ಮುಂಬೈ: 14ನೇ ಮಹಡಿಯಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ದಿಶಾ ಸಲಿಯನ್ ಸಾವನ್ನಪ್ಪಿದ ಯುವತಿ. ಬಾಲಿವುಡ್ ಸೆಲೆಬ್ರಿಟಿಗಳಾದ ಸುಶಾಂತ್ ಸಿಂಗ್ ರಜಪೂತ್, ಭಾರತಿ, ವರುಣ್ ಶರ್ಮಾ ಸೇರಿದಂತೆ ಹಲವರ ಮ್ಯಾನೇಜರ್ ಆಗಿ ದಿಶಾ ಕೆಲಸ ಮಾಡಿಕೊಂಡಿದ್ದರು. ಸೋಮವಾರ ರಾತ್ರಿ ಕಟ್ಟಡ ಮೇಲಿಂದ ಬಿದ್ದಿರೋ ದಿಶಾರನ್ನು ಕೂಡಲೇ ಸ್ಥಳೀಯರು ಬೋರಿವಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ವೈದ್ಯರು ದಿಶಾ ಸಾವನ್ನಪ್ಪಿರೋದನ್ನ ಖಚಿತ ಪಡಿಸಿದ್ದಾರೆ. ದಿಶಾ ತನ್ನ ಗೆಳೆಯನ ಜೊತೆ ಫ್ಲ್ಯಾಟ್ …
Read More »ಜ್ಯೋತಿರಾದಿತ್ಯ ಸಿಂಧಿಯಾ, ತಾಯಿ ಮಾಧವಿ ರಾಜೇಗೆ ಕೊರೊನಾ ಸೋಂಕು…….
ಭೋಪಾಲ್: ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅವರ ತಾಯಿ ಮಾಧವಿ ರಾಜೇ ಅವರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಇನ್ನು ಸಿಂಧಿಯಾರ ಪತ್ನಿ, ಮಗ ಮತ್ತು ಮಗಳ ವರದಿ ನೆಗೆಟಿವ್ ಬಂದಿದೆ. ಕೊರೊನಾ ಸೋಂಕು ದೃಢಪಡುತ್ತಿದ್ದಂತೆ ಸಿಂಧಿಯಾ ತಮ್ಮ ತಾಯಿಯ ಜೊತೆ ದೆಹಲಿಯ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಐದು ದಿನಗಳ ಹಿಂದೆ ಗ್ವಾಲಿಯರ್ ನಲ್ಲಿ ಸಿಂಧಿಯಾ, ತಾಯಿ ಮಾಧವಿ ರಾಜೇ, ಪತ್ನಿ ಪ್ರಿಯದರ್ಶಿನಿ, ಮಗಳು ಅನನ್ಯಾ …
Read More »10ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ಇಲ್ಲದೇ ಮುಂದಿನ ತರಗತಿಗಳಿಗೆ ತೇರ್ಗಡೆ
ಹೈದರಾಬಾದ್: ದೇಶಾದ್ಯಂತ ಕೊರೊನಾ ವೈರಸ್ ಅಬ್ಬರ ಜೋರಾಗಿದ್ದು, ಇದರ ಮಧ್ಯೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್ ನೀಡಿದ್ದಾರೆ. ರಾಜ್ಯದಲ್ಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ಇಲ್ಲದೇ ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡಲು ನಿರ್ಧರಿಸಿದ್ದಾಗಿ ಇಲ್ಲಿನ ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಸದ್ಯದ ಸ್ಥಿತಿಯಲ್ಲಿ ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಈ ನಿರ್ಧಾರ ಕೈಗೊಂಡಿದ್ದಾಗಿ ತಿಳಿಸಿದ್ದಾರೆ. ಇನ್ನು ರಾಜ್ಯದಲ್ಲಿ ಸಿನಿಮಾ, …
Read More »ಬಹುಭಾಷಾ ನಟ ಮುರಳಿ ಶರ್ಮಾಗೆ ಮಾತೃ ವಿಯೋಗ………….
ಮುಂಬೈ: ತೆಲುಗು, ತಮಿಳು, ಹಿಂದಿ ಮತ್ತು ಮರಾಠಿ ಭಾಷೆಗಳಲ್ಲಿ ನಟಿಸಿ ಖ್ಯಾತಿ ಪಡೆದಿರುವ ನಟ ಮುರಳಿ ಶರ್ಮಾ ಅವರ ತಾಯಿ ಸೋಮವಾರ ನಿಧನರಾಗಿದ್ದಾರೆ. ಪದ್ಮಾ ಶರ್ಮಾ (76) ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಮುರಳಿ ಶರ್ಮಾ ತಾಯಿ ಮುಂಬೈನಲ್ಲಿ ನೆಲೆಸಿದ್ದು, ಅವರ ಸ್ವ-ಗೃಹದಲ್ಲೇ ಕೊನೆಯುಸಿರೆಳೆದರು. ಕಳೆದ ವರ್ಷ ಮುರಳಿ ಅವರ ತಂದೆ ವೃಜ್ಭೂಷಣ್ ಶರ್ಮಾ ನಿಧನರಾಗಿದ್ದರು. ಈಗ ತಾಯಿಯೂ ಕೂಡ ವಿಧಿವಶರಾಗಿದ್ದಾರೆ. ಟಾಲಿವುಡ್ ಮತ್ತು ಬಾಲಿವುಡ್ನಲ್ಲಿ ತಮ್ಮ ವಿಭಿನ್ನ ಅಭಿನಯದ ಮೂಲಕವೇ ಚಿತ್ರರಂಗದಲ್ಲಿ …
Read More »ವಲಸೆ ಕಾಮಿರ್ಕರಿಗೆ ನೆರವಾದ ಸೋನ್ ಸೂದ ಬಿಜೆಪಿಯ ಕೈಗೊಂಬೆ – ಶಿವಸೇನೆ
ಮುಂಬೈ: ಮಹಾರಾಷ್ಟ್ರದಲ್ಲಿ ವಲಸೆ ಕಾಮಿರ್ಕರಿಗೆ ನೆರವಾದ ಸೋನ್ ಸೂದ್ ಅವರನ್ನು ಶಿವಸೇನೆ ವ್ಯಂಗ್ಯವಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ. ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಕೊರೊನಾ ವೈರಸ್ ಲಾಕ್ಡೌನ್ ಸಮಯದಲ್ಲಿ ಹೊಸ ಮಹಾತ್ಮನ ಜನ್ಮವಾಗಿದೆ ಎಂದು ಬರೆದುಕೊಂಡಿದ್ದಾರೆ. ಸೋನ್ ಸೂದ್ ಲಕ್ಷಾಂತರ ವಲಸಿಗರನ್ನು ಕಳುಹಿಸಿಕೊಟ್ಟಿದ್ದಾರೆ ಎಂದು ವರದಿಯಾಗುತ್ತಿದೆ. ಮಹಾರಾಷ್ಟ್ರ ರಾಜ್ಯಪಾಲರು ಸೋನ್ ಸೂದ್ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ. ಇದನ್ನು ಗಮನಿಸಿದರೆ ರಾಜ್ಯ ಸರ್ಕಾರ ಮತ್ತು ಕೇಂದ್ರ …
Read More »ಸರ್ಕಾರಿ ಅಧಿಕಾರಿಗೆ ಚಪ್ಪಲಿಯಿಂದ ಹೊಡೆದ ಬಿಜೆಪಿ ನಾಯಕಿ:
ಚಂಡೀಗಢ: ಬಿಜೆಪಿ ಮುಖಂಡೆ, ಟಿಕ್ಟಾಕ್ ಸ್ಟಾರ್ ಸೋನಾಲಿ ಫೋಗಟ್ ಅವರು ಸರ್ಕಾರಿ ಅಧಿಕಾರಿಯೊಬ್ಬರಿಗೆ ಚಪ್ಪಲಿಯಿಂದ ಹೊಡೆದಿರುವ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಫೋಗಟ್ ಶುಕ್ರವಾರ ಹಿಸಾರ್ ನ ಬಾಲ್ಸಮಂದ್ ಮಂಡಿಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಹಿಸಾರ್ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಸುಲ್ತಾನ್ ಸಿಂಗ್ರನ್ನು ಫೋಗಟ್ ಥಳಿಸಿದ್ದಾರೆ. ಕೆಲವು ರೈತರು ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳನ್ನು ಖರೀದಿಸುವ ವಿಚಾರದಲ್ಲಿ ಸಮಸ್ಯೆಗಳಿವೆ ಎಂದು ದೂರಿದ್ದಾರೆ. ಈ ಹಿನ್ನೆಲೆಯಲ್ಲಿ ಫೋಗಟ್ ಮಂಡಿಯ …
Read More »ಮಾಸ್ಕ್ ವಿಚಾರಕ್ಕೆ ವಾಗ್ವಾದ ನಡೆದು ಪೊಲೀಸರ ಮೇಲೆ ಹಲ್ಲೆ…….
ಜೈಪುರ್: ಮಾಸ್ಕ್ ವಿಚಾರಕ್ಕೆ ವಾಗ್ವಾದ ನಡೆದು ವ್ಯಕ್ತಿಯೊಬ್ಬ ಪೊಲೀಸರ ಮೇಲೆ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಜೋಧ್ಪುರದಲ್ಲಿ ನಡೆದಿದೆ. ಜೋಧ್ಪುರದ ಬಾಲ್ದೇವ್ ನಗರ ನಿವಾಸಿ ಮುಖೇಶ್ ಕುಮಾರ್ ಪ್ರಜಾಪತ್ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿ. ಗುರುವಾರ ಮಧ್ಯಾಹ್ನ ಘಟನೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಮುಖೇಶ್ ಕುಮಾರ್ ಮಾಸ್ಕ್ ಧರಿಸದೆ ಸಾರ್ವಜನಿಕ ಪ್ರದೇಶದಲ್ಲಿ ಕುಳಿತ್ತಿದ್ದ. ಆತನನ್ನು ಗಮನಿಸಿದ ಪೊಲೀಸರು ಮಾಸ್ಕ್ ಧರಿಸು ಹಾಗೂ ದಂಡ ಪಾವತಿಸು …
Read More »ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ಗೆ ಕೊರೊನಾ ಪಾಸಿಟಿವ್..!
ನವದೆಹಲಿ, ಜೂ.4- ಭಾರತದ ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ಗೆ ಮಹಾಮಾರಿ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ ನಾಲ್ಕು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಅವರು ಹೋಂ ಕ್ವಾರಂಟೈನ್ನಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಅಜಯ್ ಕುಮಾರ್ ವರದಿ ನೆಗೆಟಿವ್ ಬರುವವರೆಗೆ ಹೋಂ ಕ್ವಾರಂಟೈನ್ನಲ್ಲಿ ಇರಲಿದ್ದಾರೆ ಎಂದು ಅವರ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. ಆದರೆ ಇದರ ಬಗ್ಗೆ ಮಾಹಿತಿ ನೀಡಿಲು ಕೇಂದ್ರ …
Read More »ಶುಕ್ರವಾರ ಸಂಭವಿಸಲಿದೆ ಚಂದ್ರ ಗ್ರಹಣ – ವರ್ಷದ 2ನೇ ಚಂದ್ರಗ್ರಹಣ ಹೇಗಿರಲಿದೆ?
ಬೆಂಗಳೂರು: ಶುಕ್ರವಾರ ಚಂದ್ರಗ್ರಹಣ ಸಂಭವಿಸಲಿದೆ. ಈ ಬಾರಿಯ ಚಂದ್ರಗ್ರಹಣವೂ ಸಂಪೂರ್ಣವಾಗಿ ಭಿನ್ನವಾಗಿರಲಿದ್ದು, ಚಂದ್ರನ ಆಕಾರದಲ್ಲಿ ಯಾವುದೇ ಬದಲಾವಣೆ ಇರಲ್ಲ. ಗ್ರಹಣದ ಸಮಯದಲ್ಲಿ ಚಂದ್ರನು ಅರ್ಧಾಕಾರದಲ್ಲಿ ಕಾಣದೇ ತನ್ನ ಪೂರ್ಣ ಗಾತ್ರದಲ್ಲೇ ಚಲಿಸಲಿದ್ದಾನೆ. ಈ ಚಂದ್ರಗ್ರಹಣವೂ ಕೂಡ ಪೂರ್ಣ ಅಥವಾ ಭಾಗಶಃ ಚಂದ್ರಗ್ರಹಣವಲ್ಲ. ಇದು ಆರಂಭದ ಎರಡು ಗ್ರಹಣಗಳಂತೆ ನೆರಳು ಚಂದ್ರಗ್ರಹಣವಾಗಿರುತ್ತದೆ. ಆದ್ದರಿಂದ ಈ ಗ್ರಹಣವು ಭಾರತದಲ್ಲಿ ಹೆಚ್ಚು ಪರಿಣಾಮ ಬೀರುವುದಿಲ್ಲ. ಈ ಗ್ರಹಣ ಅಷ್ಟೊಂದು ಪ್ರಭಾವಶಾಲಿಯಾಗಿಲ್ಲ ಎಂದು ನಂಬಲಾಗುತ್ತಿದ್ದು, ದೇಗುಲ …
Read More »ಆನ್ಲೈನ್ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ
ತಿರುವನಂತಪುರಂ: ಕೊರೊನಾ ಲಾಕ್ಡೌನ್ ಹಿನ್ನೆಲೆಯಿಂದ ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಟ್ಟಿವೆ. ಹೀಗಾಗಿ ಆನ್ಲೈನ್ ಮೂಲಕ ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುತ್ತಿದೆ. ಆದರೆ ಆನ್ಲೈನ್ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ವಾಲಂಚೇರಿ ಪಟ್ಟಣದ ನಿವಾಸಿ 14 ವರ್ಷದ ಹುಡುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಮೃತ ವಿದ್ಯಾರ್ಥಿನಿ ಕುಟುಂಬದವರು ಬಡವರಾಗಿದ್ದು, ಯಾವುದೇ ಟಿವಿ ಅಥವಾ ಸ್ಮಾರ್ಟ್ ಫೋನ್ …
Read More »
Laxmi News 24×7