ಕೋವಿಡ್-೧೯ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಇದುವರೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಎಲ್ಲ ಐದೂ ವರದಿಗಳು ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಒಟ್ಟಾರೆ ಐದು ಜನರ ಗಂಟಲು ದ್ರವಗಳ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿತ್ತು. ಇದೀಗ ಪ್ರಯೋಗಾಲಯದಿಂದ ಲಭಿಸಿರುವ ವರದಿ ಪ್ರಕಾರ ಎಲ್ಲ ಐದೂ ಮಾದರಿಗಳ ಫಲಿತಾಂಶ ನೆಗೆಟಿವ್ ಬಂದಿರುತ್ತದೆ. ಎರಡು ಮಾದರಿ ಬೆಂಗಳೂರು ಹಾಗೂ ಮೂರು ಮಾದರಿಗಳನ್ನು ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು …
Read More »ಅನುಮತಿ ಪಡೆಯದೆ ಕಾರ್ಯನಿರ್ವಹಿಸುತ್ತಿರುವ ಕಾರ್ಖಾನೆ, ಕಟ್ಟಡ ಮಾಲೀಕರಿಗೆ ಕಾದಿದೆ ಗ್ರಹಚಾರ..
ಬೆಂಗಳೂರು, ಮಾ.23- ಬೆಂಗಳೂರು ಮಹಾನಗರದಲ್ಲಿ ಸಿಇ ಹಾಗೂ ಸಿಇಒ ನಿಂದ ಅನುಮತಿ ಪಡೆಯದೆ ಕಾರ್ಯ ನಿರ್ವಹಿಸುತ್ತಿರುವ ಕಾರ್ಖಾನೆಗಳು ಮತ್ತು ಕಟ್ಟಡಗಳ ಮಾಲೀಕರ ವಿರುದ್ಧ ಶೀಘ್ರವೇ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅರಣ್ಯ ಸಚಿವ ಆನಂದ್ಸಿಂಗ್ ವಿಧಾನ ಪರಿಷತ್ನಲ್ಲಿ ಹೇಳಿದರು. ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಪಿ.ಆರ್.ರಮೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೆಂಗಳೂರು ಮಹಾನಗರದಲ್ಲಿ ಕಾನ್ಸೆಂಟ್ ಫಾರ್ ಎಸ್ಟಾಬ್ಲಿಷ್ಮೆಂಟ್ ಹಾಗೂ ಕಾನ್ಸೆಂಟ್ ಫಾರ್ ಆಪರೇಷನ್ನಿಂದ ಕಟ್ಟಡಗಳು ಮತ್ತು ಕಾರ್ಖಾನೆಗಳು ಕಡ್ಡಾಯವಾಗಿ …
Read More »ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆ ರಾಜ್ಯದ ಸುಮಾರು 10 ಸಾವಿರ ಕಾರ್ಖಾನೆಗಳು ಇಂದಿನಿಂದ ಬಂದ್
ಬೆಂಗಳೂರು: ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆ ರಾಜ್ಯದ ಸುಮಾರು 10 ಸಾವಿರ ಕಾರ್ಖಾನೆಗಳು ಇಂದಿನಿಂದ ಬಂದ್ ಆಗಲಿವೆ ಎಂದು ಎಫ್ ಕೆಸಿಸಿಐ ಅಧ್ಯಕ್ಷ ಜನಾರ್ಧನ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಯೇ 4500ಕ್ಕೂ ಅಧಿಕ ಕಾರ್ಖಾನೆಗಳಿವೆ. ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಬೇಕು, ಪ್ರತಿ ಕಾರ್ಮಿಕರಿಗೆ ಕಾರ್ಖಾನೆಗಳೇ ವೇತನ ನೀಡಬೇಕು. ಕಾರ್ಖಾನೆಗಳನ್ನು ಇಂದಿನಿಂದಲೇ ಎಲ್ಲರೂ ಬಂದ್ ಮಾಡಬೇಕು. ಕಾರ್ಮಿಕರ ಆರೋಗ್ಯದ ಮೇಲೆ ನಿಗಾ ವಹಿಸಬೇಕು. ಮಾರ್ಚ್ 31 ರ ವರೆಗೂ ರಾಜ್ಯಾದ್ಯಂತ ಕಾರ್ಖಾನೆಗಳು ಕ್ಲೋಸ್ …
Read More »ಕೊರೊನಾ ಪೀಡಿತರಲ್ಲಿ ಶೇ.80 ಮಂದಿಗೆ ಅಲ್ಪಜ್ವರ, ನೆಗಡಿ :ಭಯ ಮತ್ತು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ
ನವದೆಹಲಿ, ಮಾ.23-ದೇಶದಲ್ಲಿ ಕೊರೊನಾ ಪೀಡಿತರದಲ್ಲಿ ಶೇಕಡ 80ರಷ್ಟು ಜನರಿಗೆಅಲ್ಪಜ್ವತ ಮತ್ತು ನೆಗಡಿ (ಶೀತ) ಮಾತ್ರ ಕಂಡು ಬಂದಿದೆ. ಹೀಗಾಗಿ ಜನರು ಭಯ ಮತ್ತು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಇಂಡಿಯನ್ಕೌನ್ಸಿಲ್ಆಫ್ ಮೆಡಿಕಲ್ ರಿಸರ್ಚ್-ಐಸಿಎಂಆರ್) ಸ್ಪಷ್ಟಪಡಿಸಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿರುವ ಐಸಿಎಂಆರ್ ಮಹಾ ನಿರ್ದೇಶಕ ಬಲರಾಂ ಭಾರ್ಗವ, ಕೋವಿಡ್-19 ವೈರಾಣು ಸೋಂಕು ಹಬ್ಬದಂತೆ ತಡೆಗಟ್ಟಲುಅಗತ್ಯವಾದಎಲ್ಲ ಮುನ್ನೆಚ್ಚರಿಕೆಗಳು ಮತ್ತು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ವಿವರಿಸಿದರು.ನಾವು ಈಗಾಗಲೇ …
Read More »ಮಂಗಳೂರು;:ಭಟ್ಕಳ ಮೂಲದ ಯುವಕನಲ್ಲಿ ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ.
ಮಂಗಳೂರು; ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಈ ನಡುವೆ ಭಟ್ಕಳ ಮೂಲದ ಯುವಕನಲ್ಲಿ ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ. ಭಟ್ಕಳದ 22 ವರ್ಷದ ಯುವಕ ಮಾರ್ಚ್ 19ರಂದು ದುಬೈನಿಂದ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿದ್ದ. ಏರ್ ಪೋರ್ಟ್ ನಲ್ಲಿ ತಪಾಸಣೆ ನಡೆಸಿದಾಗ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದವು ಈ ಹಿನ್ನಲೆಯಲ್ಲಿ ಆತನನ್ನು ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಇದೀಗ ಯುವಕನಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು …
Read More »ನವದೆಹಲಿ:ಲಾಕ್ಡೌನ್ ಅನ್ನು ಹಲವರು ಗಂಭೀರವಾಗಿ ಪರಿಗಣಿಸುತ್ತಿಲ್ಲ.:ನರೇಂದ್ರ ಮೋದಿ
ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಹೇರಿರುವ ಲಾಕ್ಡೌನ್ ಅನ್ನು ಹಲವರು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಈ ಕಟ್ಟುನಿಟ್ಟಿನ ಆದೇಶವನ್ನು ಜನರು ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶದ 80ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣಗಳು ಕಂಡು ಬಂದಿವೆ. 400ಕ್ಕೂ ಅಧಿಕ ಜನರಿಗೆ ಸೋಂಕು ತಗುಲಿದೆ. ದೇಶದಲ್ಲಿ ಈ ವರೆಗೆ ಕೊರೊನಾಗೆ 8 ಜನ ಮೃತಪಟ್ಟಿದ್ದಾರೆ. ಹೀಗಾಗಿ ಕೊರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರದ ಮಾರ್ಚ್ …
Read More »ಹುಬ್ಬಳ್ಳಿಯಲ್ಲಿ ಕೋರೋನಾ ತಪಾಸಣೆಗೆ ಮುಗಿಬಿದ್ದ ಜನ.
. ಹುಬ್ಬಳ್ಳಿಯಲ್ಲಿ ಕೋರೋನಾ ತಪಾಸಣೆಗೆ ಮುಗಿಬಿದ್ದ ಜನ… ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆಯ ಬಳಿ ಸರದಿ ಸಾಲಿನಲ್ಲಿ ನಿಂತು ತಪಾಸಣೆ ಮಾಡಿಸಿಕೊಳ್ಳುತ್ತಿರೋ ಜನ… ತಪಾಸಣೆ ಮಾಡುವವರ ಬಳಿ ಥರ್ಮಲ್ ಸ್ಕ್ರೀನಿಂಗ್ ಮಾಡಿಸಿಕೊಳ್ಳುತ್ತಿರೋ ಜನ.. . ಸ್ವಯಂ ಪ್ರೇರಿತರಾಗಿ ಬಂದು ತಪಾಸಣೆ ಮಾಡಿಸಿಕೊಳ್ಳುತ್ತಿರೋ ಜನ… ತಪಾಸಣೆ ಮಾಡಿಸಿಕೊಂಡವರ ಹೆಸರನ್ನು ನಮೋದಿಸಿಕೊಂಡು ತಪಾಸಣೆ ಮಾಡುತ್ತಿರೋ ಅರೋಗ್ಯ ಇಲಾಖೆ… ತಪಾಸಣೆ ಮಾಡುವ ವೇಳೆ ಕೋರೋನಾ ಶಂಕಿತ ಲಕ್ಷಣಗಳು ಕಂಡು ಬಂದರೆ ಅವರ ಕುಟುಂಬದ ಮೇಲೆ ನಿಗಾ …
Read More »ಮಹಾರಾಷ್ಟ್ರದಲ್ಲಿ ಕೊರೊನಾಗೆ ಮೂರನೇ ವ್ಯಕ್ತಿ ಬಲಿಯಾಗಿದ್ದು, ಕೊರೊನಾ ದೇಶದಲ್ಲಿ ಈವರೆಗೂ 8 ಜನರನ್ನು ಬಲಿಪಡೆದುಕೊಂಡಿದೆ
ವಿಶ್ವಾದ್ಯಂತ ಹೆಚ್ಚುತ್ತಿರುವ ಮಾರಣಾಂತಿಕ ಕೊರೊನಾ ವೈರಸ್ಗೆ ದೇಶದಲ್ಲಿ ಮತ್ತೊಂದು ಬಲಿಯಾಗಿದೆ. ಮುಂಬೈನಲ್ಲಿ ಕೊರೊನಾ ಸೋಂಕಿಗೆ ವಿದೇಶಿ ಪ್ರವಾಸಿಗ ಸಾವನ್ನಪ್ಪಿದ್ದು, ಈವರೆಗೆ ದೇಶದಲ್ಲಿ ಒಟ್ಟು 8 ಜನರು ಮೃತಪಟ್ಟಿದ್ದಾರೆ. ಮುಂಬೈನಲ್ಲಿ 68 ವರ್ಷದ ಫಿಲಿಪೈನ್ಸ್ ಪ್ರಜೆ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಮುಂಬೈನ ಕಸ್ತೂರಬಾ ಆಸ್ಪತ್ರೆಯಿಂದ ಪ್ರೈವೇಟ್ ಆಸ್ಪತ್ರೆಗೆ ವ್ಯಕ್ತಿಯನ್ನು ಸ್ಥಳಾಂತರಿಸಲಾಗಿತ್ತು. ಅವರು ಮೂತ್ರಪಿಂಡ ವೈಫಲ್ಯ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಕೊರೊನಾಗೆ ಮೂರನೇ ವ್ಯಕ್ತಿ …
Read More »ದೇಶದೆಲ್ಲೆಡೆ ಇಂದು ನಮ್ಮನ್ನು ಕಾಯುತ್ತಿರುವ ವೈದ್ಯರಿಗಾಗಿ ಚಪ್ಪಾಳೆ
: ದೇಶದೆಲ್ಲೆಡೆ ಇಂದು ನಮ್ಮನ್ನು ಕಾಯುತ್ತಿರುವ ವೈದ್ಯರಿಗಾಗಿ ಚಪ್ಪಾಳೆ ತಟ್ಟಿ ಅವರಿಗೆ ಪ್ರೋತ್ಸಾಹದ ಮಹಾಮಳೆಯೇ ಸುರಿದಿದೆ. ಇಂದು ಸಂಜೆ ಐದು ಗಂಟೆಗೆ ಸರಿಯಾಗಿ ದೇಶದಾದ್ಯಂತ ಜನರು ಮಹಡಿ ಹಾಗೂ ರಸ್ತೆಯಲ್ಲಿ ನಿಂತು ನಮ್ಮನ್ನು ಕಾಯುತ್ತಿರುವ ವೈದ್ಯರು ಹಾಗೂ ನಮ್ಮನ್ನು ಸುರಕ್ಷಿತವಾಗಿ ಡುತ್ತಿರುವ ಪೊಲೀಸರು ಹಾಗೂ ವೈದ್ಯಕೀಯ ಸಿಬ್ಬಂದಿಗಳು ಪತ್ರಕರ್ತರಿಗೆ ಅಭಿಮಾನದ ಹೊಳೆಯನ್ನೇ ಹರಿಸಿ ಚಪ್ಪಾಳೆ ತಟ್ಟಿ, ಜಾಗತ ಬಾರಿಸಿ, ಶಂಖ ಊದಿ, ತಟ್ಟೆ ಚಮಚ ಗಳಿಂದ ಸಡ್ಡು ಮಾಡುತ್ತಾ ತಮ್ಮ …
Read More »ಹೈದರಾಬಾದ್:ಸತತವಾಗಿ ಸೆಕ್ಸ್ ಮಾಡಿದರೆ ಕೊರೊನಾ ವೈರಸ್ ತಡೆಯಬಹುದು ಎಂದು ಬರೆದಕೊಂಡಿದ್ದಾರೆ. ಶ್ರೀರೆಡ್ಡಿ
; ಹೈದರಾಬಾದ್: ಟಾಲಿವುಡ್ ನಟಿ ಶ್ರೀ ರೆಡ್ಡಿ ಹಾಗೂ ವಿವಾದಗಳಿಗೂ ಎಲ್ಲಿದ ನಂಟು. ದೇಶಾದ್ಯಂತ ನಟ-ನಟಿಯರು, ಸೆಲೆಬ್ರಿಟಿಗಳು ಮಾರಣಾಂತಿಕ ಕೊರೊನಾ ವೈರಸ್ ಬಗ್ಗೆ ಜನ ಜಾಗೃತಿ ಮೂದಿಸುತ್ತಿದ್ದರೆ ನಟಿ ಶ್ರೀ ರೆಡ್ಡಿ ಕೊರೊನಾ ತಡೆಗೆ ವಿವಾದಾತ್ಮಕ ಸಲಹೆಯೊಂದನ್ನು ನೀಡಿದ್ದಾಳೆ ಶ್ರೀರೆಡ್ಡಿ ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ವೊಂದನ್ನು ಮಾಡಿದ್ದು, ಸತತವಾಗಿ ಸೆಕ್ಸ್ ಮಾಡಿದರೆ ಕೊರೊನಾ ವೈರಸ್ ತಡೆಯಬಹುದು ಎಂದು ಬರೆದಕೊಂಡಿದ್ದಾರೆ. ಶ್ರೀರೆಡ್ಡಿ ಅವರ ಈ ಪೋಸ್ಟ್ ನೋಡಿದ ನೆಟ್ಟಿಗರು ಹಿಗ್ಗಾಮುಗ್ಗಾ ಟ್ರೋಲ್ …
Read More »
Laxmi News 24×7