ಬೆಳಗಾವಿ: ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ಇಡೀ ಬೆಳಗಾವಿ ನಗರವನ್ನು ಲಾಕ್ ಡೌನ್ ಮಾಡಲಾಗಿದ್ದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು. ತಮ್ಮ ವಾಹನದಲ್ಲಿ ನಗರ ಪ್ರದಕ್ಷಿಣೆ ಹಾಕಿದ ಯಮಕನಮರಡಿ ಶಾಸಕರೂ ಆದ ಸತೀಶ ಜಾರಕಿಹೊಳಿ ಪೊಲೀಸ್ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಕೆಲವೊಂದು ಸೂಚನೆಗಳನ್ನು ನೀಡಿದರು. ಜನರಿಗೆ ಯಾವುದೇ ತರಹದ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಿ ಮತ್ತು ತಾವು ಸುರಕ್ಷಿತವಾಗಿ ಇರಲು ತಿಳಿಸಿದರು. ನಗರದಲ್ಲಿ ಸ್ವಚ್ಚತೆ ಕಾಪಾಡಿಕೊಂಡು ಮತ್ತು …
Read More »ಕರೋನಾ ರುದ್ರನರ್ತನ : ಜಿ-20 ರಾಷ್ಟ್ರಗಳ ತುರ್ತು ಶೃಂಗಸಭೆ, ಮೋದಿ ಮಹತ್ವದ ಸಲಹೆ.!
ನವದೆಹಲಿ, ಮಾ.27-ಕಿಲ್ಲರ್ ಕೊರೊನಾ (ಕೋವಿಡ್-19) ವಿರುದ್ಧ ಹೋರಾಟದಲ್ಲಿ ಸಂಯುಕ್ತ ರಂಗವಾಗಿ ಮುಂಚೂಣಿಯಲ್ಲಿರಲು ಪಣ ತೊಟ್ಟಿರುವ ಜಿ-20 ರಾಷ್ಟ್ರಗಳು, ಈ ಪಿಡುಗಿನಿಂದಾಗಿ ತೀವ್ರವಾಗಿ ಕುಸಿದಿರುವ ಜಾಗತಿಕ ಪುನ:ಶ್ಚೇತನಕ್ಕೆ 5 ಲಕ್ಷ ಕೋಟಿ ಡಾಲರ್ ನೆರವಿಗೆ ಮನವಿ ಮಾಡಿದೆ. ಮಾರಕ ಕೊರೊನಾ ವೈರಸ್ ಜಾಗತಿಕ ಪಿಡುಗಾಗಿ ಪರಿಣಮಿಸಿದ್ದು, ಈ ಪಿಡುಗಿನ ವಿರುದ್ಧ ಪರಸ್ಪರ ಸಹಕಾರದೊಂದಿಗೆ ಸಂಘಟಿತ ಹೋರಾಟ ನಡೆಸಲು ಜಿ-20 ರಾಷ್ಟ್ರಗಳ ತುರ್ತು ಶೃಂಗಸಭೆ ನಡೆಯಿತು. ಈ ತುರ್ತು ಸಭೆಯಲ್ಲಿ 20 ದೇಶಗಳ …
Read More »ದಕ್ಷಿಣ ಕನ್ನಡದಲ್ಲಿ ಒಂದೇ ದಿನ ಎರಡು ಪ್ರಕರಣ
ದಕ್ಷಿಣ ಕನ್ನಡದಲ್ಲಿ ಒಂದೇ ದಿನ ಎರಡು ಪ್ರಕರಣ ಮಂಗಳೂರು: 21 ವರ್ಷದ ಯುವಕನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಂದೇ ದಿನ ರಾಜ್ಯದಲ್ಲಿ 9 ಜನರಿಗೆ ಸೋಂಕು ತಗುಲಿದ್ದು ಜನ ಆತಂಕಕ್ಕೊಳಗಾಗಿದ್ದಾರೆ. ಕೊರೊನಾ ಸೋಂಕಿತ ಪ್ರಕರಣ 64: 21 ವರ್ಷದ ಯುವಕ, ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿಯಾಗಿದ್ದು, ದುಬೈ ದೇಶಕ್ಕೆ ಪ್ರಯಾಣ ಬೆಳೆಸಿರುವ ಹಿನ್ನೆಲೆಯಿದ್ದು, ದಿನಾಂಕ 22.03.2020 ರಂದು ಭಾರತಕ್ಕೆ ವಾಪಸ್ಸಾಗಿರುತ್ತಾರೆ. ಯುವಕನನ್ನು ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ …
Read More »ಜಯಂತ್ ಕಾಯ್ಕಿಣಿ ವಿರಚಿತ ಕೊರೊನಾ ಜಾಗೃತಿ ಗೀತೆಗೆ ಎಸ್ಪಿಬಿ ಧ್ವನಿ”………
ಬೆಂಗಳೂರು: ಮಹಾಮಾರಿ ಕೊರೊನಾ ಓಡಿಸಲು ದೇಶಾದ್ಯಂತ ಶತ ಪ್ರಯತ್ನ ನಡೆಯುತ್ತಿದ್ದು, ಚಿತ್ರರಂಗದ ಹಲವರು ಸಹ ಇದಕ್ಕೆ ಕೈ ಜೋಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಮಾತ್ರವಲ್ಲದೆ ಸಿನಿಮಾ ಕಾರ್ಮಿಕರಿಗೆ ಹಾಗೂ ಸರ್ಕಾರಕ್ಕೆ ಸಹಾಯ ಹಸ್ತ ಚಾಚುತ್ತಿದ್ದಾರೆ. ಇದೀಗ ಸಿನಿಮಾ ಗೀತೆ ರಚನೆಕಾರರು ಹಾಗೂ ಸಾಹಿತಿ ಜಯಂತ್ ಕಾಯ್ಕಿಣಿ ಅವರು ವಿಭಿನ್ನವಾಗಿ ಜಾಗೃತಿ ಮೂಡಿಸಿದ್ದಾರೆ. ಹಲವು ನಟ, ನಟಿಯರು ವಿವಿಧ ಬಗೆಯಲ್ಲಿ ಕೊರೊನಾ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಅದರಂತೆ …
Read More »ಕೂಲಿ ಅರಸಿ ನೆರೆ ಗೋವಾಗೆ ತೆರಳಿದ ಕರ್ನಾಟಕದ ಸುಮಾರು 30 ಕ್ಕೂ ಕಾರ್ಮಿಕರು ಸಂಕಷ್ಟಕ್ಕೆ
ಗೋವಾ: ಕೂಲಿ ಅರಸಿ ನೆರೆ ಗೋವಾಗೆ ತೆರಳಿದ ಕರ್ನಾಟಕದ ಸುಮಾರು 30 ಕ್ಕೂ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು, ಸಹಾಯ ಹಸ್ತಕೋರುವಂತೆ ಮನವಿ ಮಾಡಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ್ ತಾಲೂಕಿನ ಹರದಗಟ್ಟಿ ಗ್ರಾಮದ 30 ಕ್ಕೂ ಹೆಚ್ಚು ಜನರು ಕೂಲಿ ಕೆಲಸಕ್ಕಾಗಿ ಗೋವಾಗೆ ತೆರಳಿದ್ದರು. ಆದ್ರೆ ಲಾಕ್ ಡೌನ್ ಹಿನ್ನೆಲೆ ಗ್ರಾಮಕ್ಕೆ ತೆರಳಲಾಗದ ಅತ್ತೆ ಸೂಕ್ತ ವ್ಯವಸ್ಥೆ ಇಲ್ಲದೆ ಪರದಾಡುಂತಾಗಿದೆ. ಪಣಜಿಯ ಮಾಪ್ಸಾ ಬಳಿ ಉಳಿದುಕೊಂಡಿರುವ ಕಾರ್ಮಿಕರು ತಮ್ಮ ಗ್ರಾಮಕ್ಕೆ ವಾಪಸ್ಸಾಗಲು …
Read More »ಲಾಕ್ಡೌನ್ ಎಫೆಕ್ಟ್- ಸಿಗರೇಟ್ ಕೊಡದಿದ್ದಕ್ಕೆ ಬರ್ಬರವಾಗಿ ಕೊಲೆಗೈದ್ರು
ಮುಂಬೈ: ಸಿಗರೇಟ್ ನೀಡಲು ನಿರಾಕರಿಸಿದ್ದಕ್ಕಾಗಿ ವ್ಯಕ್ತಿಯನ್ನು ಇಬ್ಬರು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್ನಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಅರವಿಂದ್ ಶಂಕರ್ ಕುಮಾರ್ (38) ಕೊಲೆಯಾದ ವ್ಯಕ್ತಿ. ಕಲ್ಯಾಣ್ನ ಎಪಿಎಂಸಿ ಮಾರುಕಟ್ಟೆ ಬಳಿ ಬುಧವಾರ ಕೊಲೆಗೈದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಆರೋಪಿಗಳನ್ನು ಬಂಧಿಸಲು ಪೊಲೀಸರು ಶೋಧಕಾರ್ಯ ಅಪ್ರಾರಂಭಿಸಿದ್ದಾರೆ. ಆಗಿದ್ದೇನು?: ಮೃತ ತರಕಾರಿ ವ್ಯಾಪಾರಿ ಅರವಿಂದ್ ತನ್ನ ಸೋದರಸಂಬಂಧಿ ಆನಂದ್ ಗುಪ್ತಾ ಜೊತೆಗೆ ಕಲ್ಯಾಣ್ನ ಗೋವಿಂದ್ ವಾಡಿ …
Read More »ಮೆಜೆಸ್ಟಿಕ್ ಸಂಪೂರ್ಣವಾಗಿ ಲಾಕ್ಡೌನ್ ಪರಿವಾಳಗಳು ಆರಾಮಾಗಿ ವಿಹಾರಿಸುತ್ತಿವೆ.
ಬೆಂಗಳೂರು: ಕೊರೊನಾ ವೈರೆಸ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಸಂಪೂರ್ಣವಾಗಿ ಲಾಕ್ಡೌನ್ ಆಗಿದೆ. ಈ ಹಿನ್ನೆಲೆಯಲ್ಲಿ ಪರಿವಾಳಗಳು ಆರಾಮಾಗಿ ವಿಹಾರಿಸುತ್ತಿವೆ. ಹೌದು..ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಸದಾ ಸಾವಿರಾರು ಜನರು ಓಡಾಡುತ್ತಿದ್ದರು. ಜೊತೆಗೆ ಬೈಕ್, ಕಾರ್, ಬಸ್ ಎಂದು ರಸ್ತೆಗಳು ಯಾವಾಗಲೂ ಜಾಮ್ ಆಗಿರುತ್ತಿತ್ತು. ಆದರೆ ಕೊರೊನಾ ಭೀತಿಯಿಂದ ಪ್ರಧಾನಿ ಮೋದಿ ಅವರು 21 ದಿನ ಲಾಕ್ಡೌನ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಇಂದು ಸಂಪೂರ್ಣ ಸ್ತಬ್ಧವಾಗಿದೆ. ಆದ್ದರಿಂದ ಮೆಜೆಸ್ಟಿಕ್ನಲ್ಲಿ ಪಾರಿವಾಳಗಳು ವಿಹಾರಿಸುತ್ತಿವೆ. ಪಾರಿವಾಳಗಳು …
Read More »ಎಲ್ಲ ಸಾಲಗಳ ಇಎಂಐಗೆ 3 ತಿಂಗಳ ವಿನಾಯ್ತಿ:ಆರ್ಬಿಐ ಗವರ್ನರ್ ಶಕ್ತಿಕಾಂತ್
ಹೊಸ ದಿಲ್ಲಿ: ಕರೊನಾ ವೈರಸ್ ಸೋಂಕು ಹರಡಿರುವ ಹಿನ್ನೆಲೆಯಲ್ಲಿ ರಾಷ್ಟ್ರದಲ್ಲಿ ಉಂಟಾಗಿರುವ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಆರ್ಬಿಐ ರೆಪೋ ದರ ಕಡಿತಗೊಳಿಸಿದೆ. ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೆಪೋ ದರವನ್ನು ಶೇ.5.1ರಿಂದ ಶೇ.4.4ಕ್ಕೆ ಇಳಿಸಲಾಗಿದೆ ಎಂದರು. ರಿವರ್ಸ್ ರೆಪೋ ದರವನ್ನು ಶೇ.90 ಇಳಿಕೆ ಮಾಡಲಾಗಿದೆ. ಸಣ್ಣ ಉದ್ದಿಮೆಗಳು ಅನುಭವಿಸುತ್ತಿರುವ ನಷ್ಟವನ್ನು ಗಮನಿಸಲಾಗಿದೆ. ಕರೊನಾ ವೈರಸ್ ದೇಶಕ್ಕೆ ಕಠಿಣ ಸ್ಥಿತಿಯನ್ನು ತಂದಿದ್ದು, ಇದರ ವಿರುದ್ಧ ನಾವು ಹೋರಾಟ ಮಾಡಬೇಕಿದೆ …
Read More »ಸಾರ್ವಜನಿಕರ ಮೇಲೆ ಲಾಠಿ ಚಾರ್ಜ್ ಮಾಡದಂತೆ ಕಮಿಷನರ್ ಭಾಸ್ಕರ್ ರಾವ್, ನಗರ ಪೊಲೀಸರಿಗೆ ಖಡಕ್ ಆದೇಶ
ಬೆಂಗಳೂರು: ಲಾಕ್ಡೌನ್ ಆದೇಶ ಉಲ್ಲಂಘಿಸುವ ಸಾರ್ವಜನಿಕರ ಮೇಲೆ ಲಾಠಿ ಚಾರ್ಜ್ ಮಾಡದಂತೆ ಕಮಿಷನರ್ ಭಾಸ್ಕರ್ ರಾವ್, ನಗರ ಪೊಲೀಸರಿಗೆ ಖಡಕ್ ಆದೇಶ ನೀಡಿದ್ದಾರೆ. ಪೊಲೀಸರು ಸಾರ್ವಜನಿಕರೊಂದಿಗೆ ಸಂಯಮದಿಂದ ವರ್ತಿಸಬೇಕು. ವೃದ್ದರು, ಮಹಿಳೆಯರಿಗೆ ಗೌರವ ನೀಡಿ. ಕಡ್ಡಾಯವಾಗಿ ಸಮವಸ್ತ್ರ ಧರಿಸಿಬೇಕು. ಅವಶ್ಯಕತೆ ಇದ್ದರೆ ಕೇವಲ ಕೆಎಸ್ಆರ್ಪಿ ಮತ್ತು ಸಿಎಆರ್ ಪೊಲೀಸರು ಮಾತ್ರ ಬಳಸಬಹುದು. ಆದ್ರೆ ಸಿವಿಲ್ ಪೊಲೀಸರು ಯಾವುದೇ ಕಾರಣಕ್ಕೂ ಅನಾವಶ್ಯಕವಾಗಿ ಲಾಠಿ ಬಳಸಬೇಡಿ. ಮೈಕ್ಗಳನ್ನ ಬಳಸಿ ಅನೌನ್ಸ್ಮೆಂಟ್ ಮಾಡುವ ಮೂಲಕ …
Read More »ಕೃಷಿ ಉತ್ಪನ್ನಗಳನ್ನು ಜಿಲ್ಲಾ ಎಪಿಎಂಸಿ ಮಾರುಕಟ್ಟೆಗೆ ತರುವುದರಿಂದ ಹೆಚ್ಚಿನ ಜನಸಂದಣಿ ಉಂಟಾಗುತ್ತಿದೆ.
ಜಿಲ್ಲೆಯ ರೈತರು ತರಕಾರಿ ಸೇರಿದಂತೆ ಇತರೆ ಕೃಷಿ ಉತ್ಪನ್ನಗಳನ್ನು ಜಿಲ್ಲಾ ಎಪಿಎಂಸಿ ಮಾರುಕಟ್ಟೆಗೆ ತರುವುದರಿಂದ ಹೆಚ್ಚಿನ ಜನಸಂದಣಿ ಉಂಟಾಗುತ್ತಿದೆ. ಆದಕಾರಣ ರೈತರು ಆಯಾ ತಾಲ್ಲೂಕಿನ ಎಪಿಎಂಸಿ ಅಥವಾ ಸ್ಥಳೀಯ ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೋವಿಡ್-೧೯ ಹರಡದಂತೆ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆದರೆ ರೈತರು ತರಕಾರಿ ಮತ್ತಿತರ ಕೃಷಿ ಉತ್ಪನ್ನಗಳನ್ನು ಜಿಲ್ಲಾ …
Read More »
Laxmi News 24×7