Breaking News

ರಾಷ್ಟ್ರೀಯ

5 ತಿಂಗಳಿಗೆ 597 ಕೆ.ಜಿ ಚಿನ್ನ ಉತ್ಪಾದನೆ

ಹಟ್ಟಿಚಿನ್ನದಗಣಿ: ಪ್ರಸಕ್ತ ಆರ್ಥಿಕ ವರ್ಷದ ಮೊದಲ 5 ತಿಂಗಳಲ್ಲಿ ಹಟ್ಟಿಚಿನ್ನದಗಣಿ ಕಂಪನಿ 613.686 ಕೆಜಿ ಗುರಿ ಪೈಕಿ 597.772 ಕೆಜಿ ಚಿನ್ನ ಉತ್ಪಾದಿಸಿದೆ. ಪ್ರತಿ ಟನ್ ಅದಿರಿನಲ್ಲಿ 2.23 ಗ್ರಾಂ ಉತ್ಪಾದನೆ ಗುರಿ ಹೊಂದಿದ್ದು, 2.74 ಗ್ರಾಂ. ಹಳದಿ ಲೋಹ ಉತ್ಪಾದನೆಯಾಗಿದೆ. ಏಪ್ರಿಲ್‌ನಲ್ಲಿ 118, ಮೇ 90, ಜೂನ್ 110, ಜುಲೈ 150, ಅಗಸ್ಟ್‌ನಲ್ಲಿ 127 ಕೆಜಿ ಚಿನ್ನ ಉತ್ಪಾದನೆಯಾಗಿದೆ. ಜುಲೈನಲ್ಲಿ 133 ಕೆ.ಜಿ ಚಿನ್ನ ಉತ್ಪಾದನೆ ಗುರಿ ಹೊಂದಲಾಗಿತ್ತು. …

Read More »

ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

ಬೆಳಗಾವಿ: ಚಿಕ್ಕೋಡಿ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಪ್ಯಾಲಿಸ್ತೀನ್ ಧ್ವಜ ಹಾರಾಡಿದ್ದು, ಕೂಡಲೇ ಪೊಲೀಸರು ಈ ಧ್ವಜ ವಶಕ್ಕೆ ಪಡೆದುಕೊಂಡ ಘಟನೆ ಶುಕ್ರವಾರ(ಸೆ20) ನಡೆದಿದೆ. ಮೆರವಣಿಗೆಯಲ್ಲಿ ಕೆಲ ಯುವಕರು ಮೆರವಣಿಗೆ ವೇಳೆ ಕೈಯಲ್ಲಿ ಪ್ಯಾಲೇಸ್ತೀನ್ ಧ್ವಜ ಹಿಡಿದು ಕುಣಿದು ಕುಪ್ಪಳಿಸಿದ್ದಾರೆ. ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದಿದ್ದ ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲೇಸ್ತೀನ್ ಧ್ಚಜ ಹಾರಾಡಿಸಿದ್ದಾರೆ. ಇದನ್ನು ಕಂಡ ಪ್ಯಾಲೇಸ್ತೀನ್ ಧ್ವಜ ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈದ್ …

Read More »

ಪ್ರಚೋದನಕಾರಿ ಭಾಷಣ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ‘FIR’ ದಾಖಲು

ಬಾಗಲಕೋಟೆ: ಜಿಲ್ಲೆಯಲ್ಲಿ ಗಣೇಶ ಮೆರವಣಿಗೆಯ ವೇಳೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದಂತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮುಧೋಳ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ನಿನ್ನೆ ಮುಧೋಳ ಪಟ್ಟಣದ ಜನ್ನತ್ ನಗರದ ಗಣೇಶ ಮೂರ್ತಿ ವಿಸರ್ಜನೆ ವೇಳೆಯಲ್ಲಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಟಿಪ್ಪು ಸುಲ್ತಾನ್, ಔರಂಗಾಜೇಬ್ ಕುರಿತಂತೆ ಅಶ್ಲೀಲ ಪದ ಬಳಕೆ ಮಾಡಿ, ಪ್ರಚೋದನಕಾರಿ ಭಾಷಣ ಮಾಡಿದ್ದರು.   ಬಿಜೆಪಿ ಶಾಸಕ ಬಸನಗೌಡ ಪಾಟೀಲ್ …

Read More »

ಬಯೋಲಾಜಿಕಲ್ ವಾರ್ ರೀತಿ ಇದೆ; ಮುನಿರತ್ನ ಪ್ರಕರಣದ ಬಗ್ಗೆ ಸರ್ಕಾರಕ್ಕೆ ಡಿಕೆ ಸುರೇಶ್ ವಿಶೇಷ ಮನವಿ

ಅತ್ಯಾಚಾರ ಆರೋಪ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿದ್ದು, ರಾಜ್ಯ ರಾಜಕೀಯದಲ್ಲಿ ಮತ್ತೊಂದು ಅತ್ಯಾಚಾರ ಆರೋಪ ಪ್ರಕರಣ ಮುನ್ನಲೆಗೆ ಬಂದಿದೆ. ಅತ್ಯಾಚಾರ ಆರೋಪ ಪ್ರಕರಣ ಮಾತ್ರವಲ್ಲದೆ ಹೆಚ್‌ಐವಿ ಇರುವ ರೋಗಿಗಳ ರಕ್ತವನ್ನು ತನ್ನದೇ ಪಕ್ಷದ ನಾಯಕರಿಗೆ ಇಂಜೆಕ್ಟ್‌ ಮಾಡಲು ಮುನಿರತ್ನ ಸಂಚು ಮಾಡಿದ್ದರು ಎನ್ನುವ ಗಂಭೀರ ಆರೋಪವೊಂದು ಕೇಳಿಬಂದಿದ್ದು, ಬಿಜೆಪಿ ನಾಯಕರೇ ಇದನ್ನು ಕೇಳಿ ಬೆಚ್ಚಿಬಿದ್ದಿದ್ದಾರೆ. ಮಾಜಿ ಸಂಸದ ಡಿ.ಕೆ. ಸುರೇಶ್ ಈಗ …

Read More »

ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ: ಪಾಕ್ ಗೆ ಭಾರತ ನೋಟಿಸ್

ನವದೆಹಲಿ: ಸಿಂಧೂ ಜಲ ಒಪ್ಪಂದದ (ಐಡಬ್ಲ್ಯುಟಿ) ಅನುಚ್ಛೇದ 12 (3) ರ ಅಡಿಯಲ್ಲಿ ಪರಿಶೀಲನೆ ಮತ್ತು ಮಾರ್ಪಾಡು ಕೋರಿ ಭಾರತ ಆಗಸ್ಟ್ 30 ರಂದು ಪಾಕಿಸ್ತಾನಕ್ಕೆ ಔಪಚಾರಿಕ ನೋಟಿಸ್ ನೀಡಿದೆ ಅಂತ ತಿಳಿದು ಬಂದಿದೆ. ಅಂದ ಹಾಗೇ, ಐಡಬ್ಲ್ಯೂಟಿಯ ಅನುಚ್ಛೇದ XII (3) ಆ ಉದ್ದೇಶಕ್ಕಾಗಿ ಎರಡೂ ಸರ್ಕಾರಗಳ ನಡುವೆ ಸೂಕ್ತವಾಗಿ ದೃಢೀಕರಿಸಿದ ಒಪ್ಪಂದದ ಮೂಲಕ ಒಪ್ಪಂದವನ್ನು ಮಾರ್ಪಡಿಸಲು ಅನುಮತಿಸುತ್ತದೆ.   ಈ ಅಧಿಸೂಚನೆಯ ಮೂಲಕ, ಅನುಚ್ಛೇದ 12 (3) …

Read More »

ನವೆಂಬರ್​ನಲ್ಲಿ ವಿದೇಶಿ ನೆಲದಲ್ಲಿ ಐಪಿಎಲ್​ ಹರಾಜು ಪ್ರಕ್ರಿಯೆ ನಡೆಸಲು ಬಿಸಿಸಿಐ ಯೋಜನೆ?

ನವದೆಹಲಿ: ಐಪಿಎಲ್​ 18ನೇ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ ನವೆಂಬರ್​ 3 ಅಥವಾ 4ನೇ ವಾರದಲ್ಲಿ ನಡೆಯಲಿದೆ. ಈ ಬಾರಿ ಮೆಗಾ ಹರಾಜು ಪ್ರಕ್ರಿಯೆಯನ್ನು ವಿದೇಶಿ ನೆಲದಲ್ಲಿ ಆಯೋಜಿಸುವ ಯೋಜನೆಯನ್ನೂ ಬಿಸಿಸಿಐ ಹಾಕಿಕೊಂಡಿದೆ ಎಂದು ವರದಿಯಾಗಿದೆ. ಕಳೆದ ವರ್ಷ ಮೊದಲ ಬಾರಿಗೆ ಹರಾಜು ಪ್ರಕ್ರಿಯೆ ವಿದೇಶಿ ನೆಲದಲ್ಲಿ ಅಂದರೆ ದುಬೈನಲ್ಲಿ ನಡೆದಿತ್ತು. ಈ ಸಲವೂ ಮಧ್ಯಪ್ರಾಚ್ಯ ದೇಶದಲ್ಲೇ ಹರಾಜು ನಡೆಸಲು ಬಿಸಿಸಿಐ ಮುಂದಾಗಿದೆ. ಗಲ್ಫ್​ ನಗರಗಳಾದ ದೋಹಾ, ಮಸ್ಕತ್​ ಅಥವಾ ಅಬುಧಾಬಿಯಲ್ಲಿ …

Read More »

ತಿರುಪತಿಯ ಲಡ್ಡು ಅಪವಿತ್ರ; ಮೀನಿನ ಎಣ್ಣೆ, ಪ್ರಾಣಿಗಳ ಕೊಬ್ಬು ಬಳಕೆ, ಕೋಟ್ಯಂತರ ಭಕ್ತರ ಭಾವನೆಗಳಿಗೆ ಧಕ್ಕೆ

ಅಮರಾವತಿ: ಕೋಟ್ಯಂತರ ಹಿಂದುಗಳ ಪವಿತ್ರ ಕ್ಷೇತ್ರ ತಿರುಪತಿಯ ತಿರುಮಲ ದೇಗುಲದ ಲಡ್ಡು ಪ್ರಸಾದದಲ್ಲಿ ಮೀನಿನ ಎಣ್ಣೆ ಹಾಗೂ ಪ್ರಾಣಿಗಳ ಕೊಬ್ಬು ಬಳಕೆ ಆಗುತ್ತಿತ್ತೆಂಬ ವಿಚಾರ ಬೆಳಕಿಗೆ ಬಂದಿದೆ. ಈ ಹಿಂದಿನ ಸಿಎಂ ಜಗನ್ ಮೋಹನ್ ರೆಡ್ಡಿ ಅವಧಿಯಲ್ಲಿ ನಡೆದಿತ್ತೆನ್ನಲಾದ ಈ ಪ್ರಮಾದವನ್ನು ಸತ್ಯ ಎಂದು ಗುಜರಾತ್​ನ ಪ್ರಯೋಗಾಲಯ ದೃಢಪಡಿಸಿದ ಬೆನ್ನಲ್ಲೇ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ವೈಎಸ್​ಆರ್​ಸಿಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ತಿರುಮಲ ತಿರುಪತಿ ಶ್ರೀವೆಂಕಟೇಶ್ವರ ದೇವಸ್ಥಾನದ ಪ್ರಸಾದದ ಲಡ್ಡುಗಳ ತಯಾರಿಕೆಗೆ ಶುದ್ಧ …

Read More »

ರಾಜ್ಯದಲ್ಲಿ ಪರೀಕ್ಷಾ ಅಕ್ರಮಗಳನ್ನು ಎದುರಿಸಲು ‘SOP’ ರೂಪಿಸಲು ಸಮಿತಿ ರಚನೆ

ಬೆಂಗಳೂರು: ಪರೀಕ್ಷೆಯ ಸಮಯದಲ್ಲಿ ನಕಲು ಮಾಡುವಾಗ ಸಿಕ್ಕಿಬಿದ್ದ ವಿದ್ಯಾರ್ಥಿಗಳನ್ನು ನಿಭಾಯಿಸಲು ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (ಎಸ್‌ಒಪಿ) ಸ್ಥಾಪಿಸಲು ಸಮಿತಿಯನ್ನು ರಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಪಿಇಎಸ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯೊಬ್ಬನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಜಯಕರ ಎಸ್.ಎಂ ಅವರು ಸಲ್ಲಿಸಿರುವ ವರದಿಯನ್ನು ಗುರುವಾರ ನಡೆದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಮಂಡಿಸಿ ವಿವರವಾಗಿ ಚರ್ಚಿಸಲಾಯಿತು. …

Read More »

ಮೆದುಳು ಶಸ್ತ್ರ ಚಿಕಿತ್ಸೆ: ರೋಗಿಯ ಕೈಗೆ ಕೊಳಲು ಕೊಟ್ಟು ಊದಲು ಹೇಳಿ ವೈದ್ಯ

ಮೆದುಳು ಶಸ್ತ್ರ ಚಿಕಿತ್ಸೆ: ರೋಗಿಯ ಕೈಗೆ ಕೊಳಲು ಕೊಟ್ಟು ಊದಲು ಹೇಳಿ ವೈದ್ಯ ರೋಗಿ ಕೊಳಲುದುವಾಗಲೇ ಮೆದುಳು ಆಪರೇಷನ್. ಬ್ರೇನ್ ನಲ್ಲಿ ಬೆಳೆದ ಟ್ಯೂಮರ್‌ ಆಪರೇಷನ್ ಮಾಡಿ ಗಡ್ಡೆ ಹೊರ ತೆಗೆದ ವೈದ್ಯರು. ಕೊಲ್ಲಾಪುರದ ಕನ್ಹೇರಿ ಮಠದ ಸಿದ್ಧಗಿರಿ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಶಸ್ತ್ರ ಚಿಕಿತ್ಸೆ. ಆಸ್ಪತ್ರೆಯ ನರಶಸ್ತ್ರಚಿಕಿತ್ಸಕ ಡಾ, ಶಿವಶಂಕರ್ ಮರಜಕ್ಕೆ ಹಾಗೂ ಅರವಳಿಗೆ ತಜ್ಞ ಪ್ರಕಾಶ ಭರಮಗೌಡರಿಂದ ಯಶಸ್ವಿ ಶಸ್ತ್ರಚಿಕಿತ್ಸೆ. ಈವರೆಗೂ ಒಟ್ಟು 103 ಮೆದುಳು ಶಸ್ತ್ರ‌ಚಿಕಿತ್ಸೆ …

Read More »

ಮಹಿಳಾ ಉದ್ಯೋಗಿಗಳಿಗೆ ಗುಡ್ ನ್ಯೂಸ್:ವೇತನ ಸಹಿತ ‘ಮುಟ್ಟಿನ ರಜೆ’ ನೀಡಲು ಕರ್ನಾಟಕ ಸರ್ಕಾರ ತೀರ್ಮಾನ

ಬೆಂಗಳೂರು: ಕರ್ನಾಟಕವು ಮಹಿಳೆಯರಿಗೆ ವರ್ಷಕ್ಕೆ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆ ಪಡೆಯಲು ಅರ್ಹವಾದ ನೀತಿಯನ್ನು ಅಂತಿಮಗೊಳಿಸುತ್ತಿದೆ, ಈ ಕ್ರಮವು ಲಕ್ಷಾಂತರ ಉದ್ಯೋಗಿಗಳಿಗೆ ಪ್ರಯೋಜನವನ್ನು ನೀಡುತ್ತದೆ ಈ ಯೋಜನೆ ಜಾರಿಯಾದರೆ ಬಿಹಾರ, ಕೇರಳ ಮತ್ತು ಒಡಿಶಾದ ನಂತರ ಮಹಿಳೆಯರಿಗೆ ಮುಟ್ಟಿನ ರಜೆ ನೀಡುವ ನಾಲ್ಕನೇ ರಾಜ್ಯ ಕರ್ನಾಟಕವಾಗಲಿದೆ.   ಈ ಕುರಿತು ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ‘ಕ್ರೈಸ್ಟ್ ವಿಶ್ವವಿದ್ಯಾಲಯದ ಕಾನೂನು ಪ್ರಾಧ್ಯಾಪಕಿ ಸಪ್ನಾ ಎಸ್ ನೇತೃತ್ವದ …

Read More »