ಬೆಂಗಳೂರು: ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೋಮವಾರ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ. ಸೋಮವಾರ ಯಾವುದೇ ರೀತಿಯ ಮಾಂಸ ಹಾಗೂ ಹಸಿ ಮೀನು ಮಾರಾಟ ಮಾಡಬಾರದು. ಯಾವುದೇ ಮಾಂಸ ಮಾರಾಟದ ಅಂಗಡಿಗಳು, ಕೋಳಿ ಅಂಗಡಿಗಳು, ಮೀನುಮಾರಾಟ ಮಾಡಬಾರದು. ಆದೇಶ ಮೀರಿ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಪಶುಪಾಲನೆ …
Read More »ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ. ನಗರಸಭೆಗೆ ಬಿಗಿ ಪೊಲೀಸ್ ಬಂದೋಬಸ್ತ್
ಮುಧೋಳ : ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಹಿನ್ನೆಲೆ ನಗರಸಭೆ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಮಧ್ಯಾಹ್ನ ಎರಡು ಗಂಟೆ ವೇಳೆಗೆ ಆಯ್ಕೆಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಮುಂಜಾಗೃತ ಕ್ರಮವಾಗಿ ನಗರಸಭೆ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಸೂಕ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಜಿದ್ದಾಜಿದ್ದಿನ ಕಾಳಗಕ್ಕೆ ಸಿದ್ದವಾಗಿರುವ ನಗರಸಭೆ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಕೈ-ಕಮಲ ಪಡೆಗಳ …
Read More »11 ದಿನಗಳ ಮುಷ್ಕರ ಹಿಂಪಡೆದ ಭಾರತೀಯ ವೈದ್ಯಕೀಯ ಸಂಘ
ನವದೆಹಲಿ: ಅಖಿಲ ಭಾರತ ವೈದ್ಯಕೀಯ ಸಂಘದ ಒಕ್ಕೂಟವು 11 ದಿನಗಳಿಂದ ನಡೆಸುತ್ತಿದ್ದ ಮುಷ್ಕರವನ್ನು ಹಿಂತೆಗೆದುಕೊಂಡಿದೆ. ಕೋಲ್ಕತ್ತಾದಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಕರೆ ನೀಡಲಾಗಿದ್ದ 11 ದಿನಗಳ ಮುಷ್ಕರವನ್ನು ಸುಪ್ರೀಂ ಕೋರ್ಟ್ನ ಸಕಾರಾತ್ಮಕ ನಿರ್ದೇಶನಗಳನ್ನು ಅನುಸರಿಸಿ ಕೊನೆಗೊಳಿಸಲು ಫೆಡರೇಶನ್ ಆಫ್ ಆಲ್ ಇಂಡಿಯಾ ಮೆಡಿಕಲ್ ಅಸೋಸಿಯೇಶನ್(ಎಫ್ಐಎಂಎ) ಗುರುವಾರ ನಿರ್ಧರಿಸಿದೆ. ಸುಪ್ರೀಂ ಕೋರ್ಟ್ ಪ್ರತಿಭಟನಾನಿರತ ವೈದ್ಯರಿಗೆ ಕೆಲಸವನ್ನು ಪುನರಾರಂಭಿಸಲು ಕೇಳಿಕೊಂಡಿತು. ಯಾವುದೇ ಪ್ರತಿಕೂಲ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಭರವಸೆ ನೀಡಿತು.
Read More »ಏಷ್ಯಾದ ಶ್ರೀಮಂತ ಗ್ರಾಮ: ಪ್ರತಿಯೊಬ್ಬರ ಖಾತೆಯಲ್ಲಿದೆ ₹22ಲಕ್ಷ
ಗಾಂಧಿನಗರ: ಗುಜರಾತ್ನ ಭುಜ್ ನಗರದ ಹೊರವಲಯದಲ್ಲಿರುವ ಮಾಧಾಪರ್ ಏಷ್ಯಾದಲ್ಲೇ ಅತ್ಯಂತ ಶ್ರೀಮಂತ ಗ್ರಾಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ವರದಿಯಾಗಿದೆ. 2011ರಲ್ಲಿ 17 ಸಾವಿರವಿದ್ದ ಈ ಗ್ರಾಮದ ಒಟ್ಟು ಜನಸಂಖ್ಯೆ ಈಗ 32 ಸಾವಿರ ಎಂದು ಅಂದಾಜಿಸಲಾಗಿದೆ. ಬ್ಯಾಂಕ್ನಲ್ಲಿರುವ ಗ್ರಾಮಸ್ಥರ ಒಟ್ಟು ಹೂಡಿಕೆಯು ₹7 ಸಾವಿರ ಕೋಟಿಯಷ್ಟಿದೆ. ಇದರಲ್ಲಿ ವಿದೇಶದಲ್ಲಿರುವ ಅನಿವಾಸಿ ಭಾರತೀಯರ ಕೊಡುಗೆಯೇ ದೊಡ್ಡದು. ಪ್ರತಿ ವರ್ಷ ಇವರು ಕೋಟಿಗಟ್ಟಲೆ ಹಣವನ್ನು ಈ ಗ್ರಾಮದಲ್ಲಿರುವ ಬ್ಯಾಂಕ್ನಲ್ಲಿ ಇರಿಸುತ್ತಿದ್ದಾರೆ. ಮಾಧಾಪರ್ದಲ್ಲಿ …
Read More »ದೇವರಹಿಪ್ಪರಗಿ | ಮಳೆಗೆ ಶಾಲಾ ಆವರಣ
ದೇವರಹಿಪ್ಪರಗಿ: ತಾಲ್ಲೂಕಿನ ಕಡ್ಲೇವಾಡ ಗ್ರಾಮದ ಪಿಸಿಎಚ್ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲಾ ಆವರಣ ಬುಧವಾರ ಸುರಿದ ಮಳೆಯ ನೀರಿನಿಂದ ಆವೃತವಾಗಿದ್ದು, ತರಗತಿ, ಪಠ್ಯ ಚಟುವಟಿಕೆಗಳಿಗೆ ತೊಂದರೆಯಾಯಿತು. ನಾಲ್ಕು ಕೊಠಡಿಗಳ ಚಾವಣಿಯಿಂದ ನೀರು ಸೋರುತ್ತಿದ್ದರಿಂದ ಪಾಠಗಳು ನಡೆಯದಂತಾದವು. ಶಿಕ್ಷಕರು ಮಕ್ಕಳೊಂದಿಗೆ ಸೇರಿ ಆವರಣದ ನೀರು ಖಾಲಿ ಮಾಡಲು ಹರಸಾಹಸಪಟ್ಟರು. ಸಮಸ್ಯೆ ಕುರಿತಂತೆ ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಪ್ರತಿವರ್ಷ ಮಳೆಗಾಲದಲ್ಲಿ ಮಕ್ಕಳು ಈ …
Read More »ಮಳೆಗೆ ಕೊಚ್ಚಿಹೋದ ಬಿ.ಯದ್ಲಾಪುರು ರಸ್ತೆ
ರಾಯಚೂರು: ಜಿಲ್ಲೆಯ ವಿವಿಧೆಡೆ ಬುಧವಾರ ರಾತ್ರಿ ಮಳೆ ಅಬ್ಬರಿಸಿದರೆ, ಗುರುವಾರ ಸಾಧಾರಣ ಮಳೆಯಾಗಿದೆ. ರಾಯಚೂರು ತಾಲ್ಲೂಕಿನ ಬಿಚ್ಚಾಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿ.ಯದ್ಲಾಪುರು ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ಹಳ್ಳ ಉಕ್ಕಿ ಹರಿದು ರಸ್ತೆ ಕೊಚ್ಚಿಹೋಗಿದೆ. ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ. ಗ್ರಾಮಸ್ಥರು ನಿತ್ಯ ಇದೇ ರಸ್ತೆಯ ಮೂಲಕ ಗಿಲ್ಲೇಸೂಗುರು, ರಾಯಚೂರು, ಮಂತ್ರಾಲಯ ಕಡೆ ಕೆಲಸ ಕಾರ್ಯಗಳಿಗೆ ಹೋಗುತ್ತಾರೆ. ಗ್ರಾಮದ 50 ವಿದ್ಯಾರ್ಥಿಗಳು ಬೇರೆ ಗ್ರಾಮಗಳಲ್ಲಿರುವ ಶಾಲೆಗಳಿಗೆ …
Read More »ರಾಜ್ಯಕ್ಕೆ ಅಕ್ಕಿ ಪೂರೈಸಲು ಕೇಂದ್ರದ ಒಪ್ಪಿಗೆ
ಬೆಂಗಳೂರು:ರಾಜ್ಯಕ್ಕೆ ಪ್ರತಿ ತಿಂಗಳು ಕೆಜಿಗೆ 28 ರೂ.ನಂತೆ 2.36 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು 2025ರ ಮಾರ್ಚ್ವರೆಗೆ ಪೂರೈಸಲು ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟಿದ್ದು, ಬಿಪಿಎಲ್ ಕಾರ್ಡ್ನ ಪ್ರತಿ ಸದಸ್ಯನಿಗೆ 10 ಕೆ.ಜಿ. ಅಕ್ಕಿ ವಿತರಿಸುವ ರಾಜ್ಯ ಸರ್ಕಾರದ ಆಸೆ ಈಡೇರುವ ಕಾಲ ಸನ್ನೀಹಿತವಾಗಿದೆ. ಆಹಾರ ಇಲಾಖೆ ಕಳುಹಿಸಿರುವ ಪ್ರಸ್ತಾವನೆಗೆ ಭಾರತೀಯ ಆಹಾರ ನಿಗಮ ( ಎಫ್ಸಿಐ) ಒಪ್ಪಿಗೆ ಕೊಟ್ಟಿದೆ. ಹೀಗಾಗಿ, ಶ್ರೀದಲ್ಲೇ ಈ ಯೋಜನೆಯಡಿ ಫಲಾನುಭವಿಗಳಿಗೆ ಹಣ …
Read More »ಮುಂದಿನ 4 ದಿನ ಕರಾವಳಿ, ಉ.ಕ.ದಲ್ಲಿ ಮಳೆ
ಬೆಂಗಳೂರು: ದಕ್ಷಿಣ ಒಳನಾಡು, ಮಲೆನಾಡು ವ್ಯಾಪ್ತಿಯ ಪ್ರದೇಶಗಳಲ್ಲಿ ತುಸು ಕುಂಠಿತವಾಗಿರುವ ಮಳೆ, ಕರಾವಳಿ, ಉತ್ತರ ಒಳನಾಡಿನಲ್ಲಿ ಮುಂದಿನ ನಾಲ್ಕೈದು ದಿನ ಬಿರುಸಾಗಿ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಚಿಕ್ಕಮಗಳೂರಿನ ಮೂಡಗೆರೆ, ದಾವಣಗೆರೆ, ಗದಗ, ಹಾವೇರಿಯ ಹನುಮಾನಮಟ್ಟಿ, ಶಿವಮೊಗ್ಗದ ಆಗುಂಬೆ, ಯಾದಗಿರಿ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಗುರುವಾರ ವರ್ಷಧಾರೆಯಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಆ.23ರಿಂದ ಆ.25ರವರೆಗೆ, ಬಾಗಲಕೋಟೆ, ಬೆಳಗಾವಿ, ಬೀದರ್, ವಿಜಯಪುರದಲ್ಲಿ ಆ.23ರಂದು …
Read More »: ಅತಿವೃಷ್ಟಿ ಹಾಗೂ ಪ್ರವಾಹದಿಂದ ಜಿಲ್ಲೆಯಲ್ಲಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತಕ್ಕೆ(ಹೆಸ್ಕಾಂಗೆ) ಈ ಬಾರಿ ಮಳೆಗಾಲದಲ್ಲಿ ₹11.29 ಕೋಟಿ ನಷ್ಟ
ಬೆಳಗಾವಿ: ಅತಿವೃಷ್ಟಿ ಹಾಗೂ ಪ್ರವಾಹದಿಂದ ಜಿಲ್ಲೆಯಲ್ಲಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತಕ್ಕೆ(ಹೆಸ್ಕಾಂಗೆ) ಈ ಬಾರಿ ಮಳೆಗಾಲದಲ್ಲಿ ₹11.29 ಕೋಟಿ ನಷ್ಟವಾಗಿದೆ. ಹಾನಿಗೀಡಾದ ವಿದ್ಯುತ್ ಪರಿಕರಗಳ ದುರಸ್ತಿ ಕಾರ್ಯ ನಡೆದಿದೆ. 2019ರಲ್ಲಿ ಭೀಕರ ಪ್ರವಾಹದಿಂದ ಹೆಸ್ಕಾಂ ತತ್ತರಿಸಿತ್ತು. ಆಗ ಬೆಳಗಾವಿ ಜಿಲ್ಲೆಯಲ್ಲಿ 17 ಸಾವಿರಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿತ್ತು. 5 ಸಾವಿರ ವಿದ್ಯುತ್ ಪರಿವರ್ತಕಗಳು ನೀರಲ್ಲಿ ಮುಳುಗಿದ್ದವು. ಈ ಬಾರಿ ಮಲಪ್ರಭಾ, ಘಟಪ್ರಭಾ, ಕೃಷ್ಣಾ, ಹಿರಣ್ಯಕೇಶಿ, ದೂಧಗಂಗಾ, ವೇದಗಂಗಾ, ಮಾರ್ಕಂಡೇಯ …
Read More »ಆ.24ರಿಂದ ಕನ್ನಡ ವೈದ್ಯ ಬರಹಗಾರರ ಸಮ್ಮೇಳನ
ಬೆಳಗಾವಿ: ಕನ್ನಡ ವೈದ್ಯ ಬರಹಗಾರರ 5ನೇ ರಾಜ್ಯ ಸಮ್ಮೇಳನವು ಬೆಳಗಾವಿಯ ಕೆಎಲ್ಇ ಶತಮಾನೋತ್ಸವ ಭವನದ ಎಚ್.ಬಿ.ರಾಜಶೇಖರ ಸಭಾಂಗಣದಲ್ಲಿ ಆಗಸ್ಟ್ 24 ಮತ್ತು 25ರಂದು ನಡೆಯಲಿದೆ. ವೈದ್ಯ ಸಾಹಿತಿ ಡಾ. ನಾ.ಸೋಮೇಶ್ವರ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕೆಎಲ್ಇ ವಿಶ್ವವಿದ್ಯಾಲಯದ ಕನ್ನಡ ಬಳಗ, ಭಾರತೀಯ ವೈದ್ಯಕೀಯ ಸಂಘ ಹಾಗೂ ಕನ್ನಡ ವೈದ್ಯ ಬರಹಗಾರರ ಸಮಿತಿ ಸಹಯೋಗದಲ್ಲಿ ನಡೆಯುವ ಈ ಸಮ್ಮೇಳನವನ್ನು ಸಾಹಿತಿ ಜಯಂತ್ ಕಾಯ್ಕಿಣಿ ಉದ್ಘಾಟಿಸುವರು. ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ …
Read More »