ಬೆಂಗಳೂರು, ಏ.11- ಮೊಬೈಲ್ ಸ್ಯಾನಿಟೈಸರ್ ಬಸ್ ಸಾರಿಗೆ ಸಂಜೀವಿನಿಗೆ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ್ ಅವರು ಚಾಲನೆ ನೀಡಿದರು. ಕೆಎಸ್ಆರ್ಟಿಸಿಯ ಬೆಂಗಳೂರು ಕೇಂದ್ರೀಯ ವಿಭಾಗದ ಬಸ್ ಘಟಕ -2ರಲ್ಲಿ ತಾವೇ ಸ್ಯಾನಿಟೈಸರ್ ಸ್ಪ್ರೇಗೆ ಒಳಗಾಗುವ ಮೂಲಕ ಶಿವಯೋಗಿ ಕಳಸದ್ ಚಾಲನೆ ನೀಡಿದರು. ಸಾರ್ವಜನಿಕರ ಅನುಕೂಲಕ್ಕಾಗಿ ಇಂದಿನಿಂದ ಬೆಂಗಳೂರಿನಲ್ಲಿ ಸ್ಯಾನಿಟೈಸರ್ ಬಸ್ ಸಂಚರಿಸಲಿದೆ. ಹತ್ತು ವರ್ಷದ ಹಳೆಯ ಬಸ್ಅನ್ನು ಸ್ಯಾನಿಟೈಸರ್ ಬಸ್ ಆಗಿ ಪರಿವರ್ತಿಸಿದ ಕೆಎಸ್ಆರ್ಟಿಸಿ , ಸುಮಾರು …
Read More »” ಕೊಪ್ಪಳ:ಅಂಜನಾದ್ರಿ ಬೆಟ್ಟದಲ್ಲಿ ಆಹಾರ, ನೀರಿಗಾಗಿ ಮಂಗಗಳ ನರಳಾಟ”
ಕೊಪ್ಪಳ: ಮಹಾಮಾರಿ ಕೊರೊನಾ ವೈರಸ್ ವಿಶ್ವದ ಮನುಕುಲವನ್ನೇ ಬೆಚ್ಚಿ ಬೀಳಿಸಿದ್ದಲ್ಲದೇ ಮೂಕ ಪ್ರಾಣಿಗಳನ್ನು ಕಂಗಾಲಾಗಿಸಿದೆ. ಕೊರೊನಾ ಭೀತಿಯಿಂದ ದೇಶವನ್ನು ಲಾಕ್ಡೌನ್ ಮಾಡಿ ಜನರಿಗೆ ಅಗತ್ಯ ವಸ್ತು, ಆಹಾರ ಒದಗಿಸುವ ಪ್ರಯತ್ನವೆನೋ ನಡೆಯುತ್ತಿದೆ. ಆದರೆ ಲಾಕ್ಡೌನಿಂದ ಆಹಾರ ಸಿಗದೇ ಮೂಕ ಪ್ರಾಣಿಗಳು ನರಳುತ್ತಿವೆ. ಕೊಪ್ಪಳ ಜಿಲ್ಲೆಯಲ್ಲಿರುವ ಆಂಜನೇಯ ಹುಟ್ಟಿದ ಸ್ಥಳ ಎಂದೇ ಪ್ರಖ್ಯಾತಿ ಪಡೆದ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿರುವ ಸಾವಿರಾರು ಮಂಗಗಳು ನಿತ್ಯ ಆಹಾರಕ್ಕಾಗಿ ಪರದಾಡುವಂತಾಗಿದೆ. ಲಾಕ್ಡೌನ್ನಿಂದಾಗಿ ಕಳೆದ ಒಂದು …
Read More »ಏಪ್ರಿಲ್ 14ರ ಬಳಿಕ ಸಿಗುತ್ತಾ ಮದ್ಯ? – 2 ದಿನದಲ್ಲಿ ಮದ್ಯ ಪ್ರೇಮಿಗಳ ಈ ಪ್ರಶ್ನೆಗೆ ಶೀಘ್ರವೇ ಶುಭಸುದ್ದಿ ಸಿಗುವ ಲಕ್ಷಣ
ಬೆಂಗಳೂರು: ಏಪ್ರಿಲ್ 14ರ ನಂತರ ಮದ್ಯ ಸಿಗುತ್ತಾ? ಮದ್ಯ ಪ್ರೇಮಿಗಳ ಈ ಪ್ರಶ್ನೆಗೆ ಶೀಘ್ರವೇ ಶುಭಸುದ್ದಿ ಸಿಗುವ ಲಕ್ಷಣ ಕಾಣಿಸಿದೆ. ಏಪ್ರಿಲ್ 30ರವರೆಗೆ ಲಾಕ್ಡೌನ್ ವಿಸ್ತರಿಸುವ ಸಂಬಂಧ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಿಎಂ ಯಡಿಯೂರಪ್ಪ, ಇನ್ನೆರಡು ದಿನದಲ್ಲಿ ನಿರ್ಧಾರವಾಗಲಿದೆ. ಮದ್ಯ ಮಾರಾಟದ ಬಗ್ಗೆಯೂ ಆಗಲೇ ನಿರ್ಧಾರ ಮಾಡುತ್ತೇವೆ. ಪ್ರಧಾನಿ ಮೋದಿ ಮಾರ್ಗಸೂಚಿ ಬಳಿಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಬಾರ್ಗಳಿಗೆ ಅವಕಾಶ ನೀಡದೇ ಎಂಎಸ್ಐಎಲ್ ಅಂಗಡಿಗಳ ಮೂಲಕ …
Read More »ವಿಭಿನ್ನವಾಗಿರಲಿದೆ ಲಾಕ್ಡೌನ್: b.s.y.
ವಿಭಿನ್ನವಾಗಿರಲಿದೆ ಲಾಕ್ಡೌನ್ ಇನ್ನು ರಾಜ್ಯದಲ್ಲಿ ಲಾಕ್ಡೌನ್ ಮುಂದುವರೆದಿದ್ದು ಈ ಎರಡು ವಾರದ ಲಾಕ್ಡೌನ್ ವಿಭಿನ್ನವಾಗಿರಲಿದೆ. ಹೇಗೆ ಲಾಕ್ಡೌನ್ ಜಾರಿಯಾಗಬೇಕು ಎಂಬುದು ಕೇಂದ್ರ ಮಾರ್ಗಸೂಚಿ ಸಿದ್ದಪಡಿಸಲಿದೆ. ಅದರ ಆಧಾರದ ಮೇಲೆ ಮುಂದಿನ ತೀರ್ಮಾನ ರಾಜ್ಯ ಸರ್ಕಾರ ಕೈಗೊಳ್ಳಲಿದೆ. ವೈದ್ಯರ ಮೇಲೆ ದೌರ್ಜನ್ಯ ನಡೆದರೆ ಕಠಿಣ ಕ್ರಮ ಇನ್ನು ಕೊರೊನಾ ವಿರುದ್ಧ ದುಡಿಯುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳ ಮೇಲೆ ದೌರ್ಜನ್ಯ ನಡೆದರೆ ಕಠಿಣ ಕ್ರಮ ಜರುಗಿಸಲು ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ. ಕಾಳಸಂತೆಯಲ್ಲಿ …
Read More »ರೈತರ ಉತ್ಪನ್ನಗಳನ್ನ ಸರ್ಕಾರವೇ ಖರೀದಿಸಿ ಮಾರಾಟ ಮಾಡಲಿ: ಎಚ್ಡಿಕೆ
ಸರ್ಕಾರ ಮೂಗಿಗೆ ತುಪ್ಪ ಸವರೋ ಬಗ್ಗೆ ಮಾತನಾಡ್ತಿದೆ – ತಕ್ಷಣವೇ ರೈತರ ನೆರವಿಗೆ ಧಾವಿಸಬೇಕು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಬೆಂಗಳೂರು: ಕೊರೊನಾ ಲಾಕ್ಡೌನ್ನಿಂದ ರೈತರು ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೇ ಸಂಕಷ್ಟ ಪಡುತ್ತಿದ್ದಾರೆ. ಹೀಗಾಗಿ ರೈತರ ಉತ್ಪನ್ನಗಳನ್ನು ಸರ್ಕಾರವೇ ಖರೀದಿಸಿ ಮಾರಾಟ ಮಾಡಲು ತಡಮಾಡದೇ ಕ್ರಮಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕುಮಾರಸ್ವಾಮಿ ಈ ಬಗ್ಗೆ ಸರಣಿ ಟ್ವೀಟ್ ಮಾಡುವ ಮೂಲಕ …
Read More »ಕರ್ನಾಟಕದಲ್ಲಿ ಏ.30ರವರೆಗೆ ಲಾಕ್ಡೌನ್ ವಿಸ್ತರಣೆ………..
ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಿಸುವ ಸಂಬಂಧ ಏಪ್ರಿಲ್ 30ರವರೆಗೆ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರಿಯಲಿದೆ. ದೇಶಾದ್ಯಂತ ಹೇರಲಾಗಿರುವ 21 ದಿನಗಳ ಲಾಕ್ಡೌನ್ ಏ.14ಕ್ಕೆ ಅಂತ್ಯವಾಗಲಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ಸಂದರ್ಭದಲ್ಲಿ ಲಾಕ್ಡೌನ್ ವಿಧಿಸಿದ ಪರಿಣಾಮ ಕೊರೊನಾ ನಿಯಂತ್ರಣಕ್ಕೆ ಬರುತ್ತಿದೆ. ಹೀಗಾಗಿ ಏ.30ರವರೆಗೆ ಲಾಕ್ಡೌನ್ ವಿಸ್ತರಿಸಬೇಕೆಂದು ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಮನವಿ ಮಾಡಿದ್ದರು. ಮೋದಿ ಜೊತೆಗಿನ ವಿಡಿಯೋ …
Read More »ಲಾಕ್ಡೌನ್ ಪಾಲಿಸದಿದ್ರೆ ಸೀಲ್ಡೌನ್: ಸಿಎಂ ಎಚ್ಚರಿಕೆ
ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಿಸುವ ಸಂಬಂಧ ಕರ್ನಾಟಕದಲ್ಲಿ 15 ದಿನ ಲಾಕ್ಡೌನ್ ವಿಸ್ತರಿಸಲಾಗಿದೆ. ಮುಂದಿನ 2 ವಾರ ಲಾಕ್ಡೌನ್ ಬಹಳ ಕಠಿಣವಾಗಿರುತ್ತದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಪ್ರಧಾನಿ ಮೋದಿ ನಾಲ್ಕು ಗಂಟೆಗಳ ಕಾಲ ಸಂವಾದ ನಡೆಸಿದ್ದಾರೆ. ಕೊರೊನಾ ಬಗ್ಗೆ ಕಳವಳ ವ್ಯಕ್ತಪಡಿಸಿದರು. 2.44 ಲಕ್ಷ ವೈಯಕ್ತಿಕ ರಕ್ಷಣಾ ಸಾಧನ (ಪಿಪಿಇ) ಕಿಟ್, ಮಾಸ್ಕ್ …
Read More »ಜೀವದ ಹಂಗು ತೊರೆದು ದುಡಿಯುತ್ತಿರುವವೈದ್ಯರು, ಪೋಲಿಸರು , ಪೌರ ಕಾರ್ಮಿಕರು , ಆಶಾ-ಅಂಗನವಾಡಿ ಕಾರ್ಯಕರ್ತರು,ಹಾಗೂ ಮಾಧ್ಯಮ ಮಿತ್ರರಿಗೆ
ಗೋಕಾಕ್ : ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವ ಕೊರೋನಾ ಮಹಾಮಾರಿಗೆ ವಿಶ್ವಾದ್ಯಂತ ಇದುವರೆಗೂ ಲಕ್ಷಕ್ಕೂ ಅಧಿಕ ಮಂದಿ ಪ್ರಾಣ ತೆತ್ತಿದ್ದಾರೆ. ನಮ್ಮ ದೇಶದಲ್ಲಿಯೂ 246 ಮಂದಿ ಜೀವ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದ್ವಿಶತಕ ದಾಟಿದೆ. ಪರಿಸ್ಥಿತಿ ನಿಯಂತ್ರಿಸಲು ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಮಧ್ಯೆ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ಸೋಂಕು ನಿವಾರಣೆಗಾಗಿ ಜೀವದ ಹಂಗು ತೊರೆದು ದುಡಿಯುತ್ತಿರುವವರನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …
Read More »ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಮೋದಿ ಸಭೆ- ನಿರ್ಧಾರವಾಗಲಿದೆ ಲಾಕ್ಡೌನ್ ಭವಿಷ್ಯ
ನವದೆಹಲಿ: ಕೊರೊನಾ ಸಂಕಷ್ಟಕ್ಕೆ ಸಿಲುಕಿ ದೇಶ ಬಡವ ಆಗಿದೆ. ಲಾಕ್ ಡೌನ್ ಇರುತ್ತೊ ತೆರವಾಗತ್ತೊ ಅನ್ನೊ ಗೊಂದಲದಲ್ಲಿ ಜನರಿದ್ದಾರೆ. ಇದೇ ವಿಚಾರ ಸಂಬಂಧ ಇಂದು ಪ್ರಧಾನಿ ಮೋದಿ ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಚರ್ಚೆ ನಡೆಲಿದ್ದು ಇಂದಿನ ಸಭೆ ನಿರ್ಣಾಯಕವಾಗಿದ್ದು, ಈ ನಡುವೆ ಲಾಕ್ ಡೌನ್ ವಿಸ್ತರಣೆ ಅಧಿಕೃತ ಘೋಷಣೆ ನಾಳೆ ಆಗಬಹದು ಎನ್ನಲಾಗುತ್ತಿದೆ. ಕಳೆದೆರಡು ದಿನಗಳಿಂದ ದೇಶದಲ್ಲಿ ಕೊರೊನಾಗಿಂತ ಹೆಚ್ಚು ಚರ್ಚೆ ಆಗ್ತಿರೋದು ಲಾಕ್ ಡೌನ್ ಬಗ್ಗೆ. ಇನ್ನೇನು …
Read More »ನೈರುತ್ಯ ರೈಲ್ವೆಯಿಂದ 312 ಐಸೋಲೇಷನ್ ಬೋಗಿಗಳ ನಿರ್ಮಾಣ; ಕೇಂದ್ರ ಸಚಿವ ಸುರೇಶ್ ಅಂಗಡಿ
ಹುಬ್ಬಳ್ಳಿ: ರೈಲ್ವೆ ಇಲಾಖೆಯ 10 ದಿನದಲ್ಲಿ 80 ಸಾವಿರ ಬೆಡ್ಗಳ ಐಸೋಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಿದೆ. ಹುಬ್ಬಳ್ಳಿ ನೈರುತ್ಯ ರೈಲ್ವೆ ವತಿಯಿಂದ 312 ಐಸೋಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದರು. ಹುಬ್ಬಳ್ಳಿಯ ರೈಲ್ವೆ ವರ್ಕಶಾಪ್ ನಲ್ಲಿ ನಿರ್ಮಿಸಲಾಗಿರುವ ಐಸೋಲೇಷನ್ ಬೋಗಿಗಳನ್ನು ವೀಕ್ಷಿಸಿ ನಂತರ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಿನಂತೆ ದೇಶಾದ್ಯಂತ 20 ಸಾವಿರ ಐಸೋಲೇಷನ್ …
Read More »
Laxmi News 24×7