ನವದೆಹಲಿ/ಮುಂಬೈ, ಮಾ.15- ದೇಶದಲ್ಲಿ ಮಾರಕ ಕೊರೊನಾ ಸೋಂಕಿನ ದೃಢೀಕೃತ ಪ್ರಕರಣಗಳ ಸಂಖ್ಯೆ 103ಕ್ಕೆ ಏರಿದೆ. ಅಲ್ಲದೆ ಇನ್ನೂ ಹಲವು ಶಂಕಿತರಲ್ಲಿ ಮತ್ತಷ್ಟು ಸೋಂಕು ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದ್ದು, ಮುಂದಿನ 24 ತಾಸುಗಳಲ್ಲಿ ಈ ಸಂಖ್ಯೆಯಲ್ಲಿ ಏರಿಕೆಯಾಗುವ ಆತಂಕವಿದೆ. ದೇಶದಲ್ಲಿ ಅತ್ಯಂತ ಹೆಚ್ಚು ಸೋಂಕು ಪ್ರಕರಣಗಳು ಮಹಾರಾಷ್ಟ್ರದಲ್ಲಿ ಪತ್ತೆಯಾಗಿದೆ. ಅಲ್ಲಿ ಕೊರೊನಾ ಪೀಡಿತರ ಸಂಖ್ಯೆ 31ಕ್ಕೇರಿದೆ. ಕೇರಳ ಎರಡನೆ ಸ್ಥಾನದಲ್ಲಿದ್ದು , ಅಲ್ಲಿ 26 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ …
Read More »ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಲು ಕೇಂದ್ರಕ್ಕೆ ಕಾಂಗ್ರೆಸ್ ಒತ್ತಾಯ
ಬೆಂಗಳೂರು, ಮಾ.14- ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿರುವುದರಿಂದ ಕೇಂದ್ರ ಸರ್ಕಾರ ಇಂಧನ ಬೆಲೆಯನ್ನು ಕನಿಷ್ಠ 15 ರೂ.ಗಳನ್ನಾದರು ಕಡಿಮೆ ಮಾಡಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವಂತೆ ಕಾಂಗ್ರೆಸ್ ಒತ್ತಾಯಿಸಿದೆಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊರೊನಾ ವೈರಸ್ ಹಾಗೂ ಇನ್ನಿತರ ವಿದ್ಯಮಾನಗಳಿಂದ ಕಚ್ಚಾ ತೈಲದ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ. ಆದರೆ, ಈ ಹಂತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಸುವ ಬದಲಾಗಿ ಆಮದು ಶುಲ್ಕವನ್ನು ಹೆಚ್ಚಿಸಿ ಪ್ರತಿ ಲೀಟರ್ಗೆ …
Read More »ಕೊರೊನಾ ಆತಂಕದಿಂದ ಶೇಕ್ ಹ್ಯಾಂಡ್ ಬದಲು ‘ನಮಸ್ತೆ’ಗೆ ಹೊರೆಹೋದ ಟ್ರಂಪ್
ವಾಷಿಂಗ್ಟನ್, ಮಾ.13- ವಿಶ್ವವನ್ನು ಕಂಗೆಡಿಸಿರುವ ಮಾರಕ ಕೊರೊನಾ ಆತಂಕದಿಂದ ಜಗತ್ತಿನ ದೊಡ್ಡಣ್ಣ ಅಮೆರಿಕ ಕೂಡ ಹೆದರಿ ಕಂಗಾಲಾಗಿದೆ. ಇದಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಹೊರತಾಗಿಲ್ಲ. ತಮ್ಮನ್ನು ಭೇಟಿ ಮಾಡುವ ವಿವಿಧ ದೇಶಗಳ ಅಧಿಪತಿಗಳು ಮತ್ತು ಗಣ್ಯಾತಿಗಣ್ಯರನ್ನು ಟ್ರಂಪ್ ಹಸ್ತಲಾಂಘವ ಮಾಡಿ ಆಲಂಗಿಸಿಕೊಳ್ಳುವ ಪರಿಪಾಠವಿತ್ತು. ಆದರೆ, ಕೊರೊನಾ ವೈರಾಣು ಆತಂಕದಿಂದಾಗಿ ಟ್ರಂಪ್ ಮಹಾಶಯರು ಈಗ ಶೇಕ್ಹ್ಯಾಂಡ್ ಮಾಡುವ ಬದಲು ಭಾರತೀಯ ಶೈಲಿಯ ನಮಸ್ತೆ ಸಂಪ್ರದಾಯವನ್ನು ಪಾಲಿಸುತ್ತಿದ್ದಾರೆ. ನಿನ್ನೆ ತಮ್ಮನ್ನು ಭೇಟಿ …
Read More »ಉನ್ನಾವೋ ಸಂತ್ರಸ್ತೆಯ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಕುಲ್ದೀಪ್ಗೆ 10 ವರ್ಷ ಜೈಲು..
ನವದೆಹಲಿ,ಮಾ.13- ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಉನ್ನಾವೊ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ತಂದೆಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿಯ ನ್ಯಾಯಾಲಯವೊಂದು ಉಚ್ಛಾಟಿತ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸೆನಗರ್ಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಜಿಲ್ಲಾ ನ್ಯಾಯಾಧೀಶ ಧರ್ಮೇಶ್ ಶರ್ಮ ಅವರು ಕುಲ್ದೀಪ್ ಮತ್ತು ಆತನ ಸಹೋದರ ಅತುಲ್ ಸಿಂಗ್ ಸೆನಗರ್ ಅವರಿಗೆ ಸಂತ್ರಸ್ತ ಕುಟುಂಬಕ್ಕೆ ತಲಾ 10 ಲಕ್ಷ ರೂ.ಗಳಂತೆ 20 ಲಕ್ಷ ರೂ.ಗಳ ಪರಿಹಾರ ನೀಡುವಂತೆಯೂ …
Read More »ಭಾರತದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಪಾಕಿಸ್ತಾನಕ್ಕೆ ಜೈ ಅನ್ನುವವರು ಯಾರೇ ಆಗಲಿ ಎಷ್ಟೇ ಪ್ರಭಾವಿಗಳಾಗಲಿ ಅಂತಹವರನ್ನು ನಿರ್ದಾಕ್ಷಿಣ್ಯ ವಾಗಿ ಬಂಧಿಸಿ ಜೈಲಿಗೆ ಹಾಕುತ್ತೇವೆ
ಬೆಂಗಳೂರು, ಮಾ : ಭಾರತದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಪಾಕಿಸ್ತಾನಕ್ಕೆ ಜೈ ಅನ್ನುವವರು ಯಾರೇ ಆಗಲಿ ಎಷ್ಟೇ ಪ್ರಭಾವಿಗಳಾಗಲಿ ಅಂತಹವರನ್ನು ನಿರ್ದಾಕ್ಷಿಣ್ಯ ವಾಗಿ ಬಂಧಿಸಿ ಜೈಲಿಗೆ ಹಾಕುತ್ತೇವೆ ಎಂದು ವಿಧಾನ ಪರಿಷತ್ ಸಭಾ ನಾಯಕ ಹಾಗೂ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು. ಸಂವಿಧಾನದ ಮೇಲೆ ಮುಂದುವರೆದ ಚರ್ಚೆಯಲ್ಲಿ ಜೆಡಿಎಸ್ನ ಟಿ.ಎ.ಶರವಣ ಅವರು ಸಿಎಎ ವಿರೋಧಿಸುವವರನ್ನು ಇಂದು ತುರ್ತು ಪರಿಸ್ಥಿತಿಯಲ್ಲಿ ಬಂಧಿಸಿದಂತೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ವರನ್ನು ಸರ್ಕಾರ …
Read More »ಇಂದು ಬೆಂಗಳೂರಿಗೆ ಬರುತ್ತಿದ್ದಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಅತೃಪ್ತರಿಂದ ಅಹವಾಲು ಸ್ವೀಕಾರ
ಬೆಂಗಳೂರು, ಫೆ.13- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಸದ್ಯದ ಬೆಳವಣಿಗೆಗಳ ಬಗ್ಗೆ ರಾಜ್ಯ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ಸಂಪುಟ ವಿಸ್ತರಣೆ ನಂತರ ಕೆಲವರು ಅತೃಪ್ತಿಗೊಂಡವರು ಹಾಗೂ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಉಮೇಶ್ ಕತ್ತಿ, ಎಸ್.ಎ.ರಾಮದಾಸ್ ಸೇರಿದಂತೆ ಹಲವರು ತಮ್ಮ ಬೆಂಗಳೂರು, ಫೆ.13- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಸದ್ಯದ ಬೆಳವಣಿಗೆಗಳ ಬಗ್ಗೆ ರಾಜ್ಯ ನಾಯಕರೊಂದಿಗೆ …
Read More »‘ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿದ್ದೆವೆ
ಬೆಂಗಳೂರು,ಮಾ.13- ಬೆಂಗಳೂರು ನಗರ ಸೇರಿದಂತೆ ಯಾವುದೇ ಪ್ರದೇಶಕ್ಕೂ ನೀರಿನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸುವುದಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು. ವಿಧಾನಸೌಧದ ತಮ್ಮ ಕಚೇರಿಯಲ್ಲಿಂದು ಜಲಸಂಪನ್ಮೂಲ ಇಲಾಖೆಯ ಸಿವಿಲ್ ಇಂಜಿನಿಯರಿಂಗ್ ಸಂಘದ ಡೈರಿ ಮತ್ತು ಕ್ಯಾಲೆಂಡರ್ ಬಿಡುಗಡೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಉತ್ತಮ ಮಳೆಯಾಗಿದೆ. ಎಲ್ಲ ಜಲಾಶಯಗಳಲ್ಲೂ ಸಾಕಷ್ಟು ನೀರಿದೆ. ಆ ನೀರನ್ನು ಕಾಪಾಡಿಕೊಂಡು ಸರಿಯಾಗಿ ನಿರ್ವಹಣೆ ಮಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಈಗಾಗಲೇ …
Read More »ಕೊರೊನಾ ಭೀತಿ- ಕೋಳಿ ಉದ್ಯಮದಲ್ಲಿ 1 ಸಾವಿರ ಕೋಟಿ ರೂ. ನಷ್ಟ
ಕೊರೊನಾ ಭೀತಿ- ಕೋಳಿ ಉದ್ಯಮದಲ್ಲಿ 1 ಸಾವಿರ ಕೋಟಿ ರೂ. ನಷ್ಟ ಬೆಂಗಳೂರು: ವಿಶ್ವದೆಲ್ಲೆಡೆ ಹಬ್ಬಿರುವ ಕೊರೊನಾ ಭೀತಿಗೆ ರಾಜ್ಯದ ಕೋಳಿ ಸಾಕಾಣಿಕಾ ರೈತರು, ಉದ್ಯಮಿಗಳು ತೀವ್ರ ನಷ್ಟಕ್ಕೆ ಸಿಲುಕಿದ್ದಾರೆ. ಫೆಬ್ರವರಿ ತಿಂಗಳಿಂದ ಇಂದಿನವರೆಗೆ ಒಂದು ಸಾವಿರ ಕೋಟಿ ರೂಪಾಯಿ ಕೋಳಿ ಉದ್ಯಮದಲ್ಲಿ ನಷ್ಟವಾಗಿದೆ ಎಂದು ಕರ್ನಾಟಕ ಸಹಕಾರಿ ಕುಕ್ಕುಟ ಮಹಾಮಂಡಳಿ ಅಧ್ಯಕ್ಷ ಡಿ.ಕೆ. ಕಾಂತರಾಜು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಒಟ್ಟು 15 ಸಾವಿರ ರೈತರು ಕೋಳಿ ಸಾಕಾಣಿಕೆ ಮಾಡುತ್ತಿದ್ದು, 15 …
Read More »ಕೊರೊನಾ ಸೋಂಕಿನಿಂದ ಕಲ್ಯಾಣ ಕರ್ನಾಟಕದ ಸುಪ್ರಸಿದ್ಧ ಶ್ರೀ ಶರಣಬವೇಶ್ವರ ಜಾತ್ರೆಯನ್ನು ರದ್ದುಗೊಳಿಸಲಾಗಿದೆ.
ಕಲಬುರಗಿ: ಕೊರೊನಾ ಸೋಂಕಿನಿಂದ 76 ವರ್ಷದ ವೃದ್ಧ ಮೃತಪಟ್ಟ ಹಿನ್ನೆಲೆಯಲ್ಲಿ ಶುಕ್ರವಾರ ನಡೆಯಬೇಕಿದ್ದ ಕಲ್ಯಾಣ ಕರ್ನಾಟಕದ ಸುಪ್ರಸಿದ್ಧ ಶ್ರೀ ಶರಣಬವೇಶ್ವರ ಜಾತ್ರೆಯನ್ನು ರದ್ದುಗೊಳಿಸಲಾಗಿದೆ. ಕೆಮ್ಮು, ಜ್ವರ ಇದ್ದರೆ ಶ್ರೀ ಶರಣಬಸವೇಶ್ವರ ಜಾತ್ರೆಗೆ ಬರಬೇಡಿ ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ಈ ಮೊದಲು ಹೇಳಿದ್ದರು. ಆದರೆ ವೃದ್ಧ ಮೃತಪಟ್ಟಿದ್ದು ಕೊರೊನಾ ವೈರಸ್ನಿಂದಲೇ ಎಂದು ಲ್ಯಾಬ್ ರಿಪೋರ್ಟ್ ಬರುತ್ತಿದ್ದಂತೆ ಜಿಲ್ಲೆಯಲ್ಲಿ ಹೈಲರ್ಟ್ ಗೆ ಜಿಲ್ಲಾಡಳಿತ ಮುಂದಾಗಿದೆ. ಈ ನಿಟ್ಟಿನಲ್ಲಿ ಜಾತ್ರೆಯ ಆಯೋಜಕರು ಕೂಡ …
Read More »ವೀಸಾ ನಿರ್ಬಂಧ : ಏ.15ರ ವರೆಗೆ ವಿದೇಶಿ ಆಟಗಾರರು ಅಲಭ್ಯ, ಐಪಿಎಲ್ ಮೇಲೆ ಅನಿಶ್ಚಿತತೆ ಕಾರ್ಮೋಡ
ವೀಸಾ ನಿರ್ಬಂಧ : ಏ.15ರ ವರೆಗೆ ವಿದೇಶಿ ಆಟಗಾರರು ಅಲಭ್ಯ, ಐಪಿಎಲ್ ಮೇಲೆ ಅನಿಶ್ಚಿತತೆ ಕಾರ್ಮೋಡ ಮುಂಬೈ/ನವದೆಹಲಿ – ಕೊರೋನಾ ವೈರಸ್ ಕಾಟದಿಂದಾಗಿ ಕೇಂದ್ರ ಸರ್ಕಾರವು ಏ.15ರ ವರೆಗೆ ವೀಸಾ ನಿರಾಕರಿಸಿರುವ ಹಿನ್ನೆಲೆಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2020 ಕ್ರಿಕೆಟ್ ಪಂದ್ಯಾವಳಿ ಮೇಲೆ ಅನಿಶ್ಚಿತತೆಯ ಕಾರ್ಮೋಡ ಆವರಿಸಿದೆ. ಕೇಂದ್ರ ಸರ್ಕಾರದ ಕಟ್ಟುನಿಟ್ಟಿನ ಕ್ರಮದಿಂದಾಗಿ ಏ.15ರ ವರೆಗೆ ವಿವಿಧ ದೇಶಗಳ ಕ್ರಿಕೆಟ್ ಪಟುಗಳು ಐಪಿಎಲ್ಗೆ ಅಲಭ್ಯವಾಗಿರುವುದರಿಂದ ಈ ಪಂದ್ಯಾವಳಿ ನಡೆಯುವುದು …
Read More »
Laxmi News 24×7