ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 35ಕ್ಕೆ ತಲುಪಿದರೂ ಜನ ಬುದ್ಧಿ ಕಲಿಯುತ್ತಿಲ್ಲ. ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದು, ತಂಡೋಪತಂಡವಾಗಿ ಮಾರುಕಟ್ಟೆಗೆ ಆಗಮಿಸುತ್ತಿದ್ದಾರೆ. ಜನರ ನಿಯಂತ್ರಣ ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ ಸದ್ಯ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ 35ಕ್ಕೆ ಏರಿಯಾಗಿದೆ. ಈ ಸಂಖ್ಯೆ ಇನ್ನೂ ದುಪ್ಪಟ್ಟಾಗುವ ಆತಂಕವಿದೆ. ಹೀಗಾಗಿ, ಜನರು ಮನೆಯಿಂದ ಹೊರಗೆ ಬಾರದಂತೆ ನೋಡಿಕೊಳ್ಳಲು ಮೈಸೂರು ಜಿಲ್ಲಾಡಳಿತ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಇದರ ಭಾಗವಾಗಿ ಅವಶ್ಯಕ ಸಾಮಾಗ್ರಿಗಳನ್ನು ಅವರ ಮನೆ ಬಾಗಿಲಿಗೆ …
Read More »ಗಡಿ ಬಂದ್ನಿಂದ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ- ಸುಪ್ರೀಂಗೆ ಕೇರಳ ಮಾಹಿತಿ
ನವದೆಹಲಿ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕರ್ನಾಟಕ-ಕೇರಳ ಗಡಿ ಬಂದ್ ಮಾಡಲಾಗಿದ್ದು, ಪರಿಣಾಮ ಕೇರಳದ ಎಂಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇರಳ ಸರ್ಕಾರ ಆರೋಪಿಸಿದೆ. ಸುಪ್ರೀಂಕೋರ್ಟಿಗೆ ಅಫಿಡವಿಟ್ ಸಲ್ಲಿಸಿರುವ ಕೇರಳ ಸರ್ಕಾರ, ಕೂಡಲೇ ಗಡಿ ಭಾಗವನ್ನು ತೆರವು ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಲು ಮನವಿ ಮಾಡಿಕೊಂಡಿದೆ. ಕೇರಳ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮತ್ತಷ್ಟು ಮಾಹಿತಿ …
Read More »ಲಾಕ್ಡೌನ್ನಿಂದ ಕಾಂಡಿಮೆಂಟ್ಸ್, ಬೇಕರಿಗಳಿಗೆ ವಿನಾಯ್ತಿ ನೀಡಿದ ರಾಜ್ಯ ಸರ್ಕಾರ
ಭಾರತ ಲಾಕ್ಡೌನ್ ನಡುವೆ ರಾಜ್ಯದಲ್ಲಿ ಬೇಕರಿ, ಕಾಂಡಿಮೆಂಟ್ಸ್, ಮಿಠಾಯಿ ಹಾಗೂ ಸಿಹಿ ತಿನಿಸುಗಳ ತಯಾರಿಕಾ ಘಟಕಗಳಿಗೆ ರಾಜ್ಯ ಸರ್ಕಾರ ವಿನಾಯ್ತಿ ನೀಡಿ ಇಂದು ಆದೇಶ ಹೊರಡಿಸಿದೆ. ಬೇಕರಿಯ ತಿಂಡಿ ತಿನಿಸುಗಳು, ಅವುಗಳಲ್ಲಿ ಪ್ರಮುಖವಾಗಿ ಬ್ರೆಡ್ ಹಾಗೂ ಬಿಸ್ಕೆಟ್ಗಳನ್ನ ರಾಜ್ಯದಲ್ಲಿ ಆಸ್ಪತ್ರೆಗಳಲ್ಲಿನ ರೋಗಿಗಳು ಹಾಗೂ ವಯಸ್ಸಾದವರು ಸೇರಿದಂತೆ ಮಕ್ಕಳು ಹಾಗೂ ಸಾಮಾನ್ಯ ಜನ ಸಹ ತಿನ್ನುತ್ತಾರೆ. ಹೀಗಾಗಿ ಬೇಕರಿ ತಿಂಡಿ ತಿನಿಸುಗಳ ಅವಶ್ಯಕತೆ ಇರುವ ಕಾರಣ ಬೇಕರಿ ಹಾಗೂ ಕಾಂಡಿಮೆಂಟ್ಸ್ ಗಳಿಗೆ …
Read More »ನಂ.1 ಆಗಲು ಚೀನಾದಿಂದ ಜೈವಿಕ ಅಸ್ತ್ರ- ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು
ನವದೆಹಲಿ: ಕೊರೊನಾ ವೈರಸ್ ಹರಡುವಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಚೀನಾ ವಿರುದ್ಧ ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ. ಆಲ್ ಇಂಡಿಯಾ ಬಾರ್ ಅಸೊಶಿಯೇಶನ್, ಇಂಟರ್ನ್ಯಾಷನಲ್ ಕೌನ್ಸಿಲ್ ಆಫ್ ಜ್ಯೂರಿಸ್ಟ್ಸ್ ವತಿಯಿಂದ ಈ ದೂರು ದಾಖಲಿಸಿದ್ದು, ಅನಿರ್ದಿಷ್ಟ ಮೊತ್ತ ಪರಿಹಾರಕ್ಕೆ ಅರ್ಜಿಯಲ್ಲಿ ವಕೀಲ ಅದೀಶ್ ಸಿ.ಅಗ್ರವಾಲ್ ಆಗ್ರಹಿಸಲಾಗಿದೆ. ಕೊರೊನಾ ವಿಚಾರದಲ್ಲಿ ಚೀನಾ ಹೊಣೆಗಾರಿಕೆ ಮರೆತು ನಿಯಮಗಳ ಉಲ್ಲಂಘಿಸಿದೆ. ವಿಶ್ವಾದ್ಯಂತ ಕೊರೊನಾ ವೈರಸ್ ಹರಡಿದೆ, ಇದನ್ನು ತಡೆಯವ ವಿಚಾರದಲ್ಲಿ ನಿಷ್ಕ್ರಿಯತೆ …
Read More »18 ಜನರ ಗಂಟಲು ದ್ರವ ಸಂಗ್ರಹಿಸಿ ಸೋಮವಾರ ಪ್ರಯೋಗಾಲಯಕ್ಕೆ ಒಟ್ಟು 850 ಜನರ ಮೇಲೆ ಆರೋಗ್ಯ ಇಲಾಖೆ ನಿಗಾ
ಬೆಳಗಾವಿ: ಜಿಲ್ಲೆಯಲ್ಲಿ 7 ಜನರಿಗೆ ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ಒಟ್ಟು 18 ಜನರ ಗಂಟಲು ದ್ರವ ಸಂಗ್ರಹಿಸಿ ಸೋಮವಾರ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಕೊರೊನಾ ಮೊದಲು ಮೂರು ಬಳಿಕ ನಾಲ್ಕು ಒಟ್ಟು ಏಳು ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ. ಇದರಿಂದ ಸೋಂಕಿತರ ಸಂಪರ್ಕಕ್ಕೆ ಬಂದಿರುವ ಜನರನ್ನು ಗುರುತಿಸಿ ಗಂಟಲು ದ್ರವ ಸಂಗ್ರಹಿಸಲಾಗಿದೆ. ಜತೆಗೆ ಇಂದು ಸಹ ಕೆಲವರ ಗಂಟಲು ದ್ರವ ಸಂಗ್ರಹ …
Read More »ಕೋಮು ಸೌಹಾರ್ದತೆ ಕದಡಲು ಯತ್ನಿಸಿದ ಎಂದು ಆರೋಪಿಸಿ ಗ್ರಾಮಸ್ಥರು ಯುವಕನಿಗೆ ಧರ್ಮದೇಟು ನೀಡಿದ್ದಾರೆ.
ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ದೇಶನೂರು ಗ್ರಾಮದಲ್ಲಿನ ಯುವಕ ಕೋಮು ಸೌಹಾರ್ದತೆ ಕದಡಲು ಯತ್ನಿಸಿದ ಎಂದು ಆರೋಪಿಸಿ ಗ್ರಾಮಸ್ಥರು ಯುವಕನಿಗೆ ಧರ್ಮದೇಟು ನೀಡಿದ್ದಾರೆ. ಇಲ್ಲಿನ ಮೀರಸಾಬ್ ಎಂಬ ಯುವಕ ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆ ಕದಡುವಂತಹ ವಿಡಿಯೋವಂದನ್ನು ಮಾಡುವ ಮೂಲಕ ಹರಿಬಿಟ್ಟಿದ್ದನು. ಆದ ಕಾರಣ ಗ್ರಾಮಸ್ಥರು, ಮುಖಂಡರು, ತಾಲ್ಲೂಕ ಪಂಚಾಯಿತಿ ಕಚೇರಿಯಲ್ಲಿ ಕೂಡಿಹಾಕಿ ಚಪ್ಪಲಿಯಿಂದ ಥಳಿಸಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ದೀಪಕ ಪಾಟೀಲ್, ಗ್ರಾಮದ ಮುಖಂಡರು ಯುವಕನನ್ನು ಕರೆದೊಯ್ದು ಥಳಿಸಿದ್ದಾರೆ. …
Read More »ರಾಯಬಾಗ:ಒಂದೇ ಪಟ್ಟಣದಲ್ಲಿ 4 ಜನರಿಗೆ ಕೊರೊನಾ ಪಾಸಿಟಿವ್ – ಹೈ ಅಲರ್ಟ್
ಬೆಳಗಾವಿ/ಚಿಕ್ಕೋಡಿ: ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ನಾಲ್ಕು ಜನರಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಕುಡಚಿ ಪಟ್ಟಣದಲ್ಲಿ ಹೈ ಅಲರ್ಟ್ ಘೋಷಣೆಯಾಗಿದ್ದು, ಕುಡಚಿ ಪಟ್ಟಣ ಸಂಪೂರ್ಣ ಸ್ತಬ್ಧವಾಗಿದೆ. ಲಾಕ್ಡೌನ್ ಆದಗಿನಿಂದ ಜನರು ಹೊರ ಬರದೆ ಮನೆಯಲ್ಲಿಯೇ ಇದ್ದಾರೆ. ಆದರೂ ಕುಡಚಿ ಪಟ್ಟಣದ ಮೂವರು ಮಹಿಳೆಯರಿಗೆ ಹಾಗೂ ಓರ್ವ ಪುರುಷನಿಗೆ ಕೊರೊನಾ ಧೃಡವಾಗಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈಗಾಗಲೇ ಸೋಂಕಿತರಿಗೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕವಾಗಿ …
Read More »ದೀಪ ಹಚ್ಚುವ ಬದಲು ಸಿಗರೇಟ್ ಹಚ್ಚಿಫೋಟೋ ಟ್ವೀಟ್: ರಾಮ್ ಗೋಪಾಲ್ ವರ್ಮಾ
ಬೆಂಗಳೂರು: ಕೊರೊನಾ ಮಹಾಮಾರಿ ಪ್ರಪಂಚವನ್ನೇ ವ್ಯಾಪಿಸಿದ್ದು, ಭಾರತದಲ್ಲೂ ದಿನೇ ದಿನೇ ಆತಂಕ ಹೆಚ್ಚು ಮಾಡುತ್ತಿದೆ. ಸರ್ಕಾರ ಕೊರೊನಾ ನಿಯಂತ್ರಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದು, ಕೊರೊನಾ ವಿರುದ್ಧದ ಹೋರಾಟಕ್ಕೆ ಒಗ್ಗಟ್ಟು ಪ್ರದರ್ಶಿಸಲು ದೀಪ ಬೆಳಗುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. ಇದಕ್ಕೆ ಹಲವು ನಟ, ನಟಿಯರು ಸಾಥ್ ನೀಡಿ, ದೀಪ ಬೆಳಗಿ ಎಲ್ಲರೂ ಒಗ್ಗಟ್ಟಾಗಿ ಕೊರೊನಾ ವಿರುದ್ಧ ಹೋರಾಡೋಣ ಎಂಬ ಸಂದೇಶ ನೀಡಿದ್ದಾರೆ. ಆದರೆ ಟಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ …
Read More »ಏ.14ಕ್ಕೆ ಲಾಕ್ಡೌನ್ ಮುಗಿಯುತ್ತೆ ಅಂತಾ ಭಾವಿಸಬೇಡಿ: ಸಿಎಂ
ಬೆಂಗಳೂರು: ಏಪ್ರಿಲ್ 14ಕ್ಕೆ ಲಾಕ್ ಡೌನ್ ಮುಗಿಯುತ್ತೆ ಅಂತಾ ಭಾವಿಸಬೇಡಿ. ಲಾಕ್ ಡೌನ್ ಎಷ್ಟು ದಿನ ಮುಂದುವರಿಯುತ್ತದೆ ಎನ್ನುವುದು ಜನರ ಜವಾಬ್ದಾರಿ ಮೇಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಪಬ್ಲಿಕ್ ಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಈ ತಿಂಗಳೇ ಲಾಕ್ಡೌನ್ ಮುಗಿಯುತ್ತದೆ ಎನ್ನುವಂತಿಲ್ಲ. ದಯಮಾಡಿ ಮನೆಯೊಳಗೆ ಇರಿ. ಹೊರಗಡೆ ಬಂದರೆ ಮತ್ತಷ್ಟು ದಿನ ಲಾಕ್ ಡೌನ್ ಅನುಭವಿಸಬೇಕಾಗುತ್ತದೆ ಎಂದು ತಿಳಿಸಿದರು. ಶೇ.75 ರಷ್ಟು ಈಗ ಲಾಕ್ ಡೌನ್ …
Read More »ನಮ್ಮ ಸರಕಾರದ ಮರ್ಯಾದೆ ಉಳಿದಿದ್ದರೆ ಡಿಸಿ, ಎಸ್ಪಿಗಳಿಂದಲೇ ಹೊರತು ಮಂತ್ರಿಗಳಿಂದಲ್:ಬಿ.ಎಸ್.ಯಡಿಯೂರಪ್ಪ
ಬೆಂಗಳೂರು – ಕೆಲಸ ಮಾಡದೆ ಮನೆಯಲ್ಲೇ ಕುಳಿತಿರುವ ಮಂತ್ರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಇನ್ನು ಒಂದೆರೆಡು ದಿನದಲ್ಲೇ ಮಂತ್ರಿಗಳ ಉಸ್ತುವಾರಿ ಬದಲಾವಣೆ ಮಾಡುವುದಾಗಿ ಘೋಷಿಸಿದ್ದಾರೆ. ಖಾಸಗಿ ಚಾನೆಲ್ ಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಯಡಿಯೂರಪ್ಪ, ಇಂತಹ ಸಂದರ್ಭದಲ್ಲಿ ಮಂತ್ರಿಗಳು ಮನೆಯಲ್ಲಿ ಮಕ್ಕಳು, ಮೊಮ್ಮಕ್ಕಳ ಜೊತೆ ಕುಳಿತು ಆಟ ಆಡುವುದಲ್ಲ. ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಿ. ಕೊರೋನಾ ತಡೆಯಲು ಏನೇನು ಬೇಕೋ ಅದನ್ನು ಮಾಡಿ ಎಂದು ಕರೆ …
Read More »
Laxmi News 24×7