Breaking News

ರಾಷ್ಟ್ರೀಯ

ತಮ್ಮ ಊರಿನಲ್ಲಿ ಮಗನ ಮೊದಲ ಹುಟ್ಟುಹಬ್ಬ ಆಚರಿಸಿದ ರಿಷಭ್​ ಶೆಟ್ಟಿ ದಂಪತಿ

ಬೆಂಗಳೂರಿಗೆ ಮರಳುತ್ತಿದ್ದಂತೆಯೇ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಅವರು ನಾಯಕನಾಗಿ ನಟಿಸುತ್ತಿರುವ ‘ಹರಿಕಥೆ ಅಲ್ಲಾ ಗಿರಿಕಥೆ’ ಸಿನಿಮಾದ ಮುಹೂರ್ತ ನೆರವೇರಿಸಿದ್ದಾರೆ. ನಟ ಹಾಗೂ ನಿರ್ದೇಶಕ ರಿಷಭ್​ ಶೆಟ್ಟಿ ಅವರ ಅಭಿನಯದ ಹೊಸ ಸಿನಿಮಾ ‘ಹರಿಕಥೆ ಅಲ್ಲಾ ಗಿರಿಕಥೆ’ ಬಗ್ಗೆ ಕಳೆದ ಶನಿವಾರವಷ್ಟೆ ನಿಮಗೆ ತಿಳಿಸಿದ್ದೆವು. ಪ್ರತಿ ಸಲ ಏನಾದರೂ ಹೇಳಬೇಕಾದರೆ ಅದನ್ನು ವಿಡಿಯೋ ಮೂಲಕ ಹೇಳುವ ರಿಷಭ್ ಶೆಟ್ಟಿ, ಈ ಸಲವೂ ತಮ್ಮ ಚಿತ್ರದ ಕುರಿತು ಒಂದು ವಿಡಿಯೋ ತುಣುಕು …

Read More »

ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ನಾಗಾಲೋಟದಲ್ಲಿ ಏರಿಕೆಯಾಗುತ್ತಿದೆ.

ನವದೆಹಲಿ: ವಿಶ್ವದೆಲ್ಲೆಡೆ ಕೊರೋನಾ ಆರ್ಭಟ ಹೆಚ್ಚಾಗುತ್ತಿರುವ ನಡುವೆಯೇ ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ನಾಗಾಲೋಟದಲ್ಲಿ ಏರಿಕೆಯಾಗುತ್ತಿದೆ. ಕಳೆದ ಕೆಲ ದಿನಗಳಿಂದ ಚಿನ್ನ ಮತ್ತು ಬೆಳ್ಳಿಯ ಬೆಲೆ ನಿರಂತರವಾಗಿ ಹೆಚ್ಚಾಗುತ್ತಲೇ ಇದೆ. ಇಂದು 10 ಗ್ರಾಂ ಚಿನ್ನದ ಬೆಲೆ 47,950 ರೂನಿಂದ 47,960 ರೂಪಾಯಿಗೆ ಏರಿಕೆಯಾಗಿದೆ. ಇದೇ ವೇಳೆ ಬೆಳ್ಳಿ ದರದಲ್ಲಿ ಕೂಡ ಏರಿಕೆ ಕಂಡಿದ್ದು, 1 ಕೆ.ಜಿ ಬೆಳ್ಳಿಗೆ 48,670 ರೂಪಾಯಿ ಆಗಿದೆ. ಈ ಮೂಲಕ ದೇಶಾದ್ಯಂತ ಚಿನ್ನದ …

Read More »

ಸರ್ಕಾರದಿಂದ ನಡೆಸಲ್ಪಡುವ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಮಕ್ಕಳ ನಿರಾಶ್ರಿತರ ಕೇಂದ್ರ (ಶೆಲ್ಟರ್ ಹೋಂ)ನಲ್ಲಿದ್ದ 57 ಅಪ್ರಾಪ್ತ ಯುವತಿಯರಿಗೆ ಕೊರೋನಾ ಸೋಂಕು ತಗುಲಿದೆ.

ಲಕ್ನೋ : ಸರ್ಕಾರದಿಂದ ನಡೆಸಲ್ಪಡುವ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಮಕ್ಕಳ ನಿರಾಶ್ರಿತರ ಕೇಂದ್ರ (ಶೆಲ್ಟರ್ ಹೋಂ)ನಲ್ಲಿದ್ದ 57 ಅಪ್ರಾಪ್ತ ಯುವತಿಯರಿಗೆ ಕೊರೋನಾ ಸೋಂಕು ತಗುಲಿದೆ. ಆ 57 ಅಪ್ರಾಪ್ತರಲ್ಲಿ ಐವರು ಗರ್ಭಿಣಿಯಾಗಿದ್ದಾರೆ. ಕೊರೋನಾ ಸೋಂಕಿತರಲ್ಲದ ಇನ್ನಿಬ್ಬರು ಯುವತಿಯರು ಕೂಡ ಗರ್ಭಿಣಿಯಾಗಿದ್ದಾರೆ ಎಂಬ ಆತಂಕಕಾರಿ ಸಂಗತಿ ವೈದ್ಯಕೀಯ ತಪಾಸಣೆ ವೇಳೆ ಬೆಳಕಿಗೆ ಬಂದಿದೆ.  ಸರ್ಕಾರಿ ಶೆಲ್ಟರ್​ ಹೋಂನಲ್ಲಿರುವ ಈ ಅಪ್ರಾಪ್ತ ಯುವತಿಯರಿಗೆ ಯಾರಿಂದ ಸಾಮೂಹಿಕವಾಗಿ ಕೊರೋನಾ ಸೋಂಕು ತಗುಲಿದೆ? ಅವರು …

Read More »

ಗಡಿಯಲ್ಲಿ ಕದನ ಕಾರ್ಮೋಡ, ರಕ್ಷಣಾ ಸಚಿವರ ಮಹತ್ವದ ಮೀಟಿಂಗ್..!

ಗಡಿಯಲ್ಲಿ ಕದನ ಕಾರ್ಮೋಡ, ರಕ್ಷಣಾ ಸಚಿವರ ಮಹತ್ವದ ಮೀಟಿಂಗ್..! ನವದೆಹಲಿ,ಜೂ.21-ಪೂರ್ವ ಲಡಾಕ್‍ನಲ್ಲಿ ಗಲ್ವಾನ್ ಕಣಿವೆಯಲ್ಲಿ ಭಾರತ-ಚೀನಾ ಯೋಧರ ಹಿಂಸಾತ್ಮಕ ಸಂಘರ್ಷದ ನಂತರ ಗಡಿಭಾಗದಲ್ಲಿ ಯುದ್ಧದ ಕಾರ್ಮೋಡಗಳು ದಟ್ಟವಾಗಿ ಕವಿದಿದ್ದು, ಉಭಯ ದೇಶಗಳ ಸೇನಾಪಡೆಗಳು ಭಾರೀ ಸಂಖ್ಯೆಯಲ್ಲಿ ಜಮಾವಣೆಗೊಂಡಿವೆ. ಇದೇ ವೇಳೆ ಚೀನಾದಿಂದ ಎದುರಾಗಬಹುದಾದ ಯಾವುದೇ ದುಸ್ಸಾಹಸದ ಸನ್ನಿವೇಶ ಎದುರಿಸಲು ಭಾರತ ಸಂಪೂರ್ಣ ರೀತಿಯಲ್ಲಿ ಸಜ್ಜಾಗಿದೆ. ಈ ಮಧ್ಯೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೆಹಲಿಯಲ್ಲಿಂದು ಉನ್ನತ ಮಟ್ಟದ ಸಭೆ ನಡೆಸಿ …

Read More »

ದೊಡ್ಡ ವ್ಯಾಪಾರಿಗಳಿಗೆ ಫೋನ್ ಮಾಡಿ, ಬೇಡಿದಷ್ಟು ಹಣ ಕೊಡದಿದ್ದರೆ ಖಲ್ಲಾಸ್ ಮಾಡುತ್ತೇವೆ,ಎಂದು ಬೆದರಿಸುತ್ತಿದ್ದ,ಇಬ್ಬರು ರೌಡಿಗಳನ್ನು ಬೆಳಗಾವಿಯ ಖಡೇಬಝಾರ್ ಠಾಣೆಯ ಪೋಲೀಸರು ಬಂಧಿಸಿದ್ದಾರೆ.

ಬೆಳಗಾವಿ-ಬಿಲ್ಡರ್ ಗಳಿಗೆ,ದೊಡ್ಡ ದೊಡ್ಡ ವ್ಯಾಪಾರಿಗಳಿಗೆ ಫೋನ್ ಮಾಡಿ, ಬೇಡಿದಷ್ಟು ಹಣ ಕೊಡದಿದ್ದರೆ ಖಲ್ಲಾಸ್ ಮಾಡುತ್ತೇವೆ,ಎಂದು ಬೆದರಿಸುತ್ತಿದ್ದ,ಇಬ್ಬರು ರೌಡಿಗಳನ್ನು ಬೆಳಗಾವಿಯ ಖಡೇಬಝಾರ್ ಠಾಣೆಯ ಪೋಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಕ್ಯಾಂಪ್ ಪೋಲೀಸ್ ಠಾಣೆ ಸೇರಿದಂತೆ ನಗರದ ಹಲವಾರು ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಅನೇಕ ಅಪರಾಧಗಳಲ್ಲಿ ಭಾಗಿಯಾಗಿದ್ದ ಇಬ್ಬರು ರೌಡಿಗಳು ಫೋನ್ ಮುಖಾಂತರವೇ ಹಣವಂತರನ್ನು ಬೆದರಿಸುತ್ತ,ತಲೆಮರೆಸಿಕೊಂಡಿದ್ದರು. ಖಡೇಬಝಾರ್ ಪೋಲೀಸರು ಹಿರಿಯ ಪೋಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಬಲೆ ಬೀಸಿ ಇಬ್ಬರು ಆರೋಪಿಗಳನ್ನು ಬಂಧಿಸಿ,ಒಂದು ಕಾರು,ಮಾರಕಾಸ್ತ್ರಗಳು,ಮತ್ತು ಒಂದು …

Read More »

ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮೂರು ಕಡೆ ಕೋವಿಡ್ ಕೇರ್ ಸೆಂಟರ್ ತೆರೆಯಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮೂರು ಕಡೆ ಕೋವಿಡ್ ಕೇರ್ ಸೆಂಟರ್ ತೆರೆಯಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಕೋವಿಡ್ ಸೋಂಕಿತ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ರವಿಶಂಕರ್ ಆಶ್ರಮ, ಕಂಠೀರವ ಒಳಾಂಗಣ ಕ್ರೀಡಾಂಗಣ ಹಾಗೂ ಕೋರಮಂಗಲ ಒಳಾಂಗಣ ಕ್ರೀಡಾಂಗಣಗಳನ್ನು ರೋಗ ಲಕ್ಷಣವಿಲ್ಲದ ಕೊರೊನಾ ಸೋಂಕಿತರ ಚಿಕಿತ್ಸಾ ಕೇಂದ್ರಗಳಾಗಿ ಕಾರ್ಯ ನಿರ್ವಹಿಸಲಿವೆ. ಖಾಸಗಿ ಆಸ್ಪತ್ರೆಯಲ್ಲೂ ಕೊರೊನಾ ಚಿಕಿತ್ಸೆ ನೀಡಲು ನಿರ್ಧಾರ ಮಾಡಲಾಗಿದೆ. ಖಾಸಗಿ …

Read More »

ಮಠದಲ್ಲಿ ಯಾರಿಗೂ ಕೊರೊನಾ ಪಾಸಿಟಿವ್ ಲಕ್ಷಣಗಳು ಇಲ್ಲ: ಸಿದ್ದಲಿಂಗ ಶ್ರೀ………

ತುಮಕೂರು: ಸಿದ್ದಗಂಗಾ ಮಠದಲ್ಲಿ ಯಾರಿಗೂ ಕೊರೊನಾ ಪಾಸಿಟಿವ್ ಲಕ್ಷಣಗಳು ಇಲ್ಲ ಎಂದು ಸಿದ್ದಲಿಂಗ ಶ್ರೀಗಳು ಸ್ಪಷ್ಟನೆ ನೀಡಿದ್ದಾರೆ.   ಮಠದಲ್ಲಿ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ ಇದೆ ಎಂದು ವದಂತಿ ಹಬ್ಬಿತ್ತು. ಈ ಹಿನ್ನೆಲೆಯಲ್ಲಿ ಖುದ್ದು ಸ್ಪಷ್ಟನೆ ನೀಡಿದ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳು, ಆಂಧ್ರದಿಂದ ಬಂದ ವಿದ್ಯಾರ್ಥಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂಬುದಾಗಿ ಪ್ರಚಾರವಾಗಿತ್ತು. ಆ ವಿದ್ಯಾರ್ಥಿಯನ್ನ ಜಿಲ್ಲಾಡಳಿತ ಪರೀಕ್ಷೆ ನಡೆಸಿತು. ಆತನ ಪರೀಕ್ಷೆಯಲ್ಲಿ ಎಲ್ಲಾ ವರದಿಗಳು ನೆಗೆಟಿವ್ ಬಂದಿದೆ ಎಂದು …

Read More »

ಕೊರೊನಾ ವಿರುದ್ಧ ಹೋರಾಡಲು ಯೋಗ ಮುಖ್ಯ………..?

ನವದೆಹಲಿ: ಕೊರೊನಾ ವೈರಸ್ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ಸಾರ್ವಜನಿಕವಾಗಿ ಯೋಗ ದಿನಾಚರಣೆ ಆಚರಿಸದಿರಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಜನರಿಗೆ ತಮ್ಮ ತಮ್ಮ ಮನೆಯಲ್ಲೇ ಕುಟುಂಬಸ್ಥರ ಜೊತೆ ಯೋಗ ಮಾಡುವಂತೆ ಮೋದಿ ಕರೆ ನೀಡಿದ್ದಾರೆ. ದೇಶದ್ಯಾಂತ ಬೆಳಗ್ಗೆ ಏಳು ಗಂಟೆಗೆ ಮನೆಯಲ್ಲಿ ಯೋಗ ದಿನ ಆಚರಿಸಲು ಕರೆ ನೀಡಿರುವ ಪ್ರಧಾನಿ ಮೋದಿ ಸ್ವತಃ ತಾವು ಮನೆಯಲ್ಲಿ ಯೋಗ ಮಾಡುತ್ತಿದ್ದಾರೆ. ದೆಹಲಿಯ ಲೋಕ ಕಲ್ಯಾಣ ಮಾರ್ಗ್ …

Read More »

ಪತ್ನಿಗೆ ಗುಂಡಿಕ್ಕಿ ತಾನೂ ಆತ್ಮಹತ್ಯೆಗೆ ಶರಣಾದ ಪೇದೆ……….

ರಾಯ್‍ಪುರ: ಪೊಲೀಸ್ ಪೇದೆಯೋರ್ವ ಪತ್ನಿಗೆ ಗುಂಡಿಕ್ಕಿ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಛತ್ತೀಸ್‍ಗಢದ ರಾಜನಂದಗಾಂವ್‍ನ ಮನ್‍ಪುರನಲ್ಲಿ ನಡೆದಿದೆ. ಜಂಜಗೀರ್-ಚಂಪಾ ಜಿಲ್ಲೆಯ ಅಮ್ಲಿಡಿಹ್ ನಿವಾಸಿ ಮುಖೇಶ್ ಮನ್ಹಾರ್ (38), ಪತ್ನಿ ಬಬಿತಾ ಮನ್ಹಾರ್ (32) ಗುಂಡಿಕ್ಕಿ ಹತ್ಯೆ ಮಾಡಿ ತಾನೂ ಗುಂಡಿಕ್ಕಿಕೊಂಡು ಸಾವನ್ನಪ್ಪಿದ್ದಾರೆ. ಮುಖೇಶ್ ಅವರನ್ನು ನಕ್ಸಲ್ ಪೀಡಿತ ಪ್ರದೇಶದ ಮನ್ಪುರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸುಮಾರು 3 ವರ್ಷಗಳ ಕಾಲ ನಿಯೋಜಿಸಲಾಗಿತ್ತು. ಹೀಗಾಗಿ ಅವರು ಪತ್ನಿ ಬಬಿತಾ ಮನ್ಹಾರ್ ಮತ್ತು …

Read More »

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೆ ಕೊರೊನಾ ಸೋಂಕು ಇರುವ ಶಂಕೆಯಿಂದ ಈ ವಿದ್ಯಾರ್ಥಿಯನ್ನು ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.

ಬೆಳಗಾವಿ- ಸರ್ಕಾರ SSLC ಪರೀಕ್ಷೆಯ ದಿನಾಂಕ ನಿಗದಿಪಡಿಸಿ,ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡ ಬೆನ್ನಲ್ಲಿಯೇ ಕಿತ್ತೂರು ತಾಲ್ಲೂಕಿನ ಗ್ರಾಮವೊಂದರಲ್ಲಿ ಅತ್ಯಂಕ ಕಳವಳಕಾರಿ ಸಂಗತಿಯೊಂದು ಇಂದು ಬೆಳಿಗ್ಗೆ ಹೊರಬಿದ್ದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೆ ಕೊರೊನಾ ಸೋಂಕು ಇರುವ ಶಂಕೆಯಿಂದ ಈ ವಿದ್ಯಾರ್ಥಿಯನ್ನು ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಗ್ರಾವೊಂದರ ಬಾಲಕನನ್ನು ಇಂದು ಬೆಳಿಗ್ಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ನಾಲ್ಕು ದಿನಗಳಿಂದ …

Read More »