Breaking News

ರಾಷ್ಟ್ರೀಯ

35 ಎಮ್ಮೆ ರಕ್ಷಣೆ; ಪ್ರಕರಣ ದಾಖಲು

ಹುಬ್ಬಳ್ಳಿ: ಬೆಂಗಳೂರಿನ ದೇವನಹಳ್ಳಿ ಪಾಸಿಂಗ್‌ ನಂಬರ್‌ ಇರುವ ಕಂಟೇನರ್‌ ಲಾರಿಯಲ್ಲಿ ಉಸಿರಾಡಲು ಸಾಧ್ಯವಾಗದಂತೆ ಎಮ್ಮಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಮೂವರ ವಿರುದ್ಧ ಬೆಂಡಿಗೇರಿ ಪೊಲೀಸ್‌ ಠಾಣೆಯಲ್ಲಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.   ಲಾರಿ ಚಾಲಕ, ಕ್ಲೀನರ್‌ ಮತ್ತು ಲಾರಿ ಮಾಲೀಕರ ವಿರುದ್ಧ ಗೋಕುಲ ರಸ್ತೆಯ ಆಶೀರ್ವಾದ ಹಂಜಗಿ ದೂರು ನೀಡಿದ್ದಾರೆ. ಗದಗ ಬೈಪಾಸ್‌ ರಸ್ತೆಯಲ್ಲಿ ಭಾನುವಾರ ಸಂಜೆ ಲಾರಿಯಲ್ಲಿ 35 ಎಮ್ಮೆಗಳನ್ನು ಅಮಾನುಷವಾಗಿ ಸಾಗಿಸುತ್ತಿದ್ದರು. …

Read More »

: ಹಾಳಾದ ರಸ್ತೆ, ಚರಂಡಿ ವ್ಯವಸ್ಥೆ ಇಲ್ಲ. ರಸ್ತೆಯಲ್ಲಿಯೇ ಹರಿಯುವ ಗಟಾರದ ಕೊಳಚೆ ನೀರು,

ಹುಬ್ಬಳ್ಳಿ: ಹಾಳಾದ ರಸ್ತೆ, ಚರಂಡಿ ವ್ಯವಸ್ಥೆ ಇಲ್ಲ. ರಸ್ತೆಯಲ್ಲಿಯೇ ಹರಿಯುವ ಗಟಾರದ ಕೊಳಚೆ ನೀರು, ಜೆಜೆಎಂ ಯೋಜನೆಯಲ್ಲಿ 24X7 ನೀರಿನ ಪೈಪ್‌ ಅಳವಡಿಸಿದ್ದರೂ ಶುದ್ಧ ಕುಡಿಯುವ ನೀರು ಪೂರೈಕೆಯಾಗಿಲ್ಲ. – ಇಂತಹ ಸಮಸ್ಯೆಗಳ ನಡುವೆಯೇ ಪಾಲಿಕೆ ವ್ಯಾಪ್ತಿಯ ಉಣಕಲ್‌ ಗ್ರಾಮದ ಜನರು ಬದುಕು ಕಟ್ಟಿಕೊಳ್ಳುತ್ತಿದ್ಧಾರೆ. ಒಂದೆಡೆ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಹುಬ್ಬಳ್ಳಿ ನಗರ, ಇದಕ್ಕೆ ಹೊಂದಿಕೊಂಡೇ ಕೇವಲ 100 ಮೀಟರ್‌ ದೂರದಲ್ಲಿ ಉಣಕಲ್‌ ಗ್ರಾಮವಿದೆ. ಉಣಕಲ್‌ ಗ್ರಾಮವು 20 ಸಾವಿರಕ್ಕೂ …

Read More »

ಕಾರ್ಖಾನೆಗೆ ಬೆಂಕಿ: 14 ತಾಸು ಕಾರ್ಯಾಚರಣೆ; ಕಾರ್ಮಿಕನ ಶವ ಪತ್ತೆ

ಬೆಳಗಾವಿ: ಸಮೀಪದ ನಾವಗೆ ಗ್ರಾಮದಲ್ಲಿ ಸ್ನೇಹಂ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಿಕ್ಕಿಕೊಂಡಿದ್ದ ಕಾರ್ಮಿಕನ ದೇಹ ಸುಟ್ಟು ಭಸ್ಮವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೆಳಗಾವಿಯ ಮಾರ್ಕಂಡೇಯ ನಗರದ ನಿವಾಸಿ ಯಲ್ಲಪ್ಪ ಗುಂಡ್ಯಾಗೋಳ (20) ಮೃತ ಪಟ್ಟ ಕಾರ್ಮಿಕ. ಲಿಫ್ಟನಲ್ಲಿ ವಿದ್ಯುತ್ ಅವಘಡದಿಂದ‌ ಈ ಅನಾಹುತ ಸಂಭವಿಸಿದೆ. ಮೆಡಿಕಲ್ ಟೇಪಗಳನ್ನು‌ ತಯಾರಿಸುವ ಕಾರ್ಖಾನೆಯಲ್ಲಿ ಮಂಗಳವಾರ ರಾತ್ರಿ ಬೆಂಕಿ‌ ಹೊತ್ತಿಕೊಂಡಿತು. ಆಗ ಒಳಗಡೆ ಇದ್ದ ಹಲವು ಅಗ್ನಿ‌ ಕಾರ್ಮಿಕರು ದಿಕ್ಕಾಪಾಲಾಗಿ ಓಡಿದರು. ಬೆಂಕಿಯಲ್ಲಿ ಬೆಂದ ಮೂವರನ್ನು …

Read More »

ಮಳೆ ಹಾನಿ | ಸರ್ಕಾರಕ್ಕೆ ವರದಿ ನೀಡಿ: ಮಹಾಂತೇಶ ಕೌಜಲಗಿ

ಬೈಲಹೊಂಗಲ: ‘ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಂಬಂಧಪಟ್ಟ ಪಿಡಿಒ, ಗ್ರಾಮಲೆಕ್ಕಾಧಿಕಾರಿ ಮತ್ತು ನೋಡೆಲ್ ಅಧಿಕಾರಿಗಳು ತಕ್ಷಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು’ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾ ಭವನದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಳೆಯಿಂದ ಹಾನಿಗೊಳಗಾದ ಸ್ಥಳಗಳ ಪರಿಶೀಲಿಸಿ ಬಿದ್ದ ಮನೆ, ಶಾಲೆ, ಅಂಗನವಾಡಿ, ಬೆಳೆ ಹಾನಿ, ಕುರಿತು ಇದುವರೆಗೆ ಸಮೀಕ್ಷೆ ನಡೆಸಿ ಸರ್ಕಾರಕ್ಕೆ …

Read More »

ಪಡಿತರಚೀಟಿ ತಿದ್ದುಪಡಿಗೆ ದಿನಾಂಕ ವಿಸ್ತರಣೆ-ಯಾವೆಲ್ಲಾ ದಾಖಲೆಗಳು ಬೇಕು?-ಇಲ್ಲಿದೆ ಮಾಹಿತಿ

ಪಡಿತರಚೀಟಿ ತಿದ್ದುಪಡಿಗೆ ದಿನಾಂಕ ವಿಸ್ತರಣೆ-ಯಾವೆಲ್ಲಾ ದಾಖಲೆಗಳು ಬೇಕು?-ಇಲ್ಲಿದೆ ಮಾಹಿತಿ ಲೋಕಾಭೆ ಚುನಾವಣೆ ಮುಗಿದ ಬಳಿಕ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಅಥವಾ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದ್ದು, ಇದೀಗ ಈ ದಿನಾಂಕವನ್ನು ಆಗಸ್ಟ್ 10ರವರೆಗೆ ವಿಸ್ತರಣೆ ಮಾಡಲಾಗಿದೆ. ಹಾಗಾದರೆ ಪಡಿತರ ಚೀಟಿ ತಿದ್ದುಪಡಿಗೆ ಯಾವೆಲ್ಲ ದಾಖಲೆ ಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ. ಸಮಯದ ವಿವರ: ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆದುಹಾಕುವುದಕ್ಕೆ …

Read More »

ಮುಡಾ ಬೆನ್ನಲ್ಲೇ ಸಿದ್ದರಾಮಯ್ಯಗೆ ಮತ್ತೊಂದು ಡಿನೋಟಿಫಿಕೇಷನ್ ಉರುಳು: ರಾಜೀನಾಮೆಗೆ ಹೆಚ್ಚಿದ ಒತ್ತಡ

ಬೆಂಗಳೂರು: ಮುಡಾ ಹಗರಣದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮತ್ತೊಂದು ಡಿನೋಟಿಫಿಕೇಷನ್ ದೂರು ದಾಖಲಾಗಿದೆ. ಮುಡಾದಂತೆ ತಮ್ಮ ಪ್ರಭಾವ ಬಳಸಿ ಮೈಸೂರು ತಾಲೂಕು ವರುಣ ಹೋಬಳಿಯ ಉತ್ತನಹಳ್ಳಿ ಗ್ರಾಮದಲ್ಲಿನ 1.39 ಎಕರೆ ಜಮೀನ ಡಿನೋಟಿಫೈ ಮಾಡಿದ್ದಾರೆ ಎಂದು ರಾಜ್ಯಪಾಲರಿಗೆ ದೂರು ನೀಡಲಾಗಿದೆ.. ಈ ಸಂಬಂಧ ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿ, ಮೈಸೂರು ಚಲೋ ಪಾದಯಾತ್ರೆ ಚಾಮುಂಡಿ ತವರಿಗೆ ತಲುಪುವ ಮುನ್ನಾವೇ ಸಿದ್ದರಾಮಯ್ಯ ಅವರು ಅನಾಚಾರಗಳು ಒಂದೊಂದೆ …

Read More »

ಅವ್ಯವಹಾರ ಬಿಚ್ಚಿಡಬೇಕೇ? ವಿಜಯೇಂದ್ರಗೆ ಡಿಕೆಶಿ ಸವಾಲು

ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಲಕ್ಷ್ಮೀ ವಿಲಾಸ್‌ ಬ್ಯಾಂಕ್‌ನಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆಸಿದ್ದು ಅದರ ಬಗ್ಗೆ ಮಾಹಿತಿ ಬಿಚ್ಚಿಡಬೇಕೇ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಪ್ರಶ್ನಿಸಿದ್ದಾರೆ. ಮದ್ದೂರಿನ ಜನಾಂದೋಲನ ಸಮಾವೇಶದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮುಖಂಡರ ವಿರುದ್ಧ ವಾಗ್ಧಾಳಿ ಮುಂದುವರಿಸಿದ ಅವರು, “ವಿಜಯೇಂದ್ರ, ನಿನ್ನ ತಂದೆ ನಾಲ್ಕು ಬಾರಿ ಸಿಎಂ ಆಗಿ ರಾಜೀನಾಮೆ ನೀಡಿದ್ದು ಯಾಕೆ? ಸುಪ್ರೀಂಕೋರ್ಟ್‌ ಏನು ಹೇಳಿದೆ? ನೀನು ದುಬಾೖಗೆ ವಿಶೇಷ ವಿಮಾನದಲ್ಲಿ ಹೋಗಿ …

Read More »

ಪೂರ್ವ ದಿಕ್ಕಿನಿಂದ ಶತ್ರುಬಾಧೆ,ಪಂಚಮ ಶನಿಯ ಪ್ರಭಾವ

ಮೇಷ: ಸಾರ್ವಜನಿಕ ರಂಗದಲ್ಲಿ ದುಡಿಯುವ ವ್ಯಕ್ತಿಗಳಿಗೆ ಮಹತ್ವದ ಜವಾಬ್ದಾರಿ. ಏಕಕಾಲದಲ್ಲಿ ಅನೇಕ ಕಾರ್ಯಗಳ ನಿರ್ವಹಣೆ ಸಂಭವ. ಪರ್ಯಾಯ ಚಿಕಿತ್ಸೆಯಿಂದ ಹಳೆಯ ಸಮಸ್ಯೆಗೆ ಪರಿಹಾರ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ವೃಷಭ: ಎಡ- ಬಲ ಗಮನಿಸಿ ಎಚ್ಚರಿಕೆಯಿಂದ ಮುಂದುವರಿದರೆ ಯಶಸ್ಸು. ಉದ್ಯೋಗಸ್ಥರಿಗೆ ಪ್ರಗತಿ ಸ್ಥಿರ. ಆಪ್ತರಿಂದ ನಿರೀಕ್ಷಿತ ಸಹಾಯ ಸಕಾಲದಲ್ಲಿ ಕೈಸೇರಿ ಸಮಾಧಾನ. ಮನೆಯಲ್ಲಿ ಎಲ್ಲರ ಆರೋಗ್ಯ ಸಮಾಧಾನಕರ. ನೂತನ ವಾಹನ ಖರೀದಿಗೆ ಚಿಂತನೆ. ಮಿಥುನ: ದಿಟ್ಟ ನಿರ್ಧಾರದಿಂದ ಮುನ್ನಡೆದರೆ ಯಶಸ್ಸು ಖಂಡಿತ. ಎಂತಹ …

Read More »

ರಾಜಕಾರಣಕ್ಕೆ: ಪ್ರತಾಪ್‌ ಸಿಂಹ

ಬೆಂಗಳೂರು: ಕೊಡಗು- ಮೈಸೂರು ಸಂಸದ ರಾಗಿದ್ದ ಪ್ರತಾಪ್‌ ಸಿಂಹ ರಾಜ್ಯ ರಾಜಕಾರಣಕ್ಕೆ ಬರುವ ಇಂಗಿತ ವ್ಯಕ್ತಪಡಿಸಿದ್ದು, ಮುಂದಿನ ದಿನ ಗಳಲ್ಲಿ ಅಧಿಕೃತವಾಗಿ ವಿಧಾನಸಭೆ ಪ್ರವೇಶಿಸುವುದಾಗಿಯೂ ತಿಳಿಸಿದ್ದಾರೆ. “ಉದಯವಾಣಿ’ಯ “ನೇರಾನೇರ’ ಸಂದರ್ಶನದ ವೇಳೆ ಈ ಕುರಿತು ಮುಕ್ತವಾಗಿ ಮಾತ ನಾಡಿರುವ ಪ್ರತಾಪ್‌, “ನಾನೀಗ ಸದ್ಯಕ್ಕೆ ವಿಧಾನಸೌಧದಲ್ಲಿ ಇಲ್ಲದಿರಬಹುದು. ಆದರೆ ರಾಜ್ಯ ರಾಜ ಕಾರಣದಲ್ಲೇ ಇದ್ದೇನೆ’ ಎಂದಿದ್ದಾರೆ. “ಇತ್ತೀಚೆಗೆ ರಾಜ್ಯದ ವಿಷಯಗಳ ಬಗ್ಗೆ ತಾರ್ಕಿಕವಾಗಿ ಹಾಗೂ ಪ್ರಬಲವಾಗಿ ಮಾತ ನಾಡುತ್ತಿದ್ದೇನೆ. ಮೊದಲು ರಾಜ್ಯದ ಬಗ್ಗೆ ನಾನು ಮಾತನಾಡುತ್ತಿರಲಿಲ್ಲ. ಈಗಾಗಲೇ ನಾನು …

Read More »

ಗಲಭೆಪೀಡಿತ ಬಾಂಗ್ಲಾದಿಂದ ಬೆಳಗಾವಿಗೆ ಬಂದ 25ವೈದ್ಯಕೀಯ ವಿದ್ಯಾರ್ಥಿಗಳು

ಬೆಳಗಾವಿ: ಗಲಭೆ ಪೀಡಿತ ಬಾಂಗ್ಲಾದೇಶದಿಂದ 25 ವೈದ್ಯಕೀಯ ವಿದ್ಯಾರ್ಥಿಗಳು ಪಾರಾಗಿ ಬೆಳಗಾವಿಗೆ ಆಗಮಿಸಿದ್ದಾರೆ. ನಾಲ್ಕು ದಿನಗಳ ಹಿಂದೆಯೇ ಈ ಎಲ್ಲ ವಿದ್ಯಾರ್ಥಿಗಳು ಬೆಳಗಾವಿಗೆ ಬಂದಿದ್ದಾರೆ. ಬೆಳಗಾವಿ ಸಂಸದ ಜಗದೀಶ ಶೆಟ್ಟರ ಹಾಗೂ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನೆರವಿನಿಂದ ಸುರಕ್ಷಿತವಾಗಿ ಬೆಳಗಾವಿಗೆ ಬಂದಿದ್ದಾರೆ.   ಬಾಂಗ್ಲಾಬಾಂಗ್ಲಾದಿಂದ ಬೆಳಗಾವಿಗೆ ಬಂದ ವೈದ್ಯಕೀಯ ವಿದ್ಯಾರ್ಥಿ ನೇಹಲ್ ಸವಣೂರು ಮಾಧ್ಯಮದವರೊಂದಿಗೆ ಮಾತನಾಡಿ, ಬಾಂಗ್ಲಾದಲ್ಲಿ ನಾನೂ ಭಯಭೀತನಾಗಿದ್ದೆ. ಈಗಿನ ಪರಿಸ್ಥಿತಿ ‌ಇನ್ನೂ ಭಯಂಕರ ಇದೆ. ಹೇಗೋ ಬಚಾವ್ …

Read More »