Breaking News

ರಾಷ್ಟ್ರೀಯ

ಮಳೆ ಹೊಡೆತಕ್ಕೆ ನೀರು ಪಾಲಾದ ಭತ್ತ

ಉಡುಪಿ : ಜಿಲ್ಲೆಯಲ್ಲಿ ನವರಾತ್ರಿಯಿಂದ ದಿನ ಬಿಟ್ಟು ದಿನ ಮಳೆಯಾಗುತ್ತಿದೆ. ದೀಪಾವಳಿ ಸಂದರ್ಭದಲ್ಲೂ ಭಾರೀ‌ ಮಳೆಯಾಗಿದೆ. ಯಾವ ವರ್ಷದಲ್ಲೂ ಕೂಡ ನವರಾತ್ರಿಯ ಆಸುಪಾಸಿನ ದಿನಗಳಲ್ಲಿ ಈ ಪ್ರಮಾಣದ ಮಳೆ ಬಿದ್ದ ಉದಾಹರಣೆ ಇಲ್ಲ. ಆದರೆ, ಈ ಬಾರಿ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಗೆ ಭತ್ತ ಬೆಳೆದ ರೈತರು ಕಂಗಾಲಾಗಿದ್ದಾರೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಕಟಾವಿಗೆ ಸಿದ್ಧವಾಗಿದ್ದ ಭತ್ತದ ಬೆಳೆಗೆ ಅಪಾರ ಪ್ರಮಾಣದಲ್ಲಿ ಹಾನಿ ಮಾಡಿದೆ. ಇದರಿಂದಾಗಿ ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ …

Read More »

ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಡೆದ “72ನೇ ಸಹಕಾರ ಸಪ್ತಾಹ” ಆಚರಣೆಯ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಸಭೆ ಬಳಿಕ ಪತ್ರಿಕಾಗೋಷ್ಠಿ

ಇಂದು ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಡೆದ “72ನೇ ಸಹಕಾರ ಸಪ್ತಾಹ” ಆಚರಣೆಯ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದೆ. ಸಹಕಾರ ಚಳವಳಿ ಇನ್ನಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವ ಅಗತ್ಯವಿದ್ದು, ಜವಾಹರಲಾಲ್ ನೆಹರೂ ಅವರ ಜಯಂತಿಯ ದಿನ ನವೆಂಬರ್ 14ರಂದು 72ನೇ ಸಹಕಾರಿ ಸಪ್ತಾಹದ ಉದ್ಘಾಟನೆ ಮಾಡಲಿದ್ದೇವೆ. ಅರಮನೆ ಮೈದಾನದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಸಪ್ತಾಹ ನಡೆಯಲಿದ್ದು, ಮಂಗಳೂರು, ರಾಯಚೂರು, ಹಾವೇರಿ, ಹೊಸಪೇಟೆ, ಕೊಪ್ಪಳದಲ್ಲಿ ಸಪ್ತಾಹ ನಡೆಯಲಿದೆ. ಸಮಾರೋಪ ಸಮಾರಂಭವು …

Read More »

ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ

ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ ಗ್ರಾಮೀಣ ಭಾಗದ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಲಿ : ಸಂಸದೆ ಪ್ರಿಯಾಂಕಾ ಜಾರಕಿಹೊಳಿ ನಾಗನೂರು (ಮೂಡಲಗಿ): ಗ್ರಾಮೀಣ ಭಾಗದ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು ಕ್ರೀಡಾಪಟುಗಳ ಮೂಲಭೂತ ಸೌಕರ್ಯಗಳಿಗಾಗಿ ಸರ್ಕಾರ ಹಾಗೂ ಸಂಘ -ಸಂಸ್ಥೆಗಳು ಸಹಾಯ ಸಹಕಾರ ನೀಡಬೇಕೆಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು . ಅವರು ನಾಗನೂರು ಪಟ್ಟಣದಲ್ಲಿ ಬೆಳಗಾವಿ …

Read More »

ಟಿಎಪಿಸಿಎಂಎಸ್ ಮಾರ್ಕೆಟಿಂಗ್ ಸೊಸೈಟಿಯ ಅಧ್ಯಕ್ಷರಾಗಿ ಶ್ರೀಶೈಲ ಮಾಟೋಳ್ಳಿ ಆಯ್ಕೆ ಖಾನಾಪುರ ಟಿ ಎ ಪಿ ಸಿ ಎಂ ಎಸ್

ಟಿಎಪಿಸಿಎಂಎಸ್ ಮಾರ್ಕೆಟಿಂಗ್ ಸೊಸೈಟಿಯ ಅಧ್ಯಕ್ಷರಾಗಿ ಶ್ರೀಶೈಲ ಮಾಟೋಳ್ಳಿ ಆಯ್ಕೆ ಖಾನಾಪುರ ಟಿ ಎ ಪಿ ಸಿ ಎಂ ಎಸ್ ಶ್ರೀಶೈಲ ಮಾಟೋಳ್ಳಿ ಅಧ್ಯಕ್ಷ, ಸಂಗಪ್ಪ ಬಾಚೋಳ್ಕರ್ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ ಲಿಂಗನಮಠದ ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ಮಾಟೋಳ್ಳಿಗೆ ನಂದಗಡ ಟಿಎಪಿಸಿಎಂಎಸ್ ಜವಾಬ್ದಾರಿ. ನೂತನ ಅಧ್ಯಕ್ಷ-ಉಪಾಧ್ಯಕ್ಷರೊಂದಿಗೆ ಸಹಕರಿಸುವ ಭರವಸೆ ನೀಡಿದ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ ಪಾಟೀಲ. ಖಾನಾಪೂರ ತಾಲೂಕಿನ ನಂದಗಡದಲ್ಲಿ ಇರುವ ಟಿಎಪಿಸಿಎಂಎಸ್ ಮಾರ್ಕೆಟಿಂಗ್ ಸೊಸೈಟಿಯ ಅಧ್ಯಕ್ಷರಾಗಿ ಶ್ರೀಶೈಲ ಮಾಟೋಳ್ಳಿ …

Read More »

ಚನ್ನಮ್ಮನ ಹೋರಾಟ ನಮಗೆ ಆದರ್ಶವಾಗಲಿ: ಸಚಿವ ಸತೀಶ ಜಾರಕಿಹೊಳಿ

ಕಿತ್ತೂರು ಉತ್ಸವ-2025: ಚನ್ನಮ್ಮನ ಸಾಹಸಗಾಥೆಯ ಅನಾವರಣ ಚನ್ನಮ್ಮನ ಹೋರಾಟ ನಮಗೆ ಆದರ್ಶವಾಗಲಿ: ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ. ಕಿತ್ತೂರು ಚನ್ನಮ್ಮನವರ ಹೋರಾಟ ಹಾಗೂ ಆದರ್ಶವನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕಿದೆ. ಚನ್ನಮ್ಮನ ಹೋರಾಟ, ಸಾಹಸಗಾಥೆ ದೆಹಲಿ ತಲುಪಬೇಕಿದೆ. ಈ ನಿಟ್ಟಿನಲ್ಲಿ ನಾವು ಕಾರ್ಯತತ್ಪರರಾಗೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು‌ ಕರೆ ನೀಡಿದರು. ಕಿತ್ತೂರಿನ ಕೋಟೆ ಆವರಣದ ಕಿತ್ತೂರು ರಾಣಿ ಚನ್ನಮ್ಮ ವೇದಿಕೆಯಲ್ಲಿ ಗುರುವಾರ (ಅ.23) ಜಿಲ್ಲಾಡಳಿತ ಹಾಗೂ ಕನ್ನಡ …

Read More »

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲಿಗೆ ಬೀಗಮುದ್ರೆ ಈ ವರ್ಷ 25 ಲಕ್ಷಕ್ಕೂ ಅಧಿಕ ಭಕ್ತರಿಂದ ದರ್ಶನ

ಹಾಸನ: ಕಳೆದ 15 ದಿನಗಳಿಂದ ದರ್ಶನ ನೀಡಿದ ಹಾಸನದ ಪ್ರಸಿದ್ಧ ಹಾಸನಾಂಬೆ ದೇವಿಯ ಗರ್ಭಗುಡಿಯ ಬಾಗಿಲನ್ನು ಶಾಸ್ತ್ರೋಕ್ತವಾಗಿ ಮುಚ್ಚಲಾಯಿತು. ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಮ್ಮುಖದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸುವ ಮೂಲಕ ಗರ್ಭಗುಡಿಯ ಬಾಗಿಲಿಗೆ ಬೀಗಮುದ್ರೆ ಹಾಕಲಾಯಿತು. ಈ ಕ್ಷಣಕ್ಕೆ ಸಾಕ್ಷಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ, ಶಾಸಕರುಗಳಾದ ಕೆ.ಎಂ. ಶಿವಲಿಂಗೇಗೌಡ, ಸಿಮೆಂಟ್ ಮಂಜು, ಸ್ವರೂಪ ಪ್ರಕಾಶ್, ಸಂಸದ ಶ್ರೇಯಸ್ ಪಟೇಲ್, ಮಾಜಿ …

Read More »

ಮೂರು ದಿನಗಳ ಅದ್ಧೂರಿ ಕಿತ್ತೂರು ಚೆನ್ನಮ್ಮ ಉತ್ಸವ: 5 ಕೋಟಿ ಅನುದಾನ

ಬೆಳಗಾವಿ: “ರಾಣಿ ಚೆನ್ನಮ್ಮನ ಕಿತ್ತೂರು ಉತ್ಸವಕ್ಕೆ ಎಲ್ಲಾ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ. 200ನೇ ವರ್ಷದ ಸಂಭ್ರಮಾಚರಣೆಗೂ ಕಡಿಮೆ ಆಗದಂತೆ ಈ ಬಾರಿಯೂ ಉತ್ಸವ ಅದ್ಧೂರಿಯಾಗಿ ಆಚರಿಸಲಾಗುವುದು” ಎಂದು ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ತಿಳಿಸಿದರು. ಕಿತ್ತೂರಿನಲ್ಲಿ ಉತ್ಸವದ ಉಪ ಸಮಿತಿಗಳ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಅ.23, 24 ಮತ್ತು 25 ರಂದು ಮೂರು ದಿನಗಳ ಉತ್ಸವ ನಡೆಯಲಿದೆ. ಮೊದಲ ದಿನ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಉತ್ಸವಕ್ಕೆ …

Read More »

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿದ ಮೈಸೂರು ಪೊಲೀಸರು

ಮೈಸೂರು: ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ ಹಿಡಿದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸ್ ಕಾರ್ಯಾಚರಣೆಗೆ ಹೆದರಿದ ಕಿಡಿಗೇಡಿಗಳು, ವಾಹನವನ್ನು ವೇಗವಾಗಿ ಓಡಿಸಿದ ಪರಿಣಾಮ ಉರುಳಿ ಬಿದ್ದಿದೆ. ವಾಹನವನ್ನು ಸೀಜ್ ಮಾಡಿದ ಪೊಲೀಸರು 20 ಕರುಗಳನ್ನು ರಕ್ಷಿಸಿದ್ದಾರೆ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂದು ಜಯಪುರ ಪೊಲೀಸರಿಗೆ ಮಾಹಿತಿ ಬಂದಿತ್ತು. ಪಿಎಸ್​ಐ ಹೇಮಾವತಿ ಅವರು ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ಚೇಸ್ …

Read More »

ಆರ್​​ಎಸ್​​ಎಸ್ ಎದುರು ಹಾಕಿಕೊಂಡಿದ್ದೀರಿ, ನೀವು ಸುಟ್ಟು ಭಸ್ಮ ಆಗ್ತೀರಿ : ಶೆಟ್ಟರ್

ಹುಬ್ಬಳ್ಳಿ : ಆರ್​​ಎಸ್​​ಎಸ್ ಸಂಘಟನೆಯನ್ನು ಎದುರು ಹಾಕಿಕೊಂಡಿದ್ದೀರಿ, ನೀವು ಸುಟ್ಟು ಭಸ್ಮ ಆಗ್ತೀರಿ. ಇದು ನಿಮ್ಮ ಅಂತ್ಯದ ಆರಂಭ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ದ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಅವರು ಸಿಡಿಮಿಡಿಗೊಂಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಿಹಾರ ಚುನಾವಣೆಗೆ ರಾಜ್ಯದಿಂದ ಹಣ ಸಂಗ್ರಹಿಸುತ್ತಿದ್ದಾರೆ ಎಂಬ ಆರೋಪದ ಕುರಿತು ಮಾತನಾಡಿದ ಅವರು, ಸಿಎಂ ಡಿನ್ನರ್ ಮೀಟಿಂಗ್ ಕರೆದರು. ಅದನ್ನು ಕರೆದಿದ್ದು ಏತಕ್ಕೆ?. ಒಬ್ಬಬ್ಬ ಮಂತ್ರಿಯನ್ನು ಸೆಪರೇಟ್​ ಆಗಿ …

Read More »

ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳಿಗೆ ನಾಳೆಯಿಂದಲೇ ಕಬ್ಬು ನುರಿಸಲು ಅನುಮತಿ ನೀಡಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್​ ಹೇಳಿದ್ದಾರೆ.

ಬೆಂಗಳೂರು : ದಾವಣಗೆರೆ ಸೇರಿದಂತೆ ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳಿಗೆ ಅ. 20 ರಿಂದಲೇ ಕಬ್ಬು ಕ್ರಷಿಂಗ್‌ ಆರಂಭಿಸಲು ಅನುಮತಿ ನೀಡಲಾಗಿದೆ ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಈ ಆದೇಶ ಮಾಡಲಾಗಿದೆ. ಈ ಮೊದಲು ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿ ಜೂನ್‌ 22ರಿಂದ ಹಾಗೂ ಬೆಳಗಾವಿ, ವಿಜಯಪುರ, ಬೀದರ್‌, ಕಲಬುರಗಿ, ಬಾಗಲಕೋಟೆ, ಗದಗ, ಯಾದಗಿರಿ, ದಾವಣಗೆರೆ, ಉತ್ತರ ಕನ್ನಡ, …

Read More »