಾಹಿತಿ ನೀಡಿದ್ದಾರೆ.ವರುಣ್ ಅರ್ಜುನ್ ಮೆಡಿಕಲ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಯನ್ನು ಕೋವಿಡ್-19 ರೋಗಿಗಳ ವಿಭಾಗಕ್ಕೆ ನೇಮಿಸಲಾಗಿತ್ತು. ಆದ್ರೆ ನರ್ಸಿಂಗ್ ವಿದ್ಯಾರ್ಥಿನಿಗೆ ಡ್ಯೂಟಿಗೆ ತೆರಳಲು ಸಿದ್ಧವಿರಲಿಲ್ಲ. ಅಧಿಕಾರಿಗಳ ಒತ್ತಡದಿಂದಾಗಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ವಿದ್ಯಾರ್ಥಿನಿಯ ಕುಟುಂಬಸ್ಥರು ನೀಡಿದ ದೂರಿನ ಆಧಾರದ …
Read More »‘ಬೆಳೆ ಸಮೀಕ್ಷೆಗೆ ಮೊಬೈಲ್ ಆಯಪ್ ಬಳಸಿ’
ಬೆಳಗಾವಿ: ‘ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಬೆಳೆ ಸಮೀಕ್ಷೆ ಮೊಬೈಲ್ ಆಯಪ್ ಮೂಲಕ ದಾಖಲಿಸುವ ವಿನೂತನ ಯೋಜನೆಯನ್ನು ಸರ್ಕಾರದಿಂದ ಪ್ರಾರಂಭಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ. ‘ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಹಾಗೂ ಸಾಂಖ್ಯಿಕ ಇಲಾಖೆ ಜಂಟಿ ಸಹಯೋಗದಲ್ಲಿ ಈ ಕಾರ್ಯ ನಡೆಯಲಿದೆ. ಸಂಗ್ರಹವಾದ ಬೆಳೆಗಳ ಮಾಹಿತಿಯನ್ನು ತಾಲ್ಲೂಕು ಆಡಳಿತದಿಂದ ಪರಿಶೀಲಿಸಲಾಗುವುದು’. ‘ರೈತರು ಸ್ಮಾರ್ಟ್ ಮೊಬೈಲ್ ಫೋನ್ನಲ್ಲಿ ಬೆಳೆ ಸಮೀಕ್ಷೆ ಆಯಪ್ ಅನ್ನು …
Read More »ಡಿ.ಜೆ. ಹಳ್ಳಿ ಗಲಭೆ ಖಂಡನೀಯ, ಸರ್ಕಾರ ಕಾನೂನಿನ ಕ್ರಮ ಕೈಗೊಳ್ಳಲಿ: ಡಿ.ಕೆ. ಶಿವಕುಮಾರ್
ಬೆಂಗಳೂರು: ಡಿ.ಜೆ. ಹಳ್ಳಿ ಘಟನೆಯನ್ನು ನಾನು ಖಂಡಿಸುತ್ತೇನೆ. ಯಾರೂ ಕೂಡ ಕಾನೂನನ್ನು ಕೈಗೆತ್ತಿಕೊಳ್ಳುಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ. ಬುಧವಾರ ಬೆಳಗ್ಗೆ ಸದಾಶಿವನಗರದ ನಿವಾಸದ ಬಳಿ ಬೆಂಗಳೂರಿನ ಡಿ.ಜೆ. ಹಳ್ಳಿ ಘಟನೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್ ಇದು ಸಮಾಜಘಾತುಕ ಕೃತ್ಯ. ಶಾಸಕರ ಆಸ್ತಿಯಾಗಲಿ, ಸಾಮಾನ್ಯ ಜನರ ಆಸ್ತಿಯೇ ಆಗಿರಲಿ, ಪೊಲೀಸ್ ಠಾಣೆಯಾಗಿರಲಿ ಯಾವುದನ್ನು ಹಾನಿ ಮಾಡುವುದು ಸರಿಯಲ್ಲ. ಇದನ್ನು ನಾವ್ಯಾರೂ ಒಪ್ಪಲು ಸಾಧ್ಯವಿಲ್ಲ ಎಂದರು. …
Read More »ಡಿಜೆ ಹಳ್ಳಿ ಘಟನೆ| ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು: ಸುರೇಶ ಅಂಗಡಿ
ಬೆಳಗಾವಿ: ‘ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ಗಲಾಟೆ ಮಾಡಿ, ಸಮಾಜದಲ್ಲಿ ಶಾಂತಿ ಕದಡಿದವರ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಒತ್ತಾಯಿಸಿದರು. ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಗಲಾಟೆಗೆ ವ್ಯವಸ್ಥಿತವಾಗಿ ಸಂಚು ರೂಪಿಸಲಾಗಿದೆ. ಈ ಹಿಂದೆ ಇಲ್ಲಿನ ಬಿಮ್ಸ್ ಆಸ್ಪತ್ರೆ ಎದುರು ನಿಂತಿದ್ದ ಆಂಬುಲೆನ್ಸ್ಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಲಾಗಿತ್ತು. ಇಂತಹ ಘಟನೆಗಳು ಅತ್ಯಂತ ಖಂಡನೀಯ. ಇವೆಲ್ಲವೂ ದೇಶದ್ರೋಹಿಗಳು ಮಾಡುವ …
Read More »ಮತ್ತೆ 46 ಜನರಿಗೆ ಸೋಂಕು
ಗದಗ: ಜಿಲ್ಲೆಯಲ್ಲಿ ಹೊಸದಾಗಿ 46 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,399ಕ್ಕೆ ಏರಿದೆ. ಈ ವರೆಗೆ 1321 ಜನರು ಗುಣಮುಖರಾಗಿದ್ದು, 1027 ಪ್ರಕರಣಗಳು ಸಕ್ರಿಯವಾಗಿವೆ. ಗದಗ-28, ಮುಂಡರಗಿ-4, ನರಗುಂದ-6, ರೋಣ-6, ಶಿರಹಟ್ಟಿ-1, ಹೊರಜಿಲ್ಲೆಯ ಒಬ್ಬರಿಗೆ ಕೋವಿಡ್ ದೃಢಪಟ್ಟಿದೆ. ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ ಜೆ.ಟಿ. ಕಾಲೇಜು ರಸ್ತೆ, ನರಸಾಪುರ, ವಿವೇಕಾನಂದ ನಗರ,ಬೆಟಗೇರಿ, ಕಳಸಾಪುರ ರಸ್ತೆಯ ಬಾಪೂಜಿ ನಗರ, ಹುಡ್ಕೊ ಕಾಲೋನಿ, ಮದೀನಾ ಮಸೀದಿ ಹತ್ತಿರ, ಎಸ್.ಎಂ. ಕೃಷ್ಣಾ ನಗರ, …
Read More »
Laxmi News 24×7