ಬೆಳಗಾವಿ: ಬೆಂಗಳೂರಿನಲ್ಲಿ ಇಂದು ನಡೆದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಗೋಕಾಕದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಸಂಭ್ರಮಾಚರಿಸಿದರು. ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಘೋಷಣೆಗಳನ್ನು ಕೂಗಿ ಸಂಭ್ರಮಾಚರಿಸಿದರು. ವಿವೇಕ ಜತ್ತಿ, ರೀಯಾಜ್ ಚೌಗಲಾ, ಮಲ್ಲಿಕಾರ್ಜುನ ಸೇರಿ ನೂರಾರು ಕಾರ್ಯಕರ್ತರು ಇದ್ದರು.
Read More »ಸತೀಶ ಜಾರಕಿಹೊಳಿ ಅವರು ಕರ್ನಾಟಕದ ಶ್ರೇಷ್ಠ ನಾಯಕರಲ್ಲಿ ಒಬ್ಬರು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಹಾಡಿಹೊಗಳಿದ್ದಾರೆ.
ಬೆಂಗಳೂರು: ಸತೀಶ ಜಾರಕಿಹೊಳಿ ಅವರು ಕರ್ನಾಟಕದ ಶ್ರೇಷ್ಠ ನಾಯಕರಲ್ಲಿ ಒಬ್ಬರು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಹಾಡಿಹೊಗಳಿದ್ದಾರೆ. ಗುರುವಾರ ನಗರದಲ್ಲಿ ನಡೆದ ಕೆಪಿಸಿಸಿ ಪ್ರತಿಜ್ಞಾ ದಿನ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ವಿಶೇಷವಾಗಿ ಮುಂಬೈ ಕರ್ನಾಟಕದ ಪ್ರಭಾವಿ ನಾಯಕರಾಗಿರುವ ಸತೀಶ ಜಾರಕಿಹೊಳಿ ಅವರು ರಾಜ್ಯಾದ್ಯಂತ ಸಂಚರಿಸಬೇಕು ಎಂದು ವೇದಿಕೆ ಮೇಲಿಂದಲೇ ಮನವಿ ಮಾಡಿದ ಅವರು ರಾಜ್ಯದ ಮೂಲೆ ಮೂಲೆಯಲ್ಲೂ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕು ಎಂದರು. ಉತ್ತಮ ಅವಕಾಶ ಸಿಕ್ಕಿದೆ. …
Read More »ಅಧ್ಯಕ್ಷರಾಗಿ ಶ್ರೀಪತಿ ಗಣೇಶವಾಡಿ ಹಾಗೂ ಉಪಾಧ್ಯಕ್ಷರಾಗಿ ಕೆಂಚಪ್ಪ ಸಕ್ರೆಪ್ಪಗೋಳ ಆಯ್ಕೆ
ಗೋಕಾಕ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮೀತಿಗೆ ನೂತನ ಅಧ್ಯಕ್ಷ-ಉಪಾಧ್ಯಕ್ಷರಾಗಿ ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಗಣೇಶವಾಡಿ ಗ್ರಾಮದ ಶ್ರೀಪತಿ ಹಾಲಪ್ಪ ಗಣೇಶವಾಡಿ ಹಾಗೂ ನಾಗನೂರಿನ ಕೆಂಚಪ್ಪ ಕೃಷ್ಣಪ್ಪ ಸಕ್ರೆಪ್ಪಗೋಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದಿಲ್ಲಿ ನಡೆದ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ತಲಾ ಒಬ್ಬೊಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಎರಡೂ …
Read More »ಭಾರತದಲ್ಲಿ ಉಗ್ರ ಸ್ವರೂಪದಲ್ಲಿ ಮುಂದುವರಿದಿರುವ ಕಿಲ್ಲರ್ ಕೊರೊನಾ ವೈರಸ್ ಅಟ್ಟಹಾಸ
ನವದೆಹಲಿ/ಮುಂಬೈ, ಜೂ.30- ಭಾರತದಲ್ಲಿ ಉಗ್ರ ಸ್ವರೂಪದಲ್ಲಿ ಮುಂದುವರಿದಿರುವ ಕಿಲ್ಲರ್ ಕೊರೊನಾ ವೈರಸ್ ಅಟ್ಟಹಾಸ ನಿಯಂತ್ರಣಕ್ಕೆ ಬರದೇ ಆತಂಕಕಾರಿ ಮಟ್ಟದಲ್ಲೇ ಸಾಗಿದೆ. ಕಳೆದ 24 ತಾಸುಗಳಲ್ಲಿ ಆಘಾತಕಾರಿ ಮಟ್ಟದಲ್ಲಿ ಅಂದರೆ 18,522 ಸೋಂಕು ಪ್ರಕರಣಗಳು ವರದಿಯಾಗಿದೆ. ಇದೇ ಅವಧಿಯಲ್ಲಿ 418 ಹೊಸ ಸಾವುಗಳು ಸಂಭವಿಸಿವೆ. ಭಾರತದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಉಲ್ಬಣಗೊಂಡ ನಂತರ 18,000ಕ್ಕೂ ಹೆಚ್ಚು ಪಾಸಿಟಿವ್ ಕೇಸ್ಗಳು ದಾಖಲಾಗಿರುವುದು ಇದು ಸತತ ಮೂರನೇ ದಿನ. ಈವರೆಗೆ ಭಾರತದಲ್ಲಿ ಸೋಂಕಿತರ ಸಂಖ್ಯೆ …
Read More »ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 14,295 ತಲುಪಿದ್ದು, ಈವರೆಗೆ 226 ಮಂದಿ ಮೃತಪಟ್ಟಿದ್ದಾರೆ.
ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ ಭಾರತದಲ್ಲಿ ಅಬ್ಬರಿಸುತ್ತಿದ್ದು, ಈವರೆಗೆ 16,796 ಮಂದಿ ಮೃತಪಟ್ಟಿದ್ದಾರೆ. ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಈಗ ಒಟ್ಟು ಸೋಂಕಿತರ ಸಂಖ್ಯೆ 5,62,198 ಕ್ಕೆ ತಲುಪಿದೆ. ಸೋಂಕು ಅತಿ ಹೆಚ್ಚಿನ ಪ್ರಮಾಣದಲ್ಲಿರುವ ಕೆಲ ರಾಜ್ಯಗಳ ವಿವರ ಇಂತಿದೆ. ಮಹಾರಾಷ್ಟ್ರದಲ್ಲಿ 1,69,883 ಮಂದಿ ಸೋಂಕು ಪೀಡಿತರಿದ್ದು, ಈವರೆಗೆ 7,610 ಮಂದಿ ಮೃತಪಟ್ಟಿದ್ದಾರೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 83,077 ಮಂದಿ …
Read More »ಎಂ ಜಿ ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ
ಬೆಳಗಾವಿ-ಬೆಳಗಾವಿ ಜಿಲ್ಲಾಧಿಕಾರಿ ಎಸ್ ಬಿ ಬೊಮ್ಮನಹಳ್ಳಿ ಅವರು ಇಂದು ಮಂಗಳವಾರ ಸೇವಾ ನಿವೃತ್ತಿಹೊಂದಲಿದ್ದು,ಎಂ ಜಿ ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ ಬೆಳಗಾವಿ-ಬೆಳಗಾವಿ ಜಿಲ್ಲಾಧಿಕಾರಿ ಎಸ್ ಬಿ ಬೊಮ್ಮನಹಳ್ಳಿ ಅವರು ನಾಳೆ ಮಂಗಳವಾರ ಸೇವಾ ನಿವೃತ್ತಿಹೊಂದಲಿದ್ದು,ಎಂ ಜಿ ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂ ಜಿ ಹಿರೇಮಠ ಅವರು ಗದಗ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು ಇವರು ಮೂಲತಹ ಕೆಕೆ ಕೊಪ್ಪ ಗ್ರಾಮದವರು ಎಂದು ತಿಳಿದು ಬಂದಿದೆ. …
Read More »ಗುಡ್ಬೈ ಡ್ಯಾಡಿ, ಅವರು ವೆಂಟಿಲೇಟರ್ ತೆಗೆದು ಹಾಕಿದ್ರು’- ಸಾಯೋ ಮುನ್ನ ಸೆಲ್ಫಿ ವಿಡಿಯೋ ಮಾಡಿ ತಂದೆಗೆ ಕಳಿಸಿದ ಮಗ
ಹೈದರಾಬಾದ್: ಮಹಾಮಾರಿ ಕೊರೊನಾ ವೈರಸ್ಗೆ ಬಲಿಯಾಗುವ ಕೆಲವೇ ನಿಮಿಷಗಳ ಮೊದಲು ಸೆಲ್ಫಿ ವಿಡಿಯೋ ಮಾಡಿ 26 ವರ್ಷದ ಯುವಕನೊಬ್ಬ ತನ್ನ ತಂದೆಗೆ ಕಳುಹಿಸಿದ ಕರುಣಾಜನಕ ಘಟನೆಯೊಂದು ನಡೆದಿದೆ. ಹೌದು. ಯುವಕನಿಗೆ ಕೊರೊನಾ ಪಾಸಿಟಿವ್ ದೃಢಪಟ್ಟು ಹೈದರಾಬಾದ್ ನಲ್ಲಿರುವ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಶುಕ್ರವಾರ ರಾತ್ರಿ ಯುವಕ ತನ್ನ ತಂದೆ ಸೆಲ್ಫಿ ವಿಡಿಯೋ ಮಾಡಿ ಕಳುಹಿಸಿದ್ದಾನೆ. ವಿಡಿಯೋದಲ್ಲಿ ಆಸ್ಪತ್ರೆಯ ಬೆಡ್ ನಲ್ಲಿ ಯುವಕ ಮಲಗಿದ್ದಾನೆ. ಅಲ್ಲದೆ ವೈದ್ಯರು ವೆಂಟಿಲೇಟರ್ ತೆಗೆದು …
Read More »ತೈಲ ಬೆಲೆ ಏರಿಕೆಯನ್ನು ಖಂಡಿಸಿ ಬೀದಿಗೆ ಇಳಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್
ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಮಧ್ಯೆ ಕಾಂಗ್ರೆಸ್ ತೈಲ ಬೆಲೆ ಏರಿಕೆಯನ್ನು ಖಂಡಿಸಿ ಬೀದಿಗೆ ಇಳಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ. ಅಧ್ಯಕ್ಷ ಡಿಕೆ ಶಿವಕುಮಾರ್ , ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ನೂರಾರು ಕಾರ್ಯಕರ್ತರು ಸೈಕಲ್ ತುಳಿದ ಪರಿಣಾಮ ಕೆಪಿಸಿಸಿ ಕಚೇರಿ ಇರುವ ಕ್ವೀನ್ಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ಸಾಮಾಜಿಕ ಅಂತರದ ನಿಯಮವೇ ಉಲ್ಲಂಘನೆ ಆಗಿತ್ತು. ಸಿದ್ದರಾಮಯ್ಯ ಮತ್ತು ಡಿಕೆ …
Read More »ಕಳೆದ 21 ದಿನಗಳಿಂದ ಏರುಗತಿಯಲ್ಲೇ ಇದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ಭಾನುವಾರ ಬಿಡುವು ನೀಡಿತ್ತು. ಭಾನುವಾರ ದರ ಪರಿಷ್ಕರಣೆ ಆಗದ ಕಾರಣ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ವ್ಯತ್ಯಾಸವಾಗಿರಲಿಲ್ಲ.
ನವದೆಹಲಿ: ಕಳೆದ 21 ದಿನಗಳಿಂದ ಏರುಗತಿಯಲ್ಲೇ ಇದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ಭಾನುವಾರ ಬಿಡುವು ನೀಡಿತ್ತು. ಭಾನುವಾರ ದರ ಪರಿಷ್ಕರಣೆ ಆಗದ ಕಾರಣ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ವ್ಯತ್ಯಾಸವಾಗಿರಲಿಲ್ಲ. ಸೋಮವಾರ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ. ಪೆಟ್ರೋಲ್ ಬೆಲೆ ಲೀಟರ್ ಗೆ 5 ಪೈಸೆ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 13 ಪೈಸೆ ಜಾಸ್ತಿಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಲೀಟರ್ಗೆ …
Read More »ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಆಶಾ ಕಾರ್ಯಕರ್ತೆಯರು ಸಹ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಿದ್ದಾರೆ.
ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ನಿಯಂತ್ರಣಕ್ಕಾಗಿ ವೈದ್ಯರು ಮತ್ತು ವೈದ್ಯಕೀಯೇತರ ಸಿಬ್ಬಂದಿ ನಿರಂತರವಾಗಿ ಶ್ರಮಿಸುತ್ತಿದ್ದು, ಇವರ ಜೊತೆಗೆ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಆಶಾ ಕಾರ್ಯಕರ್ತೆಯರು ಸಹ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಿದ್ದಾರೆ. ಆದರೆ ತಮ್ಮ ಹಲವು ಕಾಲದ ಬೇಡಿಕೆಗೆ ಸರ್ಕಾರ ಈವರೆಗೆ ಸ್ಪಂದಿಸಿಲ್ಲ ಎಂಬ ಅಳಲು ಆಶಾ ಕಾರ್ಯಕರ್ತೆಯರದ್ದಾಗಿದ್ದು, ಹೀಗಾಗಿ ಜೂನ್ 30ರ ನಾಳೆ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಒಂದೊಮ್ಮೆ ಸರ್ಕಾರ ಪ್ರತಿಭಟನೆ ಬಳಿಕವೂ ತಮ್ಮ ಬೇಡಿಕೆಗೆ …
Read More »
Laxmi News 24×7