Breaking News

ರಾಷ್ಟ್ರೀಯ

ದೇವರಗಟ್ಟು ಬನ್ನಿ ಉತ್ಸವದಲ್ಲಿ ಬಡಿಗೆಗಳಿಂದ ಕಾದಾಟ ಇಬ್ಬರು ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ

ಬಳ್ಳಾರಿ/ಆಂಧ್ರ ಪ್ರದೇಶ: ಹಬ್ಬ ಒಂದೇ ಆದರೂ ಅವುಗಳ ಆಚರಣೆಯ ವಿಧಾನಗಳು ಪ್ರದೇಶದಿಂದ ಪ್ರದೇಶಕ್ಕೆ ವಿಭಿನ್ನವಾಗಿರುತ್ತವೆ. ಮೈಸೂರಿನಲ್ಲಿ ವಿಜಯದಶಮಿಯನ್ನು ಅಂಬಾರಿ ಮೇಲೆ ಚಾಮುಂಡೇಶ್ವರಿಯ ಉತ್ಸವ ಮೂರ್ತಿಯನ್ನಿಟ್ಟು ವಿಜೃಂಭಣೆಯಿಂದ ಜಂಬೂ ಸವಾರಿ ಮೆರವಣಿಗೆ ನಡೆಸಿದರೆ, ರಾಜ್ಯದ ಗಡಿ ಭಾಗವಾದ ದೇವರ ಗಟ್ಟು ಎಂಬಲ್ಲಿ ಇದರ ಆಚರಣೆ ವಿಭಿನ್ನ ಅಷ್ಟೇ ಅಲ್ಲ, ವಿಚಿತ್ರವೂ ಕೂಡಾ. ಇಲ್ಲಿ ವಿಜಯ ದಶಮಿಯ ವೇಳೆ ದೇವರ ಉತ್ಸವ ಮೂರ್ತಿಗಾಗಿ ಗ್ರಾಮಸ್ಥರ ನಡುವೆ ಬಡಿಗೆಗಳಿಂದ ಹೊಡೆದಾಟವೇ ನಡೆಯುತ್ತದೆ. ಇದು ನಿಮಗೆ ಅಚ್ಚರಿ …

Read More »

ಪೇಸ್‌ಮೇಕರ್‌ ಚಿಕಿತ್ಸೆ ಯಶಸ್ವಿ, ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯಕ್ಕೊಳಗಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್​​ ಮೇಕರ್​ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದ್ದು, ಗುರುವಾರ ಸಂಜೆ ಬೆಂಗಳೂರಿನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್​ ಮಾಡಿರುವ ಕಾಂಗ್ರೆಸ್​, ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಶೀಘ್ರದಲ್ಲೇ ದೈನಂದಿನ ಕಾರ್ಯಕ್ಕೆ ಮರಳಲಿದ್ದಾರೆ ಎಂದು ತಿಳಿಸಿದೆ. ಖರ್ಗೆ ಚೇತರಿಕೆ ಕಾಣುತ್ತಿದ್ದಾರೆ. ಅವರಿಗೆ ಶುಭ ಹಾರೈಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ಶೀಘ್ರದಲ್ಲೇ ವೈದ್ಯರ ಸಲಹೆಯ ಬಳಿಕ ಅವರು ತಮ್ಮ ಚಟುವಟಿಕೆಗಳಿಗೆ …

Read More »

ಬೆಳಗಾವಿ ನಗರಕ್ಕೆ ಹೊಂದಿಕೊಂಡಿರುವ ಕಣಬರಗಿ ನಿವಾಸಿಯೊಬ್ಬರು ಸಾವಯವ ಕೃಷಿಯತ್ತ ಸಾಗಿ ಲಕ್ಷಾಂತರ ರೂಪಾಯಿ ಆದಾಯ ಗಳಿಸುತ್ತಿದ್ದಾರೆ.

ಬೆಳಗಾವಿ : ಕಲಿತಿದ್ದು ಡಿಪ್ಲೋಮಾ ಮೆಕ್ಯಾನಿಕಲ್ ಇಂಜಿನಿಯರಿಂಗ್. ಬಾರ್ ಉದ್ಯಮ, ಸರ್ಕಾರಿ ಗುತ್ತಿಗೆ ಸೇರಿ ಮತ್ತಿತರ ವೃತ್ತಿಯಲ್ಲಿ ಬದುಕು ಕಟ್ಟಿಕೊಂಡಿದ್ದರು. ವ್ಯಾಪಾರದಲ್ಲಿ ಲಕ್ಷ ಲಕ್ಷ ಗಳಿಸಿದರೂ ಮನಸ್ಸಿಗೆ ಮಾತ್ರ ನೆಮ್ಮದಿ ಇರಲಿಲ್ಲ. ಈಗ ಅವರಿಗೆ ನೆಮ್ಮದಿ ಸಿಕ್ಕಿದ್ದು, ಸಾವಯವ ಕೃಷಿಯಲ್ಲಿ. 80ರ ಇಳಿ ವಯಸ್ಸಿನಲ್ಲೂ ಉತ್ತಮ ಆರೋಗ್ಯದ ಜೊತೆಗೆ ಲಕ್ಷ ಲಕ್ಷ ಆದಾಯ ಗಳಿಸುವ ಮೂಲಕ ಯುವಕರನ್ನೂ ನಾಚಿಸುವಂತೆ ಜಿಲ್ಲೆಯ ಕೃಷಿಕರೊಬ್ಬರು ಸಾಧನೆ ಮಾಡಿದ್ದಾರೆ. ಹೌದು, ತಲೆ ಮೇಲೆ ಟೋಪಿ, ಸಫಾರಿ …

Read More »

ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಏರುಪೇರು

ಬೆಂಗಳೂರು: ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಸಿರಾಟದ ತೊಂದರೆ ಹಾಗೂ ಜ್ವರ ಕಾಣಿಸಿಕೊಂಡ ಕಾರಣ ಮಂಗಳವಾರ ಸಂಜೆ ಖರ್ಗೆ ಅವರನ್ನು ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಆಗಮಿಸುತ್ತಿದ್ದಂತೆ ಹಿರಿಯ ವೈದ್ಯರು, ಹಲವು ಪರೀಕ್ಷೆಗಳನ್ನು ನಡೆಸಿದರು. ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಖರ್ಗೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸದ್ಯ ಜನರಲ್ ವಾರ್ಡ್​ನಲ್ಲಿ ವಿಶ್ರಾಂತಿ …

Read More »

ಪೊಲೀಸ್ ಇಲಾಖೆಯ ನೇಮಕಾತಿಗೆ ಶಾಶ್ವತ ವಯೋಮಿತಿ ಸಡಿಲಿಕೆಗೆ ನಿರ್ಧಾರ: ಪರಮೇಶ್ವರ್

ಬೆಂಗಳೂರು: ಪೊಲೀಸ್ ಇಲಾಖೆಯ ನೇಮಕಾತಿಗೆ ಶಾಶ್ವತ ವಯೋಮಿತಿ ಸಡಿಲಿಕೆಗೆ ಮುಂದಾಗಿದ್ದು, ಸದ್ಯದಲ್ಲೇ ವಯೋಮಿತಿ ಸಡಿಲಿಕೆ ಪ್ರಕಟಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರ್ಕಾರಿ‌ ನೌಕರರ ವಯೋಮಿತಿ ಸಡಿಲಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಒಂದು ಸಲಕ್ಕೆ ಅನ್ವಯ ಆಗುವಂತೆ ಸಡಿಲಿಕೆ ಮಾಡಲಾಗಿದೆ. 2027ರವರೆಗೆ ವಯೋಮಿತಿ ಸಡಿಲಿಸಿದ್ದೇವೆ. ನಮ್ಮ ಪೊಲೀಸ್ ಇಲಾಖೆಯಲ್ಲಿ ಶಾಶ್ವತ ವಯೋಮಿತಿ ಸಡಿಲಿಕೆಗೆ ಮುಂದಾಗಿದ್ದೇವೆ. ಕಾನ್‌ಸ್ಟೇಬಲ್, ಪಿಎಸ್‌ಐ, ಎಸ್ಐ …

Read More »

ಅ.1ರಿಂದ ಇರಲ್ಲ ವರ್ಕ್ ಫ್ರಮ್ ಹೋಮ್: ಬೆಂಗಳೂರಲ್ಲಿ ಟ್ರಾಫಿಕ್​ ಡಬಲ್​?

ಬೆಂಗಳೂರು, ಸೆಪ್ಟೆಂಬರ್​ 29: ಅಕ್ಟೋಬರ್ 1ರಿಂದ ಬಹುತೇಕ ಖಾಸಗಿ ಕಂಪನಿಗಳ ವರ್ಕ್ ಫ್ರಮ್ ಹೋಮ್ (Work from Home) ಅಂತ್ಯವಾಗಲಿದ್ದು, ರಾಜಧಾನಿ ಬೆಂಗಳೂರಿನಲ್ಲಿ (Bengaluru) ಟ್ರಾಫಿಕ್​ ಡಬಲ್​ ಆಗುವ ಸಾಧ್ಯತೆ ಹೆಚ್ಚಿದೆ. ಉದ್ಯೋಗಿಗಳು ಕಚೇರಿಗೇ ಹೋಗಿ ಕೆಲಸ ಮಾಡಬೇಕಿರುವ ಕಾರಣ ವಾಹನಗಳ ಓಡಾಟದ ಸಂಖ್ಯೆಯೂ ಸಹಜವಾಗಿ ಹೆಚ್ಚಲಿದೆ. ಅಂದಾಜಿನ ಪ್ರಕಾರ ಔಟರ್​ ರಿಂಗ್​ ರೋಡ್​ ಒಂದರಲ್ಲಿಯೇ ಪ್ರತಿನಿತ್ಯ 10 ಲಕ್ಷ ಉದ್ಯೋಗಿಗಳು ಓಡಾಡುವ ನಿರೀಕ್ಷೆ ಇದೆ.ಬೆಂಗಳೂರಿನ ಬಹುತೇಕ ಖಾಸಗಿ ಕಂಪನಿಗಳು ವರ್ಕ್​ ಫ್ರಮ್​ ಹೋಮ್​ ಸೌಲಭ್ಯ ಹಿಂಪಡೆಯಲು …

Read More »

ಇದು ಸೋಲಲ್ಲ, ಗೆಲುವಿನ ಮುಂದೂಡಿಕೆಯಷ್ಟೇ.

ಪ್ರತಿರೋಧವೇ ಇಲ್ಲವೆಂದು ಪ್ರಭುತ್ವದಿಂದ ಬೀಗುತಿದ್ದ ನೆಲದಲ್ಲಿ ಪ್ರಜಾಪ್ರಭುತ್ವವನ್ನು ಪ್ರತಿಷ್ಠಾಪಿಸಿದ ಶ್ರೇಯಸ್ಸು ಸತೀಶಣ್ಣನವರಿಗೆ ಸಲ್ಲುತ್ತದೆ. ಚುನಾವಣೆಯಲ್ಲಿ ಸೋತರೂ ಪ್ರಜಾಪ್ರಭುತ್ವವನ್ನು ಗೆಲ್ಲಿಸಿದ ಕೀರ್ತಿ ನಿಮ್ಮದಾಗಿದ್ದು ಈ ಫಲಿತಾಂಶದಿಂದ ಧೃತಿಗೆಡಬೇಕಾಗಿಲ್ಲ. ಇದು ಸೋಲಲ್ಲ, ಗೆಲುವಿನ ಮುಂದೂಡಿಕೆಯಷ್ಟೇ.   ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ಈ ಬಾರಿ ರಾಜಕೀಯ ಜಿದ್ದಾಜಿದ್ದಿಗಿಂತ ಪ್ರತಿಷ್ಠೆಯ ಕಣವಾಗಿತ್ತು,ಆಯಾ ಪಕ್ಷದ ಕಾರ್ಯಕರ್ತರಿಗೇ ಗೊಂದಲದ ಗುಡಾಗಿತ್ತು, ಈ ಚುನಾವಣೆ ಮೇಲೆ ಇಡೀ ರಾಜ್ಯದ ಕಣ್ಣಿತ್ತು,ಲೋಕೋಪಯೋಗಿ ಸಚಿವರ ಜಾಣ ನಡೆ,ರಮೇಶ್ ಕತ್ತಿಯವರ …

Read More »

ಹುಟ್ಟೂರಿನ ಕೆರೆಯಲ್ಲಿ ಎಸ್.ಎಲ್.ಭೈರಪ್ಪನವರ ಅಸ್ಥಿ ವಿಸರ್ಜನೆ

ಹಾಸನ: ಖ್ಯಾತ ಕಾದಂಬರಿಕಾರ, ಚಿಂತಕ ಎಸ್.ಎಲ್.ಭೈರಪ್ಪ ಅವರ ಅಸ್ಥಿಯನ್ನು ಹುಟ್ಟೂರಾದ ಚನ್ನರಾಯಪಟ್ಟಣ ತಾಲೂಕಿನ ಸಂತೇಶಿವರದ ಕೆರೆಯಲ್ಲಿ ಭಾನುವಾರ ವಿಸರ್ಜಿಸಲಾಯಿತು. ಭೈರಪ್ಪ ಅವರ ಪುತ್ರರಾದ ರವಿಶಂಕರ್ ಹಾಗೂ ಉದಯ್‌ ಶಂಕರ್ ವಿಧಿವಿಧಾನಗಳಂತೆ ಪೂಜೆ ಸಲ್ಲಿಸಿ, ಚಿತಾಭಸ್ಮವನ್ನು ವಿಸರ್ಜನೆ ಮಾಡಿದರು. ಇದಕ್ಕೂ ಮುನ್ನ ಮಂತ್ರೋಚ್ಚಾರಣೆ, ಘೋಷಗಳು ಮೊಳಗುತ್ತಿದ್ದಂತೆ ಗ್ರಾಮದಲ್ಲಿ ಅಸ್ಥಿ ಮೆರವಣಿಗೆ ನಡೆದಿದ್ದು, ನೂರಾರು ಮಂದಿ ಗ್ರಾಮಸ್ಥರು ಮತ್ತು ಅಭಿಮಾನಿಗಳು ಭಾಗಿಯಾಗಿದ್ದರು. ಶಾಸಕ ಸಿ.ಎನ್. ಬಾಲಕೃಷ್ಣ ಹಾಗೂ ಮಾಜಿ ಎಂಎಲ್‌ಸಿ ಎಂ.ಎ.ಗೋಪಾಲಸ್ವಾಮಿ, ಜಿ.ಪಂ.ಮಾಜಿ ಸದಸ್ಯ …

Read More »

ಭುವನೇಶ್ವರಿ ಉತ್ಸವದ ಸಮಾರೋಪ…

ಭುವನೇಶ್ವರಿ ಉತ್ಸವದ ಸಮಾರೋಪ… ವಿವಿಧ ರಾಜ್ಯಗಳ ಹಬ್ಬದಾಚರಣೆಯ ನೃತ್ಯಗಳ ಪ್ರಸ್ತುತಿ ಭುವನೇಶ್ವರಿ ಉತ್ಸವದ ಸಮಾರೋಪ… ವಿವಿಧ ರಾಜ್ಯಗಳ ಹಬ್ಬದಾಚರಣೆಯ ನೃತ್ಯಗಳ ಪ್ರಸ್ತುತಿ ಮಹಿಳೆಯರಿಂದ ಉತ್ತಮ ಪ್ರತಿಕ್ರಿಯೆ ವಿವಿಧ ಗಣ್ಯರಿಂದ ಶ್ಲಾಘನೆ ಕಳೆದ ಮೂರು ದಿನಗಳಿಂದ ಬೆಳಗಾವಿಯಲ್ಲಿ ನಡೆಯುತ್ತಿದ್ದ ಭುವನೇಶ್ವರಿ ಉತ್ಸವ ಇಂದು ಸಮಾರೋಪಗೊಂಡಿತು. ಮೂರನೇಯ ದಿನವಾದ ಇಂದು ವಿವಿಧ ರಾಜ್ಯಗಳ ಹಬ್ಬಗಳನ್ನು ಆಧರಿಸಿದ ನೃತ್ಯ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ನವರಾತ್ರಿಯ ನಿಮಿತ್ಯ ಆಯೋಜಿಸಿದ್ದ ನಡೆಯುತ್ತಿದ್ದ ಭುವನೇಶ್ವರಿ ಉತ್ಸವ ಇಂದು ಸಮಾರೋಪಗೊಂಡಿತು. ಸಮಾರೋಪ …

Read More »

ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಮೇಲೆ ಅಧಿಪತ್ಯ ಸಾಧಿಸಲು ಎರಡು ಪ್ರಬಲ ರಾಜಕೀಯ ಕುಟುಂಬಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ.

ಬೆಳಗಾವಿ: ಇದು ಭಾರತದ ಮೊಟ್ಟ ಮೊದಲ ಮತ್ತು ಕರ್ನಾಟಕದ ಏಕೈಕ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘ. ಕಳೆದ 56 ವರ್ಷಗಳಿಂದ ಸಹಕಾರ ತತ್ವದಡಿ ಸಂಘ ಮುನ್ನಡೆಯುತ್ತಿದೆ. ಇದನ್ನು ಹುಟ್ಟು ಹಾಕಿದ್ದು, ಓರ್ವ ಸಹಕಾರಿ ಭೀಷ್ಮ. ಆ ಮಹಾನಾಯಕನ ದೂರದೃಷ್ಟಿಯ ಫಲದಿಂದ ಲಕ್ಷಾಂತರ ಕುಟುಂಬಗಳಿಗೆ ಬೆಳಕು ಸಿಕ್ಕಿದೆ. ಸಾವಿರಾರು ಕುಟುಂಬಗಳಿಗೆ ಉದ್ಯೋಗದ ಆಸರೆ ದಕ್ಕಿದೆ. ಈಗ ಸಂಘದ ಮೇಲೆ ಅಧಿಪತ್ಯ ಸಾಧಿಸಲು ಎರಡು ಪ್ರಬಲ ರಾಜಕೀಯ ಕುಟುಂಬಗಳ ನಡುವೆ ಜಿದ್ದಾಜಿದ್ದಿ ನಡೆಯುತ್ತಿದೆ. ರಾಜ್ಯದ …

Read More »