Breaking News

ರಾಷ್ಟ್ರೀಯ

ಔಷಧಿ ಆಮದು: ಕೊರೋನಾ ಬಳಿಕ ಭಾರತದಿಂದ ಚೀನಾಗೆ ತೆರಳಿದ ಮೊದಲ ವಿಮಾನ ಸ್ಪೇಸ್ ಜೆಟ್!

ನವದೆಹಲಿ(ಏ.15): ಭಾರತದಲ್ಲಿ ಕೊರೋನಾ ವೈರಸ್​ ಆರ್ಭಟ ಮುಂದುವರಿದಿದೆ. ಈ ಮಾರಕ ಕೋವಿಡ್​​​-19 ತಡೆಗೆ ಭಾರತ ಸರ್ಕಾರವೂ ಭಾರೀ ಕಸರತ್ತು ನಡೆಸುತ್ತಿದೆ. ಹಾಗಾಗಿಯೇ ಇಂದು ಚೀನಾದಿಂದ ಔಷಧಿ ಆಮದು ಮಾಡಿಕೊಳ್ಳಲು ಭಾರತದಿಂದ ಸ್ಪೇಸ್​​ ಜೆಟ್​​ ವಿಮಾನ ಪ್ರಯಾಣ ಬೆಳೆಸಿದೆ. ಕೊರೋನಾ ನಂತರ ಭಾರತದ ಕೋಲ್ಕತ್ತಾದ ಮೂಲಕ ಚೀನಾದ ಶಾಂಘೈಗೆ ತೆರಳಿದ ಮೊದಲ ವಿಮಾನ ಇದಾಗಿದೆ. ಇಂದು ಬೆಳಿಗ್ಗೆ 8 ಗಂಟೆಗೆ ಕೋಲ್ಕತ್ತಾದಿಂದ ತೆರಳಿದ ವಿಮಾನ ಮಧ್ಯಾಹ್ನ 3 ಗಂಟೆ ಚೀನಾದ ಶಾಂಘೈಗೆ …

Read More »

ಕರ್ನಾಟಕದಿಂದ ದೆಹಲಿಯ ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ತೆರಳಿದವರು ಎಷ್ಟು?

ಬೆಂಗಳೂರು: ಕರ್ನಾಟಕದಿಂದ ದೆಹಲಿಯ ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ತೆರಳಿದವರು ಎಷ್ಟು? ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಶ್ನೆಗೆ ಸರ್ಕಾರದ ಬಳಿ ಈಗಲೂ ಸ್ಪಷ್ಟವಾದ ಉತ್ತರವಿಲ್ಲ. ಹೌದು, ತಬ್ಲಿಘಿ ಜಮಾತ್ ಧಾರ್ಮಿಕ ಸಭೆಗೆ ಕರ್ನಾಟಕದಿಂದ 1,300 ಮಂದಿ ಭಾಗಿಯಾಗಿದ್ದರು ಎಂದು ಸರ್ಕಾರ ಅಧಿಕೃತ ಮಾಹಿತಿಯನ್ನು ಕಳೆದ ಬುಧವಾರ ಬಿಡುಗಡೆಗೊಳಿತ್ತು. ಕರ್ನಾಟಕದಿಂದ 1,300 ಮಂದಿ ಜಮಾತ್ ಕಾರ್ಯಕ್ರಮಕ್ಕೆ ತೆರಳಿದ್ದು, 50 ಮಂದಿಗೆ ಪಾಸಿಟಿವ್ ಬಂದಿದೆ. ಬೆಂಗಳೂರಿನಲ್ಲಿ 269 ಮಂದಿ, ಇತರ …

Read More »

ಸುಳ್ಳು ಮಾಹಿತಿಗಳನ್ನೇ ನೀಡಿ ಪ್ರಪಂಚದೆಲ್ಲೆಡೆ ಕೊರೊನಾ ವೈರಸ್ ಹರಡಲು ಕಾರಣವಾದ ಚೀನಾ

ನ್ಯೂಯಾರ್ಕ್: ಸುಳ್ಳು ಮಾಹಿತಿಗಳನ್ನೇ ನೀಡಿ ಪ್ರಪಂಚದೆಲ್ಲೆಡೆ ಕೊರೊನಾ ವೈರಸ್ ಹರಡಲು ಕಾರಣವಾದ ಚೀನಾ ಆರಂಭದಲ್ಲೇ ಮಾಡಿದ ಮತ್ತೊಂದು ಎಡವಟ್ಟು ಈಗ ಬೆಳಕಿಗೆ ಬಂದಿದೆ. ಹೌದು. ವ್ಯಕ್ತಿಯಿಂದ ವ್ಯಕ್ತಿಗೆ ಈ ವೈರಸ್ ಹರಡುತ್ತಿದೆ ಎನ್ನುವುದು ತಿಳಿದಿದ್ದರೂ ಚೀನಾ 6 ದಿನಗಳ ಕಾಲ ಈ ವಿಚಾರವನ್ನು ಮುಚ್ಚಿಟ್ಟಿತ್ತು ಎಂಬುದಾಗಿ ಎಎಫ್‍ಪಿ ವರದಿ ಮಾಡಿದೆ. ಈ ಸಂಬಂಧ ಎಎಫ್‍ಪಿಗೆ ದಾಖಲೆಗಳು ಲಭ್ಯವಾಗಿದ್ದು, ವುಹಾನ್ ನಲ್ಲಿ ಸೋಂಕು ಮನುಷ್ಯನಿಂದ ಮನುಷ್ಯನಿಗೆ ಹರಡುತ್ತಿರುವ ವಿಚಾರ ಜ.14ರಂದೇ ಆರೋಗ್ಯ …

Read More »

ಅಕ್ರಮ ಮದ್ಯ ಮಾರಾಟ ಪರಿಶೀಲನೆ- ಬೀದಿಯಲ್ಲೇ ಬಡಿದಾಡಿಕೊಂಡ ಅಬಕಾರಿ ಪೊಲೀಸರು

ಮಡಿಕೇರಿ: ಅಕ್ರಮ ಮದ್ಯ ಮಾರಾಟ ಪರಿಶೀಲನೆ ಮಾಡಲು ಹೋಗಿದ್ದ ಅಬಕಾರಿ ಪೊಲೀಸರು ಅಶ್ಲೀಲ ಪದಗಳಿಂದ ಒಬ್ಬರನೊಬ್ಬರು ನಿಂದಿಸಿ, ನಡು ಬೀದಿಯಲ್ಲೇ ಬಡಿದಾಡಿಕೊಂಡಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ಅಬಕಾರಿ ಇನ್ಸ್ ಪೆಕ್ಟರ್ ನಟರಾಜ್ ಮತ್ತು ಉಪ ಅಧೀಕ್ಷಕ ಶಿವಪ್ಪ ನಡುಬೀದಿಯಲ್ಲೇ ಹೊಡೆದಾಡಿಕೊಂಡಿದ್ದಾರೆ. ಲಾಕ್‍ಡೌನ್ ಆಗಿರುವುದರಿಂದ ಎಲ್ಲಿಯೂ ಮದ್ಯ ಮಾರುವಂತಿಲ್ಲ. ಹೀಗಾಗಿ ಗ್ರಾಮೀಣ ಭಾಗದ ಜನರು ಕಳ್ಳಬಟ್ಟಿ, ಅಕ್ರಮ ಮದ್ಯ ಮಾರಾಟಕ್ಕೆ ಮುಂದಾಗಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿವೆ. ಹೀಗಾಗಿ ಉಪ ಅಧೀಕ್ಷಕ ಶಿವಪ್ಪ …

Read More »

ಗ್ಯಾಸ್ ಏಜೆನ್ಸಿ ಮಾಲೀಕ ಪೊಲೀಸರು, ಪೌರ ಕಾರ್ಮಿಕರಿಗೆ ಬಿರಿಯಾನಿ ಊಟ ನೀಡುತ್ತಿದ್ದಾರೆ

ಕೋಲಾರ: ಕೊರೊನಾ ಮಹಾಮಾರಿ ಆವರಿಸಿದ್ದರಿಂದ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದ್ದು, ಕಳೆದ 21 ದಿನಗಳಿಂದ ನಮ್ಮನ್ನು ಕಾಯುತ್ತಿರುವ ಕೊರೊನಾ ವಾರಿಯರ್ಸ್ ಪೊಲೀಸ್ ಸಿಬ್ಬಂದಿಗೆ ಕೋಲಾರದಲ್ಲಿ ಬಿರಿಯಾನಿ ವಿತರಣೆ ಮಾಡಲಾಯಿತು. ಕೋಲಾರದ ರೇವತಿ ಭಾರತ್ ಗ್ಯಾಸ್ ಏಜೆನ್ಸಿ ಮಾಲೀಕರಿಂದ ವಾರಕ್ಕೊಮ್ಮೆ ಬಿರಿಯಾನಿ ವಿತರಣೆ ಮಾಡಲಾಗುತ್ತಿದೆ. ಕೋಲಾರ ನಗರ ಹಾಗೂ ಬಂಗಾರಪೇಟೆ ಪಟ್ಟಣದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ನಗರಸಭೆ ಸಿಬ್ಬಂದಿಗೆ ಬಿರಿಯಾನಿ ವಿತರಣೆ ಮಾಡಲಾಯಿತು. ಕಳೆದ ಬುಧವಾರವೂ ಹೀಗೆ ಕರ್ತವ್ಯದಲ್ಲಿದ್ದ ನೂರಾರು ಪೊಲೀಸರಿಗೆ ಬಿರಿಯಾನಿ …

Read More »

ವಿಜಯಪುರದಲ್ಲಿ 686 ಜನರ ಮೇಲೆ ನಿಗಾ, 335ಕ್ಕೂ ಹೆಚ್ಚು ಜನ ಐಸೋಲೇಷನ್‍ಗೆ

ವಿಜಯಪುರ: ಜಿಲ್ಲೆಯಲ್ಲಿ ಇಲ್ಲಿಯವರೆಗೆ 686 ಜನರ ಮೇಲೆ ನಿಗಾ ವಹಿಸಲಾಗಿದ್ದು, 335ಕ್ಕೂ ಹೆಚ್ಚು ಜನರನ್ನು ಐಸೋಲೇಷನ್‍ ನಲ್ಲಿ ಇಡಲಾಗಿದೆ. ಒಟ್ಟು 362 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರಲ್ಲಿ 256 ಸ್ಯಾಂಪಲ್ ನೆಗೆಟಿವ್ ಬಂದಿವೆ, 10 ಪಾಸಿಟಿವ್ ಬಂದಿವೆ. ಅಲ್ಲದೆ ಇನ್ನೂ 96 ಪ್ರಕರಣಗಳ ಕುರಿತು ಫಲಿತಾಂಶ ಬರಬೇಕಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಇಂದು ಮತ್ತೆ 60 ಸ್ಯಾಂಪಲ್ ಕಲೆಕ್ಟ್ ಮಾಡಿ ಪರೀಕ್ಷೆಗೆ ಕಳುಹಿಸಲಾಗುವದು. ಇಂದಿನ ಮೂರು …

Read More »

ಮಂಗಳೂರು:ಎರಡು ಸಾವಿರಕ್ಕಾಗಿ ಮುಗಿಬಿದ್ದ ಜನ……….

ಮಂಗಳೂರು: ಎರಡು ಸಾವಿರ ರೂಪಾಯಿ ಸಿಗುತ್ತದೆ ಎಂದು ಸಾಮಾಜಿಕ ಅಂತರವನ್ನೂ ಮರೆತು ಜನ ಮುಗಿಬಿದ್ದಿದ್ದು, ನೂಕುನುಗ್ಗಲು ಸಂಭವಿಸಿದೆ. ಮಂಗಳೂರು ನಗರದ ಕೂಳೂರಿನಲ್ಲಿ ಘಟನೆ ನಡೆದಿದ್ದು, ಶ್ರೀ ದೇವಿ ಪ್ರಸಾದ್ ಖಾಸಗಿ ಕಟ್ಟಡದಲ್ಲಿ ಕೂಲಿ ಕಾರ್ಮಿಕರ ಮಾಹಿತಿ ಪಡೆದು ಹಣ ಅಕೌಂಟ್‍ಗೆ ಹಾಕಲಾಗುತ್ತದೆ ಎಂದು ಸುಳ್ಳು ಮಾಹಿತಿ ನೀಡಿದ್ದಾರೆ. ಇದನ್ನು ಕೇಳಿದ ಜನತೆ ಸಾಮಾಜಿಕ ಅಂತರವನ್ನು ಮರೆದು ಸುಮಾರು 600-750 ಜನರ ಗುಂಪು ಸಾಲಿನಲ್ಲಿ ಸೇರಿತ್ತು. ಯಾಕೆ ನಿಂತಿದ್ದೀರಿ ಎಂದು ಕೇಳಿದರೆ …

Read More »

ಧಾರವಾಡ:ಕೆನರಾ ಬ್ಯಾಂಕ್‍ನ ಎಲ್ಲ ಸಿಬ್ಬಂದಿ ಹೋಮ್ ಕ್ವಾರಂಟೈನ್

ಧಾರವಾಡ: ಧಾರವಾಡ ಕರ್ನಾಟಕ ಕಾಲೇಜಿನ ಆವರಣದಲ್ಲಿರುವ ಕೆನರಾ ಬ್ಯಾಂಕಿ(ಹಿಂದಿನ ಸಿಂಡಿಕೇಟ್ ಬ್ಯಾಂಕ್)ನ ಎಲ್ಲ ಸಿಬ್ಬಂದಿಯನ್ನು ಹೋಮ್ ಕ್ವಾರಂಟೈನ್‍ನಲ್ಲಿಡಲಾಗಿದೆ. ಕೊರೊನಾ ಪಾಸಿಟಿವ್ ಬಂದಿರುವ ಧಾರವಾಡ ಜಿಲ್ಲೆಯ ರೋಗಿ ನಂ.194 ಮಾ.19ರಂದು ಪ್ರಯಾಣಿಸಿದ ಮುಂಬೈ- ಹುಬ್ಬಳ್ಳಿ ವಿಆರ್‍ಎಲ್ ಬಸ್ ಮೂಲಕವೇ ಧಾರವಾಡ ಕರ್ನಾಟಕ ಕಾಲೇಜಿನ ಆವರಣದಲ್ಲಿರುವ ಕೆನರಾ ಬ್ಯಾಂಕ್ (ಹಿಂದಿನ ಸಿಂಡಿಕೇಟ್ ಬ್ಯಾಂಕ್)ನ ಸಿಬ್ಬಂದಿಯೊಬ್ಬರ ಪುತ್ರನೂ ಆಗಮಿಸಿದ್ದರು. ಇವರು ರೋಗಿ ನಂ.194 ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದರು ಎಂದು ಪರಿಗಣಿಸಿ ಸರ್ಕಾರಿ ಕ್ವಾರಂಟೈನ್ …

Read More »

ಏ.20ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಬಿಎಂಪಿ ಬಜೆಟ್ ಮಂಡನೆ

ಬೆಂಗಳೂರು, ಏ.15- ಲಾಕ್‍ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಬಿಬಿಎಂಪಿ ಬಜೆಟ್ ಏ.20ರಂದು ಮಂಡನೆಯಾಗಲಿದೆ. ಹನ್ನೊಂದು ಸಾವಿರ ಕೋಟಿ ರೂ.ಗಳ ಅಂದಾಜು ಮೊತ್ತದ ಬಿಬಿಎಂಪಿ ಬಜೆಟನ್ನು ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್.ಶ್ರೀನಿವಾಸ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಂಡನೆ ಮಾಡಲಿದ್ದಾರೆ. ಈ ಬಾರಿಯ ಬಜೆಟ್‍ನಲ್ಲಿ ಯಾವುದೇ ಹೊಸ ಕಾಮಗಾರಿಗಳಿಗೆ ಅನುಮೋದನೆ ನೀಡುವುದಿಲ್ಲ. ಬದಲಿಗೆ ಜನರಿಗೆ ಸಹಕಾರಿಯಾಗುವಂತಹ ಹಲವಾರು ಯೋಜನೆಗಳನ್ನು ಮಂಡಿಸುವ ಸಾಧ್ಯತೆಗಳಿವೆ.ರಾಜ್ಯ ಸರ್ಕಾರದ ಬಜೆಟ್ ಮಂಡನೆ ಮಾಡಿದ ಕೆಲವು …

Read More »

ಮಾ.1ರಿಂದ ನಿನ್ನೆಯವರೆಗೆ ಕೆಎಸ್ಆರ್‌ಟಿಸಿಗೆ 253 ಕೋಟಿ ನಷ್ಟ..!

ಬೆಂಗಳೂರು, ಏ. 15- ಕೋರೋನಾ ವೈರಾಣು ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಬಸ್ ಸಂಚಾರ ರದ್ದು ಮಾಡಿರುವುದರಿಂದ ಕೆಎಸ್‍ಆರ್‍ಟಿಸಿಗೆ 253 ಕೋಟಿ ರೂ.ಗೂ ಹೆಚ್ಚು ನಷ್ಟ ಉಂಟಾಗಿದೆ. ಮಾರ್ಚ್ 1ರಿಂದ ನಿನ್ನೆಯವರೆಗೆ ಕೆಎಸ್‍ಆರ್‍ಟಿಸಿ ಆದಾಯದಲ್ಲಿ 253,24,19,256 ರೂ. ನಷ್ಟವಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಲಾಕ್‍ಡೌನ್ ಮಾಡಿರುವುದರಿಂದ ಕೆಎಸ್‍ಆರ್‍ಟಿಸಿ ಬಸ್ ಸಂಚಾರವನ್ನು ನಿಲ್ಲಿಸಲಾಗಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ಕೆಲವು ಬಸ್‍ಗಳನ್ನು ಒದಗಿಸಲಾಗಿದೆ. ಈಗಾಗಲೇ ಮುಂಗಡ ಟಿಕೆಟ್ ಕಾಯ್ದಿರಿಸುವುದನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದ್ದು, ಟಿಕೆಟ್ …

Read More »