ವಿಜಯಪುರ: ಸ್ವಾತಂತ್ರ್ಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಫೋಟೋಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಅಪಮಾನಿಸಿರುವ ಘಟನೆ ಜಿಲ್ಲೆಯ ಹಗರಗುಂಡ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ತಾಳಿಕೋಟಿ ತಾಲೂಕಿನ ಹಗರಗುಂಡ ಗ್ರಾಮದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ರಾಯಣ್ಣ ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿದ್ದಾರೆ. ಸೋಮವಾರ ತಡರಾತ್ರಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಮಂಗಳವಾರ ಬೆಳಿಗ್ಗೆ ಕೃತ್ಯ ಬೆಳಕಿಗೆ ಬಂದಿದೆ. ಘಟನೆ ಬೆಳಕಿಗೆ ಬರುತ್ತಲೇ ಗ್ರಾಮದಲ್ಲಿ …
Read More »ಭಾರೀ ಮಳೆಗೆ ತುಂಬಿ ಹರಿದ ಹಳ್ಳ. ಹತ್ತಿ ಹೊಲದ ತುಂಬೆಲ್ಲ ನೀರು
ರಾಯಚೂರು: ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಂದ ಮಂಗಳವಾರ ಬೆಳಗ್ಗೆವರೆಗೂ ಭಾರೀ ಮಳೆ ಸುರಿದಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿದರೆ ಹೊಲದಲ್ಲೆಲ್ಲ ನೀರು ನುಗ್ಗಿದೆ. ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಗಧಾರ ಗ್ರಾಮದಲ್ಲಿ ಅಬ್ಬರಿಸಿದ ಮಳೆಯಿಂದ ಹಳ್ಳ ತುಂಬಿ ಹರಿದಿದೆ. ಗಧಾರ ಗ್ರಾಮದಿಂದ ಯರಗೇರಾಕ್ಕೆ ಹೋಗುವ ಮಾರ್ಗದಲ್ಲಿರುವ ಹಳ್ಳ ತುಂಬಿ ಹರಿಯುತ್ತಿದ್ದು, ಹೊಲ ಗದ್ದೆಗಳಿಗೆ ನೀರು ನುಗ್ಗಿದೆ. ಇದರಿಂದ ಅಪಾರ ಪ್ರಮಾಣದಲ್ಲಿ ಹತ್ತಿ ಹಾಗೂ ಇತರ ಬೆಳೆ ಹಾನಿಗೊಂಡಿವೆ. ಭಾರಿ ಮಳೆಯಿಂದ ಹಲವೆಡೆ ಸೇತುವೆ ಮೇಲ್ಬಾಗದಲ್ಲಿ …
Read More »ಸಿಎಂ ಯಾವ ತಪ್ಪು ಮಾಡಿಲ್ಲ. ಹೆದರಿಕೆ ಅನ್ನೋದು ಅವರ ರಕ್ತದಲ್ಲೇ ಇಲ್ಲ: ಡಿಕೆಶಿ
ಕಲಬುರಗಿ: ಸಿದ್ದರಾಮಯ್ಯ ಅವರ ರಕ್ತದಲ್ಲೇ ಹೆದರಿಕೆ ಅನ್ನೋದಿಲ್ಲ, 40 ವರ್ಷ ಇಂತಹ ಎಷ್ಟೋ ರಾಜಕಾರಣ ನೋಡಿದ್ದಾರೆ. ಹೆದರಿಕೆ ಅನ್ನೋದು ಅವರ ರಕ್ತದಲ್ಲೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆದರಿಕೆ ಅನ್ನೋದು ಸಿದ್ದರಾಮಯ್ಯ ಅವರ ರಕ್ತದಲ್ಲೇ ಇಲ್ಲ. ಸತ್ಯಕ್ಕೆ ಯಾವತ್ತಿಗೂ ಜಯ ಸಿಗುತ್ತದೆ. ನಮ್ಮ ಮುಖ್ಯಮಂತ್ರಿಗಳು ಯಾವ ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ. ದಲಿತ ರಾಜ್ಯಪಾಲ ಎನ್ನೋ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ …
Read More »ಅಂಬೇಡ್ಕರ ಭವನವನ್ನು ಸಧ್ಭಳಕೆ ಮಾಡಿಕೊಳ್ಳುವಂತೆ ಶಾಸಕ ಮತ್ತು ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಮೂಡಲಗಿ- ಸಾಮಾಜಿಕವಾಗಿ, ಧಾರ್ಮಿಕವಾಗಿ ಸಮಾಜದ ವಿವಿಧ ಚಟುವಟಿಕೆಗಳಿಗೆ ಸುಸಜ್ಜಿತವಾದ ಅಂಬೇಡ್ಕರ ಭವನವನ್ನು ಸಧ್ಭಳಕೆ ಮಾಡಿಕೊಳ್ಳುವಂತೆ ಶಾಸಕ ಮತ್ತು ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕಳೆದ ರವಿವಾರದಂದು ತಾಲ್ಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಡಾ. ಬಿ.ಆರ್. ಅಂಬೇಡ್ಕರ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜಕ್ಕೆ ಅನುಕೂಲವಾಗಲು ಈ ಭವನವನ್ನು ನಿರ್ಮಿಸಿದ್ದು, ಸ್ವಚ್ಛತೆಯ ಜತೆಗೆ ಉತ್ತಮ ಕಾರ್ಯಗಳಿಗೆ ಇದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಬಾಂಧವರಲ್ಲಿ …
Read More »19,969 ಪಡಿತರ ಚೀಟಿ ರದ್ದು: ₹1.89 ಕೋಟಿ ದಂಡ ವಸೂಲಿ
ಬೆಳಗಾವಿ: ಕಳೆದ ಆರು ತಿಂಗಳಿಂದ ಪಡಿತರ ಪಡೆಯದ 19,969 ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ. ಅಲ್ಲದೇ, ಸುಳ್ಳು ದಾಖಲೆ ನೀಡಿ ಆದ್ಯತಾ ಪಡಿತರ ಚೀಟಿ ಪಡೆದವರಿಂದ ₹1.89 ಕೋಟಿ ದಂಡ ಕೂಡ ವಸೂಲಿ ಮಾಡಲಾಗಿದೆ. ಜಿಲ್ಲೆಯಲ್ಲಿ 557 ಅಂತ್ಯೋಂದಯ, 19,412 ಆದ್ಯತಾ ಪಡಿತರ ಚೀಟಿ ಸೇರಿ ಒಟ್ಟು 19,969 ಪಡಿತರ ಚೀಟಿದಾರರು ಕಳೆದ 6 ತಿಂಗಳು (ನವೆಂಬರ್-2023ರಿಂದ ಏಪ್ರಿಲ್-2024) ರವರೆಗೆ ಪಡಿತರ ಧಾನ್ಯ ಪಡೆದಿಲ್ಲ. ಹೀಗಾಗಿ, ಈ ಎಲ್ಲ ಪಡಿತರ …
Read More »ರೈತರಿಗೆ ನ್ಯಾನೋ ತಂತ್ರಜ್ಞಾನ ಸೌಲಭ್ಯ: ಜೊಲ್ಲೆ
ನಿಪ್ಪಾಣಿ: ‘ಸ್ಥಳೀಯ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ(ಬಹುರಾಜ್ಯ)ಯು ವಿವಿಧ ಹಂತಗಳಲ್ಲಿ ನ್ಯಾನೊ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಿದ್ದು, ಇದರಿಂದ ರೈತರು ಕಡಿಮೆ ಕ್ಷೇತ್ರದಲ್ಲಿ ಕಡಿಮೆ ವೆಚ್ಚದಲ್ಲಿ ಹೆಚ್ಚು ಕಬ್ಬು ಉತ್ಪಾದಿಸಬಹುದು. ಅಲ್ಲದೆ ರೈತರಿಗೆ ಹಾಗೂ ಸದಸ್ಯರಿಗೆ ವಿವಿಧ ನ್ಯಾನೋ ತಂತ್ರಜ್ಞಾನದ ಸೌಲಭ್ಯಗಳನ್ನು ಕಲ್ಪಿಸಲಾಗುವುದು’ ಎಂದು ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದರು. ವೇದಗಂಗಾ ರೈತ ಉತ್ಪಾದಕರ ಒಕ್ಕೂಟ ಹಾಗೂ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಸಂಯುಕ್ತಾಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ಡ್ರೋನ್ ಮೂಲಕ …
Read More »ಕಿತ್ತೂರು ಉತ್ಸವಕ್ಕೆ 5 ಕೋಟಿ
ಅಕ್ಟೋಬರ್ 23, 24 ಹಾಗೂ 25 ರಂದು ಜರುಗಲಿರುವ ಸ್ವಾತಂತ್ರ್ಯದ ಬೆಳ್ಳಿಚುಕ್ಕಿ ಕಿತ್ತೂರು ಚನ್ನಮ್ಮಾಜಿಯ ಉತ್ಸವ 2024 ರ ಪೂರ್ವಭಾವಿ ಸಭೆ ಸೋಮವಾರ ಬೆಂಗಳೂರಿನ ವಿಕಾಸ ಸೌಧದಲ್ಲಿ ನಡೆಸಲಾಯಿತು. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಕಂದಾಯ ಸಚಿವ ಕೃಷ್ಣಭೈರೆಗೌಡ ಸಭೆಯಲ್ಲಿ ಈ ಬಾರಿ 200 ನೇ ಅದ್ಧೂರಿ ಕಿತ್ತೂರು ಉತ್ಸವಕ್ಕೆ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದಿಂದ 5 ಕೋಟಿ ಅನುದಾನ ನೀಡುವಂತೆ ಆದೇಶ ಹೊರಡಿಸಿದ್ದಾರೆ. ಶಾಸಕ ಬಾಬಾಸಾಹೇಬ ಪಾಟೀಲ …
Read More »ಜನುಮ- ಜನುಮದ ಅನುಬಂಧ ಈ ರಕ್ಷಾ ಬಂಧನ- ಶಾಸಕ ಬಾಲಚಂದ್ರ ಜಾರಕಿಹೊಳಿ
ಜನುಮ- ಜನುಮದ ಅನುಬಂಧ ಈ ರಕ್ಷಾ ಬಂಧನ- ಶಾಸಕ ಬಾಲಚಂದ್ರ ಜಾರಕಿಹೊಳಿ ದೊಡ್ಮನೆ ಕುಟುಂಬದಲ್ಲಿ ಹರ್ಷೊಲ್ಲಾಸದಿಂದ ನಡೆದ ರಾಖಿ ಹಬ್ಬ ತಮ್ಮ ಸಹೋದರಿ ಲಕ್ಷ್ಮೀ ಅವರಿಂದ ರಾಖಿ ಕಟ್ಟಿಸಿಕೊಂಡು ಸಂಭ್ರಮಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ- ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ರಕ್ಷಾ ಬಂಧನವು ವಿಶೇಷ ಮಹತ್ವವಿದ್ದು, ಸಹೋದರ- ಸಹೋದರಿಯರ ಪ್ರೀತಿ, ವಾತ್ಸಲ್ಯವನ್ನು ಬಿಂಬಿಸುವ ಹಬ್ಬವಾಗಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು …
Read More »ರಡ್ಡೆರಹಟ್ಟಿ ಸರ್ಕಾರಿ ಶಾಲೆಗೆ ₹1ಲಕ್ಷ ಬಹುಮಾನ
ಅಥಣಿ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಾಲ್ಲೂಕು ಆಡಳಿತದಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಆಯ್ದ ಹತ್ತು ತಂಡಗಳು ಉತ್ತಮ ಪ್ರದರ್ಶನ ನೀಡಿ ಸಭಿಕರ ಗಮನ ಸೆಳೆದವು. ಕಿತ್ತೂರು ಚನ್ನಮ್ಮ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸಾಹಸ ಮತ್ತು ಕನ್ನಡ ಚಿತ್ರರಂಗದ ದಿಗ್ಗಜರ ಕಲೆ, ಕನ್ನಡ ನಾಡು ನುಡಿ ಸಂಸ್ಕೃತಿ ಬಗ್ಗೆ ಉತ್ತಮ ಪ್ರದರ್ಶನ ನೀಡಿದ ರಡ್ಡೆರಹಟ್ಟಿ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಶಾಸಕ ಲಕ್ಷ್ಮಣ ಸವದಿ ಘೋಷಿಸಿದ ₹1ಲಕ್ಷ ನಗದು …
Read More »ಬೆಳಗಾವಿ: ಕೆರೆಯಲ್ಲಿ ಮುಳುಗಿ ಬಾಲಕ ಸಾವು
ಎಂ.ಕೆ.ಹುಬ್ಬಳ್ಳಿ (ಬೆಳಗಾವಿ ಜಿಲ್ಲೆ): ಪಟ್ಟಣದ ಬಳಿ ಇರುವ ಗದ್ದಿಕೆರೆಯಲ್ಲಿ ಸೋಮವಾರ ಬೆಳಿಗ್ಗೆ ಶಾಲಾ ಬಾಲಕನ ಶವ ಪತ್ತೆಯಾಗಿದೆ. ಎಂ.ಕೆ.ಹುಬ್ಬಳ್ಳಿಯಲ್ಲಿ 9ನೇ ತರಗತಿ ಓದುತ್ತಿದ್ದ ರಿಹಾನ್ ಮುಗುಟಸಾಬ ನಗಾರಸಿ (15) ಮೃತ ಬಾಲಕ. ಭಾನುವಾರ ಶಾಲೆಗೆ ರಜೆ ಇದ್ದುದರಿಂದ ಬಾಲಕ ಕೆರೆಗೆ ಈಜಲು ಹೋಗಿದ್ದ. ಮರಳಿ ಮನೆಗೆ ಬಂದಿರಲಿಲ್ಲ. ಕೆರೆ ದಡದಲ್ಲಿ ಬಾಲಕನ ಬಟ್ಟೆ ಹಾಗೂ ಚಪ್ಪಲಿ ಪತ್ತೆಯಾದವು. ಅನುಮಾನಗೊಂಡು ಸೋಮವಾರ ಕೆರೆಯಲ್ಲಿ ಹುಡುಕಾಟ ಶುರು ಮಾಡಲಾಯಿತು. ಸ್ಥಳಕ್ಕೆ ಧಾವಿಸಿದ ಪೊಲೀಸರು, ಅಗ್ನಿಶಾಮಕ …
Read More »