ಲಕ್ನೋ: ಕೊರೊನಾ ಲಾಕ್ಡೌನ್ ಪರಿಣಾಮ ಸಾವಿರಾರು ಕಾರ್ಮಿಕರು ನಡೆದುಕೊಂಡು, ಸೈಕಲ್ ಮೂಲಕ ತಮ್ಮ ತಮ್ಮ ಗ್ರಾಮಗಳಿಗೆ ಮರಳುತ್ತಿದ್ದಾರೆ. ಇದೇ ರೀತಿ ಕಾರ್ಮಿಕನೊಬ್ಬ ಸೈಕಲ್ ಮೂಲಕ ತನ್ನೂರಿಕೆ ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ಸಘೀರ್ ಅನ್ಸಾರಿ (26). ದೆಹಲಿಯಿಂದ ಬಿಹಾರದ ತನ್ನ ಚಂಪಾರನ್ ಗ್ರಾಮಕ್ಕೆ ಅನ್ಸಾರಿ ಹೋಗುತ್ತಿದ್ದರು. ಆದರೆ ಲಕ್ನೋದಲ್ಲಿ ತಿಂಡಿ ಮಾಡುತ್ತಿದ್ದಾಗ ಕಾರು ಬಂದು ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಅನ್ಸಾರಿಗೆ ಮದುವೆಯಾಗಿ ಮೂವರು ಮಕ್ಕಳಿದ್ದಾರೆ. ಏನಿದು ಪ್ರಕರಣ? ಕೊರೊನಾ …
Read More »ಹಳಿ ಮೇಲೆ ಮಲಗಿದ್ದ 14 ಮಂದಿ ಕೂಲಿ ಕಾರ್ಮಿಕರ ಮೇಲೆ ಹರಿದ ರೈಲು,ಅಪ್ಪಚ್ಚಿಯಾದ ಮಕ್ಕಳು, ಮಹಿಳೆಯರ ಮೃತ ದೇಹಗಳು
ಮುಂಬೈ: ಹಳಿ ಮೇಲೆ ಮಲಗಿದ್ದ 14 ಮಂದಿ ಕೂಲಿ ಕಾರ್ಮಿಕರ ಮೇಲೆ ರೈಲು ಹರಿದ ದಾರುಣ ಘಟನೆ ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಕ್ಕಳು, ಮಹಿಳೆಯರು ಸೇರಿದಂತೆ 15 ಜನ ವಲಸೆ ಕಾರ್ಮಿಕರು ಔರಂಗಾಬಾದ್-ಜಲ್ನಾ ರೈಲ್ವೆ ಟ್ರ್ಯಾಕ್ ಮೇಲೆ ಮಲಗಿದ್ದರು. ನಸುಕಿನ ಜಾವ 4 ಗಂಟೆಗೆ ಬಂದ ಗೂಡ್ಸ್ ರೈಲು ಕಾರ್ಮಿಕರ ಮೇಲೆ ಹರಿದಿದೆ. ಪರಿಣಾಮ ಮಕ್ಕಳು, ಕಾರ್ಮಿಕರ ದೇಹ ತುಂಡು ತುಂಡಾಗಿ ಟ್ರ್ಯಾಕ್ ಮೇಲೆ, ಕೆಳಗೆ ಬಿದ್ದಿವೆ.ಕರ್ಮದ್ …
Read More »ರಸ್ತೆ ಬದಿಯ ವೈನ್ ಸ್ಟೋರ್ ನಿಂದ ನಟಿ ರಾಕುಲ್ ಪ್ರೀತ್ ಸಿಂಗ್ ಮದ್ಯ ಖರೀದಿ
ಮುಂಬೈ: ಲಾಕ್ಡೌನ್ನಲ್ಲಿ ಎಣ್ಣೆ ಸಿಗದೆ ಮದ್ಯಪ್ರಿಯರು ಪರದಾಡಿದ್ದರು. ಆದರೆ ಈಗ ಮದ್ಯದಂಗಡಿ ತೆರೆದಿರುವ ಹಿನ್ನೆಲೆ ಕ್ಯೂನಲ್ಲಿ ನಿಂತು ಮದ್ಯಪ್ರಿಯರು ಎಣ್ಣೆ ಖರೀದಿಸುವಲ್ಲಿ ಬ್ಯೂಸಿ ಆಗಿದ್ದಾರೆ. ಮದ್ಯ ಖರೀದಿಗೆ ಪುರುಷರು, ಮಹಿಳೆಯರು, ಯುವಕ-ಯುವತಿಯರು ಕ್ಯೂನಲ್ಲಿನಿಂತ ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಮಧ್ಯೆ ರಸ್ತೆ ಬದಿಯ ವೈನ್ ಸ್ಟೋರ್ ನಿಂದ ನಟಿ ರಾಕುಲ್ ಪ್ರೀತ್ ಸಿಂಗ್ ಮದ್ಯ ಖರೀದಿಸಿ ಹೋಗುತ್ತಿದ್ದಾರೆ ಎನ್ನಲಾದ ವಿಡಿಯೋವೊಂದು ಕೂಡ ವೈರಲ್ ಆಗಿದೆ. ಮದ್ಯ ಮಾರಾಟಕ್ಕೆ …
Read More »ವಿಶಾಖಪಟ್ಟಣಂ ವಿಷಾನಿಲ ದುರಂತದ ಬೆನ್ನಲ್ಲೇ ಛತ್ತೀಸಗಢದಲ್ಲೂ ಗ್ಯಾಸ್ ಲೀಕ್
ರಾಯಗಢ: ವಿಶಾಖಪಟ್ಟಣಂನಲ್ಲಿ ವಿಷಾನಿಲ ಸೋರಿಕೆಯಾಗಿ 11 ಮಂದಿ ಸಾವನ್ನಪ್ಪಿ, ಸಾವಿರಾರು ಮಂದಿ ಅಸ್ವಸ್ಥಗೊಂಡ ಬೆನ್ನಲ್ಲೇ ಇದೀಗ ಛತ್ತೀಸಗಢದಲ್ಲೂ ಗ್ಯಾಸ್ ಲೀಕ್ ಆಗಿ 7 ಮಂದಿ ಅಸ್ವಸ್ಥಗೊಂಡಿರುವ ದುರ್ಘಟನೆ ನಡೆದಿದೆ. ಛತ್ತೀಸಗಢದ ರಾಯಗಢ ಜಿಲ್ಲೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಪೇಪರ್ ಮಿಲ್ ಅನ್ನು ಶುದ್ಧಿಕರಿಸುತ್ತಿದ್ದ ವೇಳೆ ವಿಷಾನಿಲ ಸೋರಿಕೆಯಾಗಿ ಏಳು ಮಂದಿ ಕಾರ್ಮಿಕರು ತೀವ್ರವಾಗಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡವರ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯ ಬಗ್ಗೆ …
Read More »ಪೊಲೀಸ್ ಠಾಣೆಯಲ್ಲಿ ಸೀಜ್ ಮಾಡಿಟ್ಟಿದ್ದ ಎಣ್ಣೆಯನ್ನೇ ಕದ್ದ ಪೇದೆ…….
ಹೈದರಾಬಾದ್: ಲಾಕ್ಡೌನ್ ಅವಧಿಯಲ್ಲಿ ಮದ್ಯದಂಗಡಿಗಳಿಂದ ಸೀಜ್ ಮಾಡಿ ಪೊಲೀಸ್ ಠಾಣೆಯಲ್ಲಿ ಇಟ್ಟಿದ್ದ ಮದ್ಯವನ್ನ ಪೊಲೀಸ್ ಪೇದೆಯೇ ಕದ್ದು ಸಿಕ್ಕಿಬಿದ್ದ ಘಟನೆ ತೆಲಂಗಾಣದ ಕರೀಮ್ನಗರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕರೀಮ್ನಗರ ಜಿಲ್ಲೆಯ ಇರಡು ಟೌನ್ ಪೊಲೀಸ್ ಠಾಣೆಯಲ್ಲಿ ಮದ್ಯವನ್ನು ಸೀಜ್ ಮಾಡಿ ಇಡಲಾಗಿತ್ತು. ಲಾಕ್ಡೌನ್ ಅವಧಿಯಲ್ಲಿ ನಿಯಮ ಉಲ್ಲಂಘಿಸಿ ಮದ್ಯ ಮಾರಾಟ ಮಾಡುತ್ತಿದ್ದ ಕಾರಣಕ್ಕೆ ಹಲವು ಮದ್ಯದಂಗಡಿಗಳನ್ನು ಸೀಜ್ ಮಾಡಿ, ಅಂಗಡಿಯಲ್ಲಿದ್ದ ಮದ್ಯವನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಯಲ್ಲಿ ಇರಿಸಲಾಗಿತ್ತು. ಆದರೆ …
Read More »ಅಮ್ಮಾ ಎದ್ದೇಳು ಎಂದು ಕಣ್ಣೀರಿಟ್ಟ ಮಗಳು- ಅಪ್ಪನ ಮಡಿಲಲ್ಲಿ ಕಂದನ ಸಾವು-ಬದುಕಿನ ಹೋರಾಟ
ವಿಶಾಖಪಟ್ಟಣಂ: ‘ಅಮ್ಮಾ ಎದ್ದೇಳು, ಅಮ್ಮಾ ಎದ್ದೇಳು’… ‘ಪಾಪು ನಿನಗೇನೂ ಆಗಲ್ಲ, ಕಣ್ಣು ಬೀಡೋ, ಎದ್ದೇಳೋ’ ಎಂದು ನೂರಾರು ಮಕ್ಕಳು-ಪೋಷಕರು ಕಣ್ಣೀರಿಟ್ಟರು. ಅಮ್ಮನನ್ನ ಹಿಡಿದು ಮಗಳು ಗೋಳೋ ಅಂತ ಅತ್ತಳು. ಅಂಗೈಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಕಂದಮ್ಮನ ಸ್ಥಿತಿ ಕಂಡು ಅಪ್ಪ ಅಸಹಾಯಕರಂತೆ ಚಡಪಡಿಸಿದ ಮನಕಲುಕುವ ದೃಶ್ಯಗಳು ವಿಶಾಖಪಟ್ಟಣಂನಲ್ಲಿ ಕಂಡು ಬಂದವು. ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಕಾರ್ಖಾನೆಯಿಂದ ಗುರುವಾರ ನಸುಕಿನ ಜಾವ ಅನಿಲ ಸೋರಿಕೆಯಾಗಿದೆ. ಎಲ್ಜಿ ಪಾಲಿಮರ್ಸ್ ಇಂಡಸ್ಟ್ರಿಯ ಸ್ಥಾವರದಲ್ಲಿ 2:30 ಗಂಟೆಗೆ …
Read More »ಲಾಕ್ಡೌನ್ ಬಳಿಕ ತೆರೆದ ಕಾರ್ಖಾನೆಯಲ್ಲಿ ಗ್ಯಾಸ್ ಸೋರಿಕೆ- ಸಾವಿನ ಸಂಖ್ಯೆ 8ಕ್ಕೆ ಏರಿಕೆ
ಹೈದರಾಬಾದ್: ಆಂಧ್ರ ಪ್ರದೇಶದ ವಿಶಾಖಪಟ್ಟಣದ ಬಹುರಾಷ್ಟ್ರೀಯ ಸಂಸ್ಥೆಯ ರಾಸಾಯನಿಕ ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆಯಾದ ಪರಿಣಾಮ ಮಗು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ 200ಕ್ಕೂ ಅಧಿಕ ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ ಜಿಲ್ಲೆಯ ಆರ್.ಆರ್.ವೆಂಕಟಪುರಂನ ಎಲ್.ಜಿ. ಪಾಲಿಮರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ರಾಸಾಯನಿಕ ಅನಿಲ ಕಾಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿದ್ದು, ಗಾಳಿಯಲ್ಲಿ ವಿಷಾನಿಲ ಸುತ್ತಮುತ್ತಲಿನ ಪ್ರದೇಶಗಳಿಗೆ ಹರಡಿದೆ. ಪರಿಣಾಮ ಬೆಳಗ್ಗೆ ವಾಕಿಂಗ್ ಮತ್ತು ಇತರೆ ಕೆಲಸಗಳಿಗೆ ಬಂದಿದ್ದ ಜನರು ವಿಷಾನಿಲ …
Read More »ಒಂದೇ ಕುಟುಂಬದ ಮೂವರು ಮಕ್ಕಳು ಕೆರೆಯಲ್ಲಿ ಮುಳುಗಿ ಸಾವು
ಕಾಸರಗೋಡು: ದುರಂತವೊಂದರಲ್ಲಿದರಲ್ಲಿ , ಒಂದೇ ಕುಟುಂಬದ ಮೂವರು ಮಕ್ಕಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಾಸರಗೋಡು ಜಿಲ್ಲೆ ಕನ್ನಂಗಾಡಿನ ಕಲ್ಲುರಾವಿಯಲ್ಲಿ ನಡೆದಿದೆ. ಮೃತರನ್ನು ನೂರುದ್ದೀನ್ ಅವರ ಮಗ ಬಶೀರ್ (4), ನಾಸಿರ್ ಅವರ ಪುತ್ರ ಅಜ್ನಾಸ್ (5) ಮತ್ತು ಸಮೀರ್ ಅವರ ಪುತ್ರ ನಿಷಾದ್ (6) ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಮಕ್ಕಳು ಆಟವಾಡಲು ಕೆರೆಗೆ ಇಳಿದಿದ್ದಾರೆ. ಮನೆ ಸಮೀಪ ಆಟವಾಡುತ್ತಿದ್ದ ಮಕ್ಕಳು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ ಎಂದು ಪೋಷಕರು ತಿಳಿಸಿದ್ದಾರೆ. …
Read More »ಇರೋಕೆ ಊಟ ಇಲ್ಲ, ಹೋಗೋಕೆ ಕಾಸಿಲ್ಲ : ಅಡಕತ್ತರಿಯಲ್ಲಿ ಅಂತರ ರಾಜ್ಯ ಕಾರ್ಮಿಕರ ಭವಿಷ್ಯ..!
ಬೆಂಗಳೂರು : ಅಂತರ ರಾಜ್ಯ ವಲಸಿಗರ ಸ್ಥಳಾಂತರಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಅಸ್ತು ಎಂದಿದೆ. ರಾಜ್ಯದಲ್ಲೂ ಅನ್ಯ ರಾಜ್ಯದ ಸಾವಿರಾರು ವಲಸಿಗರು ಸಿಲುಕಿಕೊಂಡಿದ್ದು, ತಮ್ಮ ಊರುಗಳಿಗೆ ಹೋಗಲು ಹಾತೊರೆಯುತ್ತಿದ್ದಾರೆ. ಆದರೆ, ಹಲವು ವಲಸಿಗರಿಗೆ ತಮ್ಮ ತವರು ರಾಜ್ಯಕ್ಕೆ ಹೋಗುವ ರಹದಾರಿ ಕಠಿಣವಾಗಿದೆ. ಕೊರೊನಾ ಲಾಕ್ಡೌನ್ನಿಂದ ವಲಸಿಗರು ಅತಂತ್ರ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಒಂದು ಕಡೆ ಕೆಲಸ ಇಲ್ಲ, ಇನ್ನೊಂದೆಡೆ ವಸತಿ, ಆಹಾರ ಇಲ್ಲದೇ ಸಾಕಷ್ಟು ಸಂಕಷ್ಟಕ್ಕೊಳಗಾಗಿದ್ದಾರೆ. ಆಯಾ ರಾಜ್ಯ ಸರ್ಕಾರ ವಲಸಿಗರಿಗೆ …
Read More »ಹಾರಾಷ್ಟ್ರ, ಗುಜರಾತ್ ಮತ್ತು ಮಧ್ಯಪ್ರದೇಶದ ದೇಶದ ಅತ್ಯಂತ ಅಪಾಯಕಾರಿ ಹಾಟ್ಸ್ಪಾಟ್
ಮುಂಬೈ/ಅಹಮದಾಬಾದ್/ಭೋಪಾಲ್, ಏ.30- ಭಾರತದಲ್ಲಿ ಕೊರೊನಾ ರಣಕೇಕೆ ಮುಂದುವರಿದಿದ್ದು, ಮಹಾರಾಷ್ಟ್ರ, ಗುಜರಾತ್ ಮತ್ತು ಮಧ್ಯಪ್ರದೇಶದ ದೇಶದ ಅತ್ಯಂತ ಅಪಾಯಕಾರಿ ಹಾಟ್ಸ್ಪಾಟ್ಗಳಾಗಿರುವುದು ಕಳವಳಕಾರಿಯಾಗಿದೆ. ದೇಶದ ಮೊದಲ ಮೂರು ಡೇಂಜರ್ ಸ್ಟೇಟ್ ಎಂದೇ ಪರಿಗಣಿಸಲ್ಪಟ್ಟಿರುವ ಮಹಾರಾಷ್ಟ್ರ, ಗುಜರಾತ್ ಮತ್ತು ಮಧ್ಯಪ್ರದೇಶದಲ್ಲಿ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಅತಿ ಹೆಚ್ಚು ಪ್ರಮಾಣದಲ್ಲಿ ಸಾವು ಮತ್ತು ಸೋಂಕು ಪ್ರಕರಣಗಳು ದಿನ ನಿತ್ಯ ವರದಿಯಾಗುತ್ತಲೇ ಇವೆ. ಕಳೆದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ಸಂಭವಿಸಿದೆ ಒಟ್ಟು 67 ಸಾವು ಪ್ರಕರಣಗಳಲ್ಲಿ. …
Read More »
Laxmi News 24×7