ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆವರೆಗೂ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಸಂಚಾರಕ್ಕೆ ತೀವ್ರ ಅಡ್ಡಿಯುಂಟಾಗಿದೆ. ನಿನ್ನೆ ಮಧ್ಯರಾತ್ರಿಯವರೆಗೂ ಮಳೆ ಬರುವ ಯಾವುದೇ ವಾತಾವರಣ ಇರಲಿಲ್ಲ. ಆದರೆ, ನಸುಕಿನ ಜಾವ ಮಳೆರಾಯ ಅಬ್ಬರಿಸಿದ್ದಾನೆ. ನಿದ್ರೆಯಿಂದ ಎಚ್ಚರಗೊಂಡ ಎಷ್ಟೋ ಮಂದಿ ವರುಣ ಅಬ್ಬರ ಕಂಡು ದಂಗಾಗಿದ್ದಾರೆ. ಸುಮಾರು ಮೂರ್ನಾಲ್ಕು ಗಂಟೆ ಮಳೆ ಎಡಬಿಡದೆ ಸುರಿದಿದೆ. ಇದರ ಪರಿಣಾಮ ರಾಜಧಾನಿಯಲ್ಲಿ ಜನ-ಜೀವನ ಅಸ್ತವ್ಯಸ್ತಗೊಂಡಿದೆ. ನಾಗಾವಾರ ಜಂಕ್ಷನ್ ಮತ್ತು …
Read More »ಕೋಚಿಂಗ್ ಇಲ್ಲದೆ ಒಂದೇ ವರ್ಷದಲ್ಲಿ 6 ಸರ್ಕಾರಿ ನೌಕರಿ ಗಿಟ್ಟಿಸಿದ ಯುವತಿ
ಸರ್ಕಾರಿ ಕೆಲಸಕ್ಕಾಗಿ ಹಗಲಿರುಳು ತಪಸ್ಸು ಮಾಡುವ ಎಷ್ಟೋ ಮಂದಿ ನಮ್ಮ ನಡುವೆ ಇದಾರೆ. ಅದೇನೆ ಆಗಲಿ ಸರ್ಕಾರಿ ನೌಕರಿ ಪಡೆಯಲೇಬೇಕು ಎಂಬ ದೃಢ ಸಂಕಲ್ಪದೊಂದಿಗೆ ಓದಿನಲ್ಲಿ ಮಗ್ನರಾಗಿರುತ್ತಾರೆ. ಕೆಲವರಂತೂ ಕೋಚಿಂಗ್ ಕ್ಲಾಸ್ಗಳಿಗೆ ಸೇರಿ ಕಠಿಣ ತರಬೇತಿ ನಡೆಸುತ್ತಾರೆ. ಆದರೆ, ಕೆಲವರು ಯಾವುದೇ ಕೋಚಿಂಗ್ ಪಡೆಯದೇ ಸರ್ಕಾರಿ ಕೆಲಸ ಗಿಟ್ಟಿಸಿದ ಎಷ್ಟೋ ಉದಾಹರಣೆಗಳು ಸಹ ನಮ್ಮ ನಡುವೆ ಇದೆ. ನೀವು ಮೇಲಿನ ಫೋಟೋದಲ್ಲಿ ನೋಡುತ್ತಿರುವ ಯುವತಿ ಈ ಸಾಧನೆಗೆ ತಾಜಾ ಉದಾಹರಣೆಯಾಗಿದ್ದಾರೆ. ಸದ್ಯ …
Read More »ದುಬೈನಲ್ಲಿ ಅಂಗಡಿ ಕೊಡಿಸುವುದಾಗಿ ₹35 ಲಕ್ಷ ವಂಚನೆ
ಶಿರಸಿ: ದುಬೈನಲ್ಲಿ ಅಂಗಡಿ ಕೊಡಿಸುವುದಾಗಿ ನಂಬಿಸಿ, ಮಂಗಳೂರು ಮೂಲದ ವ್ಯಕ್ತಿಯೊಬ್ಬನಿಗೆ ಶಿರಸಿ ಮೂಲದ ಮೂವರು ₹35 ಲಕ್ಷ ವಂಚನೆ ಮಾಡಿದ ಕುರಿತು ಶನಿವಾರ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲ್ಲೂಕಿನ ಹುಲೇಕಲ್ ಸಮೀಪದ ಹೆಂಚರಟಾದ ಅಬ್ದುಲ್ ಮತಿನ್ ಅಬ್ದುಲ್ ಗಫಾರ ಸಾಬ್, ಅಬ್ದುಲ್ ರೆಹಮಾನ್ ಅಬ್ದುಲ್ ಗಫಾರ್ ಸಾಬ್ ಹಾಗೂ ನಾಝೀಯಾ ಅಬ್ದುಲ್ ಮತೀನ್ ಆರೋಪಿಗಳಾಗಿದ್ದಾರೆ. ಈ ಮೂವರು ಮಂಗಳೂರು ಹಂಪನಕಟ್ಟಾ ಲೈಟ್ ಹೌಸ್ ಹಿಲ್ ರಸ್ತೆಯ …
Read More »ಗದ್ದೆಯಲ್ಲಿ ಭತ್ತ ನಾಟಿ ಮಾಡಿದ ಎಚ್ಡಿಕೆ
ಮಂಡ್ಯ: ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ಇಂದು ಮಧ್ಯಾಹ್ನ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದ ರೈತ ಲಕ್ಷ್ಮಣ ಅವರ ಗದ್ದೆಯಲ್ಲಿ ಭತ್ತ ನಾಟಿ ಮಾಡಿದರು. ಈ ಕುರಿತ ಚಿತ್ರಗಳನ್ನು ಅವರು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ. ಭೂಮಿ ತಾಯಿ ಮಕ್ಕಳಾದ ನಮ್ಮೆಲ್ಲರಿಗೂ ಭೂಮಿಯೇ ಸರ್ವಸ್ವ. ಬೇಸಾಯವೇ ಬದುಕು. ಭತ್ತದ ನಾಟಿ ನನ್ನ ಮನೆಯ ಕಾರ್ಯಕ್ರಮವೇ ಆಗಿತ್ತು. ರೈತಾಪಿ ಜನರೊಂದಿಗೆ ಇಂತಹ ಸಾರ್ಥಕ, ಅನನ್ಯ …
Read More »ಮದ್ವೆ ಬಳಿಕ ಮೊದಲ ಬಾರಿ ಮನೆಗೆ ಬಂದ ಅಳಿಯನಿಗೆ 100 ಬಗೆಯ ಖಾದ್ಯ ತಯಾರಿಸಿ, ಉಣಬಡಿಸಿದ ಅತ್ತೆ!
ವಿಜಯವಾಡ: ಮನೆಗೆ ಬಂದ ಅಳಿಯನಿಗೆ ಅತ್ತೆ-ಮಾವಂದಿರು ವಿಶೇಷ ಮನ್ನಣೆ ನೀಡುವುದು ಸಾಮಾನ್ಯ ಸಂಗತಿ. ಆದರೆ, ಆಂಧ್ರಪ್ರದೇಶದಲ್ಲಿ ಬಹಳ ಹಿಂದಿನಿಂದ ಒಂದು ವಿಶೇಷ ಸಂಪ್ರದಾಯ ನಡೆದುಕೊಂಡು ಬರುತ್ತಿದೆ. ಅದೇನೆಂದರೆ, ಮದುವೆಯಾಗಿ ಮೊದಲ ಬಾರಿಗೆ ಮನೆಗೆ ಬಂದ ಅಳಿಯನಿಗೆ ವಿವಿಧ ಬಗೆಯ ಭಕ್ಷ್ಯಗಳನ್ನು ತಯಾರಿಸಿ ಉಣಬಡಿಸುವುದು. ಆಂಧ್ರದ ಗೋದಾವರಿ ಜಿಲ್ಲೆಯಲ್ಲಿ ಇಂತಹ ಆಚರಣೆಗಳು ಹೆಚ್ಚಾಗಿ ಕಂಡುಬರುತ್ತವೆ. ಇದೀಗ ಕಾಕಿನಾಡದಲ್ಲಿ ಮನೆಗೆ ಬಂದ ಹೊಸ ಅಳಿಯನಿಗೆ ಅತ್ತೆ 100 ಬಗೆಯ ಖಾದ್ಯಗಳನ್ನು ತಯಾರಿಸಿ ಬಡಿಸಿದ್ದಾರೆ. ಇದಕ್ಕೆ …
Read More »ಚಿಕ್ಕಣ್ಣಗೆ ಶುರುವಾಯ್ತು ಸಂಕಷ್ಟ!
ದರ್ಶನ್ ಪ್ರಕರಣದಲ್ಲಿ ನಟ ಚಿಕ್ಕಣ್ಣ ಅವರಿಗೆ ಹೊಸ ಸಂಕಷ್ಟ ಎದುರಾಗಿದೆ. ದರ್ಶನ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ನಟ ಚಿಕ್ಕಣ್ಣ ಅವರ ಹೇಳಿಕೆಯೇ ಈಗ ದರ್ಶನ್ಗೆ ಕಂಟಕವಾಗಿದ್ದು ಚಿಕ್ಕಣ್ಣ ಅವರಿಗೆ ತಲೆನೋವಾಗಿದೆ. ದರ್ಶನ್ ವಿರುದ್ಧ ಹಲವು ಮಹತ್ವದ ಸಾಕ್ಷಿಗಳನ್ನು ಕಲೆಹಾಕಿರುವ ಪೊಲೀಸರು, ಚಿಕ್ಕಣ್ಣ ವಿಚಾರದಲ್ಲೂ ಚಾಣಾಕ್ಷತೆಯಿಂದ ನಡೆದುಕೊಂಡಿದ್ದಾರೆ. ಈಗ ಚಿಕ್ಕಣ್ಣ ಅವರ ಹೇಳಿಕೆ ಕೂಡ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಗ್ಯಾಂಗ್ಗೆ ಶಿಕ್ಷೆ ಕೊಡಿಸಲು ಮಹತ್ವದ ಸಾಕ್ಷಿಯಾಗುವ ಸಾಧ್ಯತೆ ಇದೆ. …
Read More »ದಾಂಪತ್ಯ ಜೀವನಕ್ಕೆ ಕಾಲಿಟ್ಟ ತರುಣ್ ಸುಧೀರ್- ಸೋನಲ್
ಬೆಂಗಳೂರು: ಡೈರೆಕ್ಟರ್ ತರುಣ್ ಕಿಶೋರ್ ಸುಧೀರ್ ಹಾಗೂ ಕನ್ನಡದ ನಟಿ ಸೋನಲ್ ಮಂಥೆರೊ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತರುಣ್ ಕಿಶೋರ್ ಸುಧೀರ್ , ಸೋನಲ್ ಮಂಥೆರೊ ಜೋಡಿ ಗುರು ಹಿರಿಯರು, ಸ್ನೇಹಿತರು, ಹಾಗೂ ಬಂಧು ಮಿತ್ರರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ. ಈ ಮದುವೆಯ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ. ಈ ಜೋಡಿಯ ಹೊಸ ಜೀವನಕ್ಕೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ. ಆಗಸ್ಟ್-11 ರಂದು ಬೆಳಗ್ಗೆ 10:50 ರಿಂದ 11:35 ಸಮಯದ ತುಲಾ ಲಗ್ನದಲ್ಲಿ …
Read More »ಬೆಂಗಳೂರಿನ ಕಾಫಿ ಶಾಪ್ ವಾಶ್ ರೂಂನಲ್ಲಿ ಮೊಬೈಲ್ ಇಟ್ಟು ವೀಡಿಯೋ ರೆಕಾರ್ಡ್
ಬೆಂಗಳೂರು: ಬೆಂಗಳೂರಿನ ಪ್ರಸಿದ್ಧ ಕಾಫಿ ಔಟ್ ಲೆಟ್ ನ ಕಸದ ಬುಟ್ಟಿಯೊಳಗೆ ಸುಮಾರು ಎರಡು ಗಂಟೆಗಳ ಕಾಲ ವೀಡಿಯೊ ರೆಕಾರ್ಡಿಂಗ್ ಮಾಡಿದಂತ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಈ ಸಂಬಂಧ ಕೆಫೆ ಸಿಬ್ಬಂದಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾನಗರದ ಬಿಇಎಲ್ ರಸ್ತೆಯಲ್ಲಿರುವ ಥರ್ಡ್ ವೇವ್ ಕಾಫಿ ಔಟ್ ಲೆಟ್ ನಲ್ಲಿ ಈ ಘಟನೆ ನಡೆದಿದ್ದು, ಮಹಿಳಾ ಶೌಚಾಲಯದಲ್ಲಿ ಫೋನ್ ಅಡಗಿಸಿಟ್ಟಿದ್ದಾರೆ ಎಂದು ಉದ್ಯೋಗಿಯೊಬ್ಬರು ಆರೋಪಿಸಿದ್ದಾರೆ. ‘ಗ್ಯಾಂಗ್ಸ್ ಆಫ್ ಸಿನಿಪುರ್’ ಎಂಬ …
Read More »ರೆಸಾರ್ಟ್ ನಲ್ಲಿ ಸಭೆ ನಡೆಸಿದ ಜಾರಕಿಹೊಳಿ, ಯತ್ನಾಳ್, ಸಿಂಹ,ಜೊಲ್ಲೆ,
ಬೆಳಗಾವಿ: ಬಿಜೆಪಿ ಪಾದಯಾತ್ರೆ ಮುಗಿದ ಬೆನ್ನಲ್ಲೇ ಪಕ್ಷದಲ್ಲಿ ಮತ್ತೆ ಬಂಡಾಯ ಚಟುವಟಿಕೆಗಳು ಆರಂಭವಾಗಿದೆ. ಬೆಳಗಾವಿ ಹೊರವಲಯದ ಖಾಸಗಿ ರೆಸಾರ್ಟ್ ನಲ್ಲಿ ಪ್ರಭಾವಿ ನಾಯಕರಾದ ರಮೇಶ್ ಜಾರಕಿಹೊಳಿ (Ramesh jarkiholi) ಮತ್ತು ಬಸನಗೌಡ ಪಾಟೀಲ ಯತ್ನಾಳ (Basanagouda Patil Yatnal) ನೇತೃತ್ವದಲ್ಲಿ ಬಿಜೆಪಿ ಅತೃಪ್ತ ಶಾಸಕರು ಹಾಗೂ ನಾಯಕರ ಸಭೆ ನಡೆಸುತ್ತಿದ್ದಾರೆ. ಜಾರಕಿಹೊಳಿ, ಯತ್ನಾಳ್ ಗೆ ಹಲವ ಮುಖಂಡರು ಸಾಥ್ ನೀಡಿದ್ದಾರೆ. ಪ್ರತಾಪ್ ಸಿಂಹ, ಕುಮಾರ್ ಬಂಗಾರಪ್ಪ, ಅಣ್ಣಸಾಹೆಬ್ ಜೊಲ್ಲೆ, …
Read More »ಅಂಗನವಾಡಿಗೆ ಸ್ನಾತಕೋತ್ತರ ಪದವೀಧರರು: ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು15 ಮಂದಿ ನೇಮಕ
ಬೆಳಗಾವಿ: ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಈ ವರ್ಷ 197 ಕಾರ್ಯಕರ್ತೆಯರು ನೇಮಕಗೊಂಡಿದ್ದಾರೆ. ಅವರಲ್ಲಿ 15 ಮಂದಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 50 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿದ ಬೆಳಗಾವಿ ಜಿಲ್ಲೆಯಲ್ಲಿ 5,656 ಅಂಗನವಾಡಿ ಕೇಂದ್ರಗಳಿವೆ. 1,200ಕ್ಕೂ ಅಧಿಕ ಕೇಂದ್ರಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳಲ್ಲಿ ಎಲ್ಕೆಜಿ, ಯುಕೆಜಿ ತರಗತಿ ಆರಂಭಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿದ್ಧತೆ ನಡೆಸಿದೆ. ಜಿಲ್ಲೆಯಲ್ಲಿ 283 ಅಂಗನವಾಡಿ ಕಾರ್ಯಕರ್ತೆಯರ ನೇಮಕಕ್ಕೆ 2023ರ ಜೂನ್ನಲ್ಲಿ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. …
Read More »
Laxmi News 24×7