ಧಾರವಾಡ: ಸ್ಯಾನಿಟೈಸರ್ ಜೊತೆಗೆ ಕೆಮ್ಮಿನ ಔಷಧಿ ಮಿಶ್ರಣ ಮಾಡಿ ಕುಡಿದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಹೊಯ್ಸಳ ನಗರದಲ್ಲಿ ಈ ಘಟನೆ ನಡೆದಿದ್ದು, ಸುದೀಪ್ ಕೈರಾನ್ ಸಾವನ್ನಪ್ಪಿದ ವಿದ್ಯಾರ್ಥಿ. ಉತ್ತರ ಕನ್ನಡ ಜಿಲ್ಲೆಯ ಮೂಲದವನಾದ ಸುದೀಪ್, ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿದ್ದನು. ವಿದ್ಯಾಭ್ಯಾಸಕ್ಕಾಗಿ ಧಾರವಾಡದ ಹೊಯ್ಸಳ ನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದನು. ಲಾಕ್ಡೌನ್ ಪರಿಣಾಮ ಮದ್ಯ ಸಿಗದ ಹಿನ್ನೆಲೆಯಲ್ಲಿ ಸ್ಯಾನಿಟೈಸರ್ ಜೊತೆ …
Read More »ಗುಜರಾತಿನ ಹಿರಿಯ ಕಾಂಗ್ರೆಸ್ ನಾಯಕ ಕೊರೊನಾಗೆ ಬಲಿ……….
ಅಹಮದಾಬಾದ್: ಮೊದಲ ಬಾರಿಗೆ ದೇಶದಲ್ಲಿ ಕೊರೊನಾಗೆ ರಾಜಕೀಯ ನಾಯಕರೊಬ್ಬರು ಬಲಿಯಾಗಿದ್ದಾರೆ. ಗುಜರಾತಿನ ಹಿರಿಯ ಕಾಂಗ್ರೆಸ್ ನಾಯಕ 67 ವರ್ಷದ ಬದ್ರುದ್ದೀನ್ ಶೇಖ್ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ಏಪ್ರಿಲ್ 15 ರಂದು ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ಅವರು ಅಹಮದಾದಬಾದಿನ ಎಸ್ವಿಪಿ ಆಸ್ಪತ್ರೆಗೆ ದಾಖಲಾಗಿದ್ದರು. 11 ದಿನಗಳ ಚಿಕಿತ್ಸೆ ಪಡೆಯುತ್ತಿದ್ದ ಅವರು ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ ಕೊರೊನಾ ಲಾಕ್ಡೌನ್ ಸಮಯದಲ್ಲಿ ಬದ್ರುದ್ದೀನ್ ಶೇಖ್ ಅವರು ಬಡವರಿಗೆ ಆಹಾರ ವಿತರಿಸಲು ಹೋಗಿದ್ದರು. ಈ …
Read More »ಕೊರೊನಾಗೆ ಮೃತರಾದವರ ಅಂತ್ಯಸಂಸ್ಕಾರಕ್ಕೆ ಅಡ್ಡಿ ಮಾಡಿದ್ರೆ 3 ವರ್ಷ ಜೈಲು
ಚೆನ್ನೈ: ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರಕ್ಕೆ ಅಡ್ಡಿಪಡಿಸಿದರೆ ತಮಿಳುನಾಡಿನಲ್ಲಿ 3 ವರ್ಷ ಜೈಲು ಶಿಕ್ಷೆಯಾಗಲಿದೆ. ಕೋವಿಡ್-19 ಸೋಂಕಿನಿಂದ ಮೃತಪಟ್ಟ ರೋಗಿಗಳ ಅಂತ್ಯಸಂಸ್ಕಾರ ಅಥವಾ ಹೂಳಲು ಜನ ವಿರೋಧ ವ್ಯಕ್ತಿಪಡಿಸಿದರೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲು ತಮಿಳುನಾಡು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಮಾರಣಾಂತಿಕ ಕೋವಿಡ್-19 ಮೃತಪಟ್ಟ ವ್ಯಕ್ತಿಗಳ ಅಂತ್ಯಸಂಸ್ಕಾರಕ್ಕೆ ಅಡ್ಡಿಪಡಿಸುವುದು ಕ್ರಿಮಿನಲ್ ಅಪರಾಧ ಎಂದು ಸುಗ್ರೀವಾಜ್ಞೆಯಲ್ಲಿ ಉಲ್ಲೇಖಿಸಲಾಗಿದೆ. ತಮಿಳುನಾಡು ಸಾರ್ವಜನಿಕ ಕಾಯ್ದೆ 1939ರ ಸೆಕ್ಷನ್ 74ರ ಪ್ರಕಾರ ಅಡ್ಡಿಪಡಿಸಿದರೆ …
Read More »ಕಾಫಿ ತುಂಬಾ ಕಾಸ್ಟ್ ಈಗ ಗ್ರೀನ್ ಟೀ ಮಾತ್ರ ಕುಡಿಯಿರಿ.ಹಾರ್ದಿಕ್ ಪಾಂಡ್ಯ ‘ಕಾಫಿ ವಿಥ್ ಕರಣ್’ ವಿವಾದವನ್ನು ನೆನೆದಿದ್ದಾರೆ.
ಮುಂಬೈ: ಕಾಫಿ ತುಂಬಾ ಕಾಸ್ಟ್ಲಿ ಆಗಿದೆ, ಈಗ ಗ್ರೀನ್ ಟೀ ಮಾತ್ರ ಕುಡಿಯಿರಿ ಎಂದು ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ‘ಕಾಫಿ ವಿಥ್ ಕರಣ್’ ವಿವಾದವನ್ನು ನೆನೆದಿದ್ದಾರೆ. ಇನ್ಸ್ಟಾಗ್ರಾಮ್ ಚಾಟ್ ಶೋನಲ್ಲಿ ಪಾಂಡ್ಯ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಅವರೊಂದಿಗೆ ಮಾತನಾಡುತ್ತಿದ್ದಾಗ 2019ರಲ್ಲಿ ನಡೆದ ಘಟನೆಯನ್ನು ಮೆಲುಕು ಹಾಕಿದ್ದಾರೆ. ಕಾರ್ತಿಕ್ ಅವರು ಕರಣ್ ವಿಥ್ ಕಾಫಿ ಕಾರ್ಯಕ್ರಮ ಪ್ರಸ್ತಾಪಿಸುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ಹಾರ್ದಿಕ್, “ಕಾಫಿ ತುಂಬಾ ದುಬಾರಿಯಾಗಿದೆ. ಹೀಗಾಗಿ …
Read More »ಪ್ಲಾಸ್ಮಾ ಥೆರಪಿ ಸಹಾಯದಿಂದ ದೆಹಲಿಯ ಕೊರೊನಾ ಸೋಂಕಿತ ರೋಗಿಯೊಬ್ಬರು ಸಂಪೂರ್ಣ ಗುಣಮುಖ
ನವದೆಹಲಿ: ಕೊರೊನಾ ವೈರಸ್ ಭೀತಿ ನಡುವೆ ಒಂದು ಶುಭ ಸುದ್ದಿಯೊಂದು ಲಭ್ಯವಾಗಿದ್ದು, ಪ್ಲಾಸ್ಮಾ ಥೆರಪಿ ಸಹಾಯದಿಂದ ದೆಹಲಿಯ ಕೊರೊನಾ ಸೋಂಕಿತ ರೋಗಿಯೊಬ್ಬರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದು ಭಾರತದಲ್ಲಿಯೇ ಮೊದಲ ಪ್ರಕರಣವಾಗಿದೆ. ದೆಹಲಿಯ 49 ವರ್ಷದ ವ್ಯಕ್ತಿಗೆ ಕೋವಿಡ್-19 ಪಾಸಿಟಿವ್ ಇದೆ ಎಂದು ಏಪ್ರಿಲ್ 4ರಂದು ದೃಢಪಟ್ಟಿತ್ತು. ರೋಗಿ ತೀವ್ರ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆ ಅವರಿಗೆ ಉಸಿರಾಡಲು ಸಹಾಯವಾಗಲಿ ಎಂದು ವೆಂಟಿಲೇಟರ್ ಅಳವಡಿಸಿ ಮ್ಯಾಕ್ಸ್ ಆಸ್ಪತ್ರೆಯಲ್ಲಿ …
Read More »ಭಾರತದಲ್ಲಿ ಕೊರೋನಾಗೆ 825 ಮಂದಿ ಸಾವು, 26,496 ಸೋಂಕಿತರು..!
ನವದೆಹಲಿ/ಮುಂಬೈ,ಏ.26-ಕೊರೊನಾ ವೈರಸ್ ರಣಕೇಕೆ ಭಾರತದಲ್ಲಿ ಅವ್ಯಾಹತವಾಗಿ ಮುಂದುವರಿದಿದೆ. ಲಾಕ್ಡೌನ್ ನಡುವೆಯೂ ಸಾವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಕಳೆದ 24 ತಾಸುಗಳ ಅವಧಿಯಲ್ಲಿ ದೇಶದ ವಿವಿಧೆಡೆ ಒಟ್ಟು 49 ಮಂದಿಯನ್ನು ಕೊರೊನಾ ಬಲಿ ಪಡೆದಿದೆ. ಇದೇ ಅವಧಿಯಲ್ಲಿ 1,990 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಭಾರತದಲ್ಲಿ ಮೃತರ ಸಂಖ್ಯೆ 900 ತಲುಪುತ್ತಿರುವುದು ಆತಂಕಕಾರಿಯಾಗಿದೆ. ಮತ್ತೊಂದಡೆ ಸೋಂಕು ಪೀಡಿತರ ಸಂಖ್ಯೆ 27,000 ಸನಿಹದಲ್ಲಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವೂ …
Read More »ಮಹಾರಾಷ್ಟ್ರದಲ್ಲಿ ಕೊರೋನಾಗೆ ಒಂದೇ ದಿನ 22 ಮಂದಿ ಸಾವು..!
ಮುಂಬೈ, ಏ.26- ದೇಶದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕಿನ ಸಾವು ಮತ್ತು ಸಾಂಕ್ರಾಮಿಕ ರೋಗಗಳ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ದಿನೇ ದಿನೇ ಶೋಚನೀಯವಾಗುತ್ತದೆ. ರಾಜ್ಯದ ವಿವಿಧೆಡೆ ಕೊರೊನಾ ಹೆಮ್ಮಾರಿಯ ಅಟ್ಟಹಾಸ ಮುಂದುವರಿದಿದ್ದು, ಶನಿವಾರ ಒಂದೇ ದಿನ ಅವಧಿಯಲ್ಲಿ 22 ಮಂದಿ ಮೃತಪಟ್ಟಿದ್ದಾರೆ. ವಾಣಿಜ್ಯ ನಗರಿ ಮುಂಬೈ ಅಪಾಯಕಾರಿಯಾಗಿ ಪರಿಣಮಿಸಿದ್ದು, ಅಲ್ಲಿ 5000ಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಬಾಧಿತರಾಗಿದ್ದಾರೆ. ಅಲ್ಲಿ ಪ್ರತಿದಿನ ಹೊಸ ಸೋಂಕು ಪ್ರಕರಣಗಳು ದೃಢಪಡುತ್ತಲೇ ಇವೆ. ಮಹಾರಾಷ್ಟ್ರದಲ್ಲಿ …
Read More »ಟಿಕ್ಟಾಕ್ನಲ್ಲಿ ನಾನು ನಿನ್ನನ್ನ ಬ್ಲಾಕ್ ಮಾಡ್ತೀನಿ: ಗೇಲ್…..
ನವದೆಹಲಿ: ನೀನು ತುಂಬ ಕಿರಿಕಿರಿ ಮಾಡುತ್ತೀಯಾ ನಾನು ನಿನ್ನ ಬ್ಲಾಕ್ ಮಾಡುತ್ತೇನೆ ಎಂದು ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಭಾರತದ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅವರನ್ನು ಟೀಕಿಸಿದ್ದಾರೆ. ಭಾರತ ಕ್ರಿಕೆಟ್ ತಂಡದ ಬೌಲರ್ ಆಗಿರುವ ಚಹಲ್ ಅವರು, ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿ ಇರುತ್ತಾರೆ. ಎಲ್ಲರನ್ನೂ ಕಾಲೆಳೆಯುವ ಕೆಲಸ ಮಾಡುತ್ತಾರೆ. ಹೀಗಾಗಿ ಗೇಲ್ ನೀನು ಸೋಶಿಯಲ್ ಮೀಡಿಯಾದಲ್ಲಿ ಕಿರಿಕಿರಿ ಮಾಡುತ್ತಿದ್ದೀಯ ನಾನು ನಿನ್ನ ಬ್ಲಾಕ್ ಮಾಡುತ್ತೇನೆ ಎಂದು ಚಹಲ್ಗೆ …
Read More »ಕಟಿಂಗ್ ಶಾಪ್ಗೆ ಹೋಗಿದ್ದ ಓರ್ವನಿಂದ 6 ಮಂದಿಗೆ ತಗುಲಿದ ಕೊರೊನಾ…….
ಭೋಪಾಲ್: ಕಟಿಂಗ್ ಮಾಡಿಸಿಕೊಂಡು ಬಂದಿದ್ದ ಓರ್ವ ಸೋಂಕಿತನಿಂದ ಈಗ ಆ ಕಟಿಂಗ್ ಶಾಪ್ಗೆ ಹೋಗಿದ್ದ 6 ಮಂದಿಗೆ ಕೊರೊನಾ ವೈರಸ್ ಸೋಂಕು ಹರಡಿದೆ. ಮಧ್ಯಪ್ರದೇಶದ ಖರ್ಗೋನ್ ಜಿಲ್ಲೆಯ ಬಾರ್ಗಾಂವ್ ಗ್ರಾಮದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಇಂದೋರ್ ಹಾಸ್ಟೆಲ್ನಲ್ಲಿ ಇದ್ದ ಸೋಂಕಿತ ವ್ಯಕ್ತಿ ಕೆಲ ದಿನಗಳ ಹಿಂದೆ ಗ್ರಾಮಕ್ಕೆ ವಾಪಸ್ ಬಂದಿದ್ದನು. ಬಾರ್ಗಾಂವ್ ಗ್ರಾಮದಲ್ಲಿ ಕಟಿಂಗ್ ಶಾಪ್ಗೆ ಏಪ್ರಿಲ್ 5ರಂದು ಸೋಂಕಿತ ಭೇಟಿಕೊಟ್ಟಿದ್ದನು. ಇಲ್ಲಿ ಕ್ಷೌರಿಕನ ಬಳಿ ಕಟಿಂಗ್ ಹಾಗೂ ಶೇವಿಂಗ್ …
Read More »ಅನಂತಕುಮಾರ್ ಹೆಗಡೆ ಟ್ವಿಟ್ಟರ್ ಖಾತೆ ಲಾಕ್-ಹೆಗಡೆ ಕಿಡಿ………..
ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಅನಂತಕುಮಾರ್ ಹೆಗಡೆ ಅವರ ಟ್ವಿಟ್ಟರ್ ಖಾತೆಯನ್ನು ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಲಾಕ್ ಮಾಡಲಾಗಿದೆ. ಈ ಬಗ್ಗೆ ಅನಂತಕುಮಾರ್ ಹೆಗಡೆ ಅವರಿಗೆ ನೋಟಿಸ್ ಕಳುಹಿಸಿರುವ ಟ್ವಿಟ್ಟರ್, ‘ನಿಮ್ಮ ಖಾತೆ ನಮ್ಮ ಕೆಲವು ನಿಯಮಗಳನ್ನು ಉಲ್ಲಂಘಿಸಿದೆ’ ಎಂದು ಗಮನಕ್ಕೆ ತಂದಿದೆ. ಅಷ್ಟಕ್ಕೂ ಖಾತೆಯನ್ನು ಅನ್ ಲಾಕ್ ಮಾಡಲು ನಿಯಮಗಳನ್ನು ಉಲ್ಲಂಘಿಸಿದ ಟ್ವೀಟ್ ಅನ್ನು ಡಿಲಿಟ್ ಮಾಡುವಂತೆ ಸೂಚಿಸಿದೆ. ವೆರಿಫೈಡ್ ವಿಐಪಿ ಖಾತೆ ಹೊಂದಿದ್ದ ಸಂಸದ …
Read More »