ಹೈದರಾಬಾದ್: ಟಾಲಿವುಡ್ ತಾರಕ್ ಜೂನಿಯರ್ ಎನ್ಟಿಆರ್ ಲಾಕ್ಡೌನ್ ನಡುವೆಯೂ ಸಾಲು ಸಾಲು ಸಿನಿಮಾಗಳಿಗೆ ಸಹಿ ಹಾಕುತ್ತಿದ್ದು, ತೆಲುಗು ಚಿತ್ರರಂಗದಲ್ಲಿ ಸದ್ಯದ ಬ್ಯಸಿಯೆಸ್ಟ್ ನಟರಾಗಿದ್ದಾರೆ. ಇದೀಗ ಮತ್ತೊಂದು ಸಿನಿಮಾದದಲ್ಲಿ ಯಂಗ್ ಟೈಗರ್ ನಟಿಸುವುದು ಖಚಿತವಾಗಿದ್ದು, ಈ ಸಿನಿಮಾದಲ್ಲಿ ಕನ್ನಡದ ನಟಿ ಸಹ ಸ್ಥಾನ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೂನಿಯರ್ ಎನ್ಟಿಆರ್ ಲಾಕ್ಡೌನ್ ನಡುವೆಯೂ ಹಲವು ಸಿನಿಮಾಗಳಿಗೆ ಸಹಿ ಹಾಕುತ್ತಿದ್ದು, ಒಂದೆಡೆ ಸ್ಯಾಂಡಲ್ವುಡ್ ನಿರ್ದೇಶಕ ಪ್ರಶಾಂತ್ ನೀಲ್ ಜೂನಿಯರ್ ಎನ್ಟಿಆರ್ ಸಿನಿಮಾಗೆ …
Read More »ತೆಲುಗು ಚಿತ್ರದ ಚಿತ್ರೀಕರಣಕ್ಕೆ ಮರಳಿದ ಬುಲ್ ಬುಲ್ ರಚಿತಾ ರಾಮ್……
ಹೈದರಾಬಾದ್: ಕೊರೊನಾ ಭೀತಿ ನಡುವೆಯೂ ಕನ್ನಡದ ನಟಿ ರಚಿತಾ ರಾಮ್ ತೆಲುಗು ಸಿನಿಮಾವೊಂದರ ಚಿತ್ರೀಕರಣಕ್ಕೆಂದು ಹೈದಾರಾಬಾದ್ಗೆ ತೆರಳಿದ್ದಾರೆ. ಕೇಂದ್ರ ಸರ್ಕಾರ ಕೊರೊನಾ ಲಾಕ್ಡೌನ್ ಅನ್ನು ದಿನದಿಂದ ದಿನಕ್ಕೆ ಸಡಿಲಿಕೆ ಮಾಡುತ್ತಾ ಬರುತ್ತಿದೆ. ಈ ನಡುವೆ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಹೆಚ್ಚುತ್ತಲೆ ಇದೆ. ಇತ್ತೀಚೆಗಷ್ಟೇ ಸಿನಿಮಾ ಚಿತ್ರೀಕರಣಕ್ಕೂ ಸರ್ಕಾರ ಅನುಮತಿ ನೀಡಿದ್ದು, ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಕಲಾವಿದರು ಶೂಟಿಂಗ್ಗೆ ಹೋಗುತ್ತಿದ್ದಾರೆ. ಸುಮಾರು ಮೂರು ತಿಂಗಳು ಚಿತ್ರದ ಶೂಟಿಂಗ್ ಇಲ್ಲದೇ ಮನೆಯಲ್ಲೇ …
Read More »ಮಸಾಲ ಎಂದು ಕೀಟನಾಶಕ ಮಿಕ್ಸ್ ಮಾಡಿದ ಅಜ್ಜಿ- ಚಿಕನ್ ಕರ್ರಿ ಸೇವಿಸಿ ಮೊಮ್ಮಕ್ಕಳು ಸಾವು
ಹೈದರಾಬಾದ್: ಚಿಕನ್ ಮಸಾಲ ಎಂದು ಚಿಕನ್ ಕರ್ರಿಗೆ ಕೀಟನಾಶಕ ಮಿಕ್ಸ್ ಮಾಡಿದ್ದು, ಅದೇ ಆಹಾರವನ್ನು ಸೇವಿಸಿ ಮಕ್ಕಳಿಬ್ಬರು ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ರೋಹಿತ್ (11) ಮತ್ತು ಜೀವನ್ (8) ಎಂದು ಗುರುತಿಸಲಾಗಿದೆ. ಗುಡಿಪಾಲ ಮಂಡಲದ ಎ.ಎಲ್.ಪುರಂನಲ್ಲಿ ಈ ಘಟನೆ ನಡೆದಿದೆ. ಚಿತ್ತೂರು ಗ್ರಾಮೀಣ ಮಂಡಳಿಯ ಚೆರ್ಲೋಪಳ್ಳಿ ಗ್ರಾಮದ ರೋಹಿತ್ ಮತ್ತು ಜೀವನ ಇಬ್ಬರು ತಮ್ಮ ರಜಾದಿನಗಳನ್ನು ಎಎಲ್ ಪುರಂನಲ್ಲಿರುವ ತಮ್ಮ ಅಜ್ಜಿಯ ಮನೆಯಲ್ಲಿ …
Read More »ಸರ್ಕಾರ ವಿದೇಶೀಯರ ಆಗಮನಕ್ಕೆ ಬ್ರೇಕ್ ಹಾಕಿದೆ. ಆದ್ದರಿಂದಲೇ ವರ್ಕಿಂಗ್ ವೀಸಾಗಳನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶಿಸಿದ್ದಾರೆ.
ವಾಷಿಂಗ್ಟನ್: ತೀವ್ರ ಕೋವಿಡ್-19 ಸೋಂಕಿನಿಂದ ತತ್ತರಿಸಿರುವ ಅಮೆರಿಕದಲ್ಲಿ ಈಗ ನಿರುದ್ಯೋಗ ಸಮಸ್ಯೆ ಎದುರಾಗಿದೆ. ಹೀಗಾಗಿ ಅಮೆರಿಕ ಸರ್ಕಾರ ವಿದೇಶೀಯರ ಆಗಮನಕ್ಕೆ ಬ್ರೇಕ್ ಹಾಕಿದೆ. ಆದ್ದರಿಂದಲೇ ವರ್ಕಿಂಗ್ ವೀಸಾಗಳನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶಿಸಿದ್ದಾರೆ. ಈ ವರ್ಷದ ಕೊನೆವರೆಗೂ ವರ್ಕಿಂಗ್ ವೀಸಾಗಳ ಮೇಲೆ ನಿರ್ಬಂಧ ಹೇರಿದ್ದಾರೆ. ತಮ್ಮ ದೇಶಕ್ಕೆ ಬರದಂತೆ ವಿದೇಶೀಯರಿಗೆ ಎಚ್- 1ಬಿ ವೀಸಾ ಸೇರಿದಂತೆ ತಾತ್ಕಾಲಿಕ ಉದ್ಯೋಗ ವೀಸಾಗಳ ಮೇಲೆ ಈ ವರ್ಷಾಂತ್ಯದವರೆಗೂ ನಿರ್ಬಂಧ ಹೇರಿ …
Read More »ಚಹಾ ಮಾರುವವನ ಮಗಳು ಏರ್ಫೋರ್ಸ್ ಅಧಿಕಾರಿಯಾಗಿ ಆಯ್ಕೆ……..
ಭೋಪಾಲ್: ಚಹಾ ಅಂಗಡಿ ಮಾಲೀಕನ ಮಗಳು ಭಾರತೀಯ ವಾಯು ಪಡೆಯ ಅಧಿಕಾರಿಯಾಗಿ ಆಯ್ಕೆಯಾಗುವ ಮೂಲಕ ಅಪ್ಪಂದಿರ ದಿನಕ್ಕೆ ತಮ್ಮ ತಂದೆಗೆ ವಿಶೇಷ ಉಡುಗೊರೆ ನೀಡಿದ್ದಾರೆ. ಮಧ್ಯಪ್ರದೇಶದ ಪುಟ್ಟ ಜಿಲ್ಲೆ ನೀಮುಚ್ನಲ್ಲಿ ಚಹಾ ಅಂಗಡಿ ಇಟ್ಟುಕೊಂಡಿರುವ ಸುರೇಶ್ ಗಂಗ್ವಾಲ್ ಅವರ ಪುತ್ರಿ ಆಂಚಲ್, ಫ್ಲೈಯಿಂಗ್ ಆಫೀಸರ್ ಆಗಿ ಆಯ್ಕೆಯಾಗಿರುವುದು ಮಾತ್ರವಲ್ಲದೆ ಕಂಬೈನ್ಡ್ ಗ್ರಾಜ್ಯುವೇಶನ್ ಪರೇಡ್ನಲ್ಲಿ ರಾಷ್ಟ್ರಪತಿಯವರಿಂದ ಪದಕವನ್ನೂ ಸ್ವೀಕರಿಸಿದ್ದಾರೆ. ಒಟ್ಟು 123 ಫ್ಲೈಟ್ ಕೆಡೆಟ್ಗಳನ್ನು ಭಾರತೀಯ ವಾಯುಪಡೆಯ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ತಮ್ಮ …
Read More »ಕೆರೆಗೆ ಕಾರು ಉರುಳಿದರೂ ಪವಾಡ ಸದೃಶವಾಗಿ ಯುವತಿ ಪಾರು ; ಜೀವದಾನ ಮಾಡಿದ ಬಾಲಕಿಯ ವೀಡಿಯೋ ವೈರಲ್
ಉಡುಪಿ: ಬಾರ್ಕೂರಿನ ಚೌಳಿಕೆರೆಗೆ ಕಾರು ಉರುಳಿ ಬಿದ್ದು ಸ್ಥಳೀಯ ಉದ್ಯಮಿ ಸಂತೋಷ್ ಶೆಟ್ಟಿ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅವರ ಜೊತೆಗಿದ್ದ ಸಂಸ್ಥೆಯ ಉದ್ಯೋಗಿ ಶ್ವೇತಾ ಅಪಘಾತದಿಂದ ಬಚಾವಾಗಿದ್ದೇ ಒಂದು ಪವಾಡ. ಆದರೆ, ಈ ಪವಾಡ ನಡೆದದ್ದು ಹೇಗೆ ಅನ್ನೋದು ತಡವಾಗಿ ಬೆಳಕಿಗೆ ಬಂದಿದೆ. ನೀರು ತುಂಬಿದ್ದ ಕೆರೆಗೆ ಕಾರು ಬಿದ್ದಾಗ ಇಬ್ಬರೂ ಮುಳುಗಿದ್ದರು. ಸಂತೋಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಯುವತಿಯ ಪ್ರಾಣವಾಯು ಇನ್ನೂ ಉಳಿದಿತ್ತು. ಬಾಲಕಿಯೊಬ್ಬಳ ಸಮಯ ಪ್ರಜ್ಞೆಯಿಂದ ಶ್ವೇತಾ ಬದುಕಿ …
Read More »ಹುಕ್ಕೇರಿ: ರಾಷ್ಟ್ರಿಯ ಹೆದ್ದಾರಿ ೪ರ ಹೊಂದಿಕೊಂಡಿರುವ ಹೊನ್ನಿಹಳ್ಳಿ ಗ್ರಾಮದಲ್ಲಿ ಬಿಸಿಲಿನ ಬವಣೆಯಲ್ಲಿ ರೈತರು ಐದು ತಿಂಗಳು ಕಾಲ ರೋಷಿ ಹೋಗಿದ್ದರು !
ಹುಕ್ಕೇರಿ: ರಾಷ್ಟ್ರಿಯ ಹೆದ್ದಾರಿ ೪ರ ಹೊಂದಿಕೊಂಡಿರುವ ಹೊನ್ನಿಹಳ್ಳಿ ಗ್ರಾಮದಲ್ಲಿ ಬಿಸಿಲಿನ ಬವಣೆಯಲ್ಲಿ ರೈತರು ಐದು ತಿಂಗಳು ಕಾಲ ರೋಷಿ ಹೋಗಿದ್ದರು ! ಇಗಾ ಮುಂಗಾರು ತುಂತುರು ಮಳೆ ಬಿಟ್ಟು ಬಿಟ್ಟು ಬರುತ್ತಿದ್ದರು ಸಹ ಗ್ರಾಮದ ರೈತ್ ಬಾಂಧವರು ಭೂಮಿ ಸ್ವಚತೆ ಕಾರ್ಯದಲ್ಲಿ ಹಾಗೂ ಬಿತ್ತನೆಯ ಕಾರ್ಯದಲ್ಲಿ ತೊಡಗಿದ್ದು ! ಕೋರೋನಾ ರೋಗದ ಸಂಧರ್ಭದಲ್ಲಿ ಗ್ರಾಮಸ್ಥರು ಮುಖಕ್ಕೆ ಕವಚ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು! ಮುಂಗಾರಾಗಿ ರೈತರು ತಮ್ಮ ತಮ್ಮ ಹೊಲದಲ್ಲಿ …
Read More »ನಾನು ಕ್ರಿಕೆಟಿಗ, ರಾಜಕಾರಣಿ ಅಲ್ಲ: ಸಾನಿಯಾ ಮದುವೆ ಬಗ್ಗೆ ಶೋಯೆಬ್ ಮಲಿಕ್ ಮಾತು!
ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರನ್ನು ವಿವಾಹವಾದ ಬಳಿಕ ಅಭಿಮಾನಿಗಳು ಸಾಮಾಜಿಕ ತಾಣಗಳಲ್ಲಿ ರಾಷ್ಟ್ರೀಯತೆಯ ಬಗ್ಗೆ ಪ್ರಶ್ನಿಸುತ್ತಲೇ ಬಂದಿದ್ದಾರೆ. ಇದಕ್ಕೆ ಸಾನಿಯ ಕೂಡ ತಕ್ಕ ಉತ್ತರವನ್ನೇ ನೀಡುತ್ತಾ ಇದ್ದಾರೆ. 10 ವರ್ಷಗಳ ಹಿಂದೆ ಇವರಿಬ್ಬರು ವಿವಾಹವಾಗಿದ್ದರೂ ಈಗಲೂ ಎರಡೂ ದೇಶಗಳಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತದೆ. ಸದ್ಯ ಈ ಕುರಿತು ಮಾತನಾಡಿರುವ ಮಲಿಕ್, ನಾನು ಸಾನಿಯಾ ಮದುವೆಯಾಗಲು ನಿರ್ಧರಿಸಿದಾಗ ಮೊದಲು ಪ್ರೀತಿಯನ್ನು …
Read More »ಹೆಣ್ಣುಮಕ್ಕಳಿಗೆ ಸಂತೋಷ ತರುವ ಹಬ್ಬ ಗುಳ್ಳವನ ಹಬ್ಬ,……?
ಬಾಗಲಕೋಟೆ: ಹೆಣ್ಣುಮಕ್ಕಳಿಗೆ ಸಂತೋಷ ತರುವ ಹಬ್ಬ ಗುಳ್ಳವನ ಹಬ್ಬ, ಬಾಗಲಕೋಟ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಗುಳ್ಳವ್ವನ ಹಬ್ಬ ಬಲು ಜೋರಾಗಿ ಗುಳ್ಳವ್ವನ ತಯಾರಿಸುತ್ತಿರುವ ರಬಕವಿ ಗ್ರಾಮದ ಬಸಪ್ಪ ಕುಂಬಾರ ಒಂದರಿಷಿನ ಕ್ಯಾದಗಿ ಪರಿಮಳ ಗೂಳ್ಳವನ ಹೆಣ್ಣುಮಕಳ್ಳು ಆಡುತ್ತಾ ಬಂದಿದ್ದಾರೆ. ಉತ್ತತಿ ಬನಕ ತೊಟ್ಟಿಲ ಕಟ್ಟಿ ಜಯ ಒಂದು ಜಯ ಒಂದು ಎಂಬ ಜನಪದ ಹಾಡುಗಳು ಆಶಾಡ ಮಾಸದ ನಾಲ್ಕು ಮಂಗಳವಸರಗಳಂದು ಉತ್ತರ ಕರ್ನಾಟಕದ ಬಾಲೆಯರ ಕಂಟದಿಂದ ಪುಂಖಾಣಿ ಪುಂಕವಾಗಿ ಕೇಳಿಬರುತ್ತಿದೆ. …
Read More »ಜಗದ್ವಿಖ್ಯಾತಿಯ ಪುರಿ ಜಗನ್ನಾಥ ರಥಯಾತ್ರೆಗೆ ಸುಪ್ರೀಂ ಕೋರ್ಟ್ ಷರತ್ತುಬದ್ದ ಅನುಮತಿ
ನವದೆಹಲಿ: ಜಗದ್ವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಯನ್ನು ನಡೆಸಲು ಸುರ್ಪೀಂ ಕೋರ್ಟ್ ಷರತ್ತುಬದ್ದ ಅನುಮತಿ ನೀಡಿದೆ. ರಥಯಾತ್ರೆ”ಸೂಕ್ಷ್ಮವಾಗಿ ನಿರ್ವಹಿಸಲು” ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಅಲ್ಲದೆ ದೇವಾಲಯ ರಥಯಾತ್ರೆ ನಿರ್ವಹಣೆ ಜವಾಬ್ದಾರಿಯನ್ನು ಕೇಂದ್ರ ಮತ್ತು ದೇವಾಲಯ ನಿರ್ವಹಣೆ ಮಂಡಳಿಗೆ ವಹಿಸಿದೆ. ಇದರೊಡನೆ ಸುಪ್ರಸಿದ್ದ ಪುರಿ ಜಗನ್ನಾಥ ರಥ ಯಾತ್ರೆಗೆ ಹಾದಿ ಸುಗಮವಾಗಿದೆ. ಆದರೆ ನ್ಯಾಯಾಲಯ ಕೆಲ ಷರತ್ತು ಸಹ ವಿಧಿಸಿದೆ ಭಕ್ತರು ಇಲ್ಲದೆಯೇ ರಥಯಾತ್ರೆ ನಡೆಸಬೇಕು, ರಥಯಾತ್ರೆ ಕೈಂಕರ್ಯದ …
Read More »