Breaking News

ರಾಷ್ಟ್ರೀಯ

19,969 ಪಡಿತರ ಚೀಟಿ ರದ್ದು: ₹1.89 ಕೋಟಿ ದಂಡ ವಸೂಲಿ

ಬೆಳಗಾವಿ: ಕಳೆದ ಆರು ತಿಂಗಳಿಂದ ಪಡಿತರ ಪಡೆಯದ 19,969 ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ. ಅಲ್ಲದೇ, ಸುಳ್ಳು ದಾಖಲೆ ನೀಡಿ ಆದ್ಯತಾ ಪಡಿತರ ಚೀಟಿ ಪಡೆದವರಿಂದ ₹1.89 ಕೋಟಿ ದಂಡ ಕೂಡ ವಸೂಲಿ ಮಾಡಲಾಗಿದೆ. ಜಿಲ್ಲೆಯಲ್ಲಿ 557 ಅಂತ್ಯೋಂದಯ, 19,412 ಆದ್ಯತಾ ಪಡಿತರ ಚೀಟಿ ಸೇರಿ ಒಟ್ಟು 19,969 ಪಡಿತರ ಚೀಟಿದಾರರು ಕಳೆದ 6 ತಿಂಗಳು (ನವೆಂಬರ್-2023ರಿಂದ ಏಪ್ರಿಲ್-2024) ರವರೆಗೆ ಪಡಿತರ ಧಾನ್ಯ ಪಡೆದಿಲ್ಲ. ಹೀಗಾಗಿ, ಈ ಎಲ್ಲ ಪಡಿತರ …

Read More »

ರೈತರಿಗೆ ನ್ಯಾನೋ ತಂತ್ರಜ್ಞಾನ ಸೌಲಭ್ಯ: ಜೊಲ್ಲೆ

ನಿಪ್ಪಾಣಿ: ‘ಸ್ಥಳೀಯ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ(ಬಹುರಾಜ್ಯ)ಯು ವಿವಿಧ ಹಂತಗಳಲ್ಲಿ ನ್ಯಾನೊ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಿದ್ದು, ಇದರಿಂದ ರೈತರು ಕಡಿಮೆ ಕ್ಷೇತ್ರದಲ್ಲಿ ಕಡಿಮೆ ವೆಚ್ಚದಲ್ಲಿ ಹೆಚ್ಚು ಕಬ್ಬು ಉತ್ಪಾದಿಸಬಹುದು. ಅಲ್ಲದೆ ರೈತರಿಗೆ ಹಾಗೂ ಸದಸ್ಯರಿಗೆ ವಿವಿಧ ನ್ಯಾನೋ ತಂತ್ರಜ್ಞಾನದ ಸೌಲಭ್ಯಗಳನ್ನು ಕಲ್ಪಿಸಲಾಗುವುದು’ ಎಂದು ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದರು.   ವೇದಗಂಗಾ ರೈತ ಉತ್ಪಾದಕರ ಒಕ್ಕೂಟ ಹಾಗೂ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಸಂಯುಕ್ತಾಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ಡ್ರೋನ್ ಮೂಲಕ …

Read More »

ಕಿತ್ತೂರು ಉತ್ಸವಕ್ಕೆ 5 ಕೋಟಿ

ಅಕ್ಟೋಬರ್ 23, 24 ಹಾಗೂ 25 ರಂದು ಜರುಗಲಿರುವ ಸ್ವಾತಂತ್ರ್ಯದ ಬೆಳ್ಳಿಚುಕ್ಕಿ ಕಿತ್ತೂರು ಚನ್ನಮ್ಮಾಜಿಯ ಉತ್ಸವ 2024 ರ ಪೂರ್ವಭಾವಿ ಸಭೆ ಸೋಮವಾರ ಬೆಂಗಳೂರಿನ ವಿಕಾಸ ಸೌಧದಲ್ಲಿ ನಡೆಸಲಾಯಿತು. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಕಂದಾಯ ಸಚಿವ ಕೃಷ್ಣಭೈರೆಗೌಡ ಸಭೆಯಲ್ಲಿ ಈ ಬಾರಿ 200 ನೇ ಅದ್ಧೂರಿ ಕಿತ್ತೂರು ಉತ್ಸವಕ್ಕೆ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದಿಂದ 5 ಕೋಟಿ ಅನುದಾನ ನೀಡುವಂತೆ ಆದೇಶ ಹೊರಡಿಸಿದ್ದಾರೆ.     ಶಾಸಕ ಬಾಬಾಸಾಹೇಬ ಪಾಟೀಲ …

Read More »

ಜನುಮ- ಜನುಮದ ಅನುಬಂಧ ಈ ರಕ್ಷಾ ಬಂಧನ- ಶಾಸಕ ಬಾಲಚಂದ್ರ ಜಾರಕಿಹೊಳಿ

ಜನುಮ- ಜನುಮದ ಅನುಬಂಧ ಈ ರಕ್ಷಾ ಬಂಧನ- ಶಾಸಕ ಬಾಲಚಂದ್ರ ಜಾರಕಿಹೊಳಿ ದೊಡ್ಮನೆ ಕುಟುಂಬದಲ್ಲಿ ಹರ್ಷೊಲ್ಲಾಸದಿಂದ ನಡೆದ ರಾಖಿ ಹಬ್ಬ ತಮ್ಮ ಸಹೋದರಿ ಲಕ್ಷ್ಮೀ ಅವರಿಂದ ರಾಖಿ ಕಟ್ಟಿಸಿಕೊಂಡು ಸಂಭ್ರಮಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ- ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ರಕ್ಷಾ ಬಂಧನವು ವಿಶೇಷ ಮಹತ್ವವಿದ್ದು, ಸಹೋದರ- ಸಹೋದರಿಯರ ಪ್ರೀತಿ, ವಾತ್ಸಲ್ಯವನ್ನು ಬಿಂಬಿಸುವ ಹಬ್ಬವಾಗಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು …

Read More »

ರಡ್ಡೆರಹಟ್ಟಿ ಸರ್ಕಾರಿ ಶಾಲೆಗೆ ₹1ಲಕ್ಷ ಬಹುಮಾನ

ಅಥಣಿ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಾಲ್ಲೂಕು ಆಡಳಿತದಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಆಯ್ದ ಹತ್ತು ತಂಡಗಳು ಉತ್ತಮ ಪ್ರದರ್ಶನ ನೀಡಿ ಸಭಿಕರ ಗಮನ ಸೆಳೆದವು. ಕಿತ್ತೂರು ಚನ್ನಮ್ಮ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸಾಹಸ ಮತ್ತು ಕನ್ನಡ ಚಿತ್ರರಂಗದ ದಿಗ್ಗಜರ ಕಲೆ, ಕನ್ನಡ ನಾಡು ನುಡಿ ಸಂಸ್ಕೃತಿ ಬಗ್ಗೆ ಉತ್ತಮ ಪ್ರದರ್ಶನ ನೀಡಿದ ರಡ್ಡೆರಹಟ್ಟಿ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಶಾಸಕ ಲಕ್ಷ್ಮಣ ಸವದಿ ಘೋಷಿಸಿದ ₹1ಲಕ್ಷ ನಗದು …

Read More »

ಬೆಳಗಾವಿ: ಕೆರೆಯಲ್ಲಿ ಮುಳುಗಿ ಬಾಲಕ ಸಾವು

ಎಂ.ಕೆ.ಹುಬ್ಬಳ್ಳಿ (ಬೆಳಗಾವಿ ಜಿಲ್ಲೆ): ಪಟ್ಟಣದ ಬಳಿ ಇರುವ ಗದ್ದಿಕೆರೆಯಲ್ಲಿ ಸೋಮವಾರ ಬೆಳಿಗ್ಗೆ ಶಾಲಾ ಬಾಲಕನ ಶವ ಪತ್ತೆಯಾಗಿದೆ. ಎಂ.ಕೆ.ಹುಬ್ಬಳ್ಳಿಯಲ್ಲಿ 9ನೇ ತರಗತಿ ಓದುತ್ತಿದ್ದ ರಿಹಾನ್‌ ಮುಗುಟಸಾಬ ನಗಾರಸಿ (15) ಮೃತ ಬಾಲಕ. ಭಾನುವಾರ ಶಾಲೆಗೆ ರಜೆ ಇದ್ದುದರಿಂದ ಬಾಲಕ ಕೆರೆಗೆ ಈಜಲು ಹೋಗಿದ್ದ. ಮರಳಿ ಮನೆಗೆ ಬಂದಿರಲಿಲ್ಲ. ಕೆರೆ ದಡದಲ್ಲಿ ಬಾಲಕನ ಬಟ್ಟೆ ಹಾಗೂ ಚಪ್ಪಲಿ ಪತ್ತೆಯಾದವು. ಅನುಮಾನಗೊಂಡು ಸೋಮವಾರ ಕೆರೆಯಲ್ಲಿ ಹುಡುಕಾಟ ಶುರು ಮಾಡಲಾಯಿತು. ಸ್ಥಳಕ್ಕೆ ಧಾವಿಸಿದ ಪೊಲೀಸರು, ಅಗ್ನಿಶಾಮಕ …

Read More »

ರಕ್ಷಾಬಂಧನದ ಇತಿಹಾಸ ಹೇಳಿದ ಸುಧಾಮೂರ್ತಿ​​​; ವಿಡಿಯೋ ನೋಡಿ ನೆಟ್ಟಿಗರು ಕಿಡಿ..

ಬೆಂಗಳೂರು: ಇನ್ಫೋಸಿಸ್​ ಸಹ-ಸಂಸ್ಥಾಪಕ ಎನ್​.ಆರ್​. ನಾರಾಯಣಮೂರ್ತಿ ಅವರ ಪತ್ನಿ, ರಾಜ್ಯಸಭಾ ಸಂಸೆ ಸುಧಾಮೂರ್ತಿ ಇತ್ತೀಚಿನ ದಿನಗಳಲ್ಲಿ ಹಲವು ಕಾರಣಗಳಿಗೆ ಸುದ್ದಿಯಲ್ಲಿರುತ್ತಾರೆ. ಪ್ರಸಿದ್ಧ ಬರಹಗಾರರು ಆದ ಸುಧಾಮೂರ್ತಿ ಅವರು ಬಹುಪಾಲು ಸಮಯ ಸಮಾಜಸೇವೆಯಲ್ಲಿ ತೊಡಗಿರುತ್ತಾರೆ. ಇಂದು (ಆಗಸ್ಟ್​​ 19) ಎಲ್ಲೆಡೆ ರಾಖಿ ಹಬ್ಬದ ಸಂಭ್ರಮ. ಅಣ್ಣ-ತಂಗಿಯರ ಈ ಪವಿತ್ರ ಹಬ್ಬದ ಕುರಿತು ಸುಧಾಮೂರ್ತಿ ಅವರು ಹೇಳಿರುವ ಮಾತುಗಳು ಜಾಲತಾಣದಲ್ಲಿ ವೈರಲ್​ ಆಗುತಿದ್ದು, ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಸುಧಾಮೂರ್ತಿ ಅವರು ರಕ್ಷಾಬಂಧನ ಆಚರಣೆಯ ಮೂಲವನ್ನು …

Read More »

ಆಗಸ್ಟ್ 21ಕ್ಕೆ ಭಾರತ್ ಬಂದ್‌: ?ದೇಶಾದ್ಯಂತ ಪ್ರತಿಭಟನೆ ಕಾರಣ ಯಾವ ಸೇವೆ ಅಲಭ್ಯ?

ನವದೆಹಲಿ:ಆಗಸ್ಟ್ 21, 2024 ರ ಬುಧವಾರ ಭಾರತ್ ಬಂದ್ ಬಗ್ಗೆ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಚರ್ಚೆ ಭರದಿಂದ ಸಾಗಿದೆ. ‘#21_August_Bharat_Bandh’ ಹ್ಯಾಶ್ ಟ್ಯಾಗ್ ಪ್ರಸ್ತುತ ಟ್ರೆಂಡಿಂಗ್ ನಲ್ಲಿದೆ. ಈ ಹ್ಯಾಶ್ ಟ್ಯಾಗ್ ನೊಂದಿಗೆ ಎಕ್ಸ್ ನಲ್ಲಿ 15.4 ಸಾವಿರ ಪೋಸ್ಟ್ ಗಳನ್ನು ಪೋಸ್ಟ್ ಮಾಡಲಾಗಿದೆ. ಭಾರತ್ ಬಂದ್ ಹಿಂದಿನ ಕಾರಣ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪನ್ನು ವಿರೋಧಿಸಿ ಮೀಸಲಾತಿ …

Read More »

ಕಾಂಗ್ರೆಸ್‌ ಶಾಸಕಾಂಗ ಪಕ್ಷ ಸಭೆ, ಸಿಎಂ ಪರ ಶಕ್ತಿ ಪ್ರದರ್ಶನ

ಬೆಂಗಳೂರು: ಮುಡಾ ಪ್ರಕರಣ ದಲ್ಲಿ ಸಿಎಂ ವಿರುದ್ಧ ಅಭಿಯೋಜನೆಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಸಿಎಂ ಪರ ಒಗ್ಗಟ್ಟು ಪ್ರದರ್ಶನಕ್ಕೆ ವೇದಿಕೆ ಸಿದ್ಧಗೊಳ್ಳುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಆ. 22ರಂದು ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ, “ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ಯಾವುದೇ ಪ್ರಮಾದ ಮಾಡಿಲ್ಲ. ಆದರೂ ಸರಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆದಿದೆ. ಈ ಸಂದರ್ಭದಲ್ಲಿ ಸರಕಾರ ಮತ್ತು ಪಕ್ಷ ಒಗ್ಗಟ್ಟು ಪ್ರದರ್ಶಿಸಬೇಕು. ಜತೆಗೆ …

Read More »

2A ಮೀಸಲಾತಿ ಬಗ್ಗೆ ಧ್ವನಿ ಎತ್ತದ ಶಾಸಕರ ವಿರುದ್ದ ಬಸವಜಯ ಮೃತ್ಯುಂಜಯ ಶ್ರೀ ಆಕ್ರೋಶ

2A ಮೀಸಲಾತಿ ಬಗ್ಗೆ ಧ್ವನಿ ಎತ್ತದ ಶಾಸಕರ ವಿರುದ್ದ ಬಸವಜಯ ಮೃತ್ಯುಂಜಯ ಶ್ರೀ ಆಕ್ರೋಶ ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರವಾಗಿ ಅಧಿವೇಶನದಲ್ಲಿ ಧ್ವನಿ ಎತ್ತದ ಸಮುದಾಯದ ಶಾಸಕರ ವಿರುದ್ಧ ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಶ್ರೀ ಆಕ್ರೋಶ ಹೊರಹಾಕಿದರು. ಬೆಳಗಾವಿಯಲ್ಲಿಮಾತನಾಡಿದ ಅವರು, ಬೊಮ್ಮಾಯಿ, ಯಡಿಯೂರಪ್ಪ ಸರ್ಕಾರದಲ್ಲಿ ಸದನದ ಬಾವಿಗಿಳಿದು ಹೋರಾಟ ಮಾಡಿದ್ದೀರಿ. ಆದರೆ ಈ ಸರ್ಕಾರದಲ್ಲಿ ಯಾಕೆ ಮಾಡುತ್ತಿಲ್ಲ ಎಂದು ಕಾಂಗ್ರೆಸ್‌ ಶಾಸಕರು ವಿರುದ್ದ …

Read More »