Breaking News

ರಾಷ್ಟ್ರೀಯ

ಕರ್ನಾಟಕದಲ್ಲಿ ಕೊರೊನಾಗೆ ಮತ್ತೊಂದು ಸಾವು- ಸಾವಿನ ಸಂಖ್ಯೆ 17ಕ್ಕೆ ಏರಿಕೆ

ಕಲಬುರಗಿ: 80 ವರ್ಷದ ವೃದ್ಧ ಕೊರೊನಾ ವೈರಸ್ ನಿಂದ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಕೋವಿಡ್-19ಗೆ ಬಲಿಯಾದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಸೋಮವಾರ ರಾತ್ರಿ ಬಂದ ವರದಿಯಲ್ಲಿ ವೃದ್ಧನಿಗೆ ಕೊರೊನಾ ತಗುಲಿರೋದು ದೃಢಪಟ್ಟಿತ್ತು. ಕಲಬುರಗಿಯಲ್ಲಿ ಕೊರೊನಾಗೆ ನಾಲ್ಕನೇ ಸಾವು ಇದಾಗಿದ್ದು, ಜಿಲ್ಲೆಯ ಜನತೆಯಲ್ಲಿ ಆತಂಕ ಮನೆಮಾಡಿದೆ. ಮೃತ ವೃದ್ಧ ತಬ್ಲಿಘಿಯೋರ್ವನ ಸಂಬಂಧಿಯಾಗಿದ್ದರಿಂದ ಒಂದು ವಾರದ ಹಿಂದೆ ಕಲಬುರಗಿಯ ಇಎಸ್‍ಐ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೃದ್ಧನ ಮೊದಲ ವೈದ್ಯಕೀಯ ವರದಿ ನೆಗಟಿವ್ ಬಂದಿತ್ತು. ವೃದ್ಧ ಸಾಯುವ …

Read More »

ಪಾದರಾಯನಪುರದ ಪುಂಡರ ‘ಲೀಡರ್’ ಜಮೀರ್ ಹೇಳಿಕೆಗಳು ಸರಿಯೇ..?

ಬೆಂಗಳೂರು, – ಮನುಕುಲಕ್ಕೆ ಕಂಟಕವಾಗಿರುವ ಮಹಾಮಾರಿ ಕೊರೊನಾ ನಿಯಂತ್ರಣಕ್ಕೆ ಇಡೀ ದೇಶದ ಜನತೆ ಆತಂಕಕ್ಕೊಳಗಾಗಿ ಗೃಹಬಂಧನದಲ್ಲಿದೆ. ಆದರೆ, ಬೆಂಗಳೂರಿನ ಪಾದರಾಯನಪುರದ ಜನತೆಗೆ ಅದೇನಾಗಿದೆಯೋ ಏನೋ ಗೊತ್ತಿಲ್ಲ. ಮನಬಂದಂತೆ ವರ್ತಿಸುತ್ತಿದ್ದಾರೆ. ಇಲ್ಲಿನ ಜನಪ್ರತಿನಿಧಿಯಾದ ಜಮೀರ್ ಅಹಮ್ಮದ್ ಕೂಡ ಸಮರ್ಥಿಸಿಕೊಳ್ಳಲು ಮುಂದಾಗಿ ಗೂಂಡಾ ರೀತಿಯಂತೆ ವರ್ತಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕೋವಿಡ್-19 ಮನುಕುಲಕ್ಕೆ ಕಂಟಕವಾಗಿ ಪರಿಣಮಿಸಿದೆ. ಸೋಂಕಿತರನ್ನು ಚಿಕಿತ್ಸೆಗೊಳಪಡಿಸುವುದು, ಶಂಕಿತರನ್ನು ಕ್ವಾರಂಟೈನ್ ಮಾಡುವುದು ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ ಜಾತಿ-ಮತ, ಧರ್ಮಗಳನ್ನು ಬದಿಗೊತ್ತಿ ಸರ್ಕಾರ …

Read More »

ಕರ್ನಾಟಕದ ಲಾಕ್‍ಡೌನ್ ಬಗ್ಗೆ ಜಾಗತಿಕ ಮಟ್ಟದ ಅಧ್ಯಯನದಲ್ಲಿ ಮೆಚ್ಚುಗೆ

ನವದೆಹಲಿ, -ಡೆಡ್ಲಿ ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಜಾರಿಯಲ್ಲಿರುವ ಬಿಗಿಯಾದ ಲಾಕ್‍ಡೌನ್ ಪರಿಣಾಮಕಾರಿಯಾಗಿದೆ ಎಂದು ಅಧ್ಯಯನ ವರದಿಯೊಂದು ಮೆಚ್ಚುಗೆ ವ್ಯಕ್ತಪಡಿಸಿದೆ. ಇನ್ಸ್‍ಟಿಟ್ಯೂಟ್ ಆಫ್ ಮ್ಯಾಥಮೆಟಿಕಲ್ ಸೈನ್ಸ್ ಎಂಬ ಸಂಸ್ಥೆಯು ನಡೆಸಿದ ಜಾಗತಿಕ ಮಟ್ಟದ ಅಧ್ಯಯನದಲ್ಲಿ ಕರ್ನಾಟಕ ಮತ್ತು ತಮಿಳುನಾಡಿನಂತಹ ಕೆಲ ರಾಜ್ಯಗಳು ಕೈಗೊಂಡಿರುವ ಬಿಗಿ ಲಾಕ್‍ಡೌನ್‍ನಿಂದ ಸೋಂಕು ತಡೆಗಟ್ಟಲು ಸಹಕಾರಿಯಾಗಿದೆ. ಆದರೆ, ಕೆಲವು ರಾಜ್ಯಗಳು ಇಂತಹ ಕ್ರಮಗಳನ್ನು ಕೈಗೊಳ್ಳುವಲ್ಲಿ ನಿರೀಕ್ಷಿತ ಮಟ್ಟದಲ್ಲಿ ಶ್ರಮ ವಹಿಸದ ಕಾರಣ ಸಾಂಕ್ರಾಮಿಕ …

Read More »

ಲಾಕ್‍ಡೌನ್ ಸಮಯವನ್ನು ಎಂಎಸ್ ಧೋನಿ ಅವರು, ಅವರ ಮಗಳು ಮತ್ತು ಪತ್ನಿ ಸಾಕ್ಷಿ ಜೊತೆ ಎಂಜಾಯ್

ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕ್ಯಾಪ್ಟನ್ ಕೂಲ್ ಎಂಎಸ್ ಧೋನಿಯವರ ಪತ್ನಿ ಸಾಕ್ಷಿ, ಧೋನಿ ಅವರ ಕಾಲು ಕಚ್ಚಿದ್ದಾರೆ. ಕೊರೊನಾ ಭಯದಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಕ್ರಿಕೆಟ್, ಸಿನಿಮಾ ಕೈಗಾರಿಕೆ ಎಲ್ಲವೂ ಬಂದ್ ಆಗಿದ್ದು, ಕ್ರೀಡಾಪಟುಗಳು ಮತ್ತು ನಟ-ನಟಿಯರು ಮನೆಯಲ್ಲೇ ಬಂಧಿಯಾಗಿದ್ದಾರೆ. ಅಂತೆಯೇ ಕೊರೊನಾ ಲಾಕ್‍ಡೌನ್ ಸಮಯವನ್ನು ಎಂಎಸ್ ಧೋನಿ ಅವರು, ಅವರ ಮಗಳು ಮತ್ತು ಪತ್ನಿ ಸಾಕ್ಷಿ ಜೊತೆ ಎಂಜಾಯ್ ಮಾಡುತ್ತಿದ್ದಾರೆ ಹೀಗೆ ಮನೆಯಲ್ಲೇ …

Read More »

ಸಿಎಂ ಕಾರ್ಯವೈಖರಿಗೆ ಕೆಲ ಸಚಿವರಿಂದ ಅಸಮಾಧಾನ

ಬೆಂಗಳೂರು: ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಸಿಎಂ ಬಿಎಸ್‍ವೈ ಕಾರ್ಯವೈಖರಿ ಬಗ್ಗೆ ಕೆಲ ಸಚಿವರು ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲಾಠಿ ಕೈಗೆತ್ತಿಕೊಳ್ಳಬೇಡಿ ಎಂದು ಪೊಲೀಸರಿಗೆ ಸೂಚಿಸಿದ್ದು ತಪ್ಪು. ಅವತ್ತು ಆಶಾ ಕಾರ್ಯಕರ್ತೆ ಮೇಲೆ ದಾಳಿ ನಡೆದಾಗಲೇ ಕಠಿಣ ಕ್ರಮ ಕೈಗೊಳ್ಳಬೇಕಿತ್ತು ಎಂದು ಕೆಲ ಸಚಿವರು ಅಸಮಾಧನ ತೋರ್ಪಡಿಸಿದ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಕೊರೊನಾ ಲಾಕ್‍ಡೌನ್ ವಿಚಾರದಲ್ಲಿ ಮೃದು ಧೋರಣೆ ಬೇಡ. ಇನ್ನೇನಿದ್ದರೂ ದಂಡಂ ದಶಗುಣಂ ಇರಬೇಕು ಎಂದು …

Read More »

ಪಾದರಾಯನಪುರದ ಪುಂಡರು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್

ರಾಮನಗರ: ಪಾದರಾಯನಪುರ ಗಲಾಟೆ ಪ್ರಕರಣ ಸಂಬಂಧ ಬಂಧಿಸಲಾಗಿದ್ದ 54 ಆರೋಪಿಗಳನ್ನು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ರವಾನೆ ಮಾಡಲು ಆದೇಶಿಸಲಾಗಿದೆ. ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಆರೋಪಿಗಳನ್ನು ಪರಪ್ಪನ ಅಗ್ರಹಾರದಿಂದ ಶಿಫ್ಟ್ ಮಾಡಲು ಕಾರಾಗೃಹ ಡಿಜಿಪಿ ಅಲೋಕ್ ಮೋಹನ್ ಆದೇಶಿಸಿದ್ದಾರೆ. ಹಾಗೆಯೇ ರಾಮನಗರ ಜೈಲಿನಲ್ಲಿರುವ 177 ಮಂದಿ ಖೈದಿಗಳು, ಆರೋಪಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡುವಂತೆ ಕೂಡಾ ಆದೇಶದಲ್ಲಿ ತಿಳಿಸಲಾಗಿದೆ. ಕೊರೊನಾ ಗ್ರೀನ್ ಜೋನ್‍ನಲ್ಲಿರುವ ರಾಮನಗರ ಜಿಲ್ಲೆಯಲ್ಲಿ ಇಲ್ಲಿಯ ತನಕ ಯಾವುದೇ …

Read More »

ಸೋಮವಾರ ಸಂಜೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಯಾವುದೇ ಪಾಸಿಟೀವ್ ಕೇಸ್ ಇಲ್ಲವೇ ಇಲ್ಲ

ಬೆಳಗಾವಿ ಪಾಲಿಗೆ ಕರುಣೆ ತೋರಿದ್ದು, ಸೋಮವಾರ ಸಂಜೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಯಾವುದೇ ಪಾಸಿಟೀವ್ ಕೇಸ್ ಇಲ್ಲವೇ ಇಲ್ಲ ಸೋಮವಾರ ಬೆಳಗಿನ ಬುಲಿಟೀನ್ ಬೆಳಗಾವಿ ಪಾಲಿಗೆ ಸಿಹಿ ಸುದ್ಧಿ ನೀಡಿತ್ತು ಸಂಜೆ ಬುಲಿಟೀನ್ ಕೂಡ ಬೆಳಗಾವಿ ಜನತೆಗೆ ಫುಲ್ ರಿಲ್ಯಾಪ್ಸ್ ನೀಡಿದೆ. ಯಾವುದೇ ಪಾಸಿಟೀವ್ ಕೇಸ್ ಬಂದಿಲ್ಲ ಅಂತ ನಿಶ್ಕಾಳಜಿ ಬೇಡ,ಕೊರೋನಾ ಸರಪಳಿ ಕಳಚುವವರೆಗೂ ಆರೋಗ್ಯ ಇಲಾಖೆಯ ಮಾರ್ಗಸೂಚಿ ಪಾಲಿಸೋಣ,ಎಲ್ಲರೂ ಮನೆಯಲ್ಲೇ ಇರೋಣ …

Read More »

ಬಿಬಿಎಂಪಿ ಇತಿಹಾಸದಲ್ಲಿಯೇ ಮೊದಲ ಬಾರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬಜೆಟ್ ಮಂಡನೆ, ಇಲ್ಲಿದೆ ಹೈಲೈಟ್ಸ್

ಬೆಂಗಳೂರು, ಏ.20- ಬಿ ಖಾತಾ ಆಸ್ತಿಗಳನ್ನು ಎ ಖಾತಾಗಳಾಗಿ ಪರಿವರ್ತಿಸುವುದು, ಹೊಸ ವಲಯಗಳಲ್ಲಿನ ಆಸ್ತಿಗಳ ಖಾತಾ ನಕಲು ಮತ್ತು ಖಾತಾ ದೃಢೀಕರಣ ಪತ್ರಗಳ ಗಣಕೀಕರಣ, ಶುಲ್ಕ ದ್ವಿಗುಣ, ಉದ್ಯಮ ಪರವಾನಗಿ ವ್ಯವಸ್ಥೆ ಸರಳೀಕರಣ, ನಾಡಪ್ರಭು ಕೆಂಪೇಗೌಡರ ಹೆಸರಲ್ಲಿ ಹೊಸದಾಗಿ ಶಾಲೆ ನಿರ್ಮಾಣ, ಸ್ಮಾರ್ಟ್ ಶಿಕ್ಷಣ ವ್ಯವಸ್ಥೆ, ತೆರಿಗೆ ಸಂಗ್ರಹ ಹೆಚ್ಚಳಕ್ಕೆ ಹಲವು ಕಾರ್ಯಕ್ರಮಗಳು ಸೇರಿದಂತೆ ಬಿಬಿಎಂಪಿ 2020-21ನೆ ಸಾಲಿನ 10,899.23 ಕೋಟಿ ಆಯವ್ಯಯವನ್ನು ಇಂದು ಮಂಡಿಸಿತು. ಮೇಯರ್ ಗೌತಮ್‍ಕುಮಾರ್ ಅವರ …

Read More »

ನರಕದಿಂದ ನಮ್ಮನ್ನು ಹೊರ ತರಲು ಕಷ್ಟ ಪಡ್ತಿರೋರಿಗೆ ನಾವು ಸಹಕರಿಸೋಣ – ಗುಣಮುಖವಾಗಿ ಕಣ್ಣೀರಿಟ್ಟ

ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ಗುಣಮುಖರಾಗಿದ್ದು ಪೊಲೀಸರು, ವೈದ್ಯರು, ನರ್ಸ್‍ಗಳಿಗೆ ನಾವು ಸಹಕರಿಸಬೇಕು ಎಂದು ಕಣ್ಣೀರಿಡುತ್ತಾ ಮನಮುಟ್ಟುವಂತೆ ಜನರಿಗೆ ಸಂದೇಶ ನೀಡಿದ್ದಾರೆ. ವಿಡಿಯೋವೊಂದರ ಮೂಲಕ ಇಡೀ ಸಮಾಜಕ್ಕೆ ಸಂದೇಶವನ್ನು ನೀಡಿದ್ದಾರೆ. ಕಳೆದ 3 ದಿನದ ಹಿಂದೆ ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಸೋಂಕಿತ ವ್ಯಕ್ತಿ ಪೊಲೀಸರು, ವೈದ್ಯರು, ನರ್ಸ್‍ಗಳ ಕಾರ್ಯದ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು. ನರಕದಿಂದ ನಮ್ಮನ್ನು ಹೊರ ಕರೆತರಲು ಅವರು ಬಹಳ ಕಷ್ಟಪಡುತ್ತಿದ್ದಾರೆ. ಈ …

Read More »

ತಪ್ಪಿತಸ್ಥರ ಆಸ್ತಿ ಮುಟ್ಟುಗೋಲು – ರಾಜ್ಯದಲ್ಲಿ ಬರಲಿದೆ ಕಠಿಣ ಕಾನೂನು ಕ್ರಮ

ಬೆಂಗಳೂರು: ಪೊಲೀಸರು, ಆರೋಗ್ಯ ಇಲಾಖೆ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಅದರಲ್ಲೂ ಕೇರಳ ಮತ್ತು ಉತ್ತರಪ್ರದೇಶ ರಾಜ್ಯಗಳ ಮಾದರಿಯಲ್ಲಿ ಕಾನೂನು ಕ್ರಮಕೈಗೊಳ್ಳಲು ರಾಜ್ಯ ಸರ್ಕಾರ ಚಿಂತನೆ ಮಾಡಿದ್ದು, ಶೀಘ್ರವೇ ಸುಗ್ರೀವಾಜ್ಞೆ ಹೊರಡಿಸುವ ಸಾಧ್ಯತೆಯಿದೆ. ಸರ್ಕಾರದ ತರಲಿರುವ ಹೊಸ ಕಾನೂನಿನಲ್ಲಿ ಏನೇನು ಇರಲಿದೆ? * ಯುಪಿ ಹಾಗೂ ಕೇರಳ ರಾಜ್ಯಗಳ ಸುಗ್ರೀವಾಜ್ಞೆಯಲ್ಲಿನ ಉಪಯುಕ್ತ ಅಂಶಗಳು ರಾಜ್ಯದ ಕಾನೂನಿನಲ್ಲಿ ತರಲಾಗುತ್ತಿದೆ. * ಸರ್ಕಾರದ ಸಿಬ್ಬಂದಿ …

Read More »